Homeಸಾಮಾಜಿಕತೆರೆಮರೆ: ದೇಶಾಂಶ ಹುಡಗಿ

ತೆರೆಮರೆ: ದೇಶಾಂಶ ಹುಡಗಿ

- Advertisement -
- Advertisement -

ಭೀಮಾಶಂಕರ ಬಿರಾದಾರ |

15 ವರ್ಷಗಳ ಅವಿರತ ಶ್ರಮ ಮತ್ತು ಶ್ರದ್ಧೆಯಿಂದ ಕುರಿತು ದೇಶಾಂಶ ಹುಡಗಿಯವರು ರೂಪಿಸಿದ ‘ಬೀದರ ಕನ್ನಡ ಕೋಶ’ ಕೃತಿಯು ಸಾಂಸ್ಕೃತಿಕ, ಸಾಹಿತ್ಯ ಮತ್ತು ಭಾಷಾ ಲೋಕಕ್ಕೆ ನೀಡಿದ ಮಹತ್ವದ ಕೊಡುಗೆ.

ಕರ್ನಾಟಕದ ತುತ್ತ ತುದಿಯಲ್ಲಿ ಇರುವ ಬೀದರ್ ಹಲವು ಭಾಷೆಗಳ ಆಡುಂಬೊಲ. ವಿವಿಧ ಭಾಷೆಗಳ ಪರಸ್ಪರ ಮುಖಾಮುಖಿ, ಅನುಸಂಧಾನ, ಕೊಡುಕೊಳುವಿಕೆಯಿಂದ ಹೊಸ ಮತ್ತು ವಿಭಿನ್ನ ಭಾಷೆ-ಪದಗಳು ರೂಪುಗೊಂಡಿವೆ. ಜೊತೆಗೆ ಹಳೆಗನ್ನಡದ ಅಚ್ಚದೇಸಿ ಪದಗಳು ಕೂಡ ಇಂದಿಗೂ ಬಳಕೆಯಲ್ಲಿವೆ. ಅವುಗಳನ್ನು ಹುಡುಕಿ ತಂದು ಒಂದೆಡೆ ಸೇರಿಸಿ ನಿಘಂಟು ರಚಿಸುವ ಅನನ್ಯ ಕೆಲಸವನ್ನು ದೇಶಾಂಶ ಹುಡಗಿ ಅವರು ಮಾಡಿದ್ದಾರೆ.

ಕನ್ನಡ ಭಾಷೆ ಮತ್ತು ಸಾಹಿತ್ಯದ ಬೆಳವಣಿಗೆ ಮತ್ತು ಬದಲಾವಣೆಗಳು ಅನ್ಯ ಭಾಷೆ ಮತ್ತು ಸಾಹಿತ್ಯದ ಜತೆಗಿನ ಒಡನಾಟದೊಂದಿಗೆ ನಡೆದಿದೆ. ಒಂದು ಕಾಲಕ್ಕೆ ಸಂಸ್ಕೃತದೊಂದಿಗೆ ಮುಖಾಮುಖಿಯಾದ ಕನ್ನಡವು ಅನಂತರದಲ್ಲಿ ಅನುಸಂಧಾನ ಮತ್ತು ಆಪ್ತತೆಗಳಿಂದ ಹೊಸ ತಿಳಿವಳಿಕೆ ಪಡೆಯುತ್ತ, ತನ್ನ ಅಸ್ತಿತ್ವ ಮತ್ತು ಅಸ್ಮಿತೆಯನ್ನು ಕಾಯ್ದುಕೊಂಡಿದೆ. ಕವಿರಾಜಮಾರ್ಗಕಾರನ ಪರಿಕಲ್ಪನೆಯ ಹಲವು ಕನ್ನಡಗಳು ಇಲ್ಲಿವೆ. ಅದರಲ್ಲಿ ಬೀದರ ಕನ್ನಡವೂ ಒಂದು. ಹಿಂದಿ, ಉರ್ದು, ತೆಲಗು, ಮರಾಠಿ, ಪರ್ಷಿಯನ್, ಇಂಗ್ಲಿಷ್, ಅರೆಬಿಕ್, ಮೊದಲಾದ ಭಾಷೆಗಳ ಸಂಪರ್ಕದಿಂದ ಬೀದರ ಕನ್ನಡ ಪದ ರಚನೆಯಲ್ಲಿ ಅವೆಲ್ಲವು ಬೆರೆತುಹೋಗಿವೆ. ತೆಲಂಗಾಣಾ, ಮಹಾರಾಷ್ಟ್ರ, ಕನ್ನಡದ ಸೀಮಾಂತ ಜಿಲ್ಲೆಯಾದ ಬೀದರನ ಕನ್ನಡದಲ್ಲಿ ಅನ್ಯ ಭಾಷೆಯ ಅನೇಕ ಪದಗಳನ್ನು ಕನ್ನಡೀಕರಿಸುವ ಶಕ್ತಿ ಪಡೆದಿದೆ. ಸಂಸ್ಕೃತದಿಂದ ಕನ್ನಡಿಕರಣಗೊಂಡು ತದ್ಭವವಾಗುವಂಥ ಗುಣ ಈ ಭಾಷೆಗೆ ಇದೆ.

ಇಂಥ ಭಾಷೆಯ ಮೂಡಿಬಂದ ಈ ಕೋಶ ಬೀದರ ಕನ್ನಡದಲ್ಲಿ ಉಳಿದುಕೊಂಡ ಹಳೆಗನ್ನಡ, ನಡುಗನ್ನಡ, ಹೊಸಗನ್ನಡದ ಅಸಂಖ್ಯ ಪದಗಳನ್ನ ಪೋಷಿಸಿ ಅವನ್ನು ಅರ್ಥದ ಆವರಣಕ್ಕೆ ತಂದು ನಿಲ್ಲಿಸಿದ್ದು ವಿಶೇಷವಾಗಿದೆ.

ಕಾಲದಿಂದ ಕಾಲಕ್ಕೆ ಭಾಷೆಯ ಬಳಕೆ ಭಿನ್ನವಾಗುತ್ತಿರುತ್ತದೆ. ಈ ಸಂದರ್ಭದಲ್ಲಿ ಈ ನೆಲದ ಭಾಷೆಯ ರಚನೆ, ಅದರ ಸ್ವರೂಪ, ಈ ಬಳಕೆಯಾಗುವ ಪ್ರತ್ಯಯಗಳು, ಭಾಷಾ ಪ್ರಯೋಗದ ಬಗೆಗಳು, ಅವುಗಳ ಅರ್ಥಗ್ರಹಿಕೆ ಇವೆಲ್ಲವುದರ ಕುರಿತು ಭಾಷಾ ಅಧ್ಯಯನಕ್ಕೆ ಹೊಸ ಮಾರ್ಗವೊಂದನ್ನು ಸೃಷ್ಟಿಸಬಲ್ಲ ಕೋಶವನ್ನು ಹುಡಗಿಯವರು ಕಟ್ಟಿಕೊಟ್ಟಿದ್ದಾರೆ. ಸ್ಥಳೀಯ ಭಾಷೆ, ಸಂಪ್ರದಾಯ, ಸಂಸ್ಕೃತಿ, ಜನಪದ, ದೇವರು, ದೆವ್ವ, ನಂಬಿಕೆ, ಆಚರಣೆ, ಗಾದೆ, ಬೈಗಳು ಎಲ್ಲವು ಈ ಕೋಶದ ವ್ಯಪ್ತಿಗೆ ಸೇರಿವೆ.

1936 ನವೆಂಬರ್ 06ರಂದು ಬೀದರ ಜಿಲ್ಲೆಯ ಹುಮನಾಬಾದ ತಾಲೂಕಿನ ಹುಡಗಿಯಲ್ಲಿ ಜನಿಸಿದ ಶಾಂತಪ್ಪ ದೇವರಾಯ ಅವರು ‘ದೇಶಾಂಶ ಹುಡಗಿ’ ಎಂದೇ ಸಾಹಿತ್ಯ ಲೋಕದಲ್ಲಿ ಪ್ರಖ್ಯಾತರು. ತಂದೆ ಶರಣಪ್ಪ. ತಾಯಿ ಭೀಮಾಬಾಯಿ. ಕೃಷಿ ಹಿನ್ನಲೆಯ ಕುಟುಂಬದವರು. 1952ರಿಂದ ಕವಿತೆಗಳು ಬರೆಯುತ್ತಿರುವ ಹುಡಗಿಯವರು 1980ರಲ್ಲಿ ‘ಗ್ರಾಮಶಿಲ್ಪಿಗಳು’ ಕೃತಿಯನ್ನು ಮೊದಲಿಗೆ ಪ್ರಕಟಿಸಿದರು. ಕನ್ನಡದ ಜೊತೆಗೆ ಹಿಂದಿ, ಮರಾಠಿ, ಉರ್ದು, ಇಂಗ್ಲೀಷ ಮೊದಲಾದ ಬಹುಭಾಷೆಗಳಲ್ಲಿ ಪ್ರಾವಿಣ್ಯ ಹೊಂದಿದ ದೇಶಾಂಶ ಹುಡಗಿಯವರು ಕವಿ, ಕತೆಗಾರ, ಸಂಪಾದಕ, ಚರಿತ್ರೆಕಾರ, ನಿಘಂಟುತಜ್ಞ, ಅನುವಾದಕ, ಸಂಘಟಕರಾಗಿ ಸಾಹಿತ್ಯ ಜಗತ್ತಿನಲ್ಲಿ ಮಹತ್ವ ಪಡೆದಿದ್ದಾರೆ.

‘ಬದುಕಿನ ಸುತ್ತ’ (1988),’ಅಕ್ಷರಜ್ಯೋತಿ’ (1992), ಕವನ ಸಂಕಲನಗಳನ್ನು ಬರೆದ ಇವರು, ವ್ಯಕ್ತಿ ಮತ್ತು ವ್ಯಕ್ತಿತ್ವದ ಕನ್ನಡಿಯಾಗಿ ‘ಬೀದರ ಜಿಲ್ಲೆಯ ಬರಹಗಾರರು’, ‘ಬೀದರ ಜಿಲ್ಲೆಯಲ್ಲಿ ಕನ್ನಡ ಕಟ್ಟಿದವರು’, ‘ಗ್ರಾಮಶಿಲ್ಪಿಗಳು’ ಕೃತಿಗಳನ್ನು ಬರೆದಿದ್ದಾರೆ. ಸಾವಿರ ರುಬಾಯಿಗಳ ಸಂಗ್ರಹ ‘ಪ್ರಚಲಿತ’, ‘ಬಚ್ಚನ್ನನ ಮಧುಶಾಲಾ’ (ಹರಿವಂಶರಾಯ್ ಬಚ್ಚನ್), ‘ಆಧ್ಯಾತ್ಮವಾದಿ ವಿಶ್ವವಿಭೂತಿ ಮಹಾತ್ಮ ಬಸವೇಶ್ವರರು’ (ಡಾ.ಭಗವಾನದಾಸ ತಿವಾರಿ) ಅನುವಾದಿತ ಶ್ರೀ ಚನ್ನಬಸವ ಚರಿತ್ರೆ (2014 ಮಹಾಕಾವ್ಯ) ಕೃತಿಗಳಾಗಿವೆ.

ಬಿ.ಎ, ಬಿ.ಇಡಿ. ಪದವೀಧರರಾದ ಶಾಂತಪ್ಪನವರು ಪ್ರೌಢಶಾಲಾ ಶಿಕ್ಷಕರಾಗಿ, ಸಾಕ್ಷರತಾ ಶಿಕ್ಷಣ ಯೋಜನಾಧಿಕಾರಿಯಾಗಿ, ಶಾಲಾ ತನಿಖಾಧಿಕಾರಿಯಾಗಿ 40 ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ರಂಗಭೂಮಿಯ ನಂಟಿನಿಂದ 25 ನಾಟಕಗಳಲ್ಲಿ ಅಭಿನಯಿಸಿದ್ದು, 20 ನಾಟಕಗಳನ್ನು ನಿರ್ದೇಶಿಸಿದ್ದಾರೆ. 1999ರಲ್ಲಿ ಧರಿನಾಡು ಕನ್ನಡ ಸಂಘ ಹುಟ್ಟು ಹಾಕಿ, ಹೊಸ ಪೀಳಿಗೆಯ ಕನ್ನಡ ಓದುಗ ಮತ್ತು ಬರಹಗಾರರನ್ನು ಬೆಳೆಸಿ ಪ್ರೋತ್ಸಾಹಿಸುತ್ತಿದ್ದಾರೆ. ಧರಿನಾಡು ಕನ್ನಡ ಸಂಘದ ಅಡಿಯಲ್ಲಿ ಪುಸ್ತಕ ಪ್ರಕಟಣೆ, ಕವಿಗೋಷ್ಠಿ, ವಿಚಾರ ಸಂಕಿರಣ, ಗಡಿನಾಡು ಕನ್ನಡ ಸಾಹಿತ್ಯ ಸಮ್ಮೇಳನಗಳು ನಿರಂತರವಾಗಿ ಮಾಡುತ್ತಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಡಿದ ‘ಕೆ.ಜಿ.ಕುಂದಣಗಾರ ಗಡಿಕನ್ನಡ ಸಾಹಿತ್ಯ ಪ್ರಶಸ್ತಿ’, ಕನಾಟಕ ಜಾನಪದ ಅಕಾಡೆಮಿಯಿಂದ ಜಾನಪದತಜ್ಞ (2012), ಪಿ.ಎಚ್. ಜವರಪ್ಪ ಸಮಾಜಮುಖಿ ಪ್ರಶಸ್ತಿ, ಕಾಯಕ ಸಮ್ಮಾನ ಪ್ರಶಸ್ತಿ ಸೇರಿ ಅನೇಕ ಪುರಸ್ಕಾರಗಳು ದೇಶಾಂಶರ ಸಾಹಿತ್ಯ ಸೇವೆಗೆ ಸಂದಿವೆ.

ದೇಶಾಂಶರ ಬಹುಮುಖ ಪ್ರತಿಭೆ, ಕ್ರಿಯಾಶೀಲ ವ್ಯಕ್ತಿತ್ವ, ಸೃಜನ ಮತ್ತು ಸೃಜನೇತರ ಸಾಹಿತ್ಯವು ಕನ್ನಡದ ಒಂದುತಲೆಮಾರಿನ ಓದುಗರಲ್ಲಿ ಗ್ರಾಮ್ಯಪ್ರಜ್ಞೆ ಮತ್ತು ಲೋಕಪ್ರಜ್ಞೆಯನ್ನು ಮೂಡಿಸಿ, ಸಾಂಸ್ಕೃತಿಕ ಪರಕೀಯತೆಯನ್ನು ಹೋಗಲಾಡಿಸಿ, ದೇಶಿಯತೆ ಹಾಗೂ ಸ್ಥಳೀಯತೆಯ ಸಂಗಡ ನಿಕಟ ಸಂಬಂಧವೊಂದನ್ನು ಬೆಳೆಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...