Homeಕರ್ನಾಟಕಕಾರ್ಕಳ ಶಾಸಕ ಸುನಿಲ್ ಕುಮಾರ್ ಬಂಗಲೆಗೆ ಸಿಮೆಂಟ್ ಎಲ್ಲಿಯದು?: ಈ ವಿಡಿಯೋವನ್ನು ಸುಳ್ಳೆನ್ನಲು ಸಾಧ್ಯವೇ?

ಕಾರ್ಕಳ ಶಾಸಕ ಸುನಿಲ್ ಕುಮಾರ್ ಬಂಗಲೆಗೆ ಸಿಮೆಂಟ್ ಎಲ್ಲಿಯದು?: ಈ ವಿಡಿಯೋವನ್ನು ಸುಳ್ಳೆನ್ನಲು ಸಾಧ್ಯವೇ?

ಈಗಾಗಲೇ ಈ ಬಂಗಲೆಗೆ 3 ಸಾವಿರ ಸಿಮೆಂಟ್ ಚೀಲ ಬಳಸಲಾಗಿದೆ. ವಿಡಿಯೋದಲ್ಲಿ ನಿರ್ಮಾಣ ಹಂತದಲ್ಲಿರುವ ಬಂಗಲೆಯಲ್ಲಿರುವ ಅಲ್ಟ್ರಾಟೆಕ್ ಕಂಪನಿಯ ಸಿಮೆಂಟ್ ಚೀಲಗಳ ಮೇಲೆ ’ನಾಟ್ ಫಾರ್ ಸೇಲ್’ ಎಂದು ಅಚ್ಚಿಸಿರುವುದು ಕಾಣುತ್ತದೆ.

- Advertisement -
- Advertisement -

ಕಾರ್ಕಳ ತಾಲ್ಲೂಕು ಪಂಚಾಯ್ತಿ ರಸ್ತೆಯಲ್ಲಿ ಭರ್ಜರಿ ಬಂಗ್ಲೆಯೊಂದು ತಲೆಯೆತ್ತುತ್ತಿದೆ. ಮುಂಬೈನ ಶಿವಸೇನೆಯ ಮುಖ್ಯ ಕಚೇರಿಯಲ್ಲಿರುವ ಬೃಹತ್ ಕಂಬಗಳನ್ನು ಹೋಲುವ ಆರು ಎತ್ತರದ ಕಂಬಗಳ ಮನೆಯಿದು. ಒಂದೊಂದು ಕಂಬಕ್ಕೆ ಭರ್ತಿ ಏಳೂ ನೂರು ಮೂಟೆ ಸಿಮೆಂಟ್, ಟನ್‌ಗಟ್ಟಲೆ ಕಬ್ಬಿಣ ಬಳಸಲಾಗಿದೆ ಎನ್ನಲಾಗುತ್ತಿದೆ. ಈ ಬಂಗಲೆಯ ಮುಂದೆ ನಿಂತು ಮನೆ ಕಟ್ಟಿಸುತ್ತಿರುವ ಥ್ರಿಲ್ ಅನುಭವಿಸುತ್ತಿರುವುದು ಬೇರೆ ಯಾರೂ ಅಲ್ಲ, ಕಾರ್ಕಳದ ಬಿಜೆಪಿ ಶಾಸಕ ಸುನಿಲ್ ಕುಮಾರ್.

ಇಷ್ಟು ದಿನ ಬಿಜೆಪಿ ಕಚೇರಿಯಿದ್ದ ಈ ಜಾಗವನ್ನು ಸುನೀಲ್ ಬೇನಾಮಿಯಾಗಿ ತನ್ನ ಹೆಂಡತಿಯ ತಾಯಿ (ಅತ್ತೆ) ಹೆಸರಿನಲ್ಲಿ ಖರೀದಿಸಿದ್ದಾರೆ ಎಂಬ ಆರೋಪ ಬಿಜೆಪಿ ಕಾರ್ಯಕರ್ತರದು. ಒಂದು ಅಂದಾಜಿನಂತೆ ಈ ಬಂಗ್ಲೆಯ ಕಟ್ಟಡಕ್ಕೇ ಐದು ಕೋಟಿ ರೂ ಬೇಕು. ಆ ನಂತರ ಅಂದ-ಚಂದ ಫಿನಿಶಿಂಗ್ ಅಂತೆಲ್ಲ ಇನ್ನೆರಡು ಕೋಟಿ ಅನಿವಾರ್ಯವಂತೆ. ಅವರು ಎಷ್ಟಾದರೂ ಖರ್ಚು ಮಾಡಿ ಬಂಗಲೆ ಕಟ್ಟಲಿ. ಆದರೆ ಆ ಬಂಗಲೆ ಕಟ್ಟಲು ಬಳಸುತ್ತಿರುವ ಸಿಮೆಂಟ್‌ ಮಾತ್ರ ಸರ್ಕಾರದ್ದು ಎಂಬ ಆರೋಪವನ್ನು ಬಿಜೆಪಿ ಕಾರ್ಯಕರ್ತರೆ ಹೊರಿಸಿದ್ದು, ವಿಡಿಯೋ ದಾಖಲೆ ಸಹ ಬಿಡುಗಡೆ ಮಾಡಿದ್ದಾರೆ.

ಈಗಾಗಲೇ ಈ ಬಂಗಲೆಗೆ 3 ಸಾವಿರ ಸಿಮೆಂಟ್ ಚೀಲ ಬಳಸಲಾಗಿದೆ. ವಿಡಿಯೋದಲ್ಲಿ ನಿರ್ಮಾಣ ಹಂತದಲ್ಲಿರುವ ಬಂಗಲೆಯಲ್ಲಿನ ಅಲ್ಟ್ರಾಟೆಕ್ ಕಂಪನಿಯ ಸಿಮೆಂಟ್ ಚೀಲಗಳ ಮೇಲೆ ’ನಾಟ್ ಫಾರ್ ಸೇಲ್’ ಎಂದು ಅಚ್ಚಿಸಿರುವುದು ಕಾಣುತ್ತದೆ. ಅಂದರೆ ಈ ಸಿಮೆಂಟ್ ಪ್ರಾಮಾಣಿಕವಾಗಿ ಖರೀದಿಸಿದ್ದಲ್ಲ. ಸರ್ಕಾರಿ ಗೋದಾಮುಗಳಿಂದ ತಂದದ್ದು ಅಥವಾ ಸರ್ಕಾರಿ ಗುತ್ತಿಗೆದಾರರ ಹೆದರಿಸಿ ತರಿಸಿಕೊಂಡಿದ್ದು ಎಂಬುದು ಕಾರ್ಯಕರ್ತರ ಆರೋಪ. ನಾನುಗೌರಿ.ಕಾಂಗೆ ಸಿಕ್ಕ ವಿಡಿಯೋ ದಾಖಲೆಯಂತೆ ಇವತ್ತಿಗೂ ಈ ನಿರ್ಮಾಣ ಹಂತದ ಮನೆಯಲ್ಲಿ ಸರ್ಕಾರದ ಸೀಲ್ ಇರುವ ಸಿಮೆಂಟ್ ಮೂಟೆಗಳಿರುವುದು ಕಂಡುಬಂದಿದೆ.

ವಿಡಿಯೋ ನೋಡಿ

ಕಾರ್ಕಳ ಶಾಸಕ ಸುನಿಲ್ ಕುಮಾರ್ ಬಂಗಲೆಗೆ ಸಿಮೆಂಟ್ ಎಲ್ಲಿಯದು?: ಈ ವಿಡಿಯೋವನ್ನು ಸುಳ್ಳೆನ್ನಲು ಸಾಧ್ಯವೇ?ಸರ್ಕಾರಿ ಕಾಮಗಾರಿಗಳಿಗೆ…

Posted by Naanu Gauri on Tuesday, July 14, 2020

ಸರ್ಕಾರಿ ಕಾಮಗಾರಿಗಳಿಗೆ ಸಿಮೆಂಟ್-ಕಬ್ಬಿಣ ಮತ್ತಿತರ ಸಾಮಗ್ರಿ ಒದಗಿಸುವ ಕೆ.ಆರ್.ಐ.ಡಿ.ಎಲ್ ಎಂಬ ಸಂಸ್ಥೆಯಿದೆ. ಸರ್ಕಾರಿ ಕಾಮಗಾರಿ ನಡೆಸುವ ಗುತ್ತಿಗೆದಾರರಿಗೆ ಈ ಸರ್ಕಾರಿ ಸಂಸ್ಥೆ ಮಾರುಕಟ್ಟೆ ದರಕ್ಕಿಂತಲೂ ಕಡಿಮೆ ಬೆಲೆಗೆ ಸಾಮಗ್ರಿ ಪೂರೈಸುತ್ತದೆ. ಇದನ್ನು ಗುತ್ತಿಗೆದಾರ ಯಾರಿಗೂ ದಾನ ಅಥವಾ ಮಾರಾಟ ಮಾಡುವಂತಿಲ್ಲ. ಹಾಗಿದ್ದರೆ ಶಾಸಕ ಸುನಿಲ್ ಬಂಗಲೆಗೆ ಈ ಸರ್ಕಾರಿ ಸಿಮೆಂಟ್ ಹೇಗೆ ಬಂತು? ಮೂಲಗಳ ಪ್ರಕಾರ ಕೋಟ್ಯಾಂತರ ರೂ.ಗಳ ಕೆ.ಆರ್.ಐ.ಡಿ.ಎಲ್ ಕಾಮಗಾರಿ ಕಾರ್ಕಳದಲ್ಲಿ ನಡೆಯುತ್ತಿದ್ದು ಆ ಕಾಮಗಾರಿ ಕಂಟ್ರಾಕ್ಟರ್‌ಗಳಿಂದ ಲೋಡ್‌ಗಟ್ಟಲೆ ಸಿಮೆಂಟ್ ಶಾಸಕ ಸಾಹೇಬರಿಗೆ ಸರಬರಾಜಾಗಿದೆ ಎನ್ನಲಾಗಿದೆ.

ಕಾರ್ಕಳದಲ್ಲಿ ನಡೆಯುತ್ತಿರುವ 108 ಕೋಟಿ ರೂ.ಗಳ ಏತ ನೀರಾವರಿ ಯೋಜನೆಯ ಗುತ್ತೇಗೆದಾರ ಕಂಪನಿಯು ಶಾಸಕರಿಗೆ ಕಾಣಿಕೆಯಾಗಿ ಸಿಮೆಂಟ್ ನೀಡಿರಬಹುದು ಎಂದು ಕೆಲವರು ಆರೋಪಿಸುತ್ತಾರೆ. ಇನ್ನೊಂದೆಡೆ ಸದರಿ ಕಾಮಗಾರಿ ಉಸ್ತುವಾರಿ ನೋಡಿಕೊಳ್ಳುತ್ತಿರುವುದು ಜಿಲ್ಲಾ ಯುವ ಬಿಜೆಪಿ ಅಧ್ಯಕ್ಷನೂ ಶಾಸಕರ ಪರಮಾಪ್ತ ಸರ್ಕಾರಿ ಗುತ್ತಿಗೆದಾರನೂ ಆಗಿರುವವರು ಕಾರ್ಕಳ ವಿಖ್ಯಾತ್ ಶೆಟ್ಟಿ. ಕಾರ್ಕಳದ ಬಹುತೇಕ ಸರ್ಕಾರಿ ಗುತ್ತಿಗೆಗಳೆಲ್ಲಾ ಇವರಿಗೆ ದಕ್ಕುವುದರಲ್ಲಿ ಶಾಸಕರ ಪಾತ್ರವಿದೆಯೇ? ಅದಕ್ಕಾಗಿ ಶಾಸಕರಿಗೆ ಈ ರೀತಿಯ ಕಾಣಿಕೆಗಳು ಸಿಗುತ್ತವೆಯೇ ಎಂದು ಕಾರ್ಯಕರ್ತರು ಪ್ರಶ್ನಿಸುತ್ತಿದ್ದಾರೆ. ಉತ್ತರಿಸುವ ಕೆಲಸ ಶಾಸಕರದಾಗಿದೆ.


ಇದನ್ನೂ ಓದಿ: ಎಲ್ಲಾ ಅವ್ರೆ ಸ್ವಾಮಿ, ಗಿಜಿಗಿಜಿ ಅಂತಾರೆ – ಕೊರೊನಾ ರೋಗಿಗಳ ಕುರಿತು ಸಚಿವ ಸೋಮಣ್ಣ ವಿವಾದಾತ್ಮಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...