Homeಮುಖಪುಟಸರ್ಕಾರಿ ಬಂಗಲೆ ತೆರವು: ಪ್ರಿಯಾಂಕಾ ಗಾಂಧಿ ಮತ್ತು ಕೇಂದ್ರ ಸಚಿವರ ಜಟಾಪಟಿ

ಸರ್ಕಾರಿ ಬಂಗಲೆ ತೆರವು: ಪ್ರಿಯಾಂಕಾ ಗಾಂಧಿ ಮತ್ತು ಕೇಂದ್ರ ಸಚಿವರ ಜಟಾಪಟಿ

ಪ್ರಿಯಾಂಕಾ ಗಾಂಧಿಗೆ 1997 ರಲ್ಲಿ ಮಂಜೂರು ಮಾಡಿರುವ #35, ಲೋಧಿ ಎಸ್ಟೇಟ್ ಬಂಗಲೆಗೆಯನ್ನು ಖಾಲಿ ಮಾಡುವಂತೆ ಜುಲೈ 1 ರಂದು ಸರ್ಕಾರವು  ನೋಟೀಸ್ ನೀಡಿತ್ತು.

- Advertisement -
- Advertisement -

ಪ್ರಿಯಾಂಕಾ ಗಾಂಧಿಗೆ ನೀಡಿದ್ದ ಸರ್ಕಾರಿ ಬಂಗಲೆಯನ್ನು ತೆರವುಗೊಳಿಸಬೇಕೆಂದು ಸರ್ಕಾರ ಆದೇಶ ಹೊರಡಿಸಿದ ನಂತರ ವಿವಾದ ದೊಡ್ಡದಾಗಿದೆ. ಈ ವಿಷಯವಾಗಿ ಪ್ರಿಯಾಂಕ ಗಾಂಧಿ ಪರವಾಗಿ ಹಿರಿಯ ಕಾಂಗ್ರೆಸ್ ನಾಯಕರು ವಕಾಲತ್ತು ವಹಿಸಿದ್ದಾರೆ ಎಂದು ಕೇಂದ್ರ ಸಚಿವ ಹರ್ದೀಪ್ ಪುರಿ ಆರೋಪಿಸಿದರೆ, ಅದನ್ನು ಪ್ರಿಯಾಂಕ ಗಾಂಧಿ ಅಲ್ಲಗಳೆದಿದ್ದು ಅದು ಫೇಕ್ ನ್ಯೂಸ್ ಎಂದು ಟ್ವೀಟ್‌ ಮಾಡಿದ್ದಾರೆ.

“ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಉಳಿದುಕೊಂಡಿರುವ ಸರ್ಕಾರದ ಬಂಗಲೆಯನ್ನು ಕಾಂಗ್ರೆಸ್ ಸಂಸದರಿಗೆ ಬಿಟ್ಟುಕೊಡಬೇಕೆಂದು ಪ್ರಬಲ ಕಾಂಗ್ರೆಸ್ ಮುಖಂಡರು ವಿನಂತಿಸಿದ್ದಾರೆ. ಆದರೆ ಪ್ರಿಯಾಂಕಗಾಂಧಿ ಅಲ್ಲಿಯೇ ಉಳಿಯುವ ಸಾಧ್ಯವಿದೆ” ಎಂದು ಕೇಂದ್ರ ಸಚಿವ ಹರ್ದೀಪ್ ಪುರಿ ಇಂದು ಟ್ವೀಟ್ ನಲ್ಲಿ ಆರೋಪಿಸಿದ್ದಾರೆ.

ಪ್ರಿಯಾಂಕಾ ಗಾಂಧಿಗೆ 1997ರಲ್ಲಿ ಮಂಜೂರು ಮಾಡಿರುವ #35, ಲೋಧಿ ಎಸ್ಟೇಟ್ ಬಂಗಲೆಯನ್ನು ಖಾಲಿ ಮಾಡುವಂತೆ ಜುಲೈ 1 ರಂದು ಸರ್ಕಾರವು  ನೋಟೀಸ್ ನೀಡಿತ್ತು. ಕಳೆದ ವರ್ಷ ಪ್ರಿಯಾಂಕಾಗೆ ನೀಡಿದ್ದ ವಿಶೇಷ ರಕ್ಷಣೆ ಭದ್ರತಾ ಪಡೆಯನ್ನು ಹಿಂತೆಗೆದುಕೊಂಡ ನಂತರ ಬಂಗಲೆಯನ್ನು ಆಗಸ್ಟ್ 1 ರೊಳಗೆ ಖಾಲಿ ಎಂದು ಕೇಂದ್ರ ನೋಟಿಸ್ ನೀಡಿದೆ.

ಪ್ರಿಯಾಂಕಾ ಗಾಂಧಿ ಕೋರಿಕೆಯ ಮೇರೆಗೆ ಆಕೆಗೆ ವಿಸ್ತರಣೆ ನೀಡಲಾಗಿದೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ.

“ಇದು ನಕಲಿ ಸುದ್ದಿ. ನಾನು ಸರ್ಕಾರಕ್ಕೆ ಅಂತಹ ಯಾವುದೇ ವಿನಂತಿಯನ್ನು ಮಾಡಿಲ್ಲ. ಜುಲೈ 1 ರಂದು ನನಗೆ ಹಸ್ತಾಂತರಿಸಿದ ಪತ್ರದ ಪ್ರಕಾರ, ಆಗಸ್ಟ್ 1 ರೊಳಗೆ ನಾನು #35, ಲೋಧಿ ಎಸ್ಟೇಟ್ ಬಂಗಲೆಗೆಯನ್ನು ಖಾಲಿ ಮಾಡುತ್ತೇನೆ” ಎಂದು ಅವರು ಟ್ವೀಟ್ ನಲ್ಲಿ ಹೇಳಿದ್ದಾರೆ.

ವಸತಿ ಸಚಿವರಾದ ಹರ್ದೀಪ್ ಪುರಿ ಅವರು, “ಸತ್ಯಗಳು ತಮ್ಮಷ್ಟಕ್ಕೆ ತಾನೇ ಮಾತನಾಡುತ್ತವೆ! ಪಕ್ಷದಲ್ಲಿ ಹೆಚ್ಚಿನ ಪ್ರಭಾವವನ್ನು ಹೊಂದಿರುವ ಪ್ರಬಲ ಕಾಂಗ್ರೆಸ್ ಮುಖಂಡರು 4 ಜುಲೈ 2020 ರಂದು ಮಧ್ಯಾಹ್ನ 12:05 ಕ್ಕೆ ನನಗೆ ಕರೆ ಮಾಡಿದ್ದರು. #35, ಲೋಧಿ ಎಸ್ಟೇಟ್ ಬಂಗಲೆಗೆಯನ್ನು ಇನ್ನೊಬ್ಬ ಕಾಂಗ್ರೆಸ್‌ ಸಂಸದರಿಗೆ ಮಂಜೂರು ಮಾಡಬೇಕೆಂದು ವಿನಂತಿಸಿದರು” ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ ಪ್ರಿಯಾಂಕಾ ಗಾಂಧಿ, “ಅವರಿಗೆ ಮತ್ತು ನಿಮ್ಮ ಪರಿಗಣನೆಗೆ ಧನ್ಯವಾದಗಳು. ಆದರೆ ವಾಸ್ತವದಲ್ಲಿ ಏನೂ ಬದಲಾವಣೆಯಿಲ್ಲ. ನಾನು ಸರ್ಕಾರಕ್ಕೆ ಅಂತಹ ಯಾವುದೇ ವಿನಂತಿಯನ್ನು ಮಾಡಿಲ್ಲ. ಮಾಡುವುದೂ ಇಲ್ಲ. ನಾನು ಹೇಳಿದಂತೆ, ಆಗಸ್ಟ್ 1 ರೊಳಗೆ ಮನೆ ಖಾಲಿ ಮಾಡುತ್ತೇನೆ” ಎಂದರು.

ಸಚಿವರ ಟ್ವೀಟ್‌ಗೆ ಕಾಂಗ್ರೆಸ್ ಮುಖಂಡ ರಂದೀಪ್ ಸುರ್ಜೆವಾಲಾ ಕೂಡ ಪ್ರತಿಕ್ರಿಯಿಸಿದ್ದರು. ಪ್ರಿಯಾಂಕಾ ಜನರಿಗಾಗಿ ಹೋರಾಡುವವರು. ಅವರಿಗೆ ನಿಮ್ಮ ಸಹಾನುಭೂತಿ ಬೇಕಾಗಿಲ್ಲ. ಹಾಗಾಗಿ ನಿಮ್ಮ ಬಡಿವಾರವನ್ನು ನಿಲ್ಲಿಸಿ. ಆ ಬಂಗಲೆಯನ್ನು ನೀವು ಕಾಂಗ್ರೆಸ್ ಸಂಸದರಿಗೆ ಕೊಡುತ್ತೀರೋ ಅಥವಾ ಬಿಜೆಪಿ ವಕ್ತಾರರಿಗೆ ಕೊಡುತ್ತೀರೋ? ಎಂದು ಪ್ರಶ್ನಿಸಿದ್ದಾರೆ.

ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಕೂಡ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿ ಪೋಸ್ಟ್ ಮಾಡಿದ್ದು, ಗಡುವಿಗೆ ಒಂದು ವಾರ ಮೊದಲು ಹೊರಡುವುದಾಗಿ ಹೇಳಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶವನ್ನು ಬಿಜೆಪಿ ’ಅಪರಾಧ ಪ್ರದೇಶ’ವನ್ನಾಗಿ ಮಾಡಿದೆ: ಪ್ರಿಯಾಂಕ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...