Homeಮುಖಪುಟವಿಕಾಸ್ ದುಬೆ ಪ್ರಕರಣ: ತೆಲಂಗಾಣದಂತೆ ಏನಾದರೂ ಮಾಡುತ್ತೇವೆ- ಸುಪ್ರೀಂ

ವಿಕಾಸ್ ದುಬೆ ಪ್ರಕರಣ: ತೆಲಂಗಾಣದಂತೆ ಏನಾದರೂ ಮಾಡುತ್ತೇವೆ- ಸುಪ್ರೀಂ

ಎರಡೂ ಘಟನೆಗಳ ಬಗ್ಗೆ ನ್ಯಾಯಾಲಯವು ಪಿಐಎಲ್‌ಗಳಿಗೆ ಪ್ರತಿಕ್ರಿಯಿಸಿ, ಯುಪಿ ಸರ್ಕಾರಕ್ಕೆ "ಯಾವ ರೀತಿಯ ಸಮಿತಿ" ಬೇಕು ಎಂದು ತಿಳಿಸುವಂತೆ ಗುರುವಾರದ ತನಕ ಕಾಲಾವಕಾಶ ನೀಡಿದೆ. 

- Advertisement -
- Advertisement -

8 ಪೊಲೀಸರ ಹತ್ಯೆ ಮತ್ತು ಉತ್ತರ ಪ್ರದೇಶದ ಕ್ರಿಮಿನಲ್ ವಿಕಾಸ್ ದುಬೆ ಮತ್ತು ಅವನ ಸಹಚರರನ್ನು ಕಾನ್ಪುರ ಪೊಲೀಸರು ಹತ್ಯೆ ಮಾಡಿರುವುದರ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯನ್ನು ನೇಮಿಸುವುದಾಗಿ ತಿಳಿಸಿದೆ.

ಎರಡೂ ಘಟನೆಗಳ ಬಗ್ಗೆ ಸುಪ್ರೀಂ ಕೋರ್ಟ್‌ ಮೇಲ್ವಿಚಾರಣೆಯಲ್ಲಿ ಸಿಬಿಐ ಅಥವಾ ಎನ್‌ಐಎ ತನಿಖೆ ನಡೆಸಬೇಕೆಂಬ ಪಿಐಎಲ್‌ಗಳಿಗೆ ಪ್ರತಿಕ್ರಿಯಿಸಿದ ನ್ಯಾಯಾಲಯ “ಯುಪಿ ಸರ್ಕಾರಕ್ಕೆ ಯಾವ ರೀತಿಯ ಸಮಿತಿ ಬೇಕು” ಎಂದು ತಿಳಿಸುವಂತೆ ಗುರುವಾರದ ತನಕ ಕಾಲಾವಕಾಶ ನೀಡಿದೆ. ಈ ವಿಚಾರಣೆಯನ್ನು ಜುಲೈ 20ಕ್ಕೆ ಮುಂದೂಡಿದೆ.

ತೆಲಂಗಾಣದಲ್ಲಿ ನಡೆದ ದಿಶಾ ಅತ್ಯಾಚಾರ ಮತ್ತು ಹತ್ಯೆಯ ಪ್ರಕರಣದ ಆರೋಪಿಗಳಾದ ನಾಲ್ವರನ್ನು ಎನ್‌ಕೌಂಟರ್ ಹತ್ಯೆ ಮಾಡಿರುವುದನ್ನು ಉಲ್ಲೇಖಿಸಿದ ಕೋರ್ಟ್ “ತೆಲಂಗಾಣ ಪ್ರಕರಣದಲ್ಲಿ ನಾವು ಏನು ಮಾಡಿದ್ದೇವೆಯೋ, ಈಗಲೂ ಹಾಗೆಯೇ ಮಾಡುತ್ತೇವೆ. ನಿಮಗೆ ಯಾವ ರೀತಿಯ ಸಮಿತಿ ಬೇಕು ಎಂದು ತಿಳಿಸಿ” ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಹೇಳಿದರು.

ತೆಲಂಗಾಣ ಪ್ರಕರಣದಲ್ಲಿ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಸಮಿತಿಯನ್ನು ನೇಮಿಸಿದ್ದು, ಕೊರೊನಾ ವೈರಸ್‌ ಸಾಂಕ್ರಾಮಿಕ ಕಾರಣದಿಂದ ಅದು ಇನ್ನು ವರದಿಯನ್ನು ಸಲ್ಲಿಸಿಲ್ಲ.

ಈ ನಡುವೆ ಯೋಗಿ ಆದಿತ್ಯನಾಥ್ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ರಾಜ್ಯದ ಪ್ರತಿಕ್ರಿಯೆಯನ್ನು ತಿಳಿಸಲು “ದಯವಿಟ್ಟು ನಮಗೆ ಸಮಯ ನೀಡಿ. ನಾವು ಈ ವಿಷಯವನ್ನು ಅರಿತುಕೊಂಡಿದ್ದೇವೆ. ಈ ಪ್ರಕರಣದ ಕುರಿತು ಹಲವಾರು ಸಂಗತಿಗಳು ಸಾರ್ವಜನಿಕ ವಲಯದಲ್ಲಿವೆ” ಎಂದರು.

ಎಂಟು ಪೊಲೀಸರು ಸಾವು ಮತ್ತು ಇತರ ಏಳು ಮಂದಿ ಪೊಲೀಸರು ಗಾಯಗೊಂಡ ಕಾನ್ಪುರ ಪ್ರಕರಣದ ಕ್ರೂರ ದಾಳಿಯ ಮುಖ್ಯ ಆರೋಪಿ ವಿಕಾಸ್ ದುಬೆಯನ್ನು ಮಧ್ಯಪ್ರದೇಶದಿಂದ ಕರೆತರುವಾಗ ಪೊಲೀಸರು ಹತ್ಯೆಗೈದಿದ್ದರು.

ವಿಕಾಸ್ ದುಬೆ ಪ್ರಕರಣದಲ್ಲಿ ಪೊಲೀಸರು ನೀಡಿರುವ ಹೇಳಿಕೆಯು ತೆಲಂಗಾಣ ಎನ್ಕೌಂಟರ್ ಅನ್ನು ಪ್ರತಿಧ್ವನಿಸುತ್ತಿದೆ. ಹಾಗಾಗಿ ದುಬೆ ಸಾವಿನ ಕುರಿತು ಹಲವಾರು ಪ್ರಶ್ನೆಗಳು ಹೊರಬಿದ್ದಿವೆ.

ಘಟನೆಯ ತನಿಖೆಗಾಗಿ ಯುಪಿ ಸರ್ಕಾರ ಈಗಾಗಲೇ ಸ್ವತಂತ್ರ ಏಕ ಸದಸ್ಯ ಆಯೋಗವನ್ನು ನೇಮಿಸಿದೆ; ಇದು ನಿವೃತ್ತ ನ್ಯಾಯಾಧೀಶರನ್ನು ಒಳಗೊಂಡಿರುತ್ತದೆ ಮತ್ತು ಎರಡು ತಿಂಗಳೊಳಗೆ ವರದಿಯನ್ನು ಸಲ್ಲಿಸಬೇಕಾಗಿದೆ.

ಮುಖ್ಯನ್ಯಾಯಮೂರ್ತಿ ಎಸ್‌.ಎ ಬಾಬ್ಡೆಯವರೊಂದಿಗೆ ನ್ಯಾಯಮೂರ್ತಿಗಳಾದ ಆರ್. ಸುಭಾಷ್ ರೆಡ್ಡಿ ಮತ್ತು ಎ.ಎಸ್.ಬೋಪಣ್ಣ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್‌ನ ತ್ರಿಮೂರ್ತಿ ಪೀಠವು ಈ ಅರ್ಜಿಯನ್ನು ಆಲಿಸಲಿದೆ.


ಇದನ್ನೂ ಓದಿ: ವಿಕಾಸ್ ದುಬೆ ಹತ್ಯೆ ತನಿಖೆಗೆ ವಿಶೇಷ ತಂಡ: ವಿವಾದಾತ್ಮಕ ಎನ್ ಕೌಂಟರ್ ಆರೋಪಿ ರವೀಂದರ್ ಗೌಡ್ ಸದಸ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...