Homeಮುಖಪುಟತಮ್ಮ ಭೂಮಿ ಆಕ್ರಮಿಸಿದ್ದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಕ್ಕೆ ದಲಿತ ಯುವಕನ ಹತ್ಯೆ

ತಮ್ಮ ಭೂಮಿ ಆಕ್ರಮಿಸಿದ್ದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಕ್ಕೆ ದಲಿತ ಯುವಕನ ಹತ್ಯೆ

ದಲಿತರಾಗಿರದಿದ್ದರೆ ತಮ್ಮ ಮಗನನ್ನು ಕೊಲ್ಲಲಾಗುತ್ತಿರಲಿಲ್ಲ ಎಂದು ಕುಟುಂಬವು ಪ್ರತಿಪಾದಿಸಿದೆ.

- Advertisement -
- Advertisement -

ಜಮ್ಮುವಿನ ಉಧಂಪುರ ಜಿಲ್ಲೆಯ ದಂಡಿಯಾಲ್ ಗ್ರಾಮದಲ್ಲಿ ಜುಲೈ 2 ರಂದು ಹಾಡಹಗಲೆ 26 ವರ್ಷದ ರಾಹುಲ್ ಭಗತ್ ಎಂಬ ದಲಿತ ಯುವಕನನ್ನು ಭೂವಿವಾದಲ್ಲಿ ಹತ್ಯೆ ಮಾಡಲಾಗಿದೆ. ಬೈಕ್ ಮೆಕ್ಯಾನಿಕ್ ಆಗಿದ್ದ ಭಗತ್ ಬೆಳಿಗ್ಗೆ 11 ಗಂಟೆಗೆ ಕೆಲವು ದಾಖಲೆಗಳನ್ನು ತರಲು ಪೊಲೀಸ್ ಠಾಣೆಯಿಂದ ಮನೆಗೆ ತೆರಳುತ್ತಿದ್ದಾಗ  ಬೆನ್ನಟ್ಟಿ ಕೊಲೆ ಮಾಡಲಾಗಿದ್ದು, ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಉದಂಪೂರ್ ಠಾಣಾ ಅಧಿಕಾರಿ ವಿಜಯ್ ಚೌದರಿ, ’ಭಗತ್ ಪ್ರಸ್ತುತ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವ ಭೂ ವಿವಾದ ಭಾಗಿಯಾಗಿದ್ದು, ಭೂ ವಿವಾದಕ್ಕಾಗಿ ಯುವಕನನ್ನು ಕೊಲ್ಲಲಾಯಿತು. ಇದು ಲ್ಯಾಂಡ್ ಮಾಫಿಯಾದ ಪ್ರಕರಣವಾಗಿದ್ದು, ಈ ಬಗ್ಗೆ ತನಿಖೆ ನಡೆಸಲು ಎಸ್‌ಐಟಿ ರಚಿಸಲಾಗಿದೆ’ ಎಂದು ಹೇಳಿದ್ದಾರೆ.

ಆದರೆ ಗ್ರಾಮದ ನಿವಾಸಿಗಳು, ಸಂತ್ರಸ್ತನು ತನ್ನ ಜಮೀನನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿರುವವರ ಬಗ್ಗೆ ನ್ಯಾಯಾಲಯವನ್ನು ಸಂಪರ್ಕಿಸಿದ ನಂತರ ವಿವಾದ ಉಂಟಾಯಿತು ಎಂದಿದ್ದಾರೆ.

“ಹಲವು ವರ್ಷಗಳ ಹಿಂದೆ ಭಗತ್‌ನ ಅನಕ್ಷರಸ್ಥ ಅಜ್ಜ ಹಳ್ಳಿಯ ಕೆಲವರಿಗೆ ಭೂಮಿಯನ್ನು ಮಾರಿದ್ದು, ಅವರ ಮರಣದ ನಂತರ ಮೇಲ್ಜಾತಿಯ ಜನರನ್ನೊಳಗೊಂಡ ಲ್ಯಾಂಡ್ ಮಾಫಿಯಾವು ಸಂಪೂರ್ಣ ಭೂಮಿಯನ್ನು ಅಕ್ರಮವಾಗಿ ಆಕ್ರಮಿಸಲು ಪ್ರಾರಂಭಿಸಿತು. ಅದಕ್ಕಾಗಿ ನ್ಯಾಯಾಲಯದಲ್ಲಿ ಹೂಡಿದ್ದ ದಾವೆಯನ್ನು ಹಿಂಪಡೆಯುವಂತೆ ಕುಟುಂಬಕ್ಕೆ ಬೆದರಿಕೆ ಹಾಕಿದ್ದರು, ದಾವೆಯನ್ನು ಕುಟುಂಬ ಮುಂದುವರೆಸಿತ್ತು” ಎಂದು ಗ್ರಾಮಸ್ಥರಾದ ಕಬೀರ್ ಸಂಘಟನ್ ಅಧ್ಯಕ್ಷ ರಾಮ್ ಲಾಲ್ ಹೇಳಿದ್ದಾರೆ.

ಪೊಲೀಸರು ಜಾತಿ ಆಧಾರದಲ್ಲಿ ಹತ್ಯೆ ಆಗಿಲ್ಲ ಎಂದು ಹೇಳುತ್ತಿದ್ದರೆ ದಲಿತರಾಗಿರದಿದ್ದರೆ ತಮ್ಮ ಮಗನನ್ನು ಕೊಲ್ಲಲಾಗುತ್ತಿರಲಿಲ್ಲ ಎಂದು ಕುಟುಂಬವು ಪ್ರತಿಪಾದಿಸಿದೆ.

ರಾಹುಲ್ ಭಗತ್‌ಗೆ ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಿ ಜಮ್ಮುವಿನಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದು, “ಜಾತಿ ತಾರತಮ್ಯವನ್ನು ನಿಲ್ಲಿಸಿ”, “ದಲಿತ ಲೈವ್ಸ್ ಮ್ಯಾಟರ್,” “ಜಸ್ಟೀಸ್ ಫಾರ್ ರಾಹುಲ್ ಭಗತ್” ಫಲಕಗಳನ್ನು ಹಿಡಿದು ಪ್ರತಿಭಟನೆಗಳು ನಡೆಯುತ್ತಿದೆ.

ಚಿತ್ರ ಕೃಪೆ: ನ್ಯೂಸ್ ಕ್ಲಿಕ್

“ಇದು ಜಾತಿ ಹಿಂಸಾಚಾರದ ಶುದ್ಧ ಪ್ರಕರಣವಾಗಿದ್ದು. ಮೃತ ದೇಹವನ್ನು ಬಹುತೇಕ ವಿರೂಪಗೊಳಿಸಿ ದಲಿತರಲ್ಲಿ ಭಯ ಹುಟ್ಟಿಸುಂತೆ ಮಾಡಲಾಗಿದೆ. ಅವರು ಯಾವುದೇ ದಲಿತರು ಮತ್ತೆ ಧ್ವನಿ ಎತ್ತದಂತೆ ಬಯಸಿದ್ದರು. ಇದು ಮೊದಲ ಪ್ರಕರಣವಲ್ಲ. ಈ ಹಿಂದೆ ಇದೇ ರೀತಿಯ ಘಟನೆಗಳು ನಡೆದಿವೆ ಹಾಗೂ ಪೊಲೀಸರು ಯಾವಾಗಲೂ ಪ್ರಕರಣಗಳನ್ನು ಭೂ ವಿವಾದಗಳು ಎಂದು ಮುಚ್ಚಿ ಹಾಕುತ್ತಾರೆ. ಈಗ ನಾವು ಸುಮ್ಮನಿರುವುದಿಲ್ಲ” ಎಂದು ಅಂಬೇಡ್ಕರ್ ಯುವ ಸಂಘಟನ್ ಅಧ್ಯಕ್ಷ ಸತೀಶ್ ವಿದ್ರೋಹಿ ಹೇಳಿದ್ದಾರೆ.

ಸ್ಥಳೀಯ ಉಧಂಪುರ್ ಪೊಲೀಸರು  ಆರೋಪಿಗಳ ಪರವಾಗಿದ್ದು ಹಾಗೂ ಹತ್ಯೆಯಲ್ಲಿ ಪೊಲೀಸರು ಕೂಡಾ ಭಾಗಿಯಾಗಿದ್ದಾರೆ ಆದ್ದರಿಂದ ಪ್ರಕರಣವನ್ನು ಹೊರಗಿನಿಂದ ತನಿಖೆ ನಡೆಸಬೇಕೆಂದು ಹತ್ಯಗೀಡಾದ ಭಗತ್ ಕುಟುಂಬ ಹಾಗೂ ಸಾಮಾಜಿಕ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಯಾಕೆಂದರೆ ಪೊಲೀಸ್ ಠಾಣೆಯಿಂದ ಭಗತ್ ಒಬ್ಬಂಟಿಯಾಗಿ ಹೋಗುತ್ತಿದ್ದಾರೆ ಎಂದು ಹಂತಕರಿಗೆ ಹೇಗೆ ಗೊತ್ತಾಯಿತು ಎಂಬ ಪ್ರಶ್ನೆಯನ್ನು ಸಾಮಾಜಿಕ ಕಾರ್ಯಕರ್ತರು ಇಟ್ಟಿದ್ದಾರೆ. 


ಓದಿ: ಭಾರತದಲ್ಲಿ ನಿತ್ಯ ಐದು ಕಸ್ಟಡಿ ಸಾವು; ಬಹುತೇಕರು ಮುಸ್ಲಿಮರು, ದಲಿತರು ಮತ್ತು ಅಂಚಿಗೆ ತಳ್ಳಲ್ಪಟ್ಟವರು!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...