Homeಕರ್ನಾಟಕತುಮಕೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಮೈದಾಳಕೆರೆಗೆ ವಿಷಕಾರಿ ಪ್ಲಾಸ್ಟಿಕ್ ಬೂದಿ!

ತುಮಕೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಮೈದಾಳಕೆರೆಗೆ ವಿಷಕಾರಿ ಪ್ಲಾಸ್ಟಿಕ್ ಬೂದಿ!

- Advertisement -
- Advertisement -

ಸ್ವಾತಂತ್ರ್ಯಪೂರ್ವದಿಂದಲೂ ತುಮಕೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುತ್ತಿರುವ ಮೈದಾಳ ಕೆರೆ ಪ್ರದೇಶ ಇದೀಗ ಮಲಿನಗೊಳ್ಳುತ್ತಿದೆ. ಕೆಲವೇ ಮಂದಿಯ ಕುಕೃತ್ಯದಿಂದ ಕುಡಿಯುವ ನೀರು ಮತ್ತು ಪರಿಸರಕ್ಕೆ ಧಕ್ಕೆ ಒದಗಿದೆ. ಕೆರೆಯ ಸಮೀಪವೇ ಕೈಗಾರಿಕ ಪ್ರದೇಶಗಳಿಂದ ಪ್ಲಾಸ್ಟಿಕ್ ತ್ಯಾಜ್ಯವನ್ನು ತಂದು ಸುಡುವ ಮೂಲಕ ಸುಂದರ ಪರಿಸರವನ್ನು ಹಾಳುಗೆಡವಲಾಗುತ್ತಿದೆ. ಪ್ಲಾಸ್ಟಿಕ್ ಬೂದಿ ಗಾಳಿಯಲ್ಲಿ ತೇಲಿಹೋಗಿ ಮೈದಾಳ ಕರೆಯ ನೀರು ಸೇರುತ್ತಿದ್ದು ವಿಷಕಾರಿಯಾಗುತ್ತಿದೆ. ಈ ಕುರಿತು ಕ್ರಮ ಕೈಗೊಳ್ಳದ ಜಿಲ್ಲಾಡಳಿತದ ವಿರುದ್ಧ ಪರಿಸರವಾದಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತಿಹಾಸ ಪ್ರಸಿದ್ದ ಮಂದರಗಿರಿಯ ಹಿಂಭಾಗದಲ್ಲಿರುವ ಕೆರೆಯ ಆಸುಪಾಸಿನಲ್ಲೇ ಪರಿಸರ ವಿರೋಧಿ ಚಟುವಟಿಕೆಗಳು ನಡೆಯುತ್ತಿದೆ. ಕೆರೆಯ  ಅಂಗಳಕ್ಕೆ ಹೊಂದಿಕೊಂಡಂತೆ ನಾಲ್ಕೈದು ಕಡೆ ಪ್ಲಾಸ್ಟಿಕ್ ತ್ಯಾಜ್ಯ ಸುಡುತ್ತಿದ್ದು ಹಾರುಬೂದಿ ಕೆರೆ ಸೇರಿ ನೀರು ವಿಷಪೂರಿತಗೊಳ್ಳುತ್ತಿದೆ. ಆದರೂ ಜಿಲ್ಲಾಡಳಿತ ಕಣ್ಣುಮುಚ್ಚಿ ಕುಳಿತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಮೈದಾಳ ಕೆರೆ

ಮೈದಾಳ ಕೆರೆಯ ಭಾಗ ‘ಅತ್ಯಂತ ಸೂಕ್ಷ ಜೈವಿಕ’ ಪ್ರದೇಶ. ತುಮಕೂರು ನಗರದ 15 ಬಡಾವಣೆಗಳಿಗೆ ಕುಡಿಯುವ ನೀರು ಇಲ್ಲಿಂದಲೇ ಪೂರೈಕೆಯಾಗುತ್ತಿದೆ. ತುಮಕೂರು ಗ್ರಾಮಾಂತರ ಕ್ಷೇತ್ರದ ಕೆಲ ಹಳ್ಳಿಗಳಿಗೂ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಇಂಥ ಸೂಕ್ಷ್ಮ ಪ್ರದೇಶದಲ್ಲಿ ಬೇರೆಬೇರೆ ಕಡೆಯಿಂದ ಪ್ಲಾಸ್ಟಿಕ್ ತಂದು ರಾಶಿ ಹಾಕಿ ಸುಡುವ ಕೆಲಸ ಎಗ್ಗಿಲ್ಲದೆ ನಡೆಯುತ್ತಿದೆ. ಅದರ ಹಾರುಬೂದಿ ನೀರು ಸೇರುತ್ತಿದೆ.

ಈ ಕುರಿತು ಸ್ಥಳೀಯ ನಿವಾಸಿ ಶಿವಶಂಕರ್‌ರವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ರಾಶಿ ಹಾಕಿರುವ ಪ್ಲಾಸ್ಟಿಕ್ ತ್ಯಾಜ್ಯವನ್ನು ಗುಂಡಿ ಯಲ್ಲಿ ಹಾಕಿ ಸುಡಲಾಗುತ್ತಿದೆ. ಹೀಗೇಕೆ ಸುಡುತ್ತಾರೆ ಎಂಬುದು ತಿಳಿಯುತ್ತಿಲ್ಲ. ಇದ್ದಿಲು ಮಾಡಲು ಇರಬಹುದು. ಕೈಗಾರಿಕಾ ಪ್ರದೇಶದ ಪ್ಲಾಸ್ಟಿಕ್ ತ್ಯಾಜ್ಯವನ್ನು ಇಲ್ಲಿ ಸುಡುವುದರಿಂದ ಸೂಕ್ಷ್ಮ ಜೀವಿಗಳ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ದಟ್ಟಹೊಗೆ ಏಳುವುದರಿಂದ ಸೂಕ್ಷ್ಮ ಜೀವಿಗಳು ಸಾಯುತ್ತವೆ. ಮೈದಾಳ ಕೆರೆಯ ನೀರು ಮಾಲಿನ್ಯವಾಗುತ್ತದೆ. ಜನರು ವಿಷಯುಕ್ತ ನೀರನ್ನು ಸೇವಿಸಬೇಕಾಗುತ್ತದೆ. ಇದರ ಬಗ್ಗೆ ಜಿಲ್ಲಾಡಳಿತ ಮತ್ತು ಸ್ಥಳೀಯ ಗ್ರಾಮ ಪಂಚಾಯ್ತಿ ಮೌನ ವಹಿಸಿದೆ ಎಂದು ಆರೋಪಿಸಿದ್ದಾರೆ.

ಮಂದರಗಿರಿ ಮತ್ತು ಮೈದಾಳಕೆರೆ ಪ್ರಕೃತಿ ಸೌಂದರ್ಯಕ್ಕೆ ಹೇಳಿ ಮಾಡಿದ ಜಾಗ. ಆದರೆ ಕೆರೆಯ ಪಕ್ಕದಲ್ಲೇ ಇರುವ ಗುಡ್ಡಗಳಿಂದ ದೊಡ್ಡದೊಡ್ಡ ಗುಂಡುಗಳನ್ನು ಎತ್ತುವಳಿ ಮಾಡಲಾಗುತ್ತಿದೆ. ಮನ ಬಂದಂತೆ ಗುಂಡಿಗಳನ್ನು ತೋಡಲಾಗುತ್ತಿದೆ. ಇದರಿಂದ ಜೋರು ಮಳೆ ಬಂದರೆ ಗುಡ್ಡ ಕೊರೆತ ಉಂಟಾಗುವ ಸಾಧ್ಯತೆ ಹೆಚ್ಚಾಗಿದೆ. ಗುಡ್ಡದ ನೀರು ಕೆರೆಗೆ ಹರಿಯುವುದರಿಂದ ಮಣ್ಣು ಕೆರೆಗೆ ಸೇರಿ ಹೂಳು ತುಂಬುತ್ತದೆ. ಕುಡಿಯುವ ನೀರಿಗೆ ತೊಂದರೆಯಾಗುತ್ತದೆ. ಇಂತಹ ಸಮಸ್ಯೆ ತಲೆದೋರುವ ಮೊದಲು ಜಿಲ್ಲಾಡಳಿತ ಮತ್ತು ಸಣ್ಣನೀರಾವರಿ ಇಲಾಖೆ ಎಚ್ಚೆತ್ತುಕೊಂಡು ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಜನರು ಆಗ್ರಹಿಸಿದ್ದಾರೆ.

ಜಲ, ವಾಯುಮಾಲಿನ್ಯ ಉಂಟಾಗುತ್ತಿದ್ದರೂ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನಿದ್ರಿಸುತ್ತಿದೆ. ಇಲ್ಲಿ ಇಂತಹ ಅಕ್ರಮ ಚಟುವಟಿಕೆಗಳು ನಡೆಯಲು ಮೈದಾಳ ಗ್ರಾಮ ಪಂಚಾಯಿತಿಯವರು ಶಾಮೀಲಾಗಿದ್ದಾರೆ. ಪಿಡಿಒ ಬಂದಷ್ಟೇ ಸಾಕು ಎಂಬಂತೆ ನೋಡಿಯೂ ನೋಡದಂತೆ ಇದ್ದಾರೆ. ಕ್ರಮ ಕೈಗೊಳ್ಳಬೇಕಾದವರು ಕೈಕಟ್ಟಿ ಕುಳಿತಿದ್ದಾರೆ ಎಂದು ಆರೋಪಿಸಿರುವ ಸುತ್ತಮುತ್ತಲ ಗ್ರಾಮಸ್ಥರು ಕೂಡಲೇ ಪರಿಸರ ವಿರೋಧಿ ಚಟುವಟಿಕೆಗಳನ್ನು ತಡೆಯಬೇಕು ಎಂದು ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಮಧ್ಯಪ್ರದೇಶದ ದಲಿತ ದಂಪತಿಯ ಮೇಲಿನ ಅಮಾನವೀಯ ಹಲ್ಲೆಗೆ ತೀವ್ರ ಖಂಡನೆ: ಡಿಸಿ, ಎಸ್ಪಿ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...