Homeಕರೋನಾ ತಲ್ಲಣಕೊರೊನಾ ತಪ್ಪಿದರೂ ಕಳಂಕ ತಪ್ಪುತ್ತಿಲ್ಲ: ಸೋಂಕಿತರ ಕಥೆ–ವ್ಯಥೆ!

ಕೊರೊನಾ ತಪ್ಪಿದರೂ ಕಳಂಕ ತಪ್ಪುತ್ತಿಲ್ಲ: ಸೋಂಕಿತರ ಕಥೆ–ವ್ಯಥೆ!

ಇಂತಹ ಸಂದರ್ಭದಲ್ಲಿ ಒಬ್ಬರು ಇನ್ನೊಬ್ಬರ ಬೆನ್ನಿಗೆ ನಿಂತು ಸೋಂಕಿತರ ರಕ್ಷಣೆಗೆ, ಅವರ ಆತ್ಮಸ್ಥೈರ್ಯಕ್ಕೆ ಬೆಂಬಲವಾಗಿ ನಿಲ್ಲಬೇಕಿರುವುದು ಅವಶ್ಯಕ. ಇದು ನಮ್ಮೆಲ್ಲರ ಸಾಮಾಜಿಕ ಹೊಣೆಯೂ ಹೌದು. ಇಂತಹ ಪರಸ್ಪರ ನಂಬಿಕೆ ಉಳಿಸಿಕೊಳ್ಳುವ ಕೆಲಸಗಳಿಂದ ಮಾತ್ರ ಸೋಂಕಿನ ವಿರುದ್ಧ ಗೆಲ್ಲಲು ಸಾಧ್ಯ.

- Advertisement -
- Advertisement -

ಭಾರತದಲ್ಲಿ ಸುಮಾರು 9,31,181 ಜನರಿಗೆ ಕೊರೊನಾ ಸೋಂಕು ಆವರಿಸಿದೆ. ಈ ಪೈಕಿ 5,92,032 ಜನ ಗುಣಮುಖರಾಗಿ ಮನೆಗೆ ತೆರಳಿದ್ದರೆ, ಸಕ್ರಿಯ ಪ್ರಕರಣಗಳ ಸಂಖ್ಯೆ ಸದ್ಯಕ್ಕೆ 3,19,840. ಕೊರೊನಾ ಸೋಂಕಿನಿಂದಾಗಿ ಈವರೆಗೆ ಸುಮಾರು 24,309 ಜನ ಮೃತಪಟ್ಟಿದ್ದಾರೆ. ಅಂದರೆ ಮೃತಪಟ್ಟಿರುವ ಶೇಕಡಾವಾರು ಪ್ರಮಾಣ 2.3. ಮೃತಪಟ್ಟವರಲ್ಲಿ ಬಹುತೇಕರು 60ಕ್ಕಿಂತ ಹೆಚ್ಚು ವಯಸ್ಸಿನವರು ಮತ್ತು ಇತರ ರೋಗವನ್ನು ಹೊಂದಿದ್ದಂತವರು.

ಸ್ವಲ್ಪ ಹೆಚ್ಚುವರಿ ಎಚ್ಚರಿಕೆ ಮತ್ತು ಧೈರ್ಯ ಇದ್ದರೆ ಈ ಸೋಂಕನ್ನು ಸಂಭಾಳಿಸುವುದು ಕಷ್ಟದ ಕೆಲಸ ಏನಲ್ಲ ಎಂಬುದ ಹಲವು ತಜ್ಞರ ಅಭಿಪ್ರಾಯ. ಇದಕ್ಕಿಂತ ಮುಖ್ಯವಾಗಿ ಇಂತಹ ಸಂದರ್ಭದಲ್ಲಿ ಒಬ್ಬರು ಇನ್ನೊಬ್ಬರ ಬೆನ್ನಿಗೆ ನಿಂತು ಸೋಂಕಿತರ ರಕ್ಷಣೆಗೆ, ಅವರ ಆತ್ಮಸ್ಥೈರ್ಯಕ್ಕೆ ಬೆಂಬಲವಾಗಿ ನಿಲ್ಲಬೇಕಿರುವುದು ಅವಶ್ಯಕ. ಇದು ನಮ್ಮೆಲ್ಲರ ಸಾಮಾಜಿಕ ಹೊಣೆಯೂ ಹೌದು. ಇಂತಹ ಪರಸ್ಪರ ನಂಬಿಕೆ ಉಳಿಸಿಕೊಳ್ಳುವ ಕೆಲಸಗಳಿಂದ ಮಾತ್ರ ಸೋಂಕಿನ ವಿರುದ್ಧ ಗೆಲ್ಲಲು ಸಾಧ್ಯ. ಆದರೆ, ನಮ್ಮ ದೇಶದಲ್ಲಿ ಆಗುತ್ತಿರುವು ಒಂದು ಅಮಾನವೀಯ ಬೆಳವಣಿಗೆ ಆತಂಕಕ್ಕೆ ಎಡೆಮಾಡಿಕೊಟ್ಟಿದೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರನ್ನು ನಡೆಸಿಕೊಳ್ಳುತ್ತಿರುವ – ಅವರ ಜೊತೆಗೆ ವರ್ತಿಸುತ್ತಿರುವ ಹಲವು ವರದಿಗಳು ಸಿಗುತ್ತವೆ. ಸೋಂಕು ಪೀಡಿತರಾಗಿ ರೋಗದ ನೋವಿಗಿಂತಲೂ ಜನರಿಂದ ಮಾನಸಿಕ ಹಿಂಸೆ ಅನುಭವಿಸಿದ ಕೆಲವರ ಕಥೆ ಇಲ್ಲಿದೆ.

ಕಥೆ-1: ಆತನ ಹೆಸರು ಸುರೇಶ್ (ಹೆಸರನ್ನು ಬದಲಿಸಲಾಗಿದೆ). ಬೆಂಗಳೂರಿನಲ್ಲಿ ಒಂದು ಒಳ್ಳೆಯ ಕಂಪೆನಿಯಲ್ಲಿ ಕೆಲಸ. ಒಳ್ಳೆಯ ಸಂಬಳ ಕೂಡ ಇದೆ. ಇತ್ತೀಚೆಗೆ ಒಂದು ಅಪಾರ್ಟ್‌ಮೆಂಟ್ ಖರೀದಿ ಮಾಡಿದ್ದರು. ಆದರೆ, ವಾರದ ಹಿಂದೆ ಅವರಿಗೆ ಊಟ ಮಾಡುವಾಗ ರುಚಿ ಗೊತ್ತಾಗಿರಲಿಲ್ಲ. ಹೀಗಾಗಿ ತಮ್ಮ ವೈದ್ಯರ ಸಲಹೆ ಮೇರೆಗೆ ಕೊರೊನಾ ಟೆಸ್ಟ್ ಮಾಡಿಸಿದ್ದಾರೆ. ಪಾಸಿಟೀವ್ ಫಲಿತಾಂಶ ಬಂದಿದೆ. ಆದರೆ, ಈ ವಿಚಾರ ಮನೆಗೆ ಆಗಮಿಸುವ ವೇಳೆಗೆ ಎಲ್ಲರಿಗೂ ಗೊತ್ತಾಗಿದೆ.

ಪರೀಕ್ಷೆ ನಡೆಸಿ ಇಂದಿಗೆ ಸರಿಯಾಗಿ 10 ದಿನಗಳಾಗಿವೆ. ತಾನು ಹಾಗೂ ತನ್ನ ಹೆಂಡತಿ ಮನೆಯಿಂದ ಹೊರ ಬರುವುದಿಲ್ಲ. ಅಪಾಟ್ಮೆರ್ಂಟ್‍ನ ಕಾಮನ್ ಸ್ಥಳಗಳನ್ನು ಬಳಸುವುದಿಲ್ಲ ಎಂದು ಇವರು ಅಪಾರ್ಟ್ಮೆಂಟ್ ಮ್ಯಾನೇಜ್ಮೆಂಟ್‍ನವರಿಗೆ ಮಾತು ನೀಡಿದ್ದಾರೆ. ಹೀಗಾಗಿ ಗಂಡ-ಹೆಂಡತಿ ಇಬ್ಬರೂ ಮನೆಯಿಂದ ಹೊರ ಬಂದು ಸೂರ್ಯನ ಕಿರಣಗಳನ್ನು ನೋಡಿಯೇ 10 ದಿನಗಳಾಗಿವೆ. ಈ ನಡುವೆ ವಾಚ್ಮನ್ ಪ್ರತಿದಿನ ಮನೆಯ ಬಾಗಿಲ ಬಳಿಯಲ್ಲಿ ಇಟ್ಟು ಹೋಗುವ ಮೊಸರನ್ನವೇ ಇವರಿಗೆ ಗತಿ. ಇನ್ನು ಮನೆಯಲ್ಲಿ ತುಂಬಾ ಕಸ ಇದ್ದು ಅದನ್ನು ಹೊರಗೆ ಸಾಗಿಸುವುದಕ್ಕೂ ಇವರು ನಿಸ್ಸಹಾಯಕರು. ಕೊರೊನಾ ನಿಮಿತ್ತ ತಮ್ಮ ಪ್ರತಿಯೊಂದು ಕೆಲಸಕ್ಕೂ ಇವರು ಪರಾವಲಂಬಿಗಳಾಗಿದ್ದಾರೆ.

ಕೊರೋನಾ ಸೋಂಕಿತರಾದ ಎಲ್ಲರೂ ಸಾಮಾನ್ಯವಾಗಿ ಎದುರಿಸಲೇಬೇಕಾದ ಸಂಕಷ್ಟವಿದು ಎಂದುಕೊಳ್ಳೋಣ. ಆದರೆ, ಚೂರಿಯಂತೆ ಇರಿಯುವ ಜನರ ಮಾತು ಕೊರೋನಾ ರೋಗಿಗಳ ಮಾನಸಿಕ ಆರೋಗ್ಯವನ್ನು ಹದಗೆಡಿಸಿದೆ. ಒಂದೆಡೆ ಅಪಾಟ್ಮೆರ್ಂಟ್‍ನ ಇತರ ನಿವಾಸಿಗಳು ಇಂತವರನ್ನು ಏಕೆ ಇಲ್ಲಿ ಇಟ್ಟಿದ್ದೀರಿ? ಎಂದು ವರಾತ ತೆಗೆಯುತ್ತಿದ್ದಾರೆ. ಅಪಾಟ್ಮೆರ್ಂಟ್ ನಿವಾಸಿಗಳ ವಾಟ್ಸಾಪ್ ಗ್ರೂಪುಗಳಲ್ಲಿ ಪ್ರತಿನಿತ್ಯ ಇವರದ್ದೇ ಮಾತಾಡುತ್ತಾ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ಅಲ್ಲದೆ, ಆರೋಗ್ಯ ವಿಚಾರಿಸುವ ನೆಪದಲ್ಲಿ ಇವರಿಗೆ ಕರೆ ಮಾಡುವವರ ಚುಚ್ಚು ಮಾತುಗಳಿಂದ ಅಕ್ಷರಶಃ ನೊಂದಿದ್ದಾರೆ.

ನಾಳೆ ಇವರು ಖಂಡಿತ ಕೊರೋನಾದಂತಹ ಖಾಯಿಲೆಯಿಂದ ಬಚಾವಾಗಿ ಬರಬಹುದು. ಆದರೆ, ಈ ಸಂದರ್ಭದಲ್ಲಿ ಅವರ ಮನಸ್ಸಿಗೆ ಸತತವಾಗಿ ಉಂಟಾಗಿರುವ ನೋವಿನಿಂದ ರೋಗಿ ಬೇಗ ಗುಣವಾಗುತ್ತಾನೆ ಎಂದು ಹೇಳುವುದು ಕಷ್ಟ.

ಕಥೆ-2: ಆತ ಮೂಲತಃ ಮಲೆನಾಡಿನ ಹುಡುಗ. ಜೀವನೋಪಾಯಕ್ಕಾಗಿ ಬೆಂಗಳೂರಿಗೆ ಆಗಮಿಸಿದ್ದ. ಒಂದೊಳ್ಳೆ ಕೆಲಸ ಪಡೆದಿದ್ದ ಆತ ನಗರದ ಪ್ರತಿಷ್ಠಿತ ಏರಿಯಾದಲ್ಲಿ ಮನೆಯೊಂದನ್ನು ಬಾಡಿಗೆಗೆ ಪಡೆದಿದ್ದ. ಆದರೆ, ದುರಾದೃಷ್ಟವಶಾತ್ ಆಗಿನ್ನು ರಾಜ್ಯಕ್ಕೆ ಕಾಲಿಟ್ಟಿದ್ದ ಕೊರೊನಾ ಲಾಕ್‍ಡೌನ್ ಜಾರಿಯಾಗಿದ್ದ ಸಂದರ್ಭದಲ್ಲಿ ಆತನಿಗೂ ವಕ್ಕರಿಸಿತ್ತು.

ದಿಢೀರನೆ ಕಾಣಿಸಿಕೊಂಡಿದ್ದ ಸುಸ್ತು ಜ್ವರದಿಂದಾಗಿ ಮೆತ್ತಗಾಗಿದ್ದ ಆತ ಕೋವಿಡ್-19 ಪರೀಕ್ಷೆ ಮಾಡಿಸಿಕೊಂಡಿದ್ದ. ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಹೀಗಾಗಿ ಕೂಡಲೇ ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆತನೂ ಚಿಕಿತ್ಸೆಗೆ ಸ್ಪಂದಿಸಿ ಶೀಘ್ರವಾಗಿ ಗುಣಮುಖನಾಗಿದ್ದ.

ಆದರೆ, ಆಗಿನ್ನು ಮಾಧ್ಯಮಗಳು ಪ್ರತಿನಿತ್ಯ ಕೊರೊನಾ ಕೇಕೆ, ತಬ್ಲಿಘಿ ಸೋಂಕು, ಕೊರೊನಾ ರಣಕಹಳೆ, ಕೊರೊನಾ ಅಟ್ಟಹಾಸ, ಸಾವಿನ ಸರದಾರ ಹೀಗೆ ನಾನಾ ಹೆಸರಿನಲ್ಲಿ ಸೋಂಕನ್ನು ವಿಜೃಂಭಿಸಿ ವರದಿ ಮಾಡಿದ್ದವು. ಈ ಮೂಲಕ ಜನರಲ್ಲಿ ಎಚ್ಚರಿಕೆಯ ಬದಲು ಭೀತಿ ಹುಟ್ಟಿಸುವಲ್ಲಿ ಸಫಲರಾಗಿದ್ದರು. ಪರಿಣಾಮ ಆತ ಕೊರೊನಾದಿಂದ ಗುಣಮುಖನಾಗಿ ಮನೆಗೆ ಮರಳಿದ್ದರೂ ಸಹ ಕೊರೊನಾಗೆ ಹೆದರಿ ಮನೆಯ ಯಜಮಾನ ಆತನನ್ನು ಏಕಾಏಕಿ ಹೊರಹಾಕಿದ್ದ. “ಲಾಕ್‍ಡೌನ್ ಸಂದರ್ಭದಲ್ಲಿ ಅಸಹಾಯಕನಂತೆ ನಾನು ಬೀದಿ ಪಾಲಾಗಿದ್ದೆ. ಯಾರೂ ಸಹಾಯ ಹಸ್ತ ಚಾಚಲಿಲ್ಲ. ಕೊನೆಗೆ ಕೆಲಸವನ್ನೂ ಕಳೆದುಕೊಂಡು, ಆನಂತರ ಅನಿವಾರ್ಯವಾಗಿ ಊರಿಗೆ ಮರಳಿದೆ” ಎನ್ನುತ್ತಾರೆ ಅವರು.

ಇದು ಕೊರೊನಾ ಸೋಂಕು ಪೀಡಿತರ ಕಥೆಯಾದರೆ, ಇಂತಹ ಸಂದರ್ಭದಲ್ಲಿ ಒಂದು ಊರಿನಿಂದ ಮತ್ತೊಂದು ಊರಿಗೆ ಅನಿವಾರ್ಯ ಕಾರಣಗಳಿಗಾಗಿ ತಮ್ಮ ಸಂಬಂಧಿಕರ ಅಥವಾ ತಮ್ಮ ಮನೆಗೆ ತೆರಳುವವರ ಕಥೆ ಭಿನ್ನವಾಗಿದೆ, ಮತ್ತಷ್ಟು ಸಮಸ್ಯೆಗಳನ್ನು ಸೃಷ್ಟಿಸಿರುವುದು ತಿಳಿಯುತ್ತದೆ.

ಕಥೆ 3: ಆಕೆಯ ಹೆಸರು ಭಾನು (ಹೆಸರನ್ನು ಬದಲಾಯಿಸಲಾಗಿದೆ). ಶಿವಮೊಗ್ಗ ಜಿಲ್ಲೆಯ ಹಳ್ಳಿಯೊಂದರ ನಿವಾಸಿಯಾಗಿರುವ ಈಕೆ ಪದವೀಧರೆ. ಪೋಷಕರು ಈಕೆಯನ್ನು ದೂರದ ಮಂಗಳೂರಿಗೆ ಮದುವೆ ಮಾಡಿಕೊಟ್ಟಿದ್ದರು. ಆಕೆಯ ದುರಾದೃಷ್ಟವೋ ಏನೋ? ಆಕೆಗೆ 7 ತಿಂಗಳು ತುಂಬುತ್ತಿದ್ದಂತೆ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗಿ ಲಾಕ್‍ಡೌನ್ ಘೋಷಿಸಲಾಯಿತು.

ಸಾಮಾನ್ಯವಾಗಿ ಹೆಣ್ಣು ಮಕ್ಕಳಿಗೆ ಹೆರಿಗೆ ಸಂದರ್ಭದಲ್ಲಿ 7ನೇ ತಿಂಗಳು ನಡೆಯುವಾಗ ಸೀಮಂತ ಮಾಡಿಸಿ ಹೆರಿಗೆಗೆ ತವರು ಮನೆಗೆ ಕಳಿಸುವುದು ವಾಡಿಕೆ. ತವರು ಮನೆಗೆ ತೆರಳಲು ಇಂತಹ ಸಂದರ್ಭದಲ್ಲಿ ಹೆಣ್ಣು ಮಕ್ಕಳು ಕಾತರದಿಂದ ಕಾಯುತ್ತಿರುತ್ತಾರೆ. ಆದರೆ, ವಿಪರ್ಯಾಸ ಆಕೆ ಹೆರಿಗೆಗೆಂದು ತವರು ಮನೆಗೆ ಹೋಗುವುದು ಸಾಧ್ಯವೇ ಆಗಿರಲಿಲ್ಲ. ಹೀಗಾಗಿ ಗಂಡನ ಮನೆಯಲ್ಲೇ ಹೆರಿಗೆಯಾಗಿ ಹೆಣ್ಣುಮಗು ಜನಿಸಿತ್ತು.

ಆಕೆಗೆ ಮಗು ಜನಿಸುವಷ್ಟರಲ್ಲಿ ದೇಶದಾದ್ಯಂತ ಲಾಕ್‍ಡೌನ್ ಹಂತಹಂತವಾಗಿ ಸಡಿಲಿಕೆಯಾಗಿತ್ತು. ಹೀಗಾಗಿ ಮಗುವನ್ನಾದರೂ ತವರಿಗೆ ತೋರಿಸುವ ಸಲುವಾಗಿ ಆಕೆ ಗಂಡನ ಜೊತೆಗೆ ಕಾರಿನಲ್ಲಿ ತನ್ನ ಊರಿಗೆ ಬಂದಿಳಿದಿದ್ದಳು. ಆದರೆ, ಇಡೀ ಊರೇ ಒಟ್ಟಾಗಿ ಆಕೆ ಬಂದಿದ್ದ ಕಾರಿಗೆ ಮುತ್ತಿಗೆ ಹಾಕಿತ್ತು. ಹೊರಗಡೆಯಿಂದ ಯಾರೂ ಊರಿನ ಒಳಗೆ ಬರಬಾರದು ಎಂದು ತಾಕೀತು ಮಾಡಿ, ಕೊನೆಗೆ ಜಗಳ ಮಾಡಿ ಒತ್ತಾಯಪೂರ್ವಕವಾಗಿ ಆಕೆಯನ್ನು ಹಿಂದಕ್ಕೆ ಕಳಿಸಲಾಯಿತು.

ಇಂತಹ ಅಸಂಖ್ಯಾತ ಕಥೆಗಳಲ್ಲಿ ಇವು ಕೆಲವಷ್ಟೇ. ಮಾನವೀಯ ಸಮಾಜ ತಲೆ ತಗ್ಗಿಸುವ ಅದೆಷ್ಟೋ ಕಥೆಗಳು ಕೊರೊನಾ ಸೋಂಕಿತರನ್ನು ಕಳಂಕಿತರಾಗಿ ಕಾಣುತ್ತಿರುವ ಕಾರಣಕ್ಕೆ ಹುಟ್ಟಿಕೊಂಡಿವೆ. ಕೊರೊನಾ ಸಮಯದಲ್ಲಿ ಮಾನವೀಯ ಮೌಲ್ಯಗಳು ಮರೆಯಾಗಬಾರದೆಲ್ಲ! ಹೀಗೆ ಕೆಲವು ‘ಭಯಂಕರ’ ಮಾಧ್ಯಮಗಳ ವೈಭವೀಕೃತ ವರದಿಗಳಿಗೆ ಬೆಚ್ಚಿಬಿದ್ದು ಇಂತಹ ಸಂದಿಗ್ಧ ಸಂದರ್ಭದಲ್ಲಿ ಒಬ್ಬರ ಬೆನ್ನಿಗೆ ಒಬ್ಬರು ನಿಲ್ಲುಬೇಕಿರುವ ಸಮಯದಲ್ಲಿ ವಿವೇಕ ಕಳೆದುಕೊಳ್ಳಬಾರದಲ್ಲವೇ?


ಇದನ್ನು ಓದಿ: ‘ಪಕ್ಷದ ಬಾಗಿಲು ಮುಚ್ಚಿಲ್ಲ’: ಬಿಜೆಪಿ ಸೇರುವುದಿಲ್ಲ ಎಂದ ಪೈಲಟ್‌ಗೆ ಕಾಂಗ್ರೆಸ್ ಪ್ರತಿಕ್ರಿಯೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...