Homeಮುಖಪುಟಮಾದರಿ ಪುಸ್ತಕಪ್ರೇಮಿ: ಕಟಿಂಗ್ ಶಾಪ್ ನಲ್ಲಿ ಪುಟ್ಟ ಗ್ರಂಥಾಲಯ, ಪುಸ್ತಕ ಓದು ಅಭಿಯಾನ

ಮಾದರಿ ಪುಸ್ತಕಪ್ರೇಮಿ: ಕಟಿಂಗ್ ಶಾಪ್ ನಲ್ಲಿ ಪುಟ್ಟ ಗ್ರಂಥಾಲಯ, ಪುಸ್ತಕ ಓದು ಅಭಿಯಾನ

- Advertisement -
- Advertisement -

ತರಾವರಿ ಪುಸ್ತಕಗಳ ಗ್ರಂಥಾಲಯವಿರುವ ಕಟಿಂಗ್ ಶಾಪಿನ ಫೋಟೋವೊಂದು ವೈರಲ್ ಆಗಿ ಓಡಾಡುತ್ತಿತ್ತು. ಮೇಲುನೋಟಕ್ಕೆ ಇದೊಂದು ಪೋಟೋಶಾಪ್ ಮಾಡಿದ ಫೇಕ್ ಫೋಟೋ ಇರಬೇಕು ಅಂದುಕೊಂಡೆ. ನಂತರ ಇದನ್ನು ಪರಿಶೀಲಿಸಲು ಗೂಗಲ್ ಮಾಡಿದಾಗ,  ಈ ಫೋಟೋದ ನಿಜದ ಕಥೆ ಹೇಳುವ ಹಿಂದೂ ಪತ್ರಿಕೆಯ ವರದಿಯೊಂದು ಕಾಣಿಸಿತು. ಈ ಫೋಟೋದ ಬಗೆಗಿನ ಕುತೂಹಲಕಾರಿ ಸಂಗತಿ ತಿಳಿಯಲೆಂದು ವರದಿಯನ್ನು ಅನುವಾದಿಸಿದ್ದೇನೆ.

ಪೊನ್ನ ಮರಿಯಪ್ಪ ಹದಿನೆಂಟು ವರ್ಷ ದಿನಗೂಲಿ ಮಾಡಿ ಅದರಲ್ಲಿ ಒಂದಷ್ಟು ಹಣವನ್ನು ಉಳಿತಾಯ ಮಾಡುತ್ತಾನೆ. ಈ ಹಣದಲ್ಲಿ ತನ್ನ ಬಹುದಿನದ ಕನಸಾದ ತನ್ನದೇ `ಸುರೇಶ್ ಬ್ಯೂಟಿ ಸೆಂಟರ್’ ಹೆಸರಿನ ಕಟಿಂಗ್ ಶಾಪೊಂದನ್ನು ತಮಿಳುನಾಡಿನ ತೂತುಕುಡಿ ಜಿಲ್ಲೆಯ ಮಿಲ್ಲೆರ್ ಪುರಂ ನಲ್ಲಿ 2014 ರಲ್ಲಿ ತೆರೆಯುತ್ತಾನೆ.

ಸಹಜವಾಗಿ ಕಟಿಂಗ್ ಮಾಡಿಸಲು ಬಂದವರು ತಮ್ಮ ಸರತಿ ಬರುವ ತನಕ ಕಾಯಬೇಕಾಗಿತ್ತು. ಈ ಅವಧಿಯಲ್ಲಿ ಎಲ್ಲರೂ ತಮ್ಮ ಮೊಬೈಲಿನಲ್ಲಿ ಮುಳುಗಿರುತ್ತಿದ್ದರು. ಕೆಲವರು ಶಾಪಲ್ಲಿನ ಟಿವಿ ನೋಡುತ್ತಿದ್ದರು. ಹೀಗಿರುವಾಗ ಮರಿಯಪ್ಪನಿಗೆ ಸರತಿ ಬರುವ ತನಕ ಕಾಯುವವರ ಕೈಗೆ ಪುಸ್ತಕಗಳನ್ನು ಯಾಕೆ ಕೊಡಬಾರದು ಎನ್ನುವ ಯೋಚನೆ ಹೊಳೆಯುತ್ತದೆ. ಮರುದಿನವೇ ತನ್ನ ಶಾಪಿನಿಂದ ಟಿ.ವಿಯನ್ನು ತೆಗೆಯುತ್ತಾನೆ. ಆಗ ಟಿವಿ ಇಟ್ಟಿದ್ದ ಜಾಗದಲ್ಲಿ  ದಿನ ಪತ್ರಿಕೆಗಳ ಜತೆ 5 ಪುಸ್ತಕಗಳನ್ನು ಇಡುತ್ತಾರೆ. ಈ ಐದೂ ಪುಸ್ತಕಗಳು ಕಾರ್ಲ್ ಮಾರ್ಕ್ಸ್, ಅಬ್ರಾಹಂ ಲಿಂಕನ್, ಪೆರಿಯಾರ್, ಅಣ್ಣಾದೊರೈ, ಅಬ್ದುಲ್ ಕಲಾಮ್ ಕುರಿತಾದ ಆತ್ಮಕಥನ/ಜೀವನ ಚರಿತ್ರೆಗಳು.  ಕೆಲವೇ ದಿನಗಳಲ್ಲಿ ಮೊಬೈಲ್ ನೋಡುವವರು ಈ ಪುಸ್ತಕಗಳನ್ನು ಹಿಡಿದು ತಿರುವಿಹಾಕಿ ಹಾಗೆ ಪುಸ್ತಕದ ಜಾಗಕ್ಕೆ ಇಡತೊಡಗಿದರು, ಕೆಲವರು ಚೂರು ಚೂರು ಓದತೊಡಗಿದರು. ಇದು ಮರಿಯಪ್ಪನ ಖುಷಿಯನ್ನು ಇಮ್ಮಡಿಗೊಳಿಸಿತು.

ಆ ನಂತರ ಮರಿಯಪ್ಪ ಹಳೆ ಪುಸ್ತಕ ಮಾರುವವರಲ್ಲಿ, ಹೆಚ್ಚು ರಿಯಾಯಿತಿ ದರದಲ್ಲಿ ಮಾರುವ ಪುಸ್ತಕ ಮೇಳಗಳಲ್ಲಿ ಪುಸ್ತಕಗಳನ್ನು ಕೊಂಡು ತನ್ನ ಶಾಪಿಗೆ ತರತೊಡಗುತ್ತಾನೆ. 2015 ರ ಕೊನೆಗೆ ಶಾಪಿನ ಒಂದು ಗೋಡೆಯನ್ನು ಪುಸ್ತಕಗಳ ಕಪಾಟಿಗಾಗಿ ಸಿದ್ದಗೊಳಿಸುತ್ತಾನೆ. ತತ್ವಶಾಸ್ತ್ರ, ವಿಜ್ಞಾನ, ಜನಪದ ಕತೆ, ಧರ್ಮ, ನೀತಿಕತೆಗಳು, ಮಕ್ಕಳಿಗೆ ಬೇಕಾಗುವ ರಮ್ಯ ಕಥೆಗಳು ಹೀಗೆ ಹಲವು ವೈವಿಧ್ಯಮಯ 250 ಪುಸ್ತಗಳು ಸೇರ್ಪಡೆಗೊಳ್ಳುತ್ತವೆ.

“ಶಾಪಿಗೆ ಬಂದು ಅವರ ಸರತಿ ಬರುವವರೆಗೆ ಕಾಯುವ ಗಿರಾಕಿಗಳನ್ನು ದಯವಿಟ್ಟು ಮೊಬೈಲ್ ಬಳಸಬೇಡಿ, ಇಲ್ಲಿ ಒಳ್ಳೊಳ್ಳೆ ಪುಸ್ತಕಗಳಿವೆ ಕಟಿಂಗ್ ಮಾಡಿಸಿಕೊಳ್ಳುವ ತನಕ ಪುಸ್ತಕ ಓದಿ” ಎಂದು ಆತ್ಮೀಯವಾಗಿ ಕೇಳಿಕೊಳ್ಳುವೆ. ಈ ತನಕ ಯಾರೂ ನನ್ನ ಮಾತನ್ನು ಮೀರಿಲ್ಲ. ಅದು ನನಗೆ ಖುಷಿಕೊಡುತ್ತದೆ ಎನ್ನುತ್ತಾನೆ ಮರಿಯಪ್ಪ.

ಶಾಲಾ ಮಕ್ಕಳು ಬಂದಾಗ, ನೀವು ಪುಸ್ತಕ ಓದುವುದು ಮಾತ್ರವಲ್ಲ, ನೀವು ಓದಿದ ಭಾಗದ ಮುಖ್ಯಾಂಶಗಳನ್ನು ಬರೆದು ಹೋಗಿ ಎಂದು ಹೇಳುತ್ತಾರೆ. ಹೀಗೆ ವಿವರ ಟಿಪ್ಪಣಿ ಪರಿಚಯ ಬರೆಯುವುದಕ್ಕಾಗಿ 2018 ರಿಂದ ಒಂದು ದಾಖಲಾತಿ ಪುಸ್ತಕವನ್ನೂ ಇಟ್ಟಿದ್ದಾರೆ. ಅದರಲ್ಲಿ ಪುಸ್ತಕ ಓದಿದವರು ಅಭಿಪ್ರಾಯ ಬರೆದು ಹೋಗುತ್ತಾರೆ. ಈತನಕ 300 ವಿದ್ಯಾರ್ಥಿಗಳು ತಾವು ಓದಿದ ಪುಸ್ತಕದ ಬಗ್ಗೆ ಅಭಿಪ್ರಾಯ, ತಮ್ಮ ಹೆಸರು ಮತ್ತು ಶಾಲೆಯ ವಿಳಾಸವನ್ನು ಬರೆದು ಹೋಗಿದ್ದಾರೆ.

ಕನಿಷ್ಠ ಒಂದು ಪುಸ್ತಕದ 10 ಪುಟ ಓದಿ, ಅದರ ಬಗ್ಗೆ ಒಂದು ಟಿಪ್ಪಣಿ ಬರೆದರೆ ಹೇರ್ ಕಟ್ ಗೆ 80 ರೂ ಇದ್ದರೆ.  30 ರೂ ರಿಯಾಯಿತಿ ಕೊಡುವುದಾಗಿ ಹೇಳಿ 2020 ರ ಹೊಸ ವರ್ಷವನ್ನು ಆಚರಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಮರಿಯಪ್ಪನವರ ಸಲೂನ್ ಲೈಬ್ರರಿಯ ಫೋಟೋ ವೈರಲ್ ಆಗುವುದಕ್ಕಿಂತ ಮೊದಲು ಆರು ವರ್ಷ ಯಾವುದೇ ಪ್ರಚಾರ ಬಯಸದೆ ಮರಿಯಪ್ಪ ತನ್ನ ಸಲೂನಲ್ಲಿ ಓದು ಅಭಿಯಾನ ಶುರುಮಾಡಿದ್ದರು. ಮರಿಯಪ್ಪನ ಪುಸ್ತಕ ಪ್ರೀತಿ ನೋಡಿ ಪ್ರಸಿದ್ಧ ಪುಸ್ತಕ ಪ್ರಕಾಶನ Hatchette Indiaದವರು ಒಂದಷ್ಟು ಇಂಗ್ಲೀಷ್ ಪುಸ್ತಕಗಳನ್ನು ಕೊಡುಗೆಯಾಗಿ ಕೊಟ್ಟಿದ್ದಾರೆ. ಇದರಿಂದ ಆ ತನಕ ಬರಿ ತಮಿಳು ಪುಸ್ತಕ ಇಟ್ಟಿದ್ದ ಮರಿಯಪ್ಪ ಇದೀಗ ಇಂಗ್ಲೀಷ್ ಪುಸ್ತಕಗಳನ್ನು ಇಟ್ಟಿದ್ದಾರೆ. ತೂತುಕುಡಿ ಎಂ.ಪಿ. ಕನಿಮೋಜಿ ಯವರು 50 ಪುಸ್ತಕಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ಇದೀಗ ಮರಿಯಪ್ಪನ ಸಲೂನಿನಲ್ಲಿ 900 ರಷ್ಟು ವೈವಿಧ್ಯಮಯ ತಮಿಳು, ಇಂಗ್ಲೀಷ್ ಪುಸ್ತಕಗಳ ಸಂಗ್ರಹವಾಗಿದೆ. ನಿರಂತರವಾಗಿ ಓದುತ್ತಿದ್ದರೆ ಹೊಸ ಹೊಸ ಆಲೋಚನೆಗಳು ಬರುತ್ತವೆ ಎಂದು ಮರಿಯಪ್ಪ ಹೇಳುತ್ತಾರೆ.

ತನ್ನ ವಿದ್ಯಭ್ಯಾಸ ಕುಂಟಿತವಾದರೂ ಬೇರೆಯವರು ಓದಬೇಕು, ಓದಿ ಜ್ಞಾನ ಸಂಪಾದಿಸಬೇಕೆಂದು ಕನಸುವ ಪೊನ್ನ ಮರಿಯಪ್ಪನವರ ನಡೆಯಿಂದ  ಸೆಲೂನ್ ಶಾಪ್ ನ ಸ್ಥಾಪಿತ ಕಲ್ಪನೆಯನ್ನೆ ಹೊಡೆದು ಹಾಕಿದ್ದಾರೆ.

  • (ಕೃಪೆ): ದ ಹಿಂದು
  • ಮೂಲ: ಸೋಮ ಬಸು
  • ಅನುವಾದ: ಅರುಣ್ ಜೋಳದಕೂಡ್ಲಿಗಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...