Homeಮುಖಪುಟವಿಕಾಸ್ ದುಬೆ ಪ್ರಕರಣ: ತೆಲಂಗಾಣದಂತೆ ಏನಾದರೂ ಮಾಡುತ್ತೇವೆ- ಸುಪ್ರೀಂ

ವಿಕಾಸ್ ದುಬೆ ಪ್ರಕರಣ: ತೆಲಂಗಾಣದಂತೆ ಏನಾದರೂ ಮಾಡುತ್ತೇವೆ- ಸುಪ್ರೀಂ

ಎರಡೂ ಘಟನೆಗಳ ಬಗ್ಗೆ ನ್ಯಾಯಾಲಯವು ಪಿಐಎಲ್‌ಗಳಿಗೆ ಪ್ರತಿಕ್ರಿಯಿಸಿ, ಯುಪಿ ಸರ್ಕಾರಕ್ಕೆ "ಯಾವ ರೀತಿಯ ಸಮಿತಿ" ಬೇಕು ಎಂದು ತಿಳಿಸುವಂತೆ ಗುರುವಾರದ ತನಕ ಕಾಲಾವಕಾಶ ನೀಡಿದೆ. 

- Advertisement -
- Advertisement -

8 ಪೊಲೀಸರ ಹತ್ಯೆ ಮತ್ತು ಉತ್ತರ ಪ್ರದೇಶದ ಕ್ರಿಮಿನಲ್ ವಿಕಾಸ್ ದುಬೆ ಮತ್ತು ಅವನ ಸಹಚರರನ್ನು ಕಾನ್ಪುರ ಪೊಲೀಸರು ಹತ್ಯೆ ಮಾಡಿರುವುದರ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯನ್ನು ನೇಮಿಸುವುದಾಗಿ ತಿಳಿಸಿದೆ.

ಎರಡೂ ಘಟನೆಗಳ ಬಗ್ಗೆ ಸುಪ್ರೀಂ ಕೋರ್ಟ್‌ ಮೇಲ್ವಿಚಾರಣೆಯಲ್ಲಿ ಸಿಬಿಐ ಅಥವಾ ಎನ್‌ಐಎ ತನಿಖೆ ನಡೆಸಬೇಕೆಂಬ ಪಿಐಎಲ್‌ಗಳಿಗೆ ಪ್ರತಿಕ್ರಿಯಿಸಿದ ನ್ಯಾಯಾಲಯ “ಯುಪಿ ಸರ್ಕಾರಕ್ಕೆ ಯಾವ ರೀತಿಯ ಸಮಿತಿ ಬೇಕು” ಎಂದು ತಿಳಿಸುವಂತೆ ಗುರುವಾರದ ತನಕ ಕಾಲಾವಕಾಶ ನೀಡಿದೆ. ಈ ವಿಚಾರಣೆಯನ್ನು ಜುಲೈ 20ಕ್ಕೆ ಮುಂದೂಡಿದೆ.

ತೆಲಂಗಾಣದಲ್ಲಿ ನಡೆದ ದಿಶಾ ಅತ್ಯಾಚಾರ ಮತ್ತು ಹತ್ಯೆಯ ಪ್ರಕರಣದ ಆರೋಪಿಗಳಾದ ನಾಲ್ವರನ್ನು ಎನ್‌ಕೌಂಟರ್ ಹತ್ಯೆ ಮಾಡಿರುವುದನ್ನು ಉಲ್ಲೇಖಿಸಿದ ಕೋರ್ಟ್ “ತೆಲಂಗಾಣ ಪ್ರಕರಣದಲ್ಲಿ ನಾವು ಏನು ಮಾಡಿದ್ದೇವೆಯೋ, ಈಗಲೂ ಹಾಗೆಯೇ ಮಾಡುತ್ತೇವೆ. ನಿಮಗೆ ಯಾವ ರೀತಿಯ ಸಮಿತಿ ಬೇಕು ಎಂದು ತಿಳಿಸಿ” ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಹೇಳಿದರು.

ತೆಲಂಗಾಣ ಪ್ರಕರಣದಲ್ಲಿ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಸಮಿತಿಯನ್ನು ನೇಮಿಸಿದ್ದು, ಕೊರೊನಾ ವೈರಸ್‌ ಸಾಂಕ್ರಾಮಿಕ ಕಾರಣದಿಂದ ಅದು ಇನ್ನು ವರದಿಯನ್ನು ಸಲ್ಲಿಸಿಲ್ಲ.

ಈ ನಡುವೆ ಯೋಗಿ ಆದಿತ್ಯನಾಥ್ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ರಾಜ್ಯದ ಪ್ರತಿಕ್ರಿಯೆಯನ್ನು ತಿಳಿಸಲು “ದಯವಿಟ್ಟು ನಮಗೆ ಸಮಯ ನೀಡಿ. ನಾವು ಈ ವಿಷಯವನ್ನು ಅರಿತುಕೊಂಡಿದ್ದೇವೆ. ಈ ಪ್ರಕರಣದ ಕುರಿತು ಹಲವಾರು ಸಂಗತಿಗಳು ಸಾರ್ವಜನಿಕ ವಲಯದಲ್ಲಿವೆ” ಎಂದರು.

ಎಂಟು ಪೊಲೀಸರು ಸಾವು ಮತ್ತು ಇತರ ಏಳು ಮಂದಿ ಪೊಲೀಸರು ಗಾಯಗೊಂಡ ಕಾನ್ಪುರ ಪ್ರಕರಣದ ಕ್ರೂರ ದಾಳಿಯ ಮುಖ್ಯ ಆರೋಪಿ ವಿಕಾಸ್ ದುಬೆಯನ್ನು ಮಧ್ಯಪ್ರದೇಶದಿಂದ ಕರೆತರುವಾಗ ಪೊಲೀಸರು ಹತ್ಯೆಗೈದಿದ್ದರು.

ವಿಕಾಸ್ ದುಬೆ ಪ್ರಕರಣದಲ್ಲಿ ಪೊಲೀಸರು ನೀಡಿರುವ ಹೇಳಿಕೆಯು ತೆಲಂಗಾಣ ಎನ್ಕೌಂಟರ್ ಅನ್ನು ಪ್ರತಿಧ್ವನಿಸುತ್ತಿದೆ. ಹಾಗಾಗಿ ದುಬೆ ಸಾವಿನ ಕುರಿತು ಹಲವಾರು ಪ್ರಶ್ನೆಗಳು ಹೊರಬಿದ್ದಿವೆ.

ಘಟನೆಯ ತನಿಖೆಗಾಗಿ ಯುಪಿ ಸರ್ಕಾರ ಈಗಾಗಲೇ ಸ್ವತಂತ್ರ ಏಕ ಸದಸ್ಯ ಆಯೋಗವನ್ನು ನೇಮಿಸಿದೆ; ಇದು ನಿವೃತ್ತ ನ್ಯಾಯಾಧೀಶರನ್ನು ಒಳಗೊಂಡಿರುತ್ತದೆ ಮತ್ತು ಎರಡು ತಿಂಗಳೊಳಗೆ ವರದಿಯನ್ನು ಸಲ್ಲಿಸಬೇಕಾಗಿದೆ.

ಮುಖ್ಯನ್ಯಾಯಮೂರ್ತಿ ಎಸ್‌.ಎ ಬಾಬ್ಡೆಯವರೊಂದಿಗೆ ನ್ಯಾಯಮೂರ್ತಿಗಳಾದ ಆರ್. ಸುಭಾಷ್ ರೆಡ್ಡಿ ಮತ್ತು ಎ.ಎಸ್.ಬೋಪಣ್ಣ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್‌ನ ತ್ರಿಮೂರ್ತಿ ಪೀಠವು ಈ ಅರ್ಜಿಯನ್ನು ಆಲಿಸಲಿದೆ.


ಇದನ್ನೂ ಓದಿ: ವಿಕಾಸ್ ದುಬೆ ಹತ್ಯೆ ತನಿಖೆಗೆ ವಿಶೇಷ ತಂಡ: ವಿವಾದಾತ್ಮಕ ಎನ್ ಕೌಂಟರ್ ಆರೋಪಿ ರವೀಂದರ್ ಗೌಡ್ ಸದಸ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...