Homeಮುಖಪುಟತಮ್ಮ ಭೂಮಿ ಆಕ್ರಮಿಸಿದ್ದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಕ್ಕೆ ದಲಿತ ಯುವಕನ ಹತ್ಯೆ

ತಮ್ಮ ಭೂಮಿ ಆಕ್ರಮಿಸಿದ್ದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಕ್ಕೆ ದಲಿತ ಯುವಕನ ಹತ್ಯೆ

ದಲಿತರಾಗಿರದಿದ್ದರೆ ತಮ್ಮ ಮಗನನ್ನು ಕೊಲ್ಲಲಾಗುತ್ತಿರಲಿಲ್ಲ ಎಂದು ಕುಟುಂಬವು ಪ್ರತಿಪಾದಿಸಿದೆ.

- Advertisement -
- Advertisement -

ಜಮ್ಮುವಿನ ಉಧಂಪುರ ಜಿಲ್ಲೆಯ ದಂಡಿಯಾಲ್ ಗ್ರಾಮದಲ್ಲಿ ಜುಲೈ 2 ರಂದು ಹಾಡಹಗಲೆ 26 ವರ್ಷದ ರಾಹುಲ್ ಭಗತ್ ಎಂಬ ದಲಿತ ಯುವಕನನ್ನು ಭೂವಿವಾದಲ್ಲಿ ಹತ್ಯೆ ಮಾಡಲಾಗಿದೆ. ಬೈಕ್ ಮೆಕ್ಯಾನಿಕ್ ಆಗಿದ್ದ ಭಗತ್ ಬೆಳಿಗ್ಗೆ 11 ಗಂಟೆಗೆ ಕೆಲವು ದಾಖಲೆಗಳನ್ನು ತರಲು ಪೊಲೀಸ್ ಠಾಣೆಯಿಂದ ಮನೆಗೆ ತೆರಳುತ್ತಿದ್ದಾಗ  ಬೆನ್ನಟ್ಟಿ ಕೊಲೆ ಮಾಡಲಾಗಿದ್ದು, ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಉದಂಪೂರ್ ಠಾಣಾ ಅಧಿಕಾರಿ ವಿಜಯ್ ಚೌದರಿ, ’ಭಗತ್ ಪ್ರಸ್ತುತ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವ ಭೂ ವಿವಾದ ಭಾಗಿಯಾಗಿದ್ದು, ಭೂ ವಿವಾದಕ್ಕಾಗಿ ಯುವಕನನ್ನು ಕೊಲ್ಲಲಾಯಿತು. ಇದು ಲ್ಯಾಂಡ್ ಮಾಫಿಯಾದ ಪ್ರಕರಣವಾಗಿದ್ದು, ಈ ಬಗ್ಗೆ ತನಿಖೆ ನಡೆಸಲು ಎಸ್‌ಐಟಿ ರಚಿಸಲಾಗಿದೆ’ ಎಂದು ಹೇಳಿದ್ದಾರೆ.

ಆದರೆ ಗ್ರಾಮದ ನಿವಾಸಿಗಳು, ಸಂತ್ರಸ್ತನು ತನ್ನ ಜಮೀನನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿರುವವರ ಬಗ್ಗೆ ನ್ಯಾಯಾಲಯವನ್ನು ಸಂಪರ್ಕಿಸಿದ ನಂತರ ವಿವಾದ ಉಂಟಾಯಿತು ಎಂದಿದ್ದಾರೆ.

“ಹಲವು ವರ್ಷಗಳ ಹಿಂದೆ ಭಗತ್‌ನ ಅನಕ್ಷರಸ್ಥ ಅಜ್ಜ ಹಳ್ಳಿಯ ಕೆಲವರಿಗೆ ಭೂಮಿಯನ್ನು ಮಾರಿದ್ದು, ಅವರ ಮರಣದ ನಂತರ ಮೇಲ್ಜಾತಿಯ ಜನರನ್ನೊಳಗೊಂಡ ಲ್ಯಾಂಡ್ ಮಾಫಿಯಾವು ಸಂಪೂರ್ಣ ಭೂಮಿಯನ್ನು ಅಕ್ರಮವಾಗಿ ಆಕ್ರಮಿಸಲು ಪ್ರಾರಂಭಿಸಿತು. ಅದಕ್ಕಾಗಿ ನ್ಯಾಯಾಲಯದಲ್ಲಿ ಹೂಡಿದ್ದ ದಾವೆಯನ್ನು ಹಿಂಪಡೆಯುವಂತೆ ಕುಟುಂಬಕ್ಕೆ ಬೆದರಿಕೆ ಹಾಕಿದ್ದರು, ದಾವೆಯನ್ನು ಕುಟುಂಬ ಮುಂದುವರೆಸಿತ್ತು” ಎಂದು ಗ್ರಾಮಸ್ಥರಾದ ಕಬೀರ್ ಸಂಘಟನ್ ಅಧ್ಯಕ್ಷ ರಾಮ್ ಲಾಲ್ ಹೇಳಿದ್ದಾರೆ.

ಪೊಲೀಸರು ಜಾತಿ ಆಧಾರದಲ್ಲಿ ಹತ್ಯೆ ಆಗಿಲ್ಲ ಎಂದು ಹೇಳುತ್ತಿದ್ದರೆ ದಲಿತರಾಗಿರದಿದ್ದರೆ ತಮ್ಮ ಮಗನನ್ನು ಕೊಲ್ಲಲಾಗುತ್ತಿರಲಿಲ್ಲ ಎಂದು ಕುಟುಂಬವು ಪ್ರತಿಪಾದಿಸಿದೆ.

ರಾಹುಲ್ ಭಗತ್‌ಗೆ ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಿ ಜಮ್ಮುವಿನಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದು, “ಜಾತಿ ತಾರತಮ್ಯವನ್ನು ನಿಲ್ಲಿಸಿ”, “ದಲಿತ ಲೈವ್ಸ್ ಮ್ಯಾಟರ್,” “ಜಸ್ಟೀಸ್ ಫಾರ್ ರಾಹುಲ್ ಭಗತ್” ಫಲಕಗಳನ್ನು ಹಿಡಿದು ಪ್ರತಿಭಟನೆಗಳು ನಡೆಯುತ್ತಿದೆ.

ಚಿತ್ರ ಕೃಪೆ: ನ್ಯೂಸ್ ಕ್ಲಿಕ್

“ಇದು ಜಾತಿ ಹಿಂಸಾಚಾರದ ಶುದ್ಧ ಪ್ರಕರಣವಾಗಿದ್ದು. ಮೃತ ದೇಹವನ್ನು ಬಹುತೇಕ ವಿರೂಪಗೊಳಿಸಿ ದಲಿತರಲ್ಲಿ ಭಯ ಹುಟ್ಟಿಸುಂತೆ ಮಾಡಲಾಗಿದೆ. ಅವರು ಯಾವುದೇ ದಲಿತರು ಮತ್ತೆ ಧ್ವನಿ ಎತ್ತದಂತೆ ಬಯಸಿದ್ದರು. ಇದು ಮೊದಲ ಪ್ರಕರಣವಲ್ಲ. ಈ ಹಿಂದೆ ಇದೇ ರೀತಿಯ ಘಟನೆಗಳು ನಡೆದಿವೆ ಹಾಗೂ ಪೊಲೀಸರು ಯಾವಾಗಲೂ ಪ್ರಕರಣಗಳನ್ನು ಭೂ ವಿವಾದಗಳು ಎಂದು ಮುಚ್ಚಿ ಹಾಕುತ್ತಾರೆ. ಈಗ ನಾವು ಸುಮ್ಮನಿರುವುದಿಲ್ಲ” ಎಂದು ಅಂಬೇಡ್ಕರ್ ಯುವ ಸಂಘಟನ್ ಅಧ್ಯಕ್ಷ ಸತೀಶ್ ವಿದ್ರೋಹಿ ಹೇಳಿದ್ದಾರೆ.

ಸ್ಥಳೀಯ ಉಧಂಪುರ್ ಪೊಲೀಸರು  ಆರೋಪಿಗಳ ಪರವಾಗಿದ್ದು ಹಾಗೂ ಹತ್ಯೆಯಲ್ಲಿ ಪೊಲೀಸರು ಕೂಡಾ ಭಾಗಿಯಾಗಿದ್ದಾರೆ ಆದ್ದರಿಂದ ಪ್ರಕರಣವನ್ನು ಹೊರಗಿನಿಂದ ತನಿಖೆ ನಡೆಸಬೇಕೆಂದು ಹತ್ಯಗೀಡಾದ ಭಗತ್ ಕುಟುಂಬ ಹಾಗೂ ಸಾಮಾಜಿಕ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಯಾಕೆಂದರೆ ಪೊಲೀಸ್ ಠಾಣೆಯಿಂದ ಭಗತ್ ಒಬ್ಬಂಟಿಯಾಗಿ ಹೋಗುತ್ತಿದ್ದಾರೆ ಎಂದು ಹಂತಕರಿಗೆ ಹೇಗೆ ಗೊತ್ತಾಯಿತು ಎಂಬ ಪ್ರಶ್ನೆಯನ್ನು ಸಾಮಾಜಿಕ ಕಾರ್ಯಕರ್ತರು ಇಟ್ಟಿದ್ದಾರೆ. 


ಓದಿ: ಭಾರತದಲ್ಲಿ ನಿತ್ಯ ಐದು ಕಸ್ಟಡಿ ಸಾವು; ಬಹುತೇಕರು ಮುಸ್ಲಿಮರು, ದಲಿತರು ಮತ್ತು ಅಂಚಿಗೆ ತಳ್ಳಲ್ಪಟ್ಟವರು!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...