Homeಮುಖಪುಟಲಾಕ್‌ಡೌನ್‌ ಉಲ್ಲಂಘಿಸಿದ ಗುಜರಾತ್ ಸಚಿವರ ಪುತ್ರನನ್ನು ಪ್ರಶ್ನಿಸಿದ್ದ ಮಹಿಳಾ ಕಾನ್ಸ್ಟೇಬಲ್‌ ರಾಜೀನಾಮೆ!

ಲಾಕ್‌ಡೌನ್‌ ಉಲ್ಲಂಘಿಸಿದ ಗುಜರಾತ್ ಸಚಿವರ ಪುತ್ರನನ್ನು ಪ್ರಶ್ನಿಸಿದ್ದ ಮಹಿಳಾ ಕಾನ್ಸ್ಟೇಬಲ್‌ ರಾಜೀನಾಮೆ!

- Advertisement -
- Advertisement -

ಕಳೆದ ವಾರ ಗುಜರಾತ್‌ನ ಸೂರತ್‌ನಲ್ಲಿ ಲಾಕ್‌ಡೌನ್‌ನ ರಾತ್ರಿ ಕರ್ಫ್ಯೂ ನಿಯಮಗಳನ್ನು ಉಲ್ಲಂಘಿಸಿದ್ದ ಸಚಿವರ ಪುತ್ರನನ್ನು ತಡೆದು ಪ್ರಶ್ನಿಸಿದ್ದ ಮಹಿಳಾ ಕಾನ್ಸ್ಟೇಬಲ್ ಕೊನೆಗೂ ರಾಜೀನಾಮೆ ನೀಡಿದ್ದಾರೆ.

ಆರೋಗ್ಯ ಸಚಿವ ಕುಮಾರ್‌ ಕನಾನಿ ಪುತ್ರ ಪ್ರಕಾಶ್ ಪೊಲೀಸ್ ತಮ್ಮ ಸ್ನೇಹಿತರೊಂದಿಗೆ ರಾತ್ರಿ ವೇಳೆ ತಮ್ಮ ತಂದೆಯ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಪೊಲೀಸರ್ ಸಿಬ್ಬಂದಿ ಸುನೀತಾ ಯಾದವ್‌ರವರು ತಡೆದಿದ್ದಾರೆ. ಈ ಸಂದರ್ಭದಲ್ಲಿ ಇಬ್ಬರ ನಡುವೆಯೂ ಜೋರು ಮಾತುಕತೆ ನಡೆದಿದೆ.

ವೈರಲ್ ವಿಡಿಯೋದಲ್ಲಿ ದಾಖಲಾದಂತೆ “ನಾನು ಮನಸ್ಸು ಮಾಡಿದ್ದರೆ ನಿನ್ನನ್ನು 365  ದಿನವೂ ಇಲ್ಲೇ ನಿಲ್ಲುವಂತೆ ಮಾಡಬಲ್ಲೇ” ಎಂದು ಸಚಿವರ ಪುತ್ರ ಹೇಳಿದ್ದಾರೆ. ಇದಕ್ಕೆ ನಾನು ಸಚಿವರಿಗೆ ಹೆದರುವ ಗುಲಾಮಳಲ್ಲ ಎಂದು ಮಹಿಳಾ ಪೊಲೀಸ್ ಹೇಳಿದ್ದಾರೆ.

ನಾನು ಆಸ್ಪತ್ರೆಯಲ್ಲಿ ದಾಖಲಾಗಿರುವ ನಮ್ಮ ಮಾವನನ್ನು ನೋಡಲು ಹೋಗುತ್ತಿದ್ದೇನೆ ಎಂದು ಸಚಿವರ ಪುತ್ರ ಹೇಳಿದ್ದಕ್ಕೆ, ಮಾಸ್ಕ್ ಏಕೆ ಧರಿಸಿಲ್ಲ? ಎಂಎಲ್‌ಎ ಎಂದು ಬರೆದಿರುವ ಈ ಕಾರು ಯಾರದು? ನೀವೇಕೆ ಬಳಸುತ್ತಿದ್ದೀರಿ ಎಂದು ಮಹಿಳಾ ಪೊಲೀಸ್ ಪ್ರಶ್ನಿಸಿದ್ದಾರೆ.

ಕೂಡಲೇ ತಮ್ಮ ತಂದೆಗೆ ಫೋನಾಯಿಸಿದ ಪ್ರಕಾಶ್ ಕನಾನಿ ಮಹಿಳಾ ಪೊಲೀಸ್ ಮೇಲೆ ಆರೋಪಗಳ ಸುರಿಮಳೆಗೈದಿದ್ದಾರೆ. ಅಲ್ಲಿಂದ ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ಫೋನ್ ಹೋಗಿ ಕೆಲ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಸಚಿವರ ಪುತ್ರರನ್ನು ಅಲ್ಲಿಂದ ಕಳಿಸಲಾಗಿದೆ. ಮಹಿಳಾ ಪೊಲೀಸ್ ಅನ್ನು ಸಹ ಅಲ್ಲಿಂದ ಹೊರಕಳಿಸಲಾಗಿದೆ.

ಅಂದು ನಡೆದ ಘಟನೆಯನ್ನು ಕೆಲವರು ಸಂಪೂರ್ಣವಾಗಿ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಮಹಿಳಾ ಪೊಲೀಸ್ ತನ್ನ ಕೆಲಸ ತಾನು ಮಾಡಿದ್ದಾರೆ. ಆದರೆ ಸಚಿವರ ಪುತ್ರ ನಿಯಮ ಮೀರಿ ವರ್ತಿಸಿದ್ದು, ಬೆದರಿಕೆ ಹಾಕಿದ್ದಾನೆ. ಶಿಕ್ಷೆ ಆಗಬೇಕಾದುದ್ದು ಆತನಿಗೆ ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.

ಕಳೆದ ಬುಧವಾರ ರಾತ್ರಿ ಸೂರತ್‌ನ ಮಂಗಂಧ್ ಚೌಕ್‌ನಲ್ಲಿ ರಾತ್ರಿ 10.30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ (ವಿಶೇಷ ಶಾಖೆ) ಪಿಎಲ್ ಚೌಧರಿ ತಿಳಿಸಿದ್ದಾರೆ. “ಆಡಿಯೋ ಕ್ಲಿಪ್ ಸೂರತ್ ಪೊಲೀಸ್ ಆಯುಕ್ತ (ಆರ್ ಬಿ ಬ್ರಹ್ಮಭಟ್) ಅವರ ಗಮನಕ್ಕೆ ಬಂದಿದೆ. ಅವರು ಎಸಿಪಿ (ಎ-ಡಿವಿಷನ್) ಸಿಕೆ ಪಟೇಲ್ ಅವರಿಗೆ ವಿಚಾರಣೆ ನಡೆಸಲು ಆದೇಶಿಸಿದ್ದಾರೆ ಎಂದು ತಿಳಿಸಿದ್ದರು.

ಇಂದು ವಿಚಾರಣೆಯ ಬಳಿಕೆ ಮಹಿಳಾ ಪೊಲೀಸ್‌ದೆ ತಪ್ಪು ಎಂದು ಅಧಿಕಾರಿಗಳು ತಿಳಿಸಿದ್ದರಿಂದ ಸುನೀತಾ ಯಾದವ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ. ತನಿಖೆ ನಡೆದರೆ ಸೇವೆಯಿಂದ ಅಮಾನತು ಮಾಡಬೇಕು, ಅಥವಾ ವಜಾಗೊಳಿಸಬೇಕು. ಆದರೆ ಇಲ್ಲಿ ಮಹಿಲಾ ಪೊಲೀಸ್ ವತಿಯಿಂದಲೇ ರಾಜೀನಾಮೆ ಪಡೆಯಲಾಗಿದೆ. ಇದರಲ್ಲಿ ಅಧಿಕಾರದ ದುರ್ಬಳಕೆ ನಡೆದಿದೆ ಎಂದು ಹಲವರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...