Homeಮುಖಪುಟಭಾರತದ ಡಿಜಿಟಲ್ ಉತ್ತೇಜನಕ್ಕೆ ಗೂಗಲ್‌ನಿಂದ 75,000 ಕೋಟಿ ರೂ. ನಿಧಿ

ಭಾರತದ ಡಿಜಿಟಲ್ ಉತ್ತೇಜನಕ್ಕೆ ಗೂಗಲ್‌ನಿಂದ 75,000 ಕೋಟಿ ರೂ. ನಿಧಿ

ಇದು ಭಾರತದ ಭವಿಷ್ಯ ಮತ್ತು ಅದರ ಡಿಜಿಟಲ್ ಆರ್ಥಿಕತೆಯ ಬಗ್ಗೆ ನಮ್ಮ ವಿಶ್ವಾಸದ ಪ್ರತಿಬಿಂಬವಾಗಿದೆ ಎಂದು ಪಿಚೈ ಹೇಳಿದ್ದಾರೆ.

- Advertisement -
- Advertisement -

ಮುಂದಿನ ಐದು ರಿಂದ ಏಳು ವರ್ಷಗಳಲ್ಲಿ ಭಾರತದಲ್ಲಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಮತ್ತು ಡಿಜಿಟಲ್ ಆವಿಷ್ಕಾರಕ್ಕೆ ಉತ್ತೇಜನ ನೀಡಲು ಕಂಪನಿಯು ಸುಮಾರು 10 ಬಿಲಿಯನ್ ಡಾಲರ್‌ (ಅಂದಾಜು 75 ಸಾವಿರ ಕೋಟಿ) ಹೂಡಿಕೆ ಮಾಡಲಿದೆ ಎಂದು ಗೂಗಲ್ ಸಿಇಒ ಸುಂದರ್ ಪಿಚೈ ಸೋಮವಾರ ಪ್ರಕಟಿಸಿದ್ದಾರೆ.

ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಸಹಯೋಗದೊಂದಿಗೆ ನಡೆಸಿದ ಗೂಗಲ್ ಫಾರ್ ಇಂಡಿಯಾದ ಆರನೇ ಆವೃತ್ತಿಯಲ್ಲಿ ಪಿಚೈ ಮಾತನಾಡುತ್ತಿದ್ದರು.

ಪಿಚೈ ಈ ಘೋಷಣೆಗಳನ್ನು ಮಾಡುವ ಮೊದಲು, ಭಾರತದ ಡಿಜಿಟಲ್ ಭವಿಷ್ಯಕ್ಕಾಗಿ ಗೂಗಲ್‌ನ ವಿಚಾರಗಳನ್ನು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ವೀಡಿಯೊ-ಕಾನ್ಫರೆನ್ಸ್ ನಡೆಸಿದರು.

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, “ಈ ಬೆಳಿಗ್ಗೆ, ಸುಂದರ್‌ ಪಿಚೈ ಅವರೊಂದಿಗೆ ಅತ್ಯಂತ ಫಲಪ್ರದವಾದ ಸಂವಾದವನ್ನು ನಡೆಸಿದೆ” ಎಂದು ಟ್ವೀಟ್ ಮಾಡಿದ್ದಾರೆ.

“ನಾವು ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಮಾತನಾಡಿದ್ದೇವೆ, ವಿಶೇಷವಾಗಿ ಭಾರತದ ರೈತರು, ಯುವಕರು ಮತ್ತು ಉದ್ಯಮಿಗಳ ಜೀವನವನ್ನು ಪರಿವರ್ತಿಸಲು ತಂತ್ರಜ್ಞಾನದ ಶಕ್ತಿಯನ್ನು ಹೆಚ್ಚಿಸುತ್ತೇವೆ.” ಎಂದು ಅವರು ಹೇಳಿದ್ದಾರೆ.

“ಜಾಗತಿಕ ಸಾಂಕ್ರಾಮಿಕವು ಕ್ರೀಡೆಯಂತಹ ಕ್ಷೇತ್ರಗಳಿಗೆ ತಂದಿರುವ ಸವಾಲುಗಳನ್ನು ನಾವು ಚರ್ಚಿಸಿದ್ದೇವೆ. ಡೇಟಾ ಸುರಕ್ಷತೆ ಮತ್ತು ಸೈಬರ್ ಸುರಕ್ಷತೆಯ ಮಹತ್ವದ ಬಗ್ಗೆಯೂ ನಾವು ಮಾತನಾಡಿದ್ದೇವೆ” ಎಂದು ಪ್ರಧಾನಿ ಮೋದಿ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

“ಹಲವಾರು ಕ್ಷೇತ್ರಗಳಲ್ಲಿ ಗೂಗಲ್‌ನ ಪ್ರಯತ್ನಗಳ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ನನಗೆ ಸಂತೋಷವಾಯಿತು” ಎಂದು ಪ್ರಧಾನಿ ಹೇಳಿದ್ದಾರೆ.

ಗೂಗಲ್ ಸಿಇಒ ಸುಂದರ್ ಪಿಚೈ “ಭಾರತದ ಡಿಜಿಟಲೀಕರಣದ ಈ ಹೂಡಿಕೆ ಮುಖ್ಯವಾಗಿ ನಾಲ್ಕು ಕ್ಷೇತ್ರಗಳತ್ತ ಗಮನ ಹರಿಸುವುದಾಗಿ ಹೇಳಿದ್ದಾರೆ. ಮೊದಲನೆಯದಾಗಿ ಪ್ರತಿಯೊಬ್ಬ ಭಾರತೀಯನಿಗೆ ಅವರದ್ದೇ ಆದ ಭಾಷೆಯಲ್ಲಿ, ಅದು ಹಿಂದಿ, ತಮಿಳು, ಪಂಜಾಬಿ ಅಥವಾ ಇನ್ಯಾವುದೋ ಭಾಷೆಯಾಗಿರಬಹುದು, ಆ ಭಾಷೆಯಲ್ಲಿ ಮಾಹಿತಿ ಒದಗಿಸುವುದು, ಎರಡನೆಯದಾಗಿ ಭಾರತದ ವಿಶಿಷ್ಟ ಅಗತ್ಯತೆಗಳಿಗೆ ಅನುಗುಣವಾಗಿ ಹೊಸ ಉತ್ಪನ್ನಗಳು ಹಾಗೂ ಸೇವೆಗಳನ್ನು ಅಭಿವೃದ್ಧಿಪಡಿಸುವುದು, ಮೂರನೆಯದಾಗಿ ಉದ್ಯಮಗಳು ಡಿಜಿಟಲೀಕರಣಕ್ಕೆ ಪರಿವರ್ತನೆಯಾಗುವಾಗ ಅವುಗಳ ಸಬಲೀಕರಣಕ್ಕೆ ಆದ್ಯತೆ ಹಾಗೂ ನಾಲ್ಕನೆಯದಾಗಿ  ಸಾಮಾಜಿಕ  ಹಿತದೃಷ್ಟಿಯಿಂದ ಆರೋಗ್ಯ, ಶಿಕ್ಷಣ ಮತ್ತು ಕೃಷಿ ಕ್ಷೇತ್ರಗಳಲ್ಲಿ ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆಯ ನಡುವೆ ಸಮತೋಲನ ಸಾಧಿಸುವುದು” ಎಂದು ಹೇಳಿದ್ದಾರೆ.

“ಇದು ಭಾರತದ ಭವಿಷ್ಯ ಮತ್ತು ಅದರ ಡಿಜಿಟಲ್ ಆರ್ಥಿಕತೆಯ ಬಗ್ಗೆ ನಮ್ಮ ವಿಶ್ವಾಸದ ಪ್ರತಿಬಿಂಬವಾಗಿದೆ. ಪ್ರತಿಯೊಬ್ಬ ಭಾರತೀಯರಿಗೂ ತಮ್ಮದೇ ಭಾಷೆಯಲ್ಲಿ ಕೈಗೆಟುಕುವ ಇಂಟರ್ನೆಟ್ ಪ್ರವೇಶವನ್ನು ಕಲ್ಪಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ” ಎಂದು ಪಿಚೈ ಹೇಳಿದ್ದಾರೆ.

“ನಾವು ಪ್ರಧಾನಿ ಮೋದಿ ಅವರೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇವೆ ಮತ್ತು ಮುಂದಿನ ತರಂಗ ನಾವೀನ್ಯತೆಗೆ ಭಾರತ ಮುನ್ನಡೆಸಲಿದೆ ಎಂದು ಭಾವಿಸುತ್ತೇವೆ” ಎಂದು ಪಿಚೈ ಹೇಳಿದ್ದಾರೆ.


ಓದಿ: ವೀಸಾಗಳ ಸ್ಥಗಿತ; ಟ್ರಂಪ್ ನಿರಾಶೆಯನ್ನುಂಟು ಮಾಡಿದ್ದಾರೆಂದ ಸುಂದರ್‌ ಪಿಚೈ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....