Homeಚಳವಳಿದೇಶದ ಗಮನ ಸೆಳೆಯಲು ಹೋದ ನಮ್ಮ ಗಮನ ಸೆಳೆದ ಒಂದು ಪ್ರತಿಭಟನೆ

ದೇಶದ ಗಮನ ಸೆಳೆಯಲು ಹೋದ ನಮ್ಮ ಗಮನ ಸೆಳೆದ ಒಂದು ಪ್ರತಿಭಟನೆ

- Advertisement -
- Advertisement -

ಸರೋವರ್ ಬೆಂಕಿಕೆರೆ |

ರೈತರ ಹೋರಾಟವು ಎಲ್ಲರ ಗಮನ ಸೆಳೆಯಿತು. ಅದಕ್ಕಾಗಿ ದೆಹಲಿಗೆ ಹೋಗಿದ್ದ ನಮಗೆ ಅದೇ ಜಂತರ್‌ಮಂತರ್‌ನಲ್ಲಿ ಇನ್ನೊಂದು ಹೋರಾಟವು ಗಮನ ಸೆಳೆಯಿತು. ಸರ್ಕಾರಗಳ ಕಣ್ಣು ಕಾಣಿಸದೇ ಇರಬಹುದು, ಅವರುಗಳ ಕಿವಿ ಕೇಳಿಸದೇ ಇರಬಹುದು. ಆದರೆ ಆಳದಲ್ಲಿ ಪ್ರಜ್ಞೆಯನ್ನು ಜಾಗೃತವಾಗಿರಿಸಿಕೊಂಡ ನಾಗರಿಕರು ಅವರ ಕಣ್ಣು, ಕಿವಿಗಳು ಊನವಾಗಿದ್ದರೂ, ಸಮಾಜವನ್ನು ಎಚ್ಚರಿಸುತ್ತಲೇ ಇರುತ್ತಾರೆ. ದೆಹಲಿಯ ರೈತ ಹೋರಾಟ ನಡೆದ ೨ ದಿನಗಳ ಬಳಿಕ ನಮಗೆ ಅಲ್ಲಿ ಕಂಡ ಸಂಗತಿಯಿದು. ಡಿ. 3ರಂದು ನೂರಾರು ಅಂಗವಿಕಲರು ಸಂಘಟಿತರಾಗಿ ಒಂದು ಪ್ರತಿಭಟನೆಯನ್ನು ನಡೆಸಿದರು. ಅವರಲ್ಲಿ ಅಂಧರೇ ಅತ್ಯಂತ ಹೆಚ್ಚು ಸಂಖ್ಯೆಯಲ್ಲಿದ್ದರು.

ಹೆಣ್ಣುಮಕ್ಕಳು ಬಳಸುವ ನ್ಯಾಪ್ಕಿನ್ ಮೇಲೆ ಹೆಚ್ಚಿನ ಜಿಎಸ್‌ಟಿ ತೆರಿಗೆ ವಿಧಿಸಿ ದೇಶದಾದ್ಯಂತ ಪ್ರತಿರೋಧದ ಬಂದ ನಂತರದಲ್ಲಿ ಸ್ವಲ್ಪ ಮಟ್ಟಿಗೆ ತೆರಿಗೆ ಇಳಿಸಿದ್ದು ನಮಗೆ ಗೊತ್ತಿತ್ತು. ಆದರೆ ಅದೇ ಸರ್ಕಾರವು ಸಾವಿರಾರು ಕೋಟಿ ರೂಗಳನ್ನು ಕೊಳ್ಳೆ ಹೊಡೆದು ದೇಶ ಬಿಟ್ಟಂತ ದರೋಡೆಕೋರರು, ತೆರಿಗೆ ಪಾವತಿಸದೆ ನಮ್ಮ ನೈಸರ್ಗಿಕ ಸಂಪನ್ಮೂಲಗಳನ್ನು ತಿಂದು ತೇಗುತ್ತಿರುವ ಬಂಡವಾಳಶಾಹಿಗಳಿಗೆ ಬೆನ್ನೆಲುಬಾಗಿ ನಿಂತಿರುವುದೂ ಗೊತ್ತಿತ್ತು. ಆದರೆ, ಈ ಪ್ರತಿಭಟನೆಯಿಂದ ನಮಗೆ ಇನ್ನೊಂದು ಸಂಗತಿಯೂ ಗೊತ್ತಾಯಿತು. ಮಾನ ಮರ್ಯಾದೆಯಿಲ್ಲದ, ಪಂಚೇಂದ್ರಿಯಗಳಿಲ್ಲದ ಕೇಂದ್ರ ಸರ್ಕಾರವು ಅಂಗವಿಕಲರು ಬಳಸುವ ಉಪಕರಣಗಳ ಮೇಲೆ ತೆರಿಗೆ ಹೆಚ್ಚಿಸಿ 25% ಜಿಎಸ್‌ಟಿಅನ್ನು ವಿಧಿಸಿದೆ! ಅದೇ ಕಾರಣಕ್ಕೆ ಅವರು ಅಲ್ಲಿ ಸೇರಿದ್ದರು.

ಯುಪಿಎ ಆಡಳಿತದ ಸಂದರ್ಭದಿಂದ ಶುರುವಾದ ಜಾಬ್‌ಲೆಸ್ ಗ್ರೋಥ್‌ನಿಂದ ಜಾಬ್ ಲಾಸ್‌ಗ್ರೋಥ್‌ನತ್ತ ಭಾರತವು ಮುಖ ಮಾಡಿದೆ. ಈ ನಕಾರಾತ್ಮಕ ಬೆಳವಣಿಗೆಗೆ ಬಿಜೆಪಿ ಆಡಳಿತವೇ ಕಾರಣವೆಂಬುದು ನಮಗೆ ಗೊತ್ತಿತ್ತು. ನಿರುದ್ಯೋಗದ ವಿರುದ್ಧದ ಆಂದೋಲನದಲ್ಲಿ ತೊಡಗಿದ್ದ ನಮಗೆ ಅದರ ಒಳಹೊರಗುಗಳ ಅರಿವಿದೆ. ಆದರೆ ಈ ಅವಧಿಯಲ್ಲಿ ಎರಡು ವಿಶೇಷ ಸಮುದಾಯಗಳ ಕುರಿತು ನಮಗೆ ದೆಹಲಿಯಲ್ಲಿ ಅರಿವಿಗೆ ಬಂದಿತು. ನಿರುದ್ಯೋಗದ ಸಮಸ್ಯೆಯು ಓದಿಕೊಂಡಿರುವ ಸುಶಿಕ್ಷಿತ ಸಮುದಾಯದ ಜೊತೆಗೆ, ಹಳ್ಳಿಯಲ್ಲೇ ಉಳಿಯಬಯಸುವ ಯುವಜನರದ್ದೂ ಆಗಿರುವುದು ಎಲ್ಲರಿಗೂ ತಿಳಿದಿದೆ; ಉದ್ಯೋಗ ಹುಡುಕಿಕೊಳ್ಳಲು ಸಾಧ್ಯವಾಗದೇ ಸೆಕ್ಸ್‌ವರ್ಕ್ ಮತ್ತು ಭಿಕ್ಷಾಟನೆಗಿಳಿದಿರುವ ಹಿಜ್ರಾ ಸಮುದಾಯದ ಕಥೆ ಏನಾಗಿರಬಹುದು? ಹಾಗೆಯೇ ವಿಕಲಚೇತನರದ್ದು?

ಎಲ್ಲರಿಗೂ ಖುಷಿಯಿಂದ ಆಚರಣೆ ಮಾಡಲು ಒಂದು ದಿನವಿರುವಂತೆ (ಡಿ.3ರಂದು) ಯಾವುದೋ ಒಂದು ಕಾರ್ಯಕ್ರಮದಲ್ಲಿ ಅಂಗವಿಕಲರ ದಿನವನ್ನು ಸಂತಸದಿಂದ ಆಚರಣೆ ಮಾಡಬೇಕಿದ್ದವರು ಅಂದು ಪ್ರತಿಭಟನೆಗೆ ಧುಮುಕಿದ್ದರು. ದೆಹಲಿಯಲ್ಲಿ ಸಂಘಟಿತರಾಗಿದ್ದ ಅವರು ನೋವುಗಳನ್ನು ಅದುಮಿಟ್ಟುಕೊಂಡು ರೋಷಾವೇಶದಿಂದ ಕುದಿಯುತ್ತಿದ್ದರು. ನಮಗೆ ನಿಮ್ಮ ಕರುಣೆ ಬೇಡ, ಸ್ವಾವಲಂಬಿಯಾಗಿ ಘನತೆಯಿಂದ ನಾವು ಜೀವಿಸಲು ನಮ್ಮ ಕೈಗೆ ಉದ್ಯೋಗ ಕೊಡಿ, ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸಿ ಎಂದು ತಮ್ಮ ಹಕ್ಕುಗಳನ್ನು ಕೇಂದ್ರ ಸರ್ಕಾರಕ್ಕೆ ಕೇಳುತ್ತಿದ್ದರು. ಅಲ್ಲದೆ ಅಂಗವಿಕಲರ ಉಪಕರಣಗಳ ಮೇಲೆ ಹೆಚ್ಚಿಸಿರುವ ಜಿಎಸ್‌ಟಿ ತೆರಿಗೆಯನ್ನು ಕಡಿಮೆ ಮಾಡಿ ಎನ್ನುವುದು ಅವರ ಹಕ್ಕೊತ್ತಾಯವಾಗಿತ್ತು. ದೇಶದ ದೊಡ್ಡ ಸುದ್ದಿಯಾಗಬೇಕಿದ್ದ ಈ ಹೋರಾಟವು ದುರದೃಷ್ಟವಶಾತ್ ಬಿಜೆಪಿಯ ಕೈಗೊಂಬೆಯಾಗಿರುವ ಮಾಧ್ಯಮಗಳು ಜನರ ಜೀವನಕ್ಕೆ ಸಂಬಂಧವೇ ಇಲ್ಲದ ಯಾರ ಹೊಟ್ಟೆಯನ್ನು ತುಂಬಿಸದ ರಾಮಮಂದಿರ, ಕೋಮು ದ್ವೇಷದಂತಹ ವಿಚಾರಗಳು ಮತ್ತು ಸೆಲಬ್ರಿಟಿಗಳ ಮದುವೆಯಿಂದ ಹಿಡಿದು ಬಸುರಿ ಬಾಣಂತನದವರೆಗಿನ ಸುದ್ದಿಗಳಲ್ಲಿ ಮುಳುಗಿವೆ. ಕರ್ನಾಟಕದಿಂದ ದೆಹಲಿಯವರೆಗೆ ಇದೇ ಕಥೆ. ಒಂದು ಸಮಧಾನದ ವಿಚಾರವೆಂದರೆ, ನೋವುಣ್ಣುತ್ತಿರುವ ಸಮುದಾಯಗಳು ಸುಮ್ಮನೇ ಕೂತಿಲ್ಲ; ಬೀದಿಗಿಳಿಯುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...