Homeಮುಖಪುಟಮಾದರಿ ಪುಸ್ತಕಪ್ರೇಮಿ: ಕಟಿಂಗ್ ಶಾಪ್ ನಲ್ಲಿ ಪುಟ್ಟ ಗ್ರಂಥಾಲಯ, ಪುಸ್ತಕ ಓದು ಅಭಿಯಾನ

ಮಾದರಿ ಪುಸ್ತಕಪ್ರೇಮಿ: ಕಟಿಂಗ್ ಶಾಪ್ ನಲ್ಲಿ ಪುಟ್ಟ ಗ್ರಂಥಾಲಯ, ಪುಸ್ತಕ ಓದು ಅಭಿಯಾನ

- Advertisement -
- Advertisement -

ತರಾವರಿ ಪುಸ್ತಕಗಳ ಗ್ರಂಥಾಲಯವಿರುವ ಕಟಿಂಗ್ ಶಾಪಿನ ಫೋಟೋವೊಂದು ವೈರಲ್ ಆಗಿ ಓಡಾಡುತ್ತಿತ್ತು. ಮೇಲುನೋಟಕ್ಕೆ ಇದೊಂದು ಪೋಟೋಶಾಪ್ ಮಾಡಿದ ಫೇಕ್ ಫೋಟೋ ಇರಬೇಕು ಅಂದುಕೊಂಡೆ. ನಂತರ ಇದನ್ನು ಪರಿಶೀಲಿಸಲು ಗೂಗಲ್ ಮಾಡಿದಾಗ,  ಈ ಫೋಟೋದ ನಿಜದ ಕಥೆ ಹೇಳುವ ಹಿಂದೂ ಪತ್ರಿಕೆಯ ವರದಿಯೊಂದು ಕಾಣಿಸಿತು. ಈ ಫೋಟೋದ ಬಗೆಗಿನ ಕುತೂಹಲಕಾರಿ ಸಂಗತಿ ತಿಳಿಯಲೆಂದು ವರದಿಯನ್ನು ಅನುವಾದಿಸಿದ್ದೇನೆ.

ಪೊನ್ನ ಮರಿಯಪ್ಪ ಹದಿನೆಂಟು ವರ್ಷ ದಿನಗೂಲಿ ಮಾಡಿ ಅದರಲ್ಲಿ ಒಂದಷ್ಟು ಹಣವನ್ನು ಉಳಿತಾಯ ಮಾಡುತ್ತಾನೆ. ಈ ಹಣದಲ್ಲಿ ತನ್ನ ಬಹುದಿನದ ಕನಸಾದ ತನ್ನದೇ `ಸುರೇಶ್ ಬ್ಯೂಟಿ ಸೆಂಟರ್’ ಹೆಸರಿನ ಕಟಿಂಗ್ ಶಾಪೊಂದನ್ನು ತಮಿಳುನಾಡಿನ ತೂತುಕುಡಿ ಜಿಲ್ಲೆಯ ಮಿಲ್ಲೆರ್ ಪುರಂ ನಲ್ಲಿ 2014 ರಲ್ಲಿ ತೆರೆಯುತ್ತಾನೆ.

ಸಹಜವಾಗಿ ಕಟಿಂಗ್ ಮಾಡಿಸಲು ಬಂದವರು ತಮ್ಮ ಸರತಿ ಬರುವ ತನಕ ಕಾಯಬೇಕಾಗಿತ್ತು. ಈ ಅವಧಿಯಲ್ಲಿ ಎಲ್ಲರೂ ತಮ್ಮ ಮೊಬೈಲಿನಲ್ಲಿ ಮುಳುಗಿರುತ್ತಿದ್ದರು. ಕೆಲವರು ಶಾಪಲ್ಲಿನ ಟಿವಿ ನೋಡುತ್ತಿದ್ದರು. ಹೀಗಿರುವಾಗ ಮರಿಯಪ್ಪನಿಗೆ ಸರತಿ ಬರುವ ತನಕ ಕಾಯುವವರ ಕೈಗೆ ಪುಸ್ತಕಗಳನ್ನು ಯಾಕೆ ಕೊಡಬಾರದು ಎನ್ನುವ ಯೋಚನೆ ಹೊಳೆಯುತ್ತದೆ. ಮರುದಿನವೇ ತನ್ನ ಶಾಪಿನಿಂದ ಟಿ.ವಿಯನ್ನು ತೆಗೆಯುತ್ತಾನೆ. ಆಗ ಟಿವಿ ಇಟ್ಟಿದ್ದ ಜಾಗದಲ್ಲಿ  ದಿನ ಪತ್ರಿಕೆಗಳ ಜತೆ 5 ಪುಸ್ತಕಗಳನ್ನು ಇಡುತ್ತಾರೆ. ಈ ಐದೂ ಪುಸ್ತಕಗಳು ಕಾರ್ಲ್ ಮಾರ್ಕ್ಸ್, ಅಬ್ರಾಹಂ ಲಿಂಕನ್, ಪೆರಿಯಾರ್, ಅಣ್ಣಾದೊರೈ, ಅಬ್ದುಲ್ ಕಲಾಮ್ ಕುರಿತಾದ ಆತ್ಮಕಥನ/ಜೀವನ ಚರಿತ್ರೆಗಳು.  ಕೆಲವೇ ದಿನಗಳಲ್ಲಿ ಮೊಬೈಲ್ ನೋಡುವವರು ಈ ಪುಸ್ತಕಗಳನ್ನು ಹಿಡಿದು ತಿರುವಿಹಾಕಿ ಹಾಗೆ ಪುಸ್ತಕದ ಜಾಗಕ್ಕೆ ಇಡತೊಡಗಿದರು, ಕೆಲವರು ಚೂರು ಚೂರು ಓದತೊಡಗಿದರು. ಇದು ಮರಿಯಪ್ಪನ ಖುಷಿಯನ್ನು ಇಮ್ಮಡಿಗೊಳಿಸಿತು.

ಆ ನಂತರ ಮರಿಯಪ್ಪ ಹಳೆ ಪುಸ್ತಕ ಮಾರುವವರಲ್ಲಿ, ಹೆಚ್ಚು ರಿಯಾಯಿತಿ ದರದಲ್ಲಿ ಮಾರುವ ಪುಸ್ತಕ ಮೇಳಗಳಲ್ಲಿ ಪುಸ್ತಕಗಳನ್ನು ಕೊಂಡು ತನ್ನ ಶಾಪಿಗೆ ತರತೊಡಗುತ್ತಾನೆ. 2015 ರ ಕೊನೆಗೆ ಶಾಪಿನ ಒಂದು ಗೋಡೆಯನ್ನು ಪುಸ್ತಕಗಳ ಕಪಾಟಿಗಾಗಿ ಸಿದ್ದಗೊಳಿಸುತ್ತಾನೆ. ತತ್ವಶಾಸ್ತ್ರ, ವಿಜ್ಞಾನ, ಜನಪದ ಕತೆ, ಧರ್ಮ, ನೀತಿಕತೆಗಳು, ಮಕ್ಕಳಿಗೆ ಬೇಕಾಗುವ ರಮ್ಯ ಕಥೆಗಳು ಹೀಗೆ ಹಲವು ವೈವಿಧ್ಯಮಯ 250 ಪುಸ್ತಗಳು ಸೇರ್ಪಡೆಗೊಳ್ಳುತ್ತವೆ.

“ಶಾಪಿಗೆ ಬಂದು ಅವರ ಸರತಿ ಬರುವವರೆಗೆ ಕಾಯುವ ಗಿರಾಕಿಗಳನ್ನು ದಯವಿಟ್ಟು ಮೊಬೈಲ್ ಬಳಸಬೇಡಿ, ಇಲ್ಲಿ ಒಳ್ಳೊಳ್ಳೆ ಪುಸ್ತಕಗಳಿವೆ ಕಟಿಂಗ್ ಮಾಡಿಸಿಕೊಳ್ಳುವ ತನಕ ಪುಸ್ತಕ ಓದಿ” ಎಂದು ಆತ್ಮೀಯವಾಗಿ ಕೇಳಿಕೊಳ್ಳುವೆ. ಈ ತನಕ ಯಾರೂ ನನ್ನ ಮಾತನ್ನು ಮೀರಿಲ್ಲ. ಅದು ನನಗೆ ಖುಷಿಕೊಡುತ್ತದೆ ಎನ್ನುತ್ತಾನೆ ಮರಿಯಪ್ಪ.

ಶಾಲಾ ಮಕ್ಕಳು ಬಂದಾಗ, ನೀವು ಪುಸ್ತಕ ಓದುವುದು ಮಾತ್ರವಲ್ಲ, ನೀವು ಓದಿದ ಭಾಗದ ಮುಖ್ಯಾಂಶಗಳನ್ನು ಬರೆದು ಹೋಗಿ ಎಂದು ಹೇಳುತ್ತಾರೆ. ಹೀಗೆ ವಿವರ ಟಿಪ್ಪಣಿ ಪರಿಚಯ ಬರೆಯುವುದಕ್ಕಾಗಿ 2018 ರಿಂದ ಒಂದು ದಾಖಲಾತಿ ಪುಸ್ತಕವನ್ನೂ ಇಟ್ಟಿದ್ದಾರೆ. ಅದರಲ್ಲಿ ಪುಸ್ತಕ ಓದಿದವರು ಅಭಿಪ್ರಾಯ ಬರೆದು ಹೋಗುತ್ತಾರೆ. ಈತನಕ 300 ವಿದ್ಯಾರ್ಥಿಗಳು ತಾವು ಓದಿದ ಪುಸ್ತಕದ ಬಗ್ಗೆ ಅಭಿಪ್ರಾಯ, ತಮ್ಮ ಹೆಸರು ಮತ್ತು ಶಾಲೆಯ ವಿಳಾಸವನ್ನು ಬರೆದು ಹೋಗಿದ್ದಾರೆ.

ಕನಿಷ್ಠ ಒಂದು ಪುಸ್ತಕದ 10 ಪುಟ ಓದಿ, ಅದರ ಬಗ್ಗೆ ಒಂದು ಟಿಪ್ಪಣಿ ಬರೆದರೆ ಹೇರ್ ಕಟ್ ಗೆ 80 ರೂ ಇದ್ದರೆ.  30 ರೂ ರಿಯಾಯಿತಿ ಕೊಡುವುದಾಗಿ ಹೇಳಿ 2020 ರ ಹೊಸ ವರ್ಷವನ್ನು ಆಚರಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಮರಿಯಪ್ಪನವರ ಸಲೂನ್ ಲೈಬ್ರರಿಯ ಫೋಟೋ ವೈರಲ್ ಆಗುವುದಕ್ಕಿಂತ ಮೊದಲು ಆರು ವರ್ಷ ಯಾವುದೇ ಪ್ರಚಾರ ಬಯಸದೆ ಮರಿಯಪ್ಪ ತನ್ನ ಸಲೂನಲ್ಲಿ ಓದು ಅಭಿಯಾನ ಶುರುಮಾಡಿದ್ದರು. ಮರಿಯಪ್ಪನ ಪುಸ್ತಕ ಪ್ರೀತಿ ನೋಡಿ ಪ್ರಸಿದ್ಧ ಪುಸ್ತಕ ಪ್ರಕಾಶನ Hatchette Indiaದವರು ಒಂದಷ್ಟು ಇಂಗ್ಲೀಷ್ ಪುಸ್ತಕಗಳನ್ನು ಕೊಡುಗೆಯಾಗಿ ಕೊಟ್ಟಿದ್ದಾರೆ. ಇದರಿಂದ ಆ ತನಕ ಬರಿ ತಮಿಳು ಪುಸ್ತಕ ಇಟ್ಟಿದ್ದ ಮರಿಯಪ್ಪ ಇದೀಗ ಇಂಗ್ಲೀಷ್ ಪುಸ್ತಕಗಳನ್ನು ಇಟ್ಟಿದ್ದಾರೆ. ತೂತುಕುಡಿ ಎಂ.ಪಿ. ಕನಿಮೋಜಿ ಯವರು 50 ಪುಸ್ತಕಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ಇದೀಗ ಮರಿಯಪ್ಪನ ಸಲೂನಿನಲ್ಲಿ 900 ರಷ್ಟು ವೈವಿಧ್ಯಮಯ ತಮಿಳು, ಇಂಗ್ಲೀಷ್ ಪುಸ್ತಕಗಳ ಸಂಗ್ರಹವಾಗಿದೆ. ನಿರಂತರವಾಗಿ ಓದುತ್ತಿದ್ದರೆ ಹೊಸ ಹೊಸ ಆಲೋಚನೆಗಳು ಬರುತ್ತವೆ ಎಂದು ಮರಿಯಪ್ಪ ಹೇಳುತ್ತಾರೆ.

ತನ್ನ ವಿದ್ಯಭ್ಯಾಸ ಕುಂಟಿತವಾದರೂ ಬೇರೆಯವರು ಓದಬೇಕು, ಓದಿ ಜ್ಞಾನ ಸಂಪಾದಿಸಬೇಕೆಂದು ಕನಸುವ ಪೊನ್ನ ಮರಿಯಪ್ಪನವರ ನಡೆಯಿಂದ  ಸೆಲೂನ್ ಶಾಪ್ ನ ಸ್ಥಾಪಿತ ಕಲ್ಪನೆಯನ್ನೆ ಹೊಡೆದು ಹಾಕಿದ್ದಾರೆ.

  • (ಕೃಪೆ): ದ ಹಿಂದು
  • ಮೂಲ: ಸೋಮ ಬಸು
  • ಅನುವಾದ: ಅರುಣ್ ಜೋಳದಕೂಡ್ಲಿಗಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...