Homeಕರೋನಾ ತಲ್ಲಣಕೊರೊನಾ ತಪ್ಪಿದರೂ ಕಳಂಕ ತಪ್ಪುತ್ತಿಲ್ಲ: ಸೋಂಕಿತರ ಕಥೆ–ವ್ಯಥೆ!

ಕೊರೊನಾ ತಪ್ಪಿದರೂ ಕಳಂಕ ತಪ್ಪುತ್ತಿಲ್ಲ: ಸೋಂಕಿತರ ಕಥೆ–ವ್ಯಥೆ!

ಇಂತಹ ಸಂದರ್ಭದಲ್ಲಿ ಒಬ್ಬರು ಇನ್ನೊಬ್ಬರ ಬೆನ್ನಿಗೆ ನಿಂತು ಸೋಂಕಿತರ ರಕ್ಷಣೆಗೆ, ಅವರ ಆತ್ಮಸ್ಥೈರ್ಯಕ್ಕೆ ಬೆಂಬಲವಾಗಿ ನಿಲ್ಲಬೇಕಿರುವುದು ಅವಶ್ಯಕ. ಇದು ನಮ್ಮೆಲ್ಲರ ಸಾಮಾಜಿಕ ಹೊಣೆಯೂ ಹೌದು. ಇಂತಹ ಪರಸ್ಪರ ನಂಬಿಕೆ ಉಳಿಸಿಕೊಳ್ಳುವ ಕೆಲಸಗಳಿಂದ ಮಾತ್ರ ಸೋಂಕಿನ ವಿರುದ್ಧ ಗೆಲ್ಲಲು ಸಾಧ್ಯ.

- Advertisement -
- Advertisement -

ಭಾರತದಲ್ಲಿ ಸುಮಾರು 9,31,181 ಜನರಿಗೆ ಕೊರೊನಾ ಸೋಂಕು ಆವರಿಸಿದೆ. ಈ ಪೈಕಿ 5,92,032 ಜನ ಗುಣಮುಖರಾಗಿ ಮನೆಗೆ ತೆರಳಿದ್ದರೆ, ಸಕ್ರಿಯ ಪ್ರಕರಣಗಳ ಸಂಖ್ಯೆ ಸದ್ಯಕ್ಕೆ 3,19,840. ಕೊರೊನಾ ಸೋಂಕಿನಿಂದಾಗಿ ಈವರೆಗೆ ಸುಮಾರು 24,309 ಜನ ಮೃತಪಟ್ಟಿದ್ದಾರೆ. ಅಂದರೆ ಮೃತಪಟ್ಟಿರುವ ಶೇಕಡಾವಾರು ಪ್ರಮಾಣ 2.3. ಮೃತಪಟ್ಟವರಲ್ಲಿ ಬಹುತೇಕರು 60ಕ್ಕಿಂತ ಹೆಚ್ಚು ವಯಸ್ಸಿನವರು ಮತ್ತು ಇತರ ರೋಗವನ್ನು ಹೊಂದಿದ್ದಂತವರು.

ಸ್ವಲ್ಪ ಹೆಚ್ಚುವರಿ ಎಚ್ಚರಿಕೆ ಮತ್ತು ಧೈರ್ಯ ಇದ್ದರೆ ಈ ಸೋಂಕನ್ನು ಸಂಭಾಳಿಸುವುದು ಕಷ್ಟದ ಕೆಲಸ ಏನಲ್ಲ ಎಂಬುದ ಹಲವು ತಜ್ಞರ ಅಭಿಪ್ರಾಯ. ಇದಕ್ಕಿಂತ ಮುಖ್ಯವಾಗಿ ಇಂತಹ ಸಂದರ್ಭದಲ್ಲಿ ಒಬ್ಬರು ಇನ್ನೊಬ್ಬರ ಬೆನ್ನಿಗೆ ನಿಂತು ಸೋಂಕಿತರ ರಕ್ಷಣೆಗೆ, ಅವರ ಆತ್ಮಸ್ಥೈರ್ಯಕ್ಕೆ ಬೆಂಬಲವಾಗಿ ನಿಲ್ಲಬೇಕಿರುವುದು ಅವಶ್ಯಕ. ಇದು ನಮ್ಮೆಲ್ಲರ ಸಾಮಾಜಿಕ ಹೊಣೆಯೂ ಹೌದು. ಇಂತಹ ಪರಸ್ಪರ ನಂಬಿಕೆ ಉಳಿಸಿಕೊಳ್ಳುವ ಕೆಲಸಗಳಿಂದ ಮಾತ್ರ ಸೋಂಕಿನ ವಿರುದ್ಧ ಗೆಲ್ಲಲು ಸಾಧ್ಯ. ಆದರೆ, ನಮ್ಮ ದೇಶದಲ್ಲಿ ಆಗುತ್ತಿರುವು ಒಂದು ಅಮಾನವೀಯ ಬೆಳವಣಿಗೆ ಆತಂಕಕ್ಕೆ ಎಡೆಮಾಡಿಕೊಟ್ಟಿದೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರನ್ನು ನಡೆಸಿಕೊಳ್ಳುತ್ತಿರುವ – ಅವರ ಜೊತೆಗೆ ವರ್ತಿಸುತ್ತಿರುವ ಹಲವು ವರದಿಗಳು ಸಿಗುತ್ತವೆ. ಸೋಂಕು ಪೀಡಿತರಾಗಿ ರೋಗದ ನೋವಿಗಿಂತಲೂ ಜನರಿಂದ ಮಾನಸಿಕ ಹಿಂಸೆ ಅನುಭವಿಸಿದ ಕೆಲವರ ಕಥೆ ಇಲ್ಲಿದೆ.

ಕಥೆ-1: ಆತನ ಹೆಸರು ಸುರೇಶ್ (ಹೆಸರನ್ನು ಬದಲಿಸಲಾಗಿದೆ). ಬೆಂಗಳೂರಿನಲ್ಲಿ ಒಂದು ಒಳ್ಳೆಯ ಕಂಪೆನಿಯಲ್ಲಿ ಕೆಲಸ. ಒಳ್ಳೆಯ ಸಂಬಳ ಕೂಡ ಇದೆ. ಇತ್ತೀಚೆಗೆ ಒಂದು ಅಪಾರ್ಟ್‌ಮೆಂಟ್ ಖರೀದಿ ಮಾಡಿದ್ದರು. ಆದರೆ, ವಾರದ ಹಿಂದೆ ಅವರಿಗೆ ಊಟ ಮಾಡುವಾಗ ರುಚಿ ಗೊತ್ತಾಗಿರಲಿಲ್ಲ. ಹೀಗಾಗಿ ತಮ್ಮ ವೈದ್ಯರ ಸಲಹೆ ಮೇರೆಗೆ ಕೊರೊನಾ ಟೆಸ್ಟ್ ಮಾಡಿಸಿದ್ದಾರೆ. ಪಾಸಿಟೀವ್ ಫಲಿತಾಂಶ ಬಂದಿದೆ. ಆದರೆ, ಈ ವಿಚಾರ ಮನೆಗೆ ಆಗಮಿಸುವ ವೇಳೆಗೆ ಎಲ್ಲರಿಗೂ ಗೊತ್ತಾಗಿದೆ.

ಪರೀಕ್ಷೆ ನಡೆಸಿ ಇಂದಿಗೆ ಸರಿಯಾಗಿ 10 ದಿನಗಳಾಗಿವೆ. ತಾನು ಹಾಗೂ ತನ್ನ ಹೆಂಡತಿ ಮನೆಯಿಂದ ಹೊರ ಬರುವುದಿಲ್ಲ. ಅಪಾಟ್ಮೆರ್ಂಟ್‍ನ ಕಾಮನ್ ಸ್ಥಳಗಳನ್ನು ಬಳಸುವುದಿಲ್ಲ ಎಂದು ಇವರು ಅಪಾರ್ಟ್ಮೆಂಟ್ ಮ್ಯಾನೇಜ್ಮೆಂಟ್‍ನವರಿಗೆ ಮಾತು ನೀಡಿದ್ದಾರೆ. ಹೀಗಾಗಿ ಗಂಡ-ಹೆಂಡತಿ ಇಬ್ಬರೂ ಮನೆಯಿಂದ ಹೊರ ಬಂದು ಸೂರ್ಯನ ಕಿರಣಗಳನ್ನು ನೋಡಿಯೇ 10 ದಿನಗಳಾಗಿವೆ. ಈ ನಡುವೆ ವಾಚ್ಮನ್ ಪ್ರತಿದಿನ ಮನೆಯ ಬಾಗಿಲ ಬಳಿಯಲ್ಲಿ ಇಟ್ಟು ಹೋಗುವ ಮೊಸರನ್ನವೇ ಇವರಿಗೆ ಗತಿ. ಇನ್ನು ಮನೆಯಲ್ಲಿ ತುಂಬಾ ಕಸ ಇದ್ದು ಅದನ್ನು ಹೊರಗೆ ಸಾಗಿಸುವುದಕ್ಕೂ ಇವರು ನಿಸ್ಸಹಾಯಕರು. ಕೊರೊನಾ ನಿಮಿತ್ತ ತಮ್ಮ ಪ್ರತಿಯೊಂದು ಕೆಲಸಕ್ಕೂ ಇವರು ಪರಾವಲಂಬಿಗಳಾಗಿದ್ದಾರೆ.

ಕೊರೋನಾ ಸೋಂಕಿತರಾದ ಎಲ್ಲರೂ ಸಾಮಾನ್ಯವಾಗಿ ಎದುರಿಸಲೇಬೇಕಾದ ಸಂಕಷ್ಟವಿದು ಎಂದುಕೊಳ್ಳೋಣ. ಆದರೆ, ಚೂರಿಯಂತೆ ಇರಿಯುವ ಜನರ ಮಾತು ಕೊರೋನಾ ರೋಗಿಗಳ ಮಾನಸಿಕ ಆರೋಗ್ಯವನ್ನು ಹದಗೆಡಿಸಿದೆ. ಒಂದೆಡೆ ಅಪಾಟ್ಮೆರ್ಂಟ್‍ನ ಇತರ ನಿವಾಸಿಗಳು ಇಂತವರನ್ನು ಏಕೆ ಇಲ್ಲಿ ಇಟ್ಟಿದ್ದೀರಿ? ಎಂದು ವರಾತ ತೆಗೆಯುತ್ತಿದ್ದಾರೆ. ಅಪಾಟ್ಮೆರ್ಂಟ್ ನಿವಾಸಿಗಳ ವಾಟ್ಸಾಪ್ ಗ್ರೂಪುಗಳಲ್ಲಿ ಪ್ರತಿನಿತ್ಯ ಇವರದ್ದೇ ಮಾತಾಡುತ್ತಾ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ಅಲ್ಲದೆ, ಆರೋಗ್ಯ ವಿಚಾರಿಸುವ ನೆಪದಲ್ಲಿ ಇವರಿಗೆ ಕರೆ ಮಾಡುವವರ ಚುಚ್ಚು ಮಾತುಗಳಿಂದ ಅಕ್ಷರಶಃ ನೊಂದಿದ್ದಾರೆ.

ನಾಳೆ ಇವರು ಖಂಡಿತ ಕೊರೋನಾದಂತಹ ಖಾಯಿಲೆಯಿಂದ ಬಚಾವಾಗಿ ಬರಬಹುದು. ಆದರೆ, ಈ ಸಂದರ್ಭದಲ್ಲಿ ಅವರ ಮನಸ್ಸಿಗೆ ಸತತವಾಗಿ ಉಂಟಾಗಿರುವ ನೋವಿನಿಂದ ರೋಗಿ ಬೇಗ ಗುಣವಾಗುತ್ತಾನೆ ಎಂದು ಹೇಳುವುದು ಕಷ್ಟ.

ಕಥೆ-2: ಆತ ಮೂಲತಃ ಮಲೆನಾಡಿನ ಹುಡುಗ. ಜೀವನೋಪಾಯಕ್ಕಾಗಿ ಬೆಂಗಳೂರಿಗೆ ಆಗಮಿಸಿದ್ದ. ಒಂದೊಳ್ಳೆ ಕೆಲಸ ಪಡೆದಿದ್ದ ಆತ ನಗರದ ಪ್ರತಿಷ್ಠಿತ ಏರಿಯಾದಲ್ಲಿ ಮನೆಯೊಂದನ್ನು ಬಾಡಿಗೆಗೆ ಪಡೆದಿದ್ದ. ಆದರೆ, ದುರಾದೃಷ್ಟವಶಾತ್ ಆಗಿನ್ನು ರಾಜ್ಯಕ್ಕೆ ಕಾಲಿಟ್ಟಿದ್ದ ಕೊರೊನಾ ಲಾಕ್‍ಡೌನ್ ಜಾರಿಯಾಗಿದ್ದ ಸಂದರ್ಭದಲ್ಲಿ ಆತನಿಗೂ ವಕ್ಕರಿಸಿತ್ತು.

ದಿಢೀರನೆ ಕಾಣಿಸಿಕೊಂಡಿದ್ದ ಸುಸ್ತು ಜ್ವರದಿಂದಾಗಿ ಮೆತ್ತಗಾಗಿದ್ದ ಆತ ಕೋವಿಡ್-19 ಪರೀಕ್ಷೆ ಮಾಡಿಸಿಕೊಂಡಿದ್ದ. ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಹೀಗಾಗಿ ಕೂಡಲೇ ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆತನೂ ಚಿಕಿತ್ಸೆಗೆ ಸ್ಪಂದಿಸಿ ಶೀಘ್ರವಾಗಿ ಗುಣಮುಖನಾಗಿದ್ದ.

ಆದರೆ, ಆಗಿನ್ನು ಮಾಧ್ಯಮಗಳು ಪ್ರತಿನಿತ್ಯ ಕೊರೊನಾ ಕೇಕೆ, ತಬ್ಲಿಘಿ ಸೋಂಕು, ಕೊರೊನಾ ರಣಕಹಳೆ, ಕೊರೊನಾ ಅಟ್ಟಹಾಸ, ಸಾವಿನ ಸರದಾರ ಹೀಗೆ ನಾನಾ ಹೆಸರಿನಲ್ಲಿ ಸೋಂಕನ್ನು ವಿಜೃಂಭಿಸಿ ವರದಿ ಮಾಡಿದ್ದವು. ಈ ಮೂಲಕ ಜನರಲ್ಲಿ ಎಚ್ಚರಿಕೆಯ ಬದಲು ಭೀತಿ ಹುಟ್ಟಿಸುವಲ್ಲಿ ಸಫಲರಾಗಿದ್ದರು. ಪರಿಣಾಮ ಆತ ಕೊರೊನಾದಿಂದ ಗುಣಮುಖನಾಗಿ ಮನೆಗೆ ಮರಳಿದ್ದರೂ ಸಹ ಕೊರೊನಾಗೆ ಹೆದರಿ ಮನೆಯ ಯಜಮಾನ ಆತನನ್ನು ಏಕಾಏಕಿ ಹೊರಹಾಕಿದ್ದ. “ಲಾಕ್‍ಡೌನ್ ಸಂದರ್ಭದಲ್ಲಿ ಅಸಹಾಯಕನಂತೆ ನಾನು ಬೀದಿ ಪಾಲಾಗಿದ್ದೆ. ಯಾರೂ ಸಹಾಯ ಹಸ್ತ ಚಾಚಲಿಲ್ಲ. ಕೊನೆಗೆ ಕೆಲಸವನ್ನೂ ಕಳೆದುಕೊಂಡು, ಆನಂತರ ಅನಿವಾರ್ಯವಾಗಿ ಊರಿಗೆ ಮರಳಿದೆ” ಎನ್ನುತ್ತಾರೆ ಅವರು.

ಇದು ಕೊರೊನಾ ಸೋಂಕು ಪೀಡಿತರ ಕಥೆಯಾದರೆ, ಇಂತಹ ಸಂದರ್ಭದಲ್ಲಿ ಒಂದು ಊರಿನಿಂದ ಮತ್ತೊಂದು ಊರಿಗೆ ಅನಿವಾರ್ಯ ಕಾರಣಗಳಿಗಾಗಿ ತಮ್ಮ ಸಂಬಂಧಿಕರ ಅಥವಾ ತಮ್ಮ ಮನೆಗೆ ತೆರಳುವವರ ಕಥೆ ಭಿನ್ನವಾಗಿದೆ, ಮತ್ತಷ್ಟು ಸಮಸ್ಯೆಗಳನ್ನು ಸೃಷ್ಟಿಸಿರುವುದು ತಿಳಿಯುತ್ತದೆ.

ಕಥೆ 3: ಆಕೆಯ ಹೆಸರು ಭಾನು (ಹೆಸರನ್ನು ಬದಲಾಯಿಸಲಾಗಿದೆ). ಶಿವಮೊಗ್ಗ ಜಿಲ್ಲೆಯ ಹಳ್ಳಿಯೊಂದರ ನಿವಾಸಿಯಾಗಿರುವ ಈಕೆ ಪದವೀಧರೆ. ಪೋಷಕರು ಈಕೆಯನ್ನು ದೂರದ ಮಂಗಳೂರಿಗೆ ಮದುವೆ ಮಾಡಿಕೊಟ್ಟಿದ್ದರು. ಆಕೆಯ ದುರಾದೃಷ್ಟವೋ ಏನೋ? ಆಕೆಗೆ 7 ತಿಂಗಳು ತುಂಬುತ್ತಿದ್ದಂತೆ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗಿ ಲಾಕ್‍ಡೌನ್ ಘೋಷಿಸಲಾಯಿತು.

ಸಾಮಾನ್ಯವಾಗಿ ಹೆಣ್ಣು ಮಕ್ಕಳಿಗೆ ಹೆರಿಗೆ ಸಂದರ್ಭದಲ್ಲಿ 7ನೇ ತಿಂಗಳು ನಡೆಯುವಾಗ ಸೀಮಂತ ಮಾಡಿಸಿ ಹೆರಿಗೆಗೆ ತವರು ಮನೆಗೆ ಕಳಿಸುವುದು ವಾಡಿಕೆ. ತವರು ಮನೆಗೆ ತೆರಳಲು ಇಂತಹ ಸಂದರ್ಭದಲ್ಲಿ ಹೆಣ್ಣು ಮಕ್ಕಳು ಕಾತರದಿಂದ ಕಾಯುತ್ತಿರುತ್ತಾರೆ. ಆದರೆ, ವಿಪರ್ಯಾಸ ಆಕೆ ಹೆರಿಗೆಗೆಂದು ತವರು ಮನೆಗೆ ಹೋಗುವುದು ಸಾಧ್ಯವೇ ಆಗಿರಲಿಲ್ಲ. ಹೀಗಾಗಿ ಗಂಡನ ಮನೆಯಲ್ಲೇ ಹೆರಿಗೆಯಾಗಿ ಹೆಣ್ಣುಮಗು ಜನಿಸಿತ್ತು.

ಆಕೆಗೆ ಮಗು ಜನಿಸುವಷ್ಟರಲ್ಲಿ ದೇಶದಾದ್ಯಂತ ಲಾಕ್‍ಡೌನ್ ಹಂತಹಂತವಾಗಿ ಸಡಿಲಿಕೆಯಾಗಿತ್ತು. ಹೀಗಾಗಿ ಮಗುವನ್ನಾದರೂ ತವರಿಗೆ ತೋರಿಸುವ ಸಲುವಾಗಿ ಆಕೆ ಗಂಡನ ಜೊತೆಗೆ ಕಾರಿನಲ್ಲಿ ತನ್ನ ಊರಿಗೆ ಬಂದಿಳಿದಿದ್ದಳು. ಆದರೆ, ಇಡೀ ಊರೇ ಒಟ್ಟಾಗಿ ಆಕೆ ಬಂದಿದ್ದ ಕಾರಿಗೆ ಮುತ್ತಿಗೆ ಹಾಕಿತ್ತು. ಹೊರಗಡೆಯಿಂದ ಯಾರೂ ಊರಿನ ಒಳಗೆ ಬರಬಾರದು ಎಂದು ತಾಕೀತು ಮಾಡಿ, ಕೊನೆಗೆ ಜಗಳ ಮಾಡಿ ಒತ್ತಾಯಪೂರ್ವಕವಾಗಿ ಆಕೆಯನ್ನು ಹಿಂದಕ್ಕೆ ಕಳಿಸಲಾಯಿತು.

ಇಂತಹ ಅಸಂಖ್ಯಾತ ಕಥೆಗಳಲ್ಲಿ ಇವು ಕೆಲವಷ್ಟೇ. ಮಾನವೀಯ ಸಮಾಜ ತಲೆ ತಗ್ಗಿಸುವ ಅದೆಷ್ಟೋ ಕಥೆಗಳು ಕೊರೊನಾ ಸೋಂಕಿತರನ್ನು ಕಳಂಕಿತರಾಗಿ ಕಾಣುತ್ತಿರುವ ಕಾರಣಕ್ಕೆ ಹುಟ್ಟಿಕೊಂಡಿವೆ. ಕೊರೊನಾ ಸಮಯದಲ್ಲಿ ಮಾನವೀಯ ಮೌಲ್ಯಗಳು ಮರೆಯಾಗಬಾರದೆಲ್ಲ! ಹೀಗೆ ಕೆಲವು ‘ಭಯಂಕರ’ ಮಾಧ್ಯಮಗಳ ವೈಭವೀಕೃತ ವರದಿಗಳಿಗೆ ಬೆಚ್ಚಿಬಿದ್ದು ಇಂತಹ ಸಂದಿಗ್ಧ ಸಂದರ್ಭದಲ್ಲಿ ಒಬ್ಬರ ಬೆನ್ನಿಗೆ ಒಬ್ಬರು ನಿಲ್ಲುಬೇಕಿರುವ ಸಮಯದಲ್ಲಿ ವಿವೇಕ ಕಳೆದುಕೊಳ್ಳಬಾರದಲ್ಲವೇ?


ಇದನ್ನು ಓದಿ: ‘ಪಕ್ಷದ ಬಾಗಿಲು ಮುಚ್ಚಿಲ್ಲ’: ಬಿಜೆಪಿ ಸೇರುವುದಿಲ್ಲ ಎಂದ ಪೈಲಟ್‌ಗೆ ಕಾಂಗ್ರೆಸ್ ಪ್ರತಿಕ್ರಿಯೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...