Homeಅಂತರಾಷ್ಟ್ರೀಯನಿಜವಾದ ಅಯೋಧ್ಯೆ ನೇಪಾಳದಲ್ಲಿದೆ, ಭಗವಾನ್ ರಾಮ ನೇಪಾಳಿ: ನೇಪಾಳದ ಪ್ರಧಾನಿ ಕೆ.ಪಿ ಶರ್ಮಾ ಒಲಿ

ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ, ಭಗವಾನ್ ರಾಮ ನೇಪಾಳಿ: ನೇಪಾಳದ ಪ್ರಧಾನಿ ಕೆ.ಪಿ ಶರ್ಮಾ ಒಲಿ

ಓಲಿ ಅವರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಬಿಜಯ್ ಸೋಂಕರ್ ಶಾಸ್ತ್ರಿ, ಭಾರತದಲ್ಲಿಯೂ ಸಹ ಎಡಪಕ್ಷಗಳು ಜನರ ನಂಬಿಕೆಯೊಂದಿಗೆ ಆಟ ಆಡಿದವು. ನೇಪಾಳದ ಕಮ್ಯುನಿಸ್ಟರನ್ನು ಅಲ್ಲಿನ ಜನಸಾಮಾನ್ಯರು ಇಲ್ಲಿನ ರೀತಿಯಲ್ಲಿಯೇ ತಿರಸ್ಕರಿಸುತ್ತಾರೆ ಎಂದು ಹೇಳಿದರು.

- Advertisement -
- Advertisement -

ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ, ಭಗವಾನ್ ರಾಮ ನೇಪಾಳಿ ಎಂದು ಹೇಳುವ ಮೂಲಕ ನೇಪಾಳದ ಪ್ರಧಾನಿ ಕೆ.ಪಿ ಶರ್ಮಾ ಒಲಿ ವಿವಾದ ಹುಟ್ಟುಹಾಕಿದ್ದಾರೆ.

ಸೋಮವಾರ ಮಾತನಾಡಿದ ಅವರು ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ, ಭಾರತದಲ್ಲಿ ಅಲ್ಲ. ಭಗವಾನ್ ರಾಮ್ ದಕ್ಷಿಣ ನೇಪಾಳದ ಥೋರಿಯಲ್ಲಿ ಜನಿಸಿದರು ಎಂದು ಹೇಳಿದ್ದಾರೆ.

ಕಠ್ಮಂಡುವಿನ ಪ್ರಧಾನ ಮಂತ್ರಿಯ ನಿವಾಸದಲ್ಲಿ ನೇಪಾಳದ ಕವಿ ಭಾನುಭಕ್ತ ಅವರ ಜನ್ಮ ದಿನಾಚರಣೆಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಒಲಿ, ನೇಪಾಳವು “ಸಾಂಸ್ಕೃತಿಕ ಅತಿಕ್ರಮಣಕ್ಕೆ ಬಲಿಯಾಗಿದೆ ಮತ್ತು ಅದರ ಇತಿಹಾಸವನ್ನು ಬುದ್ಧಿವಂತಿಕೆಯಿಂದ ಬದಲಾಯಿಸಲಾಗಿದೆ” ಎಂದು ಹೇಳಿದರು.

ಭಾನುಭಕ್ತನು 1814 ರಲ್ಲಿ ಪಶ್ಚಿಮ ನೇಪಾಳದ ತನ್ಹು ಎಂಬಲ್ಲಿ ಜನಿಸಿದರು. ವಾಲ್ಮೀಕಿಯ ರಾಮಾಯಣವನ್ನು ನೇಪಾಳಿ ಭಾಷೆಗೆ ಅನುವಾದಿಸಿದ ಕೀರ್ತಿಗೆ ಪಾತ್ರನಾಗಿದ್ದಾರೆ. ಅವರು 1868 ರಲ್ಲಿ ನಿಧನರಾದರು.

“ನಿಜವಾದ ಅಯೋಧ್ಯೆ ಬಿರ್ಗುಂಜ್ ನ ಪಶ್ಚಿಮದಲ್ಲಿರುವ ಥೋರಿಯಲ್ಲಿದ್ದರೂ, ಭಾರತವು ತನ್ನ ಸ್ಥಳವನ್ನು ಭಗವಾನ್ ರಾಮ ಅವರ ಜನ್ಮಸ್ಥಳವೆಂದು ಹೇಳಿಕೊಂಡಿದೆ” ಎಂದು ಒಲಿ ಹೇಳಿದರು.

“ಬಿರ್ಗುಂಜ್ ಬಳಿಯ ಥೋರಿ ಎಂಬ ಸ್ಥಳವು ಭಗವಾನ್ ರಾಮ್ ಜನಿಸಿದ ನಿಜವಾದ ಅಯೋಧ್ಯೆ. ಭಾರತದಲ್ಲಿ ಅಯೋಧ್ಯೆಯ ಬಗ್ಗೆ ದೊಡ್ಡ ವಿವಾದವಿದೆ. ಆದರೆ, ನಮ್ಮ ಅಯೋಧ್ಯೆಯಲ್ಲಿ ಯಾವುದೇ ವಿವಾದಗಳಿಲ್ಲ” ಎಂದು ಪ್ರಧಾನಿ ಒಲಿ ಹೇಳಿದರೆಂದು ಪತ್ರಿಕಾ ಸಲಹೆಗಾರರಾದ ಸೂರ್ಯ ಥಾಪಾ ಹೇಳಿದ್ದಾರೆ.

“ವಾಲ್ಮೀಕಿ ಆಶ್ರಮವೂ ನೇಪಾಳದಲ್ಲಿದೆ. ಮಗನನ್ನು ಪಡೆಯಲು ರಾಜ ದಶರಥ್ ವಿಧಿಗಳನ್ನು ನೆರವೇರಿಸಿದ ಪವಿತ್ರ ಸ್ಥಳ ನೇಪಾಳದಲ್ಲಿರುವ ರಿಡಿಯಲ್ಲಿದೆ” ಎಂದು ಅವರು ಹೇಳಿದರು.

ದಶರಥ್ ನೇಪಾಳದ ಆಡಳಿತಗಾರನಾಗಿದ್ದರಿಂದ, ಅವನ ಮಗ ರಾಮ್ ಕೂಡ ನೇಪಾಳದಲ್ಲಿ ಜನಿಸಿದ್ದು ಸಹಜ ಎಂದು ಒಲಿ ವಾದಿಸಿ, ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ ಎಂದು ಹೇಳಿದ್ದಾರೆ.

ಅನೇಕ ವೈಜ್ಞಾನಿಕ ಆವಿಷ್ಕಾರಗಳು ಮತ್ತು ಜ್ಞಾನವು ನೇಪಾಳದಲ್ಲಿ ಹುಟ್ಟಿಕೊಂಡಿತು, ಆದರೆ ದುರದೃಷ್ಟವಶಾತ್ ಅಂತಹ ಶ್ರೀಮಂತ ಸಂಪ್ರದಾಯವನ್ನು ನಂತರ ಮುಂದುವರಿಸಲು ಸಾಧ್ಯವಾಗಲಿಲ್ಲ ಎಂದೂ ಹೇಳಿದ್ದಾರೆ.

ಒಲಿ ಅವರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಬಿಜಯ್ ಸೋಂಕರ್ ಶಾಸ್ತ್ರಿ, ಭಾರತದಲ್ಲಿಯೂ ಸಹ ಎಡಪಕ್ಷಗಳು ಜನರ ನಂಬಿಕೆಯೊಂದಿಗೆ ಆಟ ಆಡಿದವು. ನೇಪಾಳದ ಕಮ್ಯುನಿಸ್ಟರನ್ನು ಅಲ್ಲಿನ ಜನಸಾಮಾನ್ಯರು ಇಲ್ಲಿನ ರೀತಿಯಲ್ಲಿಯೇ ತಿರಸ್ಕರಿಸುತ್ತಾರೆ ಎಂದು ಹೇಳಿದ್ದಾರೆ. “ಭಗವಾನ್ ರಾಮ ನಮಗೆ ನಂಬಿಕೆಯ ವಿಷಯ. ಇದರೊಂದಿಗೆ ಆಟವಾಡಲು ಜನರು ಯಾರಿಗೂ ಅವಕಾಶ ನೀಡುವುದಿಲ್ಲ. ಅದು  ನೇಪಾಳದ ಪ್ರಧಾನ ಮಂತ್ರಿಯಾಗಲಿ ಅಥವಾ ಯಾರೇ ಆಗಲಿ” ಎಂದು ಅವರು ನವದೆಹಲಿಯಲ್ಲಿ ಹೇಳಿದ್ದಾರೆ.

ಒಲಿ ಆರೋಪಗಳನ್ನು ನೇಪಾಳದ ಮಾಜಿ ಪ್ರಧಾನಿ ‘ಪ್ರಚಂಡ’ ಸೇರಿದಂತೆ ಹಿರಿಯ ಎನ್‌ಸಿಪಿ ನಾಯಕರು ಟೀಕಿಸಿದ್ದಾರೆ. ಅವರ ಇತ್ತೀಚಿನ ಭಾರತ ವಿರೋಧಿ ಹೇಳಿಕೆಗಳು “ರಾಜಕೀಯವಾಗಿ ಸರಿಯಾಗಿಲ್ಲ” ಎಂದು ವಿರೋಧ ಪಕ್ಷಗಳು ಹೇಳಿವೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮೇ 8 ರಂದು ಉತ್ತರಾಖಂಡದ ಧಾರ್ಚುಲಾದೊಂದಿಗೆ ಲಿಪುಲೆಖ್ ಪಾಸ್ ಅನ್ನು ಸಂಪರ್ಕಿಸುವ 80 ಕಿ.ಮೀ ಉದ್ದದ ಕಾರ್ಯತಂತ್ರದ ನಿರ್ಣಾಯಕ ರಸ್ತೆಯನ್ನು ಉದ್ಘಾಟಿಸಿದ ನಂತರ ಭಾರತ-ನೇಪಾಳ ದ್ವಿಪಕ್ಷೀಯ ಸಂಬಂಧಗಳು ಬಿಗಡಾಯಿಸಿವೆ.


ಇದನ್ನೂ ಓದಿ: ಭಾರತೀಯ ಭೂಪ್ರದೇಶವನ್ನು ಒಳಗೊಂಡ ನಕ್ಷೆ ಅಂಗೀಕರಿಸಿದ ನೇಪಾಳ

ಗಡಿ ವಿವಾದ; ಭಾರತ ಅತಿಕ್ರಮಿಸಿರುವ ಪ್ರದೇಶವನ್ನು ಹಿಂತಿರುಗಿಸಬೇಕು: ನೇಪಾಳ ಪ್ರಧಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...