Homeಕರ್ನಾಟಕರೈತರ ಮರಣ ಶಾಸನ ಬರೆಯಲು ಕಳ್ಳದಾರಿ ಹಿಡಿದ ರಾಜ್ಯ ಸರ್ಕಾರ: ಸಿದ್ದರಾಮಯ್ಯ

ರೈತರ ಮರಣ ಶಾಸನ ಬರೆಯಲು ಕಳ್ಳದಾರಿ ಹಿಡಿದ ರಾಜ್ಯ ಸರ್ಕಾರ: ಸಿದ್ದರಾಮಯ್ಯ

ಈ ತಿದ್ದುಪಡಿ ಮೂಲಕ ಬಿಎಸ್ವೈ ಸರ್ಕಾರ ಇಡೀ ರೈತ ಸಮುದಾಯವನ್ನು ನಾಶ ಮಾಡಲು ಹೊರಟಿದೆ. ಭವಿಷ್ಯದಲ್ಲಿ ಎಲ್ಲಾ ರೈತರು ಕಾರ್ಪೋರೆಟ್ ಸಂಸ್ಥೆಗಳ ಬಾಗಿಲು ಕಾಯಬೇಕಾದ ಸ್ಥಿತಿ ಬರುತ್ತೆ. ಬಂಡಾವಳಶಾಹಿಗಳು ಭೂಮಿ ತಗೊಂಡು ರಿಯಲ್ ಎಸ್ಟೇಟ್ ಮಾಡ್ತಾರೆ. ಆನಂತರ ಆಹಾರ ಉತ್ಪಾದನೆ ಎಲ್ಲಿ ಆಗುತ್ತೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

- Advertisement -
- Advertisement -

ಭೂ ಸುಧಾರಣಾ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ರಾಜ್ಯ ಸರ್ಕಾರ ತಿದ್ದುಪಡಿ ತಂದಿರುವುದು ಕರ್ನಾಟಕದ ಇತಿಹಾಸದಲ್ಲಿ ಕರಾಳದಿನವಾಗಿ ಉಳಿಯಲಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭೂ ಸುಧಾಕರಣಾ ಕಾಯ್ದೆಗೆ ರಾಜ್ಯ ಸರ್ಕಾರ ಕಳೆದ ಹಲವು ದಿನಗಳಿಂದ ತಿದ್ದುಪಡಿ ತರಲು ಪ್ರಯತ್ನಿಸುತ್ತಿದೆ. ಆದರೆ ವಿರೋಧ ಪಕ್ಷಗಳು, ರೈತರು ಈ ಕಾಯ್ದೆಯನ್ನು ತೀವ್ರವಾಗಿ ವಿರೋಧಿಸುತ್ತಲೇ ಇದ್ದಾರೆ. ಆದರೆ, ತೀವ್ರ ವಿರೋಧದ ನಡುವೆಯೂ ಕೊರೋನಾ ಲಾಕ್‌ಡೌನ್ ಸಂದರ್ಭವನ್ನು ಬಳಸಿಕೊಂಡು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ “ಕರ್ನಾಟಕ ಭೂ ಸುಧಾರಣಾ ಕಾಯ್ದೆ”ಗೆ ತಿದ್ದುಪಡಿ ತಂದಿರುವುದು ಸರಿಯಲ್ಲ ಎಂದು ಟೀಕಿಸಿದ್ದಾರೆ.

“ರೈತರ ಮರಣ ಶಾಸನ ಬರೆಯಲು ರಾಜ್ಯ ಸರ್ಕಾರ ಲಾಕ್‌ಡೌನ್ ಸಮಯ ಉಪಯೋಗಯೋಗಿಸಿಕೊಂಡಿದೆ. ಕೊರೋನಾದಂತಹ ಸಂಕಷ್ಟದ ಸಂದರ್ಭದಲ್ಲಿ ಸುಗ್ರೀವಾಜ್ಞೆ ತರುವ ಅಗತ್ಯತೆ ಏನಿತ್ತು? ಕೊರೋನಾ ಸೋಂಕು ಪೀಡಿತ ದೇಶಗಳ ಪಟ್ಟಿಯಲ್ಲಿ ಭಾರತ ಮೂರನೇ ಸ್ಥಾನ, ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ 4ನೇ ಸ್ಥಾನದಲ್ಲಿದೆ. ಕೊರೊನಾ ವಿರುದ್ಧ ಹೋರಾಡುವುದನ್ನು ಬಿಟ್ಟು ರಾಜ್ಯ ಸರ್ಕಾರ ಕಳ್ಳದಾರಿಯಲ್ಲಿ ಹೊರಟಿದೆ” ಎಂದು ಸಿದ್ದು ಆರೋಪಿಸಿದ್ದಾರೆ.

“ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆಯಲ್ಲಿ ಸೆಕ್ಷನ್ 63ಕ್ಕೆ ತಿದ್ದುಪಡಿ ತಂದು ಒಂದು ಕುಟುಂಬಕ್ಕೆ ಇದ್ದ ಮಾರುವ ಮಿತಿಯನ್ನು 118 ಎಕರೆ ಮಿತಿಯನ್ನು 436 ಎಕರೆಗೆ ಏರಿಸಿದ್ದಾರೆ. 436 ಎಕರೆ ಜಮೀನು ಯಾರು ತೆಗೆದುಕೊಳ್ತಾರೆ? ರೈತರು ಅಷ್ಟು ಜಮೀನು ತೆಗೆದುಕೊಳ್ತಾರಾ..? ಬಂಡವಾಳಶಾಹಿಗಳಿಗೆ ಅನುಕೂಲವಾಗಲೇಂದೆ ಈ ತಿದ್ದುಪಡಿ ತರಲಾಗಿದೆ ಎಂದು ಟೀಕಿಸಿದ್ದಾರೆ.

ಈ ತಿದ್ದುಪಡಿ ಮೂಲಕ ಬಿಎಸ್ವೈ ಸರ್ಕಾರ ಇಡೀ ರೈತ ಸಮುದಾಯವನ್ನು ನಾಶ ಮಾಡಲು ಹೊರಟಿದೆ. ಭವಿಷ್ಯದಲ್ಲಿ ಎಲ್ಲಾ ರೈತರು ಕಾರ್ಪೋರೆಟ್ ಸಂಸ್ಥೆಗಳ ಬಾಗಿಲು ಕಾಯಬೇಕಾದ ಸ್ಥಿತಿ ಬರುತ್ತೆ. ಬಂಡಾವಳಶಾಹಿಗಳು ಭೂಮಿ ತಗೊಂಡು ರಿಯಲ್ ಎಸ್ಟೇಟ್ ಮಾಡ್ತಾರೆ. ಆನಂತರ ಆಹಾರ ಉತ್ಪಾದನೆ ಎಲ್ಲಿ ಆಗುತ್ತೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

“ದೇವರಾಜ ಅರಸು 1974 ರಲ್ಲಿ ಇಡೀ ದೇಶಕ್ಕೆ ಮಾದರಿ ಆಗುವಂತಹ ಕಾಯ್ದೆಯನ್ನು ಜಾರಿಗೊಳಿಸಿದ್ದರು. ದೂರದೃಷ್ಟಿಯ ಅವರ ನಾಯಕತ್ವಕ್ಕೆ ಇಡೀ ದೇಶವೇ ಮೆಚ್ಚುಗೆ ಸೂಚಿಸಿತ್ತು. ಆದರೆ, ಬಿಎಸ್‌ವೈ ಸರ್ಕಾರ ರೈತರ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ. ಭವಿಷ್ಯದಲ್ಲಿ ಕೃಷಿ ಭೂಮಿಗಳು ಕಾರ್ಪೋರೇಟ್ ಸಂಸ್ಥೆಗಳ ಪಾಲಾಗುವಂತೆ ಮಾಡಿದ್ದಾರೆ. ಅವರ ಈ ಕೆಲಸವನ್ನು ರೈತರು ಎಂದೂ ಕ್ಷಮಿಸಲಾರರು” ಎಂದು ಸಿದ್ದು ಹೇಳಿದ್ದಾರೆ.

“ಗಣಿ ಅಕ್ರಮದ ಕುರಿತು ಕಾಂಗ್ರೆಸ್‌ ಹೋರಾಟ ರೂಪಿಸಿದ ರೀತಿಯಲ್ಲೇ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರುದ್ಧವೂ ಹೋರಾಟ ನಡೆಸಲು ಚಿಂತನೆ ನಡೆಸಲಾಗಿದೆ. ರಾಜ್ಯದ ಪ್ರತಿ ಹಳ್ಳಿ ಹಳ್ಳಿಯಿಂದಲೂ ರೈತರನ್ನು ಒಗ್ಗೂಡಿಸಿ ಹೋರಾಟವನ್ನು ರೂಪಿಸಲಾಗುವುದು” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.


ಇದನ್ನೂ ಓದಿ: ಹೊಂಬಾಳೆ-1: ದೇಶದ ಅನ್ನದ ಬಟ್ಟಲನ್ನೇ ಮಾರಲು ಹೊರಟರೆ ಕೊನೆಗೆ ಏನು ಉಳಿದೀತು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...