Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಈ ಆಕ್ರೋಶ ಭರಿತ ಜನರ ಗುಂಪು ಕೇರಳದ ಮುಸ್ಲಿಮರದ್ದೇ?

ಫ್ಯಾಕ್ಟ್‌ಚೆಕ್: ಈ ಆಕ್ರೋಶ ಭರಿತ ಜನರ ಗುಂಪು ಕೇರಳದ ಮುಸ್ಲಿಮರದ್ದೇ?

ಇವರು ನಿಮ್ಮ ಪ್ರದೇಶಗಳಿಗೂ ಬಂದರೆ ನೀವೇನು ಮಾಡುತ್ತೀರಿ ಎಂಬ ಪ್ರಶ್ನೆಯೊಂದಿಗೆ ಚಿತ್ರ ವೈರಲಾಗಿದೆ.

- Advertisement -
- Advertisement -

ಹಲವಾರು ಜನರು ಆಕ್ರೋಶಗೊಂಡು ಕೋಲುಗಳನ್ನು ಹಿಡಿದು ಓಡಿ ಬರುತ್ತಿರುವ ಚಿತ್ರವೊಂದು ವೈರಲಾಗಿದ್ದು, ಅದು ಕೇರಳದ ಮುಸ್ಲಿಮರ ಚಿತ್ರವೆಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ವೈರಲ್ ಚಿತ್ರದ ಜೊತೆಗೆ “ಇದು ಕೇರಳದ ಚಿತ್ರವಾಗಿದ್ದು, ಇಂತಹ ಜನರ ಗುಂಪು ನಿಮ್ಮ ಪ್ರದೇಶಗಳಿಗೆ ತಲುಪಿದರೆ ನೀವು ಸ್ವಾಗತಿಸುವಿರೊ ಅಥವಾ ಇಲ್ಲವೇ” ಎಂಬ ಸಂದೇಶ ಕೂಡಾ ಹರಡಲಾಗುತ್ತದೆ.

ಫ್ಯಾಕ್ಟ್‌‌ಚೆಕ್‌‌: 

ಈ ಚಿತ್ರವನ್ನು ರಿವರ್ಸ್ ಸರ್ಚ್ ನಡೆಸಿದಾಗ, ಬಾಂಗ್ಲಾದೇಶದ ಬರಹಗಾರ್ತಿ ತಸ್ಲೀಮಾ ನಸ್ರೀನ್ ಅವರ ಅಕ್ಟೋಬರ್ 2019 ರ ಟ್ವೀಟ್‌ನಲ್ಲಿ ಈ ಚಿತ್ರವನ್ನು ಕಾಣಬಹುದಾಗಿದೆ. ಅದರಲ್ಲಿ ತಸ್ಲೀಮ ಅವರು ಈ ಚಿತ್ರವನ್ನು ಬಾಂಗ್ಲಾದೇಶವೆಂದು ಉಲ್ಲೇಖಿಸಿದ್ದಾರೆ.

ಅಲ್ಲದೆ ಇದೇ ಚಿತ್ರವು ಗೂಗಲ್‌ನಲ್ಲಿ ಹಲವಾರು ಲಭ್ಯವಿದ್ದು, ಗೆಟ್ಟಿ ಇಮೇಜ್‌ನಲ್ಲಿ ಕೂಡಾ ಈ ಚಿತ್ರವಿದೆ. ಈ ಛಾಯಚಿತ್ರ ಎಎಫ್‌ಪಿ ಕ್ಲಿಕ್ಕಿಸಿದ್ದು, ಈ ದೃಶ್ಯವು 5 ಮೇ 2013 ರಂದು ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ನಡೆದ ಪ್ರತಿಭಟನೆಯಾಗಿದೆ. ಚಿತ್ರವೂ ಪ್ರತಿಭಟನಾಗಾರರು ಬೀದಿಯಲ್ಲಿ ಮೆರವಣಿಗೆ ನಡೆಸುತ್ತಿರುವುದಾಗಿದೆ.

ಈ ಪ್ರತಿಭಟನಾಕಾರರು ಬಾಂಗ್ಲಾದೇಶದಲ್ಲಿ ಧರ್ಮನಿಂದೆಯ ಹೊಸ ಕಾನೂನನ್ನು ಕೋರಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಶೀರ್ಷಿಕೆ ತಿಳಿಸುತ್ತದೆ.

ದೇಶದಲ್ಲಿ ಹೊಸ ಕಾನೂನನ್ನು ತರಬೇಕು ಎಂದು 5 ಮೇ 2013 ರಂದು ನಡೆದ ಹಲವಾರು ಚಿತ್ರಗಳು ಸಿಗುತ್ತದೆ. ಅಲ್ ಜಜೀರಾ ವರದಿಯ ಪ್ರಕಾರ, ಪ್ರತಿಭಟನೆಗಳು ಹಿಂಸಾತ್ಮಕ ಘರ್ಷಣೆಗಳಾಗಿ ಮಾರ್ಪಟ್ಟಿದ್ದು, ಅದರಲ್ಲಿ ಅನೇಕ ಜನರು ಸಾವಿಗೀಡಾದರು ಎಂದು ಹೇಳಿದೆ. ವರದಿಯಲ್ಲಿ ಪ್ರತಿಭಟನೆಯನ್ನು ಹೆಫಜತ್-ಎ-ಇಸ್ಲಾಂ ಎಂಬ ಗುಂಪಿನ ಜನರು ಸಂಘಟಿಸಿದ್ದರು ಎಂದು ಅದು ಹೇಳಿದೆ.

ಈ ಬಗ್ಗೆ ಇನ್ನಷ್ಟು ಹುಡುಕಿದಾಗ ಈ ಪ್ರತಿಭಟನೆಯು ಎಪ್ರಿಲ್ 2013 ರಿಂದ ನಡೆಯುತ್ತಿದೆ ಎಂದು ವರದಿಯಾಗಿದೆ.

“ಹೆಫಜತ್-ಇ-ಇಸ್ಲಾಂ 2013 ಬಾಂಗ್ಲಾದೇಶ ಢಾಕಾ ಪ್ರತಿಭಟನೆ” ಎಂಬ ಕೀ ವರ್ಡ್‌ಗಳನ್ನು ಬಳಸಿ ಗೂಗಲ್‌ನಲ್ಲಿ ಹುಡುಕಿದರೆ ಅಲಾಮಿ ವೆಬ್‌ಸೈಟ್‌ನಲ್ಲಿ ಇದರ ಚಿತ್ರಗಳನ್ನು ನಮಗೆ ಕಾಣಬಹುದಾಗಿದೆ. ಅಲ್ಲದೆ ವೈರಲಾಗುತ್ತಿರುಯವ ಚಿತ್ರದ ಬೇರೆ ಕೋನದ ಚಿತ್ರಗಳು ಕೂಡಾ ಅಲ್ಲಿ ಲಭ್ಯವಿದೆ.

ಢಾಕಾದ ಪೋಸ್ಟಾಗೋಲಾ ಬಳಿಯ ಬಾಂಗ್ಲಾದೇಶ-ಚೀನಾ ಸ್ನೇಹ ಸೇತುವೆಯಲ್ಲಿ 2013 ರ ಮೇ 5 ರಂದು ಇದನ್ನು ಕ್ಲಿಕ್ಕಿಸಲಾಗಿದೆ ಎಂದು ಫೋಟೋದ ವಿವರಣೆಯಲ್ಲಿ ಹೇಳಲಾಗಿದೆ.

ಈ ಎರಡೂ ಫೋಟೋಗಳನ್ನು ವೈರಲ್ ಫೋಟೋದೊಂದಿಗೆ ಹೋಲಿಸಿದಾಗ, ಅವು ಒಂದೇ ರ್‍ಯಾಲಿಯದ್ದಾಗಿದೆ ಎಂದು ನಾವು ಗಮನಿಸಬಹುದಾಗಿದ್ದು, ಆದರೆ ವಿಭಿನ್ನ ಕೋನಗಳಿಂದ ಚಿತ್ರೀಕರಿಸಲಾಗಿದೆ.

ಆದ್ದರಿಂದ, 2013 ರಲ್ಲಿ ಬಾಂಗ್ಲಾದೇಶದ ಢಾಕಾದಲ್ಲಿ ನಡೆದ ಹಳೆಯ ಘಟನೆಯ ಫೋಟೋವನ್ನು ಕೇರಳದಲ್ಲಿ ನಡೆದಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗುತ್ತಿದೆ ಎಂಬುವುದು ಸ್ಪಷ್ಟಮಾಗುತ್ತದೆ.


ಓದಿ: ರೇವಾದಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ್ದು ಏಷ್ಯಾದ ಅತಿದೊಡ್ಡ ಸೌರ ವಿದ್ಯುತ್ ಸ್ಥಾವರವೆ ??; ಫ್ಯಾಕ್ಟ್‌ಚೆಕ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...