Homeಸಾಮಾಜಿಕಜನತೆಯ ಸಂಗಾತಿ ಲಕ್ಷ್ಮಣ್‌ಜಿ

ಜನತೆಯ ಸಂಗಾತಿ ಲಕ್ಷ್ಮಣ್‌ಜಿ

- Advertisement -
- Advertisement -

ಸಿರಿಮನೆ ನಾಗರಾಜ್ |

ಕನ್ನಡದ ಮಹತ್ವದ ಕವಿ-ಕತೆಗಾರ-ಬರಹಗಾರರಲ್ಲಿ ಒಬ್ಬರಾಗಿದ್ದ, ದಲಿತ ಮತ್ತು ಜನಪರ ಚಳವಳಿಗಳ ಸತತ ಒಡನಾಡಿಯಾಗಿದ್ದ ಲಕ್ಷ್ಮಣಜಿ ಅವರ ಆತ್ಮಕತೆ ‘ಸಂಬೋಳಿ’ಯ ಇಂಗ್ಲಿಷ್ ಅನುವಾದಿತ ಅದೇ ಹೆಸರಿನ ಕೃತಿ ಕಳೆದ ವಾರ ಕನ್ನಡ ಸಾಹಿತ್ಯ ಪರಿಷತ್ ಆವರಣದಲ್ಲಿ ನಡೆದ ಚಿಕ್ಕ ಚೊಕ್ಕ ಕಾರ್ಯಕ್ರಮದಲ್ಲಿ ಬಿಡುಗಡೆಯಾಯಿತು. ಅದೇ ಸಮಯದಲ್ಲಿ ಲಕ್ಷ್ಮಣಜಿ ಅವರನ್ನು ಕುರಿತು ಅವರ ಸಮಕಾಲೀನ ಚಳವಳಿಗಾರರು, ಬರಹಗಾರರು ಮತ್ತಿತರ ಅವರ ಸಂಗಾತಿಗಳು ಬರೆದಿರುವ ಆಪ್ತ ಬರಹಗಳ ಸಂಕಲನ ‘ಜನತೆಯ ಸಂಗಾತಿ ಲಕ್ಷ್ಮಣಜಿ’ ಪುಸ್ತಕವೂ ಬಿಡುಗಡೆಯಾಯಿತು. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ವಸುಂಧರಾ ಭೂಪತಿಯವರು ಎರಡೂ ಕೃತಿಗಳನ್ನು ಬಿಡುಗಡೆ ಮಾಡಿದರು.

ಸಂಬೋಳಿ ಕೃತಿಯನ್ನು ಪ್ರೊ. ಸುಶೀಲಾ ಪುನೀತಾ ಅವರು ಇಂಗ್ಲಿಷಿಗೆ ಅನುವಾದಿಸಿದ್ದಾರೆ, ದೇಶದ ಗಣ್ಯ ಪ್ರಕಾಶನ ಸಂಸ್ಥೆಗಳಲ್ಲಿ ಒಂದೆನ್ನಿಸಿರುವ ದೆಹಲಿಯ ನಿಯೋಗಿ ಪ್ರಕಾಶನ ಅದನ್ನು ಪ್ರಕಟಿಸಿದೆ. (ಅದನ್ನು ಆಕ್ಸ್‌ಫರ್ಡ್ ಯೂನಿವರ್ಸಿಟಿ ಪ್ರೆಸ್‌ನಿಂದ ಪ್ರಕಟಿಸಲು ಈ ಮೊದಲು ಮಾತುಕತೆಯಾಗಿದ್ದು, ಅಲ್ಲಿ ಇನ್ನೂ ಬಹಳ ತಡವಾಗುತ್ತೆ ಎನ್ನುವ ಕಾರಣಕ್ಕೆ ನಿಯೋಗಿ ಪ್ರಕಾಶನ ಅದನ್ನು ತೆಗೆದುಕೊಂಡು ಪ್ರಕಟಿಸಿದೆ.)

ಕನ್ನಡದಲ್ಲಿ ನಾಲ್ಕು ಮುದ್ರಣ ಕಂಡಿದ್ದು, ಈಗಾಗಲೇ ತಮಿಳಿಗೆ ಅನುವಾದವಾಗಿ ಎರಡು ಮರುಮುದ್ರಣ ಕಂಡು ಬಹಳ ಮೆಚ್ಚುಗೆ, ಸಂವೇದನೆ ಹುಟ್ಟುಹಾಕಿರುವ ಸಂಬೋಳಿಯು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಒಂದು ಪಠ್ಯದಲ್ಲೂ ಕಾಣಿಸಿಕೊಂಡಿದೆ. ‘LISTEN TO THE FLAMES’ – texts and readings from the margins ಎಂಬ ಪಠ್ಯದಲ್ಲಿ ಸಂಬೋಳಿಯ ಒಂದು ಭಾಗವು undying love ಎಂಬ ಹೆಸರಿನಲ್ಲಿ ಸೇರ್ಪಡೆಯಾಗಿದೆ.

ಕಡುದಾರಿದ್ರ್ಯದ, ಜೀತದ ದಲಿತ ಬದುಕಿನಿಂದ ಬಂದು, ಹೇಗೋ ಕಾಲೇಜು ಕಲಿತು ಕೆಎಲ್‌ಇ ಸೊಸೈಟಿಯ ಕಾಲೇಜಿನಲ್ಲಿ ಗುಮಾಸ್ತರಾಗಿದ್ದ ಅತ್ಯಂತ ಸ್ನೇಹಜೀವಿ ಲಕ್ಷ್ಮಣಜಿ, ಎಷ್ಟು ಸ್ನೇಹಜೀವಿಯೋ ಅಷ್ಟೇ ಗಟ್ಟಿಯಾದ ಸಾಮಾಜಿಕ ಬದ್ಧತೆ ಹೊಂದಿದ್ದವರು. ಎಂಥ ಕಷ್ಟವೇ ಇದ್ದರೂ ಸಾಮಾಜಿಕ ಹೋರಾಟಗಳಲ್ಲಿ ಭಾಗವಹಿಸುವುದನ್ನು ತಪ್ಪಿಸುತ್ತಿರಲಿಲ್ಲ. ದಲಿತ ಸಂಘಟನೆಗಳು ಒಡೆದು ಚೂರಾಗುತ್ತ, ನಾಯಕರಲ್ಲಿ ಪ್ರಾಮಾಣಿಕತೆ-ಕಳಕಳಿ ಕಡಿಮೆಯಾಗಿ, ಚಳವಳಿಯೊಂದು ಬದುಕಿನ ದಾರಿಯಾಗತೊಡಗಿದ್ದುದು, ದೇಶದಲ್ಲಿ ಎಡಪಂಥೀಯ ಚಳವಳಿ ಹಿನ್ನಡೆಗೆ ಈಡಾಗಿ ಸಂಘಪರಿವಾರದ ಫ್ಯಾಸಿಸ್ಟ್ ಶಕ್ತಿಗಳು ವಿಜೃಂಭಿಸತೊಡಗಿದ್ದು ಇವೆಲ್ಲ ಅವರನ್ನು ಬಹಳವಾಗಿ ಕಾಡುತ್ತಿದ್ದವು. ಹಾಗಂತ ಯಾವುದೇ ಚಳವಳಿಯ ಯಾವ ನಾಯಕರ ಜೊತೆಗೂ ಮನಸ್ತಾಪ ಮಾಡಿಕೊಂಡವರಲ್ಲ. ಅವರವರು ಒಂದುವೇಳೆ ಪರಸ್ಪರ ಮುಖ ನೋಡದ, ಮಾತಾಡದ ಹಗೆತನ ಬೆಳೆಸಿಕೊಂಡಿದ್ದರೂ ಲಕ್ಷ್ಮಣಜಿ ಎಲ್ಲರಿಗೂ ಬೇಕಾದವರಾಗಿದ್ದರು. 1989ರಲ್ಲಿ ‘ಕರ್ನಾಟಕ ವಿಮೋಚನಾ ರಂಗ’ ಸ್ಥಾಪನೆಯಾದಾಗ ಅದರ ಜೊತೆಗೂಡಿದ ಲಕ್ಷ್ಮಣಜಿ, ಕವಿರಂ ಇದ್ದಷ್ಟು ಕಾಲವೂ ಅದರಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡರು.

ಲಕ್ಷ್ಮಣಜಿ ಐವತ್ತರವತ್ತು ವರ್ಷ ಹಿಂದಿನ ಬೆಂಗಳೂರು ಸೀಮೆಯ ಜೀತದ ಬದುಕನ್ನು ಕಂಡುಂಡು ಬೆಳೆದುಬಂದವರು. ಅಂದಿನ ಜೀತಗಾರರ ಬದುಕಿನ ದಟ್ಟ ಚಿತ್ರಣ ಅವರ ಕವಿತೆ-ಕತೆ-ಬರಹಗಳಲ್ಲಿ ಅತ್ಯಂತ ಸಹಜವಾಗಿ ಬಿಂಬಿತವಾಗಿವೆ. ಅಂಬೇಡ್ಕರ್ ಬಗ್ಗೆ ಅಪಾರ ಅಭಿಮಾನ, ಆದರ. ಮಾರ್ಕ್ಸ್ ಮತ್ತು ಮಾರ್ಕ್ಸ್‌ವಾದದ ಬಗ್ಗೆಯೂ ಅಷ್ಟೇ ಆಸಕ್ತಿ, ಒಲವು. ದಲಿತ ಸಮುದಾಯದ ದುರ್ಭರ ಬದುಕಿನ ಬಗ್ಗೆ ಗಾಢವಾದ ಕ್ರಿಯಾಶೀಲ ಕಳಕಳಿ. ಹಾಗೆಯೇ ಎಲ್ಲ ದುಡಿವ ಜನರ, ಶೋಷಿತರ, ದಮನಿತರ ಬಗ್ಗೆಯೂ ಸಮಾನ ಅನುಕಂಪ, ತುಡಿತ. ಎಲ್ಲೋ ಯಲಹಂಕವೋ, ಪೀಣ್ಯವೋ, ಕಮಗೊಂಡನಹಳ್ಳಿಯೋ … ಎಲ್ಲೆಲ್ಲಿಯದೋ ಗುಡಿಸಲು ವಾಸಿಗಳ, ಬಡಜನರ, ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕಾಗಿ ಹೇಗೋ ನಾಲ್ಕಾರು ಸ್ನೇಹಿತರನ್ನು ಒಟ್ಟುಗೂಡಿಸಿಕೊಂಡು ಹೋಗಿ, ಮನವರಿಕೆ ಮಾಡಿಯೋ, ಬೆದರಿಕೆ ಹಾಕಿಯೋ ಸಮಸ್ಯೆ ಬಗೆಹರಿಸದೆ ಬಿಡುತ್ತಿರಲಿಲ್ಲ.

ಲಕ್ಷ್ಮಣಜಿ ಇಂದು ಭೌತಿಕವಾಗಿ ನಮ್ಮೊಂದಿಗಿಲ್ಲ. ಆದರೆ ಹೆಜ್ಜೆಹೆಜ್ಜೆಗೂ ಹೋದಲ್ಲಿ ಬಂದಲ್ಲಿ, ಮಾತಲ್ಲಿ ಕ್ರಿಯೆಯಲ್ಲಿ ಎಲ್ಲೆಲ್ಲೂ ಅವರು ಎಡೆಬಿಡದೆ ನೆನಪಾಗುತ್ತಾರೆಂದರೆ, ಯಾರೇ ಒಬ್ಬ ಕ್ರಿಯಾಶೀಲ ವ್ಯಕ್ತಿಯ ಸಾಮಾಜಿಕ ಬದುಕು ಸಾರ್ಥಕವೆನ್ನಿಸುವುದು ಹೀಗೇ ಅಲ್ಲವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...