Homeಫ್ಯಾಕ್ಟ್‌ಚೆಕ್ಫ್ಯಾಕ್ಟ್ ಚೆಕ್: ಕೇರಳದಲ್ಲಿ ಹಿಂದೂ ದೇವಾಲಯ ನಿಯಂತ್ರಿಸುವ ಅಧಿಕಾರ ಅನ್ಯಧರ್ಮಿಯರಿಗೆ ಎಂಬುದು ಸುಳ್ಳು..

ಫ್ಯಾಕ್ಟ್ ಚೆಕ್: ಕೇರಳದಲ್ಲಿ ಹಿಂದೂ ದೇವಾಲಯ ನಿಯಂತ್ರಿಸುವ ಅಧಿಕಾರ ಅನ್ಯಧರ್ಮಿಯರಿಗೆ ಎಂಬುದು ಸುಳ್ಳು..

ಕೇರಳ ಸರ್ಕಾರವು ಹೊಸ ಕಾನೂನನ್ನು ತಂದಿದ್ದು, ಅದರಂತೆ ಹಿಂದೂ ದೇವಾಲಯಗಳನ್ನು ಮುಸ್ಲಿಮರು ಹಾಗೂ ಕ್ರಿಸ್ಚಿಯನ್ನರು ನಿಯಂತ್ರಿಸಬಹುದು, ಮಂದಿರದ ಮುಖ್ಯಸ್ಥರಾಗಿ ಮುಸ್ಲಿಮರು ಅಥವಾ ಕ್ರಿಸ್ಚಿಯನ್ನರು ಕೂಡಾ ಇರಬಹುದು ಎಂಬ ಬರಹವಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

- Advertisement -
- Advertisement -

ಹಿಂದೂ ದೇವಾಲಯಗಳನ್ನು ಮುಸ್ಲಿಮರು ಹಾಗೂ ಕ್ರೈಸ್ತರು ಕೂಡ ನಿಯಂತ್ರಿಸಬಹುದಾದ ಹೊಸ ಕಾನೂನನ್ನು ಕೇರಳ ಸರ್ಕಾರ ತಂದಿದೆ ಎಂಬ ಹೇಳಿಕೆಯೊಂದಿಗಿರುವ ಚಿತ್ರವೊಂದು ವೈರಲ್‌ ಆಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕೇರಳ ದೇವಸ್ವಂ ನೇಮಕಾತಿ ಮಂಡಳಿಯ ಅಧ್ಯಕ್ಷ ರಾಜಗೋಪಾಲನ್ ನಾಯರ್ ಇದನ್ನು ಅಲ್ಲಗೆಳೆದು, ದೇವಾಲಯದ ನಿರ್ವಹಣೆ ಸೇರಿದಂತೆ ಎಲ್ಲಾ ನೌಕರರು ಹಿಂದೂ ಧರ್ಮಕ್ಕೆ ಸೇರಿದವರಾಗಿರಬೇಕು ಎಂಬ ಕಾನೂನು ಇದೆ ಎಂದು ಸ್ಪಷ್ಟ ಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದೇನು?

“ಕೇರಳ ಸರ್ಕಾರವು ಹೊಸ ಕಾನೂನನ್ನು ತಂದಿದ್ದು, ಅದರಂತೆ ಹಿಂದೂ ದೇವಾಲಯಗಳನ್ನು ಮುಸ್ಲಿಮರು ಹಾಗೂ ಕ್ರಿಸ್ಚಿಯನ್ನರು ನಿಯಂತ್ರಿಸಬಹುದು, ಮಂದಿರದ ಮುಖ್ಯಸ್ಥರಾಗಿ ಮುಸ್ಲಿಮರು ಅಥವಾ ಕ್ರಿಸ್ಚಿಯನ್ನರು ಕೂಡಾ ಇರಬಹುದು” ಎಂಬ ಬರಹವಿರುವ ಚಿತ್ರಗಳು ಹರಿದಾಡುತ್ತಿದೆ.

ಫ್ಯಾಕ್ಟ್ ಚೆಕ್:

ಮೊದಲನೆಯದಾಗಿ ವೈರಲ್ ಸಂದೇಶದಲ್ಲಿ ಹರಿದಾಡುತ್ತಿರುವಂತೆ ಕೇರಳ ಸರ್ಕಾರ ಇತ್ತೀಚೆಗೆ ದೇವಾಲಯ ನಿರ್ವಹಣೆಗೆ ಸಂಬಂಧಿಸಿದ ಯಾವುದೇ ಆದೇಶಗಳನ್ನು ಮಾಡಿಲ್ಲ.

ವೈರಲ್‌ ಪೋಸ್ಟ್‌ ಬಗ್ಗೆ ಪ್ರತಿಕ್ರಿಸಿರುವ ದೇವಸ್ವಂ ನೇಮಕಾತಿ ಮಂಡಳಿಯ ಅಧ್ಯಕ್ಷ ರಾಜಗೋಪಾಲನ್ ನಾಯರ್ “ಕೇರಳದ ದೇವಾಲಯಗಳನ್ನು ನಿಯಂತ್ರಿಸುವ ಮೂರು ಕಾನೂನುಗಳಿವೆ. ಈ ಎಲ್ಲಾ ಕೆಲಸ/ಕಾರ್ಯಗಳಲ್ಲಿ ನೌಕರರು ಮತ್ತು ನಿರ್ವಹಣಾಕಾರರು ಹಿಂದೂ ಧರ್ಮದವರೇ ಇರಬೇಕು ಎಂಬ ನಿರ್ದಿಷ್ಟ ನಿಬಂಧನೆ ಇದೆ.” ತಿಳಿಸಿದ್ದಾರೆ.

ಕೇರಳ ರಾಜ್ಯದ ದೇವಾಲಯಗಳನ್ನು ಯಾರು ನಿಯಂತ್ರಿಸುತ್ತಾರೆ ಎಂಬುದಕ್ಕೆ ನಿರ್ದಿಷ್ಟ ನಿಬಂಧನೆಗಳಿದ್ದು, ಅದು ಹೀಗಿದೆ:

‘ಕೇರಳದ ದೇವಸ್ವಂ ಮಂಡಳಿಗಳು ಮತ್ತು ದೇವಾಲಯಗಳ ಆಡಳಿತ’ ಎಂಬ ಶೀರ್ಷಿಕೆಯ ಶೋಧಗಂಗದಲ್ಲಿ ಪ್ರಕಟವಾದ ಅಧ್ಯಾಯದ ಪ್ರಕಾರ, ಎಲ್ಲಾ ದೇವಾಲಯಗಳನ್ನು ಸಾಮಾಜಿಕ-ಧಾರ್ಮಿಕ ಟ್ರಸ್ಟ್‌ಗಳಾದ ಸರ್ಕಾರಿ ನಿಯಂತ್ರಿತ ದೇವಸ್ವಂಗಳು ಅಥವಾ ಖಾಸಗಿ ಸಂಸ್ಥೆಗಳು / ಕುಟುಂಬಗಳು ನಿರ್ವಹಿಸುತ್ತವೆ. ಅವುಗಳ ಸದಸ್ಯರು ಹಿಂದೂಗಳೇ ಆಗಿರುತ್ತಾರೆ. ಕೇರಳದಲ್ಲಿ ಐದು ವಿಭಿನ್ನ ದೇವಸ್ವಂ ಮಂಡಳಿಗಳಿವೆ. ಎಲ್ಲಾ ಐದು ದೇವಸ್ವಂ ಮಂಡಳಿಗಳು ಹಿಂದೂ ಸದಸ್ಯರನ್ನು ಹೊಂದಿವೆ.

ದೇವಾಲಯ ನಿರ್ವಹಣಾ ಆದೇಶಕ್ಕೆ ಸಂಬಂಧಿಸಿದಂತೆ ಕೇರಳ ಸರ್ಕಾರ ಇತ್ತೀಚೆಗೆ ಹೊರಡಿಸಿದ ಆದೇಶದ ಯಾವುದೇ ವರದಿಗಳು ದೊರೆಯದಿದ್ದರೂ, 2018ರಲ್ಲಿ ದಿ ಹಿಂದೂ ಪತ್ರಿಕೆ ವರದಿ ಮಾಡಿದ್ದ ಲೇಖನದಲ್ಲಿ ದೇವಸ್ವಂ ಮಂಡಳಿಯ ಮುಖ್ಯಸ್ಥರು ಹಿಂದೂಗಳೆ ಆಗಿರಬೇಕು ಎನ್ನುವುದು ಸ್ಪಷ್ಟವಾಗಿ ಹೇಳಿದೆ.

ದಿ ಹಿಂದೂ ಲೇಖನದ ಪ್ರಕಾರ, 1950 ರ ತಿರುವಾಂಕೂರು-ಕೊಚ್ಚಿನ್ ಹಿಂದೂ ಧಾರ್ಮಿಕ ಸಂಸ್ಥೆಗಳ ಕಾಯ್ದೆ XV (ಟಿಸಿಆರ್ಐ) ಯಡಿಯಲ್ಲಿ ರಚಿಸಲಾದ ಸ್ವಾಯತ್ತ ಸಂಸ್ಥೆಯಾದ ತಿರುವಾಂಕೂರು ದೇವಸ್ವಂ ಮಂಡಳಿ ಮತ್ತು ಕೊಚ್ಚಿನ್ ದೇವಸ್ವಂ ಮಂಡಳಿಗಳಿಗೆ ಆಯುಕ್ತರನ್ನಾಗಿ ಹಿಂದೂಗಳನ್ನು ಮಾತ್ರ ನೇಮಕ ಮಾಡಲಿದೆ ಎಂದು ಕೇರಳ ಸರ್ಕಾರ ಕೇರಳ ಹೈಕೋರ್ಟ್‌ಗೆ ತಿಳಿಸಿದೆ.

ತಿರುವಾಂಕೂರು-ಕೊಚ್ಚಿನ್ ಹಿಂದೂ ಧಾರ್ಮಿಕ ಸಂಸ್ಥೆಗಳ ಕಾಯ್ದೆ 1950 ಕ್ಕೆ ತಿದ್ದುಪಡಿ ಮೂಲಕ ಹಿಂದೂಯೇತರರನ್ನು ದೇವಸ್ವಂ ಆಯುಕ್ತರನ್ನಾಗಿ ನೇಮಕ ಮಾಡಲು ಕೇರಳ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡ ಪಿ.ಎಸ್.ಶ್ರೀಧರನ್ ಪಿಳ್ಳೈ ಎಂಬವರು 2018ರಲ್ಲಿ ಸಲ್ಲಿಸಿದ ರಿಟ್ ಅನ್ನು ನ್ಯಾಯಾಲಯವು ಆಲಿಸಿತ್ತು, ಆಗ ಕೇರಳ ಸರ್ಕಾರ ಈ ಬಗ್ಗೆ ಉತ್ತರಿಸುತ್ತಾ ಮೇಲಿನಂತೆ ಹೇಳಿದೆ.

2018ರಲ್ಲಿ ಕೇರಳ ಸರ್ಕಾರ ನೀಡಿದ ತೀರ್ಪಿನ ಪ್ರತಿ

2018 ರ ವಿವಾದಕ್ಕೆ ಸಂಬಂಧಿಸಿದಂತೆ ಪತ್ರಿಕ್ರಿಯಿಸಿದ್ದ ರಾಜಗೋಪಾಲನ್, “ತಿದ್ದುಪಡಿಯಲ್ಲಿ ಒಂದು ಗೊಂದಲವಿದೆ. ಮಂಡಳಿಗಳ ನೇಮಕಕ್ಕೆ ಸಂಬಂಧಿಸಿದಂತೆ ಕೆಲವರು ಉದ್ದೇಶಪೂರ್ವಕವಾಗಿ ಈ ಗೊಂದಲವನ್ನು ಸೃಷ್ಟಿಸಿದ್ದರು. ಆದರೆ, ಮಂಡಳಿಗೆ ನೇಮಕವಾಗುವ ಆಯುಕ್ತರು ಸೇರಿದಂತೆ ಎಲ್ಲಾ ಉದ್ಯೋಗಿಗಳು ಹಿಂದೂಗಳಾಗಿರಬೇಕು ಎಂದು ಆಯುಕ್ತರನ್ನು ನೇಮಕ ಮಾಡಲು ಮಾಡಿದ ನಿಬಂಧನೆಗಳಲ್ಲಿ ಮಂಡಳಿಯು ನಿರ್ದಿಷ್ಟವಾಗಿ ಹೇಳಿದೆ. ಆಯುಕ್ತರಷ್ಟೇ ಅಲ್ಲದೆ ಎಲ್ಲಾ ಉದ್ಯೋಗಿಗಳೂ ಹಿಂದೂಗಳೇ ಆಗಿರಲಿದ್ದಾರೆ” ಎಂದು ಅವರು ಹೇಳಿದ್ದರು.

ವೈರಲ್‌ ಆಗುತ್ತಿರುವ ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾಗುತ್ತಿರುವ ಹೇಳಿಕೆ ಸುಳ್ಳಾಗಿದ್ದು, ಕೇರಳದ ಎಲ್ಲಾ ದೇವಾಲಯಗಳನ್ನು ಹಿಂದೂಗಳು ಮಾತ್ರ ನಿಯಂತ್ರಿಸುತ್ತಾರೆ. ಪ್ರಸ್ತುತ ಆಯುಕ್ತರು ಕೂಡ ಹಿಂದೂ ಎಂದು ದೇವಸ್ವಂ ಮಂಡಳಿಗೆ ಸಂಬಂಧಿಸಿದ ಮೂಲಗಳು ತಿಳಿಸಿವೆ.

ಕಾನೂನು ಏನು ಹೇಳುತ್ತದೆ?

ತಿರುವಾಂಕೂರು-ಕೊಚ್ಚಿನ್ ಹಿಂದೂ ಧಾರ್ಮಿಕ ಸಂಸ್ಥೆಗಳ ಕಾಯ್ದೆ 1950 ರ ಸೆಕ್ಷನ್ 29 (1), ದೇವಸ್ವಂ ಇಲಾಖೆಯು ಹಿಂದೂ ಅಧಿಕಾರಿಗಳನ್ನು ಒಳಗೊಂಡಿರಬೇಕು ಎಂದು ಹೇಳಿದೆ.

“1097 ರಲ್ಲಿ ರಚಿಸಲಾದ ದೇವಸ್ವಂ ಇಲಾಖೆಯು ಮುಂದುವರಿಯುತ್ತದೆ ಮತ್ತು ಕಾಲಕಾಲಕ್ಕೆ ಮಂಡಳಿಯು ನಿರ್ಧರಿಸುವಂತಹ ಹಿಂದೂ ಅಧಿಕಾರಿಗಳು ಮತ್ತು ಇತರ ಸೇವಕರನ್ನು ಒಳಗೊಂಡಿರುತ್ತದೆ” ಎಂದು ಅದು ಹೇಳಿದೆ.

ಇದಲ್ಲದೆ, ಮಂಡಳಿಯ ನಾಮನಿರ್ದೇಶನ ಅರ್ಹತೆಗೆ ಸಂಬಂಧಿಸಿದಂತೆ “ಒಬ್ಬ ವ್ಯಕ್ತಿಯು ತಿರುವಾಂಕೂರು-ಕೊಚ್ಚಿನ್ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಹಿಂದೂ ಧರ್ಮವನ್ನು ಪ್ರತಿಪಾದಿಸದ ಹೊರತು ಮಂಡಳಿಯ ಸದಸ್ಯನಾಗಿ ನಾಮನಿರ್ದೇಶನ ಅಥವಾ ಚುನಾವಣೆಗೆ ಅರ್ಹನಾಗಿರುವುದಿಲ್ಲ.” ಎಂದು ಕಾಯಿದೆಯ ಸೆಕ್ಷನ್ 6 ರಲ್ಲಿ ಹೇಳಲಾಗಿದೆ.

ಹಾಗಾಗಿ ಸ್ಪಷ್ಟವಾಗಿ ಹೇಳುವುದಾದರೆ, ಕೇರಳ ಸರ್ಕಾರವು ಹಿಂದೂ ಅಲ್ಲದವರಿಗೆ ರಾಜ್ಯದ ದೇವಾಲಯಗಳನ್ನು ನಿಯಂತ್ರಿಸಲು ಅನುವು ಮಾಡಿಕೊಡುವ ಹೊಸ ಕಾನೂನನ್ನು ಜಾರಿಗೆ ತಂದಿದೆ ಎಂಬುವುದು ಸುಳ್ಳಾಗಿದ್ದು, ಆ ರೀತಿಯ ಯಾವುದೇ ಕಾನೂನುಗಳನ್ನು ಕೇರಳ ಸರ್ಕಾರ ರೂಪಿಸಿಲ್ಲ.


ಫ್ಯಾಕ್ಟ್‌ಚೆಕ್: ಈ ಆಕ್ರೋಶ ಭರಿತ ಜನರ ಗುಂಪು ಕೇರಳದ ಮುಸ್ಲಿಮರದ್ದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...