Homeಅಂಕಣಗಳುಇಂದಿರಾ ಕ್ಯಾಂಟೀನ್‌ದೊಳಗ ಊಟ ಮಾಡಿದಿವಿ ಅಂದರೆ ಕಮಲ ಪಕ್ಷಕ್ಕೆ ಆಗಿ ಬರೋದಿಲ್ಲ...!

ಇಂದಿರಾ ಕ್ಯಾಂಟೀನ್‌ದೊಳಗ ಊಟ ಮಾಡಿದಿವಿ ಅಂದರೆ ಕಮಲ ಪಕ್ಷಕ್ಕೆ ಆಗಿ ಬರೋದಿಲ್ಲ…!

ಭಾರೀ ಪ್ರಚಾರ ದೊಂದಿಗೆ ಶುರು ಆದ ಆ ಖಾನಾವಳಿಗಳು ಬಡವರಿಗೆ ಯಾವ ಕಾಲಕ್ಕೆ ಬೇಕಾಗಿದ್ದವೋ ಆ ಕಾಲಕ್ಕೆ ಉಪಯೋಗ ಆಗಲಿಲ್ಲ.

- Advertisement -
- Advertisement -

ಗುಲಾಬಿ ಅಂತ ನಾವು ಯಾವುದನ್ನು ಕರೀತೀವೋ,

ಅದರ ಹೆಸರು ಏನಿದ್ದರೇನು ಸುಗಂಧ ಅಷ್ಟೇ ಸಿಹಿಯಲ್ಲವೇ ?

ಅಂತ ಕವಿಯೊಬ್ಬ ಸುಮಾರು 400 ವರ್ಷ ಹಿಂದ ಒದರಿ ಹೋದ.

ಅವನ ಹೆಸರು ವಿಲಿಯಮ್ ಷೇಕ್ಸ್‌ಪಿಯರ್. ಅವ ಇಂಗ್ಲಂಡದೊಳಗ ನಾಟಕ, ಹಾಡು ಬರಕೊಂಡು ಇದ್ದಾಗ ನಮ್ಮಲ್ಲೇ ಮೊಹಮ್ಮದ್ ಜಲಾಲಉದ್ದೀನ್ ಅಕ್ಬರ್ ಅವರು ರಾಜ್ಯ ಆಳತಾ ಇದ್ದರು.

ನಮ್ಮಲ್ಲೆ ಬಹುಶಃ ಎಲ್ಲರಿಗೂ ಷೇಕ್ಸ್‌ಪಿಯರ್ ಅವರ ಹೆಸರು ಗೊತ್ತು. ಆದರ ಅಕ್ಬರ್ ಅನ್ನೋದು ಅವರ ಬಿರುದು, ಅವನ ಹೆಸರು ಅಲ್ಲ ಅಂತ ಗೊತ್ತಿಲ್ಲ.

ಅವ ಹೋಗಲಿ ಬಿಡ್ರಿ, ಮಹಾಭಾರತದಾಗ ಭೀಷ್ಮ ಅನ್ನೋದು ಗಂಗಾಪುತ್ರನ ಬಿರುದು, ಹೆಸರು ಅಲ್ಲ ಅನ್ನೋದು ಗೊತ್ತಿರೋದಿಲ್ಲ. ಹಂಗ ನೋಡಿದರ ಮಹಾಭಾರತದಾಗ ಬಿರುದುಗಳೇ ಜಾಸ್ತಿ, ಹೆಸರು ಕಮ್ಮಿ. ಇರಲಿ ಬಿಡ್ರಿ.

ಈಗ ನಮ್ಮ ಮುಂದೆ ಬಂದಿರೋ ವಿಷಯ ಅಂದ್ರ ವಿಶ್ವ ಸಂಸ್ಥೆಯವರು ನಮ್ಮ ದೇಶದ ಕೆಲವು ರಾಜ್ಯಗಳ ಕೋವಿಡ್ ನಿರ್ವಹಣೆಯನ್ನು ಹೊಗಳಿದ ಸುದ್ದಿ.

ಅಲ್ಲಿನ ತಜ್ಞರು ಮುಂಬೈ ಶಹರದ ಧಾರಾವಿ ಝೋಪಡ ಪಟ್ಟಿಯೊಳಗ ಹೆಂಗ ಈ ರೋಗ ನಿಯಂತ್ರಣಕ್ಕ ಬಂತು ಅನ್ನೋದನ್ನು ನೋಡಿ, ಅಲ್ಲೇ ಸರಿ ಆಗಬಹುದು ಅಂದ್ರ ಎಲ್ಲಾದರೂ ಆಗಬಹುದು ಅಂತ ಹೇಳಿದರು. ಮತ್ತು ಕೇರಳದ ರೋಗಿ ಪತ್ತೆ ವಿಧಾನ ಹಾಗೂ ಆಸ್ಪತ್ರೆ ನಿರ್ವಹಣೆ ವಿಷಯದ ಬಗ್ಗೆ ಹೊಗಳಿದರು. ಅವರು ಇನ್ನೊಂದು ವಿಷಯ ಪ್ರಸ್ತಾಪ ಮಾಡಿದರು.

ಅದು ಎನಪ ಅಂದ್ರ ಕೇರಳದ ಕುಟುಂಬಶ್ರೀ ವ್ಯವಸ್ಥೆ ಕೆಳಗ ನಡೀತಾ ಇರೋ ಕಮ್ಮಿ ಖರ್ಚಿನ ಸರ್ಕಾರಿ ಕ್ಯಾಂಟೀನ್‌ಗಳು ಹೆಂಗ ಬಡವರ ಹಸಿವನ್ನು ಕಮ್ಮಿ ಮಾಡಿದರು ಅನ್ನೋದನ್ನ ಎತ್ತಿ ತೋರಿಸಿದರು.

ಆ ರಾಜ್ಯದ 510 ನಗರ ಹಾಗೂ ಹಳ್ಳಿಗಳಲ್ಲಿ ರಾಜ್ಯ ಸರಕಾರದಿಂದ ಬಡವರಿಗೆ ಅಂತ ಹೇಳಿ ‘ಜನಕೀಯ ಕುಟುಂಬಶ್ರೀ’ ಕ್ಯಾಂಟೀನು ಶುರು ಅಗಿದಾವ. ಇವನ್ನ ಮಹಿಳಾ ಸಂಘಗಳು ನಡಸತಾವ. ಅವರು ಇಪ್ಪತ್ತು ರೂಪಾಯಿಗೆ ಒಂದು ಊಟ ಕೊಡತಾರ. ಅದರಾಗ ಅರ್ಧ ಖರ್ಚು ರಾಜ್ಯ ಸರಕಾರ ವಹಿಸಿಕೊಳ್ಳೋದಕ್ಕ ಅವರಿಗೆ ಒಂದು ಊಟದ ಮ್ಯಾಲೆ ಹತ್ತು ರೂಪಾಯಿ ಸಿಗತದ.

ಇಲ್ಲಿ ತನಕ ಆ ಮಹಿಳಾ ಖಾನಾವಳಿಗಳು ಸುಮಾರು ಹತ್ತು ಲಕ್ಷ ತಾಟು ಊಟ ಮಾರಾಟ ಮಾಡಿದಾವ. ಇವುಗಳ ಯಶಸ್ಸು ನೋಡಿ ಇನ್ನೂ ಹೆಚ್ಚು ಕ್ಯಾಂಟೀನ್ ಶುರು ಮಾಡಬೇಕು ಅಂತ ಸರಕಾರ ನಿರ್ಧಾರ ಮಾಡೇತಿ.

ಎಲ್ಲಕ್ಕಿಂತ ಮುಖ್ಯ ಅಂದ್ರ ಇವು ಲಾಕಡೌನ್‌ದಾಗೂ ಕೆಲಸ ಮಾಡಿದಾವು.

ಅಲ್ಲಿ ಸಾಧ್ಯ ಆಗಿದ್ದು ನಮ್ಮಲ್ಲೆ ಯಾಕ ಸಾಧ್ಯ ಆಗಿಲ್ಲ? ನಮ್ಮಲ್ಲೆ ಯಾಕ ಬಡವರು ರಸ್ತೆದಾಗ ಸತ್ತರು? ಯಾಕ ಅವರಿಗೆ ಹೊತ್ತಿಗೆ ಸರಿಯಾಗಿ ಊಟ ಸಿಗಲಿಲ್ಲ? ಯಾಕ ನಮ್ಮ ಸರ್ಕಾರಿ ಖಾನಾವಳಿಗಳು ಲಾಕಡೌನ್‌ದಾಗ ಬಂದ ಆಗಿದ್ದವು?

ಇದರ ಹಿಂದ ಏನು ದೊಡ್ಡ ರಹಸ್ಯ ಇಲ್ಲ. ಇದರ ಹಿಂದ ಒಂದು ಮಜಾ ಕತಿ ಐತಿ. ಅದನ್ನ ಹೇಳಬೇಕು ಅಂದ್ರ ಷೇಕ್ಸ್‌ಪಿಯರ್‌ನ ನೆನಪು ಮಾಡಿಕೋಬೇಕು. ಅವನ ರೋಮಿಯೋ ಜೂಲಿಯಟ್ ನಾಟಕದ ಜಗತ್ ವಿಖ್ಯಾತ ಸಾಲು ‘ಹೆಸರಿನಲ್ಲಿ ಏನಿದೆ’ ಅನ್ನೋದನ್ನ ನೆನಪು ಮಾಡಿಕೋಬೇಕು.

ಕರ್ನಾಟಕದಾಗ ಸರ್ಕಾರಿ ಖಾನಾವಳಿಗಳಿಗೆ ಏನು ಅಂತ ಕರೀತಾರ? ಇಂದಿರಾ ಕ್ಯಾಂಟೀನು ಅಂತಾರ. ಆ ಹೆಸರನ ಅವಕ್ಕ ಕಂಟಕ ಆಗೇದ. ಹೆಂಗ ಅಂತೀರಿ? ಇಲ್ಲಿ ಕೇಳರಿ.

ಲಾಕಡೌನ್ ಆಗಿದ್ದಾಗ ಒಂದು ದಿವಸ ಯಾರೋ ಬಡವರು ಬಂದು ಅಲ್ಲಿ ಊಟ ಮಾಡಿದರು ಅಂದುಕೋರಿ. ಅವರು ಹೊರಗ ಹೋಗಿ ಏನು ಹೇಳತಾರ?

ನಾವು ಇಂದಿರಾ ಕ್ಯಾಂಟೀನ್‌ದೊಳಗ ಊಟ ಮಾಡಿದಿವಿ ಅಂತ ಹೇಳತಾರ. ಅದು ಈಗಿನ ಕಮಲ ಪಕ್ಷಕ್ಕೆ ಆಗಿ ಬರೋದಿಲ್ಲ. ನಾವು ಊಟ ಹಾಕಿದೀವಿ, ಅದರ ಕಾಂಗ್ರೆಸ್ ನಾಯಕಿಗೆ ಹೆಸರು ಬಂತು ಅಂತ ಅವರು ಕಿರಿಕಿರಿ ಮಾಡಿಕೋತಾರ.

ಇದನ್ನು ತಪ್ಪಿಸೋದು ಹೆಂಗ ಅಂದ್ರ ಬಡವರು ಹಸಿವೆಯಿಂದ ಇರೋದು ಅವರ ಪ್ರಾಬ್ಲಂ ಅಂತ ಸರಕಾರ ಬ್ಯಾರೆ ಕಡೆ ನೋಡೋದು. ಭಾಷಣ, ಹೆಸರು ಬದಲಾವಣೆ, ರಸ್ತೆ, ಸೇತುವೆ, ಗಟಾರು, ಕೋರೋನಾ ಔಷಧಿ ಗುತ್ತಿಗೆ, ಕೋರೋನಾ ಕಾಳಜಿ ಕೇಂದ್ರದ ಬಾಡಿಗೆ ಮುಂತಾದ ಅತಿ ಮುಖ್ಯ ಸಂಗತಿಗಳ ಬಗ್ಗೆ ಸಚಿವರು ತಲೆ ಕೆಡಿಸಿಕೊಳ್ಳೋದು. ಆ ಕ್ಲಿಷ್ಟ ಸಮಸ್ಯೆಗಳಿಗೆ ಈ ಸರಳ ಪರಿಹಾರಗಳು.

ಆದರ ಆಳುವ ಪಕ್ಷಕ್ಕೆ ಹೆಸರು ಬದಲಾವಣೆ ಮಾಡೋದು ಏನು ಅಷ್ಟು ಕಷ್ಟದ ಕೆಲಸ ಅಲ್ಲ. ಪಂಥ ಪ್ರಧಾನ ಸೇವಕರು ಬಂದ ಮ್ಯಾಲೆ ಎರಡು ನೂರಕ್ಕೂ ಹೆಚ್ಚು ಯೋಜನೆಗಳ ಹೆಸರು ಬದಲಾವಣೆ ಮಾಡಿದಾರು. ಕಾಂಗ್ರೆಸ್ ನವರು ಶುರು ಮಾಡಿದ ಯೋಜನೆ ಹೋಗಲಿ, ತಮ್ಮದೇ ಪಕ್ಷದ ಹಿರಿಯರು ಹರಿಬಿಟ್ಟ ಸ್ವದೇಶಿ ಅನ್ನೋ ವಿಚಾರದ ಹೆಸರು ಬದಲು ಮಾಡಿ ಆತ್ಮನಿರ್ಭರ ಅಂತ ಮಾಡಿದರು.

ಆದರ ಕರ್ನಾಟಕದೊಳಗ ಅದು ಸಾಧ್ಯ ಆಗಲಿಲ್ಲ. ಯಾಕೋ ಗೊತ್ತಿಲ್ಲ. ಅದಕ್ಕ ಆಡಳಿತಾತ್ಮಕ ಕಾರಣಗಳಿಗಿಂತ ರಾಜಕೀಯ ಕಾರಣನ ಹೆಚ್ಚು ಇರಬಹುದು.

ಅದು ಹೋಗಲಿ ಬಿಡ್ರಿ.

ಕರ್ನಾಟಕದ ಖಾನಾವಳಿಗೆ ಇಂದಿರಮ್ಮನ ಹೆಸರು ಹೆಂಗ ಬಂತು ಅಂತ ಗೊತ್ತೇನು ನಿಮಗ?

ಅದು ಗೊತ್ತಾಗಬೇಕು ಅಂದ್ರ ನಿಮಗ ಕೊಲ್ಲು ಹುಡುಗಿ ಒಮ್ಮೆ ನನ್ನ ಅನ್ನೋ ಹಾಡು ಗೊತ್ತಿರಬೇಕು. ಅದು ಮುಂಗಾರು ಮಳೆ ಅನ್ನೋ ಪಿಚ್ಚರುದಾಗಿನದು. ಅದರ ನಿರ್ದೇಶಕ ಯಾರು, ಅದಕ್ಕ ರೊಕ್ಕ ಕೊಟ್ಟವರು ಯಾರು ಅಂತ ನಿಮಗ ಗೊತ್ತಿರಬೇಕು. ಹಂಗ ಅದಕ್ಕ ರೊಕ್ಕ ಹೊಂದಿಸಿದವರು ಒಬ್ಬರು ರಾಜಕೀಯದಾಗ ಹೋಗೋಣು ಅಂತ ನಿರ್ಧಾರ ಮಾಡಿದರು.

ಅವರು ಅಂದಿನ ಆಡಳಿತ ಪಕ್ಷವಾದ ಕಾಂಗ್ರೆಸ್ ಸೇರಿಕೊಂಡರು. ಅಷ್ಟರೊಳಗ ರಾಜ್ಯ ಸರಕಾರ ಖಾನಾವಳಿ ಆರಂಭ ಮಾಡಬೇಕು, ಅವಕ್ಕ ನಮ್ಮ ಕ್ಯಾಂಟೀನ್ ಅಂತ ಹೆಸರು ಇಡಬೇಕು ಅಂತ ನಿರ್ಧಾರ ಮಾಡಿತ್ತು.

ನಮ್ಮ ಸಿನಿಮಾ ಸ್ಟಾರ್ ಅವರು ಕಾಂಗ್ರೆಸ್‌ನೊಳಗ ಫಳ ಫಳ ಹೊಳೀಬೇಕು ಅಂತ ಹೇಳಿ ಒಂದು ಸಲಹೆ ಕೊಟ್ಟರು. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯೊಳಗ ಇದಕ್ಕ ನಮ್ಮ ಕ್ಯಾಂಟೀನ್ ಅನ್ನೋದು ಬ್ಯಾಡ, ಇಂದಿರಾ ಕ್ಯಾಂಟೀನ್ ಅನ್ನೋಣು ಅಂತ ಅಂದರು. ಇಂತಹ ಬೀಜ ಮಂತ್ರ ಪ್ರಯೋಗ ಆದ ಮೇಲೆ ಅದನ್ನ ವಿರೋಧ ಮಾಡೋ ಗಣ ಮಗ ಕಾಂಗ್ರೆಸ್ ದೊಳಗ ಯಾರ ಅದಾರು? ಎಲ್ಲರೂ ಸುಮ್ಮನೇ ಕೂತರು. ಜೈಕಾರ ಹಾಕಿದರು.

ಭಾರೀ ಪ್ರಚಾರ ದೊಂದಿಗೆ ಶುರು ಆದ ಆ ಖಾನಾವಳಿಗಳು ಬಡವರಿಗೆ ಯಾವ ಕಾಲಕ್ಕೆ ಬೇಕಾಗಿದ್ದವೋ ಆ ಕಾಲಕ್ಕೆ ಉಪಯೋಗ ಆಗಲಿಲ್ಲ.

ಬರ ಬರ್ತಾ ಅವನ್ನ ಮಹಿಳಾ ಸಂಘಗಳಿಗೆ ವಹಿಸಿ ಕೊಡಬೇಕು ಅನ್ನೋ ವಿಚಾರ ಹೋತು. ಅವು ಖಾಸಗಿ ಗುತ್ತಿಗೆದಾರರ ಕೈಯಾಗ ಸಿಕ್ಕು ನಮ್ಮ ಕ್ಯಾಂಟೀನು ಆಗದೇ ಕಾಂಟ್ರಾಕ್ಟರ ಕ್ಯಾಂಟೀನು ಆದವು.

ಇನ್ನು ಆ ಐತಿಹಾಸಿಕ ಐಡಿಯಾ ಕೊಟ್ಟ ಪುಣ್ಯಾತ್ಮ ಇಂದಿರಾ ಅವರ ಪಕ್ಷದೊಳಗ ಬಹಳ ದಿವಸ ಉಳೀಲಿಲ್ಲ. ಮುಂಗಾರು ಮಾರುತ ಇತ್ತಲಾಗ ಬೀಸಲಿಕ್ಕೆ ಹತ್ತಿದ್ದು ನೋಡಿದ ಅವರು ಈಗ ಕಮಲ ಪಕ್ಷ ದೊಳಗ ಅದಾರು.

ಯಕ್ಷಗಾನ ಭಾಗವತರು ಪ್ರತಿ ಸರೆ “ಬಲಿರೆ ಪರಾಕ್ರಮ ಕಂಠೀರವ” ಅಂತ ಹೇಳಿದಾಗ ಅವರು ಹೊಸ ಪಾತ್ರದ ಪರಿಚಯ ಮಾಡತಿರತಾರ. ಒಮ್ಮೊಮ್ಮೆ ಹಳೇ ಪಾತ್ರನ ಹೊಸ ಹೆಸರಿನಿಂದ ಬರತಾವೂ. ಯಾವಾಗ ಭಾಗ್ಯವಾತರು ನಕ್ಕೋತ ಹೊಸಬರ ಪರಿಚಯ ಮಾಡತಾರ.

ಆ ವಿಲಿಯಮ್ ಷೇಕ್ಸ್‌ಪಿಯರ್‌ಗೆ ಏನು ಗೊತ್ತು – ಹೆಸರಿನ ಗಮ್ಮತ್ತು? ನಮ್ಮಲ್ಲೇ ಗುಲಾಬಿ ಹೂವಿಗೆ ಕಮಲ ಅಂತ ಹೆಸರು ಇಟ್ಟರ ಅದು ಸೂಸೋ ಗಂಧನ ಬೇರೆ!

ಅಲ್ಲವೇ ಮನೋಲ್ಲಾಸಿನಿ?


ಇದನ್ನು ಓದಿ: ಕೋವಿಡ್‌ಗೆ ಬಲಿಯಾದ ಪೌರಕಾರ್ಮಿಕರಿಗೆ ಶ್ರದ್ಧಾಂಜಲಿ: ಕಾಳಜಿ ವಹಿಸದ ಸರ್ಕಾರದ ವಿರುದ್ಧ ಪ್ರತಿಭಟನೆಗೆ ನಿರ್ಧಾರ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...