Homeಕರೋನಾ ತಲ್ಲಣಕೊರೊನಾ ಸೋಂಕಿತರು ಚೇತರಿಸಿಕೊಳ್ಳಲು ಸಾಮಾಜಿಕ ಕಳಂಕವೇ ಅಡ್ಡಿ!

ಕೊರೊನಾ ಸೋಂಕಿತರು ಚೇತರಿಸಿಕೊಳ್ಳಲು ಸಾಮಾಜಿಕ ಕಳಂಕವೇ ಅಡ್ಡಿ!

ನನ್ನನ್ನು ಮನೆಯಲ್ಲಿಯೇ ಐಸೋಲೇಷನ್ ನಲ್ಲಿರಲು ಸೂಚಿಸಲಾಯಿತು. ಆದರೆ ಮೊದಲಿಗೆ ನೆರೆಹೊರೆಯವರಿಂದ ಸಮಸ್ಯೆ ಇರಲಿಲ್ಲ.

- Advertisement -
- Advertisement -

ಕೊರೊನಾಗೆ ತುತ್ತಾಗ ರೋಗಿಗಳನ್ನು ಸಾಮಾಜಿಕ ಕಳಂಕದಿಂದ ನೋಡುವುದು ಮತ್ತು ಅದೇ ರೀತಿ ವ್ಯವಹರಿಸುವುದರಿಂದ ಮನೆಯಲ್ಲಿಯೇ ಐಸೋಲೇಷನ್‌ನಲ್ಲಿರುವ ರೋಗಿಗಳ ಚೇತರಿಕೆ ಕಷ್ಟಕರವಾಗಿದೆ ಎಂಬ ಅಂಶ ಬೆಳಕಿಗೆ ಬಂದಿದೆ.

ಸುಮಾರು 70 ರಿಂದ 80 ರಷ್ಟು ಸೋಂಕಿತ ಜನರು ತೆಲಂಗಾಣದಾದ್ಯಂತ ಮನೆಯಲ್ಲಿಯೇ ಐಸೋಲೇಷನ್ ನಲ್ಲಿರುವುದರಿಂದ, ಹಲವು ರೋಗಿಗಳು ನೆರೆಹೊರೆಯವರಿಂದ ಕಿರುಕುಳಕ್ಕೊಳಗಾಗುತ್ತಿದ್ದಾರೆ ಎಂದು ನ್ಯೂಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕೊರೊನಾ ರೋಗಿಗಳನ್ನು ಆಸ್ಪತ್ರೆಗೆ ಸೇರಿಸಬೇಕೆಂದು ನೆರೆಹೊರೆಯವರು ಒತ್ತಾಯಿಸುತ್ತಾರೆ. ಆದರೆ ಆಸ್ಪತ್ರೆಗಳಲ್ಲಿ ಸಾಕಷ್ಟು ಹಾಸಿಗೆಗಳು ಇಲ್ಲದ ಕಾರಣ ರೋಗ ಲಕ್ಷಣಗಳಿಲ್ಲದವರು ಮನೆಯಲ್ಲಿಯೇ ಇದ್ದು ಚೇತರಿಸಿಕೊಳ್ಳಬೇಕು ಎಂದು ಸರ್ಕಾರ ಸೂಚಿಸಿದೆ. ಇವೆರಡರ ನಡುವೆ ರೋಗಿಗಳು ಕಂಗಾಲಾಗಿದ್ದಾರೆ.

ರೋಗಿಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಬೇಕೆಂದು ನೆರೆಹೊರೆಯವರು ಬಯಸುತ್ತಾರೆ. ಈ ಕುರಿತು ಕೆಲವೊಮ್ಮೆ ರೋಗಿಗಳು ತಮ್ಮ ನೆರೆಹೊರೆಯವರೊಂದಿಗೆ ವಾದಕ್ಕಿಳಿದಾಗ, ಪರಿಸ್ಥಿತಿಯು ತುಂಬಾ ಗಂಭೀರವಾಗುವುದರಿಂದ  ಪೊಲೀಸರ ಸಹಾಯವನ್ನು ತೆಗೆದುಕೊಳ್ಳಬೇಕಾದ ಪರಿಸ್ಥಿತಿ ಒದಗಿಬಂದಿವೆ.

“ಜೂನ್‌ನಲ್ಲಿ ಕೊರೊನಾ ಪರೀಕ್ಷೆ ಮಾಡಿದಾಗ, ನನಗೆ ಸೋಂಕು ತಗುಲಿರುವುದು ದೃಢಪಟ್ಟಿತು. ಆದರೂ ಅಷ್ಟೇನೂ ಅಪಾಯವಲ್ಲದ ರೋಗಲಕ್ಷಣಗಳನ್ನು ಹೊಂದಿದ್ದರಿಂದ, ನನ್ನನ್ನು ಮನೆಯಲ್ಲಿಯೇ ಐಸೋಲೇಷನ್ ನಲ್ಲಿರಲು ಸೂಚಿಸಲಾಯಿತು. ಆದರೆ ಮೊದಲಿಗೆ ನೆರೆಹೊರೆಯವರಿಂದ ಸಮಸ್ಯೆ ಇರಲಿಲ್ಲ. ಆದರೆ ನಾನು ಆಮ್ಲಜನಕ ಸಿಲಿಂಡರ್‌ ತರಿಸಿಕೊಂಡಾಗ ಅವರಿಗೆ ಅನುಮಾನ ಹೆಚ್ಚಾಯಿತು. ನೆರೆಹೊರೆಯವರು ವೈರಸ್‌ಗೆ ತುತ್ತಾಗಬಹುದೆಂಬ ಭಯದಿಂದ ನನ್ನನ್ನು ಆಸ್ಪತ್ರೆಗೆ ಸ್ಥಳಾಂತರಿಸಬೇಕೆಂದು ಒತ್ತಾಯಿಸಿದರು” ಎಂದು ಕಾಯಿಲೆಯಿಂದ ಚೇತರಿಸಿಕೊಂಡ ಕಬೀರ್ ಖಾನ್ ಹೇಳಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ “ನನ್ನ ಮಾಲೀಕರು, ಕುಟುಂಬದೊಂದಿಗೆ ಫ್ಲಾಟ್‌ನಿಂದ ಹೊರಹೋಗಬೇಕೆಂದು ಹೇಳಿದ್ದರು. ನಾನು ಬೇರೆ ಎಲ್ಲಿಗೂ ಹೋಗುವ ಅವಕಾಶವಿರಲಿಲ್ಲ. ಇಂತಹ ಸಂದರ್ಭದಲ್ಲಿ ಇದು ನನ್ನ ಜೀವಕ್ಕೆ ಅಪಾಯವೆಂದು ತಿಳಿದು ಪೊಲೀಸರಿಗೆ ದೂರು ನೀಡಿದೆ” ಎಂದು ಚೇತರಿಸಿಕೊಂಡಿರುವ ರೋಗಿ ಹೇಳಿದರು.

ಹೀಗೆ ಹಲವಾರು ದೂರುಗಳು ಬಂದಿವೆ. ಎಷ್ಟೋ ರೋಗಿಗಳಿಗೆ ಈ ಕಳಂಕವು ಖಿನ್ನತೆ, ಉದ್ವಿಗ್ನತೆಯನ್ನು ಉಂಟುಮಾಡಿದೆ. ಆಸ್ಪತ್ರೆಗಳಲ್ಲಿ ಹಾಸಿಗೆ ಮತ್ತು ಐಸೋಲೇಷನ್ ಕೊಠಡಿಗಳಿಲ್ಲದ ಕಾರಣ 80 ಪ್ರತಿಶತ ರೋಗಿಗಳಿಗೆ ಮನೆಯಲ್ಲಿಯೇ ಪ್ರತ್ಯೇಕವಾಗಿರಲು ಸೂಚಿಸಲಾಗಿದೆ. ಆದರೆ ಇದಕ್ಕೂ ನೆರಹೊರೆಯವರಿಂದ ತೊಂದರೆಯಾಗುತ್ತಿದೆ ಎಂದು ದೂರಿದ್ದಾರೆ.


ಇದನ್ನೂ ಓದಿ: ಇಂದಿನಿಂದ ಸಿಎಂ ಯಡಿಯೂರಪ್ಪ ವರ್ಕ್‌ ಫ್ರಂ ಹೋಮ್‌: ಕಾರಣವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...