Homeಮುಖಪುಟವರವರ ರಾವ್ ಆಸ್ಪತ್ರೆಗೆ: ಜಾಮೀನು ನಿರಾಕರಣೆ ವಿರುದ್ಧ ಹೈಕೋರ್ಟ್‌ನಲ್ಲಿ ಮನವಿ

ವರವರ ರಾವ್ ಆಸ್ಪತ್ರೆಗೆ: ಜಾಮೀನು ನಿರಾಕರಣೆ ವಿರುದ್ಧ ಹೈಕೋರ್ಟ್‌ನಲ್ಲಿ ಮನವಿ

ಕಳೆದ ವಾರದ ನಂತರ, ರಾವ್ ಅವರು ಮುಂಬೈನ ವಿಶೇಷ ಎನ್ಐಎ ನ್ಯಾಯಾಲಯದಲ್ಲಿ ವೈದ್ಯಕೀಯ ಆಧಾರದ ಮೇಲೆ ಸಲ್ಲಿಸಿದ್ದ ತಮ್ಮ ಮಧ್ಯಂತರ ಜಾಮೀನು ಅರ್ಜಿಯನ್ನು  ತಿರಸ್ಕರಿಸಲಾಯಿತು.

- Advertisement -
- Advertisement -

ಎಲ್ಗಾರ್ ಪರಿಷತ್ ಪ್ರಕರಣದಲ್ಲಿ 2018 ರಿಂದ ಜೈಲಿನಲ್ಲಿರುವ ಇರುವ 80 ವರ್ಷದ ತೆಲುಗು ಕವಿ-ಸಾಹಿತಿ ಮತ್ತು ಹೋರಾಟಗಾರ ವರವರರಾವ್ ಅವರನ್ನು, ಅನಾರೋಗ್ಯದ ಕಾರಣದಿಂದ ಪರೀಕ್ಷೆಗಾಗಿ ಸೋಮವಾರ ಸರ್ಕಾರಿ ಜೆಜೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಜುಲೈ 11 ರಂದು ಫೋನ್ ಮೂಲಕ ವರವರ ರಾವ್‌ರೊಂದಿಗೆ ಮಾತನಾಡಿದ ಸಮಯದಲ್ಲಿ, ಅವರು ಸ್ಪಷ್ಟವಾಗಿ ಮಾತನಾಡಿಲ್ಲ. ಅವರ ಆರೋಗ್ಯದ ಬಗೆಗಿನ ಪ್ರಶ್ನೆಗಳಿಗೆ ಉತ್ತರಿಸಲಿಲ್ಲ. 70 ವರ್ಷಗಳ ಹಿಂದೆ ಮತ್ತು 40 ವರ್ಷಗಳ ಹಿಂದೆಯೇ ನಿಧನ ಹೊಂದಿರುವ ತಮ್ಮ ತಂದೆ ಮತ್ತು ತಾಯಿಯ ಅಂತ್ಯಕ್ರಿಯೆಯ ಬಗ್ಗೆ ಒಂದು ರೀತಿಯ ಭ್ರಮನಿರಸನ ಮತ್ತು ಭ್ರಮೆಯ ಮಾತುಕತೆ ನಡೆಸಿದ್ದಾರೆ. ಅಲ್ಲದೇ ಮಾತನಾಡಲು ಪದಗಳಿಗಾಗಿ ಅವರು ಹುಡುಕಾಡುತ್ತಿದ್ದರು. ಇದೆಲ್ಲವೂ ಅವರ ಆರೋಗ್ಯ ಸಂಪೂರ್ಣ ಹದಗೆಟ್ಟಿರುವುದನ್ನು ತೋರಿಸುತ್ತದೆ ಎಂದು ಅವರ ಪತ್ನಿ ಭಾನುವಾರವಷ್ಟೇ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದರು.


ಇದನ್ನೂ ಓದಿ: ಜೈಲಿನಲ್ಲಿ ಕವಿ ವರವರ ರಾವ್‌ರನ್ನು ಕೊಲ್ಲಬೇಡಿ! ಕುಟುಂಬ ಸದಸ್ಯರ ಮನವಿ


ಜೈಲಿನಲ್ಲಿ ಕೋವಿಡ್ -19 ಗೆ ಒಳಗಾಗುವ ಸಾಧ್ಯತೆಯನ್ನು ಉಲ್ಲೇಖಿಸಿ ರಾವ್ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ಜೂನ್ 27 ರಂದು ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ಈ ಆದೇಶದ ವಿರುದ್ಧ ಬಾಂಬೆ ಹೈಕೋರ್ಟ್‌ಗೆ ಅವರು ಮನವಿ ಸಲ್ಲಿಸಿದ್ದರು. ಕಳೆದ ಶುಕ್ರವಾರ, ನ್ಯಾಯಾಲಯವು ಎನ್ಐಎ ಮತ್ತು ಮಹಾರಾಷ್ಟ್ರ ಸರ್ಕಾರಕ್ಕೆ ಮುಂದಿನ ವಿಚಾರಣೆಯ ದಿನಾಂಕ ಜುಲೈ 17 ರೊಳಗೆ ತಮ್ಮ ಪ್ರತಿಕ್ರಿಯೆ ಸಲ್ಲಿಸಲು ನೋಟಿಸ್ ನೀಡಿದೆ.

ಜೆಜೆ ಆಸ್ಪತ್ರೆಯ ಡೀನ್ ಡಾ.ರಂಜಿತ್ ಮಾಂಕೇಶ್ವರ ಮಾತನಾಡಿ “ನಾವು ಕೆಲವು ಪರೀಕ್ಷೆಗಳನ್ನು ನಡೆಸಿದ ನಂತರ ಅವರನ್ನು ಆಸ್ಪತ್ರೆಗೆ ಸೇರಿಸಬೇಕೆ ಎಂದು ನಿರ್ಧರಿಸುತ್ತೇವೆ” ಎಂದು ಹೇಳಿದ್ದಾರೆ.

ಮುಂಬಯಿಯ ತಾಜೋಲಾ ಕೇಂದ್ರ ಕಾರಾಗೃಹದಿಂದ ಆಸ್ಪತ್ರೆಗೆ ಸ್ಥಳಾಂತರಿಸಬೇಕೆಂದು ರಾವ್ ಅವರ ಕುಟುಂಬವು ಒತ್ತಾಯಿಸಿತ್ತು.

ಸೋಮವಾರ ರಾವ್ ಪರ ವಕೀಲ ಆರ್ ಸತ್ಯನಾರಾಯಣನ್, ಮಧ್ಯಂತರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ವಿಶೇಷ ಎನ್‌ಐಎ ನ್ಯಾಯಾಲಯದ ವಿರುದ್ಧದ ಮೇಲ್ಮನವಿಯನ್ನು ಜುಲೈ 17ರ ಬದಲು ಮಂಗಳವಾರ ವಿಚಾರಣೆಗೆ ಒಳಪಡಿಸಬೇಕು ಎಂದು ಹೈಕೋರ್ಟ್‌ನ ಮುಂದೆ ತುರ್ತು ಪ್ರೆಸಿಪಿಯನ್ನು ಸಲ್ಲಿಸಿದ್ದಾರೆ. ಜೆಜೆ ಆಸ್ಪತ್ರೆಯ ಸೂಚನೆಯಂತೆ ವೈದ್ಯಕೀಯ ತಪಾಸಣೆ ನಡೆಸದಿರುವುದಕ್ಕೆ ಜೈಲು ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಭೀಮಾ ಕೋರೆಗಾಂವ್: ತಕ್ಷಣದ ವೈದ್ಯಕೀಯ ತಪಾಸಣೆ ಕೋರಿ ಬಾಂಬೆ ಹೈಕೋರ್ಟ್‌‌ಗೆ ಮೊರೆ ಹೋದ ವರವರ ರಾವ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...