Homeಮುಖಪುಟತಮ್ಮ ಭೂಮಿ ಆಕ್ರಮಿಸಿದ್ದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಕ್ಕೆ ದಲಿತ ಯುವಕನ ಹತ್ಯೆ

ತಮ್ಮ ಭೂಮಿ ಆಕ್ರಮಿಸಿದ್ದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಕ್ಕೆ ದಲಿತ ಯುವಕನ ಹತ್ಯೆ

ದಲಿತರಾಗಿರದಿದ್ದರೆ ತಮ್ಮ ಮಗನನ್ನು ಕೊಲ್ಲಲಾಗುತ್ತಿರಲಿಲ್ಲ ಎಂದು ಕುಟುಂಬವು ಪ್ರತಿಪಾದಿಸಿದೆ.

- Advertisement -
- Advertisement -

ಜಮ್ಮುವಿನ ಉಧಂಪುರ ಜಿಲ್ಲೆಯ ದಂಡಿಯಾಲ್ ಗ್ರಾಮದಲ್ಲಿ ಜುಲೈ 2 ರಂದು ಹಾಡಹಗಲೆ 26 ವರ್ಷದ ರಾಹುಲ್ ಭಗತ್ ಎಂಬ ದಲಿತ ಯುವಕನನ್ನು ಭೂವಿವಾದಲ್ಲಿ ಹತ್ಯೆ ಮಾಡಲಾಗಿದೆ. ಬೈಕ್ ಮೆಕ್ಯಾನಿಕ್ ಆಗಿದ್ದ ಭಗತ್ ಬೆಳಿಗ್ಗೆ 11 ಗಂಟೆಗೆ ಕೆಲವು ದಾಖಲೆಗಳನ್ನು ತರಲು ಪೊಲೀಸ್ ಠಾಣೆಯಿಂದ ಮನೆಗೆ ತೆರಳುತ್ತಿದ್ದಾಗ  ಬೆನ್ನಟ್ಟಿ ಕೊಲೆ ಮಾಡಲಾಗಿದ್ದು, ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಉದಂಪೂರ್ ಠಾಣಾ ಅಧಿಕಾರಿ ವಿಜಯ್ ಚೌದರಿ, ’ಭಗತ್ ಪ್ರಸ್ತುತ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವ ಭೂ ವಿವಾದ ಭಾಗಿಯಾಗಿದ್ದು, ಭೂ ವಿವಾದಕ್ಕಾಗಿ ಯುವಕನನ್ನು ಕೊಲ್ಲಲಾಯಿತು. ಇದು ಲ್ಯಾಂಡ್ ಮಾಫಿಯಾದ ಪ್ರಕರಣವಾಗಿದ್ದು, ಈ ಬಗ್ಗೆ ತನಿಖೆ ನಡೆಸಲು ಎಸ್‌ಐಟಿ ರಚಿಸಲಾಗಿದೆ’ ಎಂದು ಹೇಳಿದ್ದಾರೆ.

ಆದರೆ ಗ್ರಾಮದ ನಿವಾಸಿಗಳು, ಸಂತ್ರಸ್ತನು ತನ್ನ ಜಮೀನನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿರುವವರ ಬಗ್ಗೆ ನ್ಯಾಯಾಲಯವನ್ನು ಸಂಪರ್ಕಿಸಿದ ನಂತರ ವಿವಾದ ಉಂಟಾಯಿತು ಎಂದಿದ್ದಾರೆ.

“ಹಲವು ವರ್ಷಗಳ ಹಿಂದೆ ಭಗತ್‌ನ ಅನಕ್ಷರಸ್ಥ ಅಜ್ಜ ಹಳ್ಳಿಯ ಕೆಲವರಿಗೆ ಭೂಮಿಯನ್ನು ಮಾರಿದ್ದು, ಅವರ ಮರಣದ ನಂತರ ಮೇಲ್ಜಾತಿಯ ಜನರನ್ನೊಳಗೊಂಡ ಲ್ಯಾಂಡ್ ಮಾಫಿಯಾವು ಸಂಪೂರ್ಣ ಭೂಮಿಯನ್ನು ಅಕ್ರಮವಾಗಿ ಆಕ್ರಮಿಸಲು ಪ್ರಾರಂಭಿಸಿತು. ಅದಕ್ಕಾಗಿ ನ್ಯಾಯಾಲಯದಲ್ಲಿ ಹೂಡಿದ್ದ ದಾವೆಯನ್ನು ಹಿಂಪಡೆಯುವಂತೆ ಕುಟುಂಬಕ್ಕೆ ಬೆದರಿಕೆ ಹಾಕಿದ್ದರು, ದಾವೆಯನ್ನು ಕುಟುಂಬ ಮುಂದುವರೆಸಿತ್ತು” ಎಂದು ಗ್ರಾಮಸ್ಥರಾದ ಕಬೀರ್ ಸಂಘಟನ್ ಅಧ್ಯಕ್ಷ ರಾಮ್ ಲಾಲ್ ಹೇಳಿದ್ದಾರೆ.

ಪೊಲೀಸರು ಜಾತಿ ಆಧಾರದಲ್ಲಿ ಹತ್ಯೆ ಆಗಿಲ್ಲ ಎಂದು ಹೇಳುತ್ತಿದ್ದರೆ ದಲಿತರಾಗಿರದಿದ್ದರೆ ತಮ್ಮ ಮಗನನ್ನು ಕೊಲ್ಲಲಾಗುತ್ತಿರಲಿಲ್ಲ ಎಂದು ಕುಟುಂಬವು ಪ್ರತಿಪಾದಿಸಿದೆ.

ರಾಹುಲ್ ಭಗತ್‌ಗೆ ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಿ ಜಮ್ಮುವಿನಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದು, “ಜಾತಿ ತಾರತಮ್ಯವನ್ನು ನಿಲ್ಲಿಸಿ”, “ದಲಿತ ಲೈವ್ಸ್ ಮ್ಯಾಟರ್,” “ಜಸ್ಟೀಸ್ ಫಾರ್ ರಾಹುಲ್ ಭಗತ್” ಫಲಕಗಳನ್ನು ಹಿಡಿದು ಪ್ರತಿಭಟನೆಗಳು ನಡೆಯುತ್ತಿದೆ.

ಚಿತ್ರ ಕೃಪೆ: ನ್ಯೂಸ್ ಕ್ಲಿಕ್

“ಇದು ಜಾತಿ ಹಿಂಸಾಚಾರದ ಶುದ್ಧ ಪ್ರಕರಣವಾಗಿದ್ದು. ಮೃತ ದೇಹವನ್ನು ಬಹುತೇಕ ವಿರೂಪಗೊಳಿಸಿ ದಲಿತರಲ್ಲಿ ಭಯ ಹುಟ್ಟಿಸುಂತೆ ಮಾಡಲಾಗಿದೆ. ಅವರು ಯಾವುದೇ ದಲಿತರು ಮತ್ತೆ ಧ್ವನಿ ಎತ್ತದಂತೆ ಬಯಸಿದ್ದರು. ಇದು ಮೊದಲ ಪ್ರಕರಣವಲ್ಲ. ಈ ಹಿಂದೆ ಇದೇ ರೀತಿಯ ಘಟನೆಗಳು ನಡೆದಿವೆ ಹಾಗೂ ಪೊಲೀಸರು ಯಾವಾಗಲೂ ಪ್ರಕರಣಗಳನ್ನು ಭೂ ವಿವಾದಗಳು ಎಂದು ಮುಚ್ಚಿ ಹಾಕುತ್ತಾರೆ. ಈಗ ನಾವು ಸುಮ್ಮನಿರುವುದಿಲ್ಲ” ಎಂದು ಅಂಬೇಡ್ಕರ್ ಯುವ ಸಂಘಟನ್ ಅಧ್ಯಕ್ಷ ಸತೀಶ್ ವಿದ್ರೋಹಿ ಹೇಳಿದ್ದಾರೆ.

ಸ್ಥಳೀಯ ಉಧಂಪುರ್ ಪೊಲೀಸರು  ಆರೋಪಿಗಳ ಪರವಾಗಿದ್ದು ಹಾಗೂ ಹತ್ಯೆಯಲ್ಲಿ ಪೊಲೀಸರು ಕೂಡಾ ಭಾಗಿಯಾಗಿದ್ದಾರೆ ಆದ್ದರಿಂದ ಪ್ರಕರಣವನ್ನು ಹೊರಗಿನಿಂದ ತನಿಖೆ ನಡೆಸಬೇಕೆಂದು ಹತ್ಯಗೀಡಾದ ಭಗತ್ ಕುಟುಂಬ ಹಾಗೂ ಸಾಮಾಜಿಕ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಯಾಕೆಂದರೆ ಪೊಲೀಸ್ ಠಾಣೆಯಿಂದ ಭಗತ್ ಒಬ್ಬಂಟಿಯಾಗಿ ಹೋಗುತ್ತಿದ್ದಾರೆ ಎಂದು ಹಂತಕರಿಗೆ ಹೇಗೆ ಗೊತ್ತಾಯಿತು ಎಂಬ ಪ್ರಶ್ನೆಯನ್ನು ಸಾಮಾಜಿಕ ಕಾರ್ಯಕರ್ತರು ಇಟ್ಟಿದ್ದಾರೆ. 


ಓದಿ: ಭಾರತದಲ್ಲಿ ನಿತ್ಯ ಐದು ಕಸ್ಟಡಿ ಸಾವು; ಬಹುತೇಕರು ಮುಸ್ಲಿಮರು, ದಲಿತರು ಮತ್ತು ಅಂಚಿಗೆ ತಳ್ಳಲ್ಪಟ್ಟವರು!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...