Homeಮುಖಪುಟತಮ್ಮ ಭೂಮಿ ಆಕ್ರಮಿಸಿದ್ದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಕ್ಕೆ ದಲಿತ ಯುವಕನ ಹತ್ಯೆ

ತಮ್ಮ ಭೂಮಿ ಆಕ್ರಮಿಸಿದ್ದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಕ್ಕೆ ದಲಿತ ಯುವಕನ ಹತ್ಯೆ

ದಲಿತರಾಗಿರದಿದ್ದರೆ ತಮ್ಮ ಮಗನನ್ನು ಕೊಲ್ಲಲಾಗುತ್ತಿರಲಿಲ್ಲ ಎಂದು ಕುಟುಂಬವು ಪ್ರತಿಪಾದಿಸಿದೆ.

- Advertisement -
- Advertisement -

ಜಮ್ಮುವಿನ ಉಧಂಪುರ ಜಿಲ್ಲೆಯ ದಂಡಿಯಾಲ್ ಗ್ರಾಮದಲ್ಲಿ ಜುಲೈ 2 ರಂದು ಹಾಡಹಗಲೆ 26 ವರ್ಷದ ರಾಹುಲ್ ಭಗತ್ ಎಂಬ ದಲಿತ ಯುವಕನನ್ನು ಭೂವಿವಾದಲ್ಲಿ ಹತ್ಯೆ ಮಾಡಲಾಗಿದೆ. ಬೈಕ್ ಮೆಕ್ಯಾನಿಕ್ ಆಗಿದ್ದ ಭಗತ್ ಬೆಳಿಗ್ಗೆ 11 ಗಂಟೆಗೆ ಕೆಲವು ದಾಖಲೆಗಳನ್ನು ತರಲು ಪೊಲೀಸ್ ಠಾಣೆಯಿಂದ ಮನೆಗೆ ತೆರಳುತ್ತಿದ್ದಾಗ  ಬೆನ್ನಟ್ಟಿ ಕೊಲೆ ಮಾಡಲಾಗಿದ್ದು, ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಉದಂಪೂರ್ ಠಾಣಾ ಅಧಿಕಾರಿ ವಿಜಯ್ ಚೌದರಿ, ’ಭಗತ್ ಪ್ರಸ್ತುತ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವ ಭೂ ವಿವಾದ ಭಾಗಿಯಾಗಿದ್ದು, ಭೂ ವಿವಾದಕ್ಕಾಗಿ ಯುವಕನನ್ನು ಕೊಲ್ಲಲಾಯಿತು. ಇದು ಲ್ಯಾಂಡ್ ಮಾಫಿಯಾದ ಪ್ರಕರಣವಾಗಿದ್ದು, ಈ ಬಗ್ಗೆ ತನಿಖೆ ನಡೆಸಲು ಎಸ್‌ಐಟಿ ರಚಿಸಲಾಗಿದೆ’ ಎಂದು ಹೇಳಿದ್ದಾರೆ.

ಆದರೆ ಗ್ರಾಮದ ನಿವಾಸಿಗಳು, ಸಂತ್ರಸ್ತನು ತನ್ನ ಜಮೀನನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿರುವವರ ಬಗ್ಗೆ ನ್ಯಾಯಾಲಯವನ್ನು ಸಂಪರ್ಕಿಸಿದ ನಂತರ ವಿವಾದ ಉಂಟಾಯಿತು ಎಂದಿದ್ದಾರೆ.

“ಹಲವು ವರ್ಷಗಳ ಹಿಂದೆ ಭಗತ್‌ನ ಅನಕ್ಷರಸ್ಥ ಅಜ್ಜ ಹಳ್ಳಿಯ ಕೆಲವರಿಗೆ ಭೂಮಿಯನ್ನು ಮಾರಿದ್ದು, ಅವರ ಮರಣದ ನಂತರ ಮೇಲ್ಜಾತಿಯ ಜನರನ್ನೊಳಗೊಂಡ ಲ್ಯಾಂಡ್ ಮಾಫಿಯಾವು ಸಂಪೂರ್ಣ ಭೂಮಿಯನ್ನು ಅಕ್ರಮವಾಗಿ ಆಕ್ರಮಿಸಲು ಪ್ರಾರಂಭಿಸಿತು. ಅದಕ್ಕಾಗಿ ನ್ಯಾಯಾಲಯದಲ್ಲಿ ಹೂಡಿದ್ದ ದಾವೆಯನ್ನು ಹಿಂಪಡೆಯುವಂತೆ ಕುಟುಂಬಕ್ಕೆ ಬೆದರಿಕೆ ಹಾಕಿದ್ದರು, ದಾವೆಯನ್ನು ಕುಟುಂಬ ಮುಂದುವರೆಸಿತ್ತು” ಎಂದು ಗ್ರಾಮಸ್ಥರಾದ ಕಬೀರ್ ಸಂಘಟನ್ ಅಧ್ಯಕ್ಷ ರಾಮ್ ಲಾಲ್ ಹೇಳಿದ್ದಾರೆ.

ಪೊಲೀಸರು ಜಾತಿ ಆಧಾರದಲ್ಲಿ ಹತ್ಯೆ ಆಗಿಲ್ಲ ಎಂದು ಹೇಳುತ್ತಿದ್ದರೆ ದಲಿತರಾಗಿರದಿದ್ದರೆ ತಮ್ಮ ಮಗನನ್ನು ಕೊಲ್ಲಲಾಗುತ್ತಿರಲಿಲ್ಲ ಎಂದು ಕುಟುಂಬವು ಪ್ರತಿಪಾದಿಸಿದೆ.

ರಾಹುಲ್ ಭಗತ್‌ಗೆ ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಿ ಜಮ್ಮುವಿನಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದು, “ಜಾತಿ ತಾರತಮ್ಯವನ್ನು ನಿಲ್ಲಿಸಿ”, “ದಲಿತ ಲೈವ್ಸ್ ಮ್ಯಾಟರ್,” “ಜಸ್ಟೀಸ್ ಫಾರ್ ರಾಹುಲ್ ಭಗತ್” ಫಲಕಗಳನ್ನು ಹಿಡಿದು ಪ್ರತಿಭಟನೆಗಳು ನಡೆಯುತ್ತಿದೆ.

ಚಿತ್ರ ಕೃಪೆ: ನ್ಯೂಸ್ ಕ್ಲಿಕ್

“ಇದು ಜಾತಿ ಹಿಂಸಾಚಾರದ ಶುದ್ಧ ಪ್ರಕರಣವಾಗಿದ್ದು. ಮೃತ ದೇಹವನ್ನು ಬಹುತೇಕ ವಿರೂಪಗೊಳಿಸಿ ದಲಿತರಲ್ಲಿ ಭಯ ಹುಟ್ಟಿಸುಂತೆ ಮಾಡಲಾಗಿದೆ. ಅವರು ಯಾವುದೇ ದಲಿತರು ಮತ್ತೆ ಧ್ವನಿ ಎತ್ತದಂತೆ ಬಯಸಿದ್ದರು. ಇದು ಮೊದಲ ಪ್ರಕರಣವಲ್ಲ. ಈ ಹಿಂದೆ ಇದೇ ರೀತಿಯ ಘಟನೆಗಳು ನಡೆದಿವೆ ಹಾಗೂ ಪೊಲೀಸರು ಯಾವಾಗಲೂ ಪ್ರಕರಣಗಳನ್ನು ಭೂ ವಿವಾದಗಳು ಎಂದು ಮುಚ್ಚಿ ಹಾಕುತ್ತಾರೆ. ಈಗ ನಾವು ಸುಮ್ಮನಿರುವುದಿಲ್ಲ” ಎಂದು ಅಂಬೇಡ್ಕರ್ ಯುವ ಸಂಘಟನ್ ಅಧ್ಯಕ್ಷ ಸತೀಶ್ ವಿದ್ರೋಹಿ ಹೇಳಿದ್ದಾರೆ.

ಸ್ಥಳೀಯ ಉಧಂಪುರ್ ಪೊಲೀಸರು  ಆರೋಪಿಗಳ ಪರವಾಗಿದ್ದು ಹಾಗೂ ಹತ್ಯೆಯಲ್ಲಿ ಪೊಲೀಸರು ಕೂಡಾ ಭಾಗಿಯಾಗಿದ್ದಾರೆ ಆದ್ದರಿಂದ ಪ್ರಕರಣವನ್ನು ಹೊರಗಿನಿಂದ ತನಿಖೆ ನಡೆಸಬೇಕೆಂದು ಹತ್ಯಗೀಡಾದ ಭಗತ್ ಕುಟುಂಬ ಹಾಗೂ ಸಾಮಾಜಿಕ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಯಾಕೆಂದರೆ ಪೊಲೀಸ್ ಠಾಣೆಯಿಂದ ಭಗತ್ ಒಬ್ಬಂಟಿಯಾಗಿ ಹೋಗುತ್ತಿದ್ದಾರೆ ಎಂದು ಹಂತಕರಿಗೆ ಹೇಗೆ ಗೊತ್ತಾಯಿತು ಎಂಬ ಪ್ರಶ್ನೆಯನ್ನು ಸಾಮಾಜಿಕ ಕಾರ್ಯಕರ್ತರು ಇಟ್ಟಿದ್ದಾರೆ. 


ಓದಿ: ಭಾರತದಲ್ಲಿ ನಿತ್ಯ ಐದು ಕಸ್ಟಡಿ ಸಾವು; ಬಹುತೇಕರು ಮುಸ್ಲಿಮರು, ದಲಿತರು ಮತ್ತು ಅಂಚಿಗೆ ತಳ್ಳಲ್ಪಟ್ಟವರು!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...