Homeಅಂಕಣಗಳುಯಡೂರಪ್ಪ ಯಯಾತಿ ಓತ್ತಾಯಿದ್ದನಂತೆ!- ಕಟ್ಟೆಪುರಾಣ

ಯಡೂರಪ್ಪ ಯಯಾತಿ ಓತ್ತಾಯಿದ್ದನಂತೆ!- ಕಟ್ಟೆಪುರಾಣ

- Advertisement -
- Advertisement -

ಉಗ್ರಿ ಚಾಡಿ ಹೇಳುವ ದನಿಯಲ್ಲಿ

‘ನೋಡೆ ಜುಮ್ಮಿ, ಈ ಬಿಜೆಪಿ ಸರಕಾರದೋರು ಕೊರೋನಾ ತಡಿಯಕ್ಕೆ ಅಂತ ಇರೊ ಅವುಸ್ದಿ, ಮಾತ್ರೆ, ಸ್ಯಾನಿಟೈಸರು, ಕಿಟ್ಟು, ಬೆಡ್ಡು ಇದನ್ಯಲ್ಲ ತಗಳವಾಗ ಒಂದುಕ್ಯರಡು ಅಂತ ದುಡ್ಡು ಕೊಟ್ಟು ಕೋಟ್ಯಾಂತರ್ರುಪಾಯಿ ಹ್ವಡದವುರಂತೆ’ ಎಂದ.

‘ಅಯ್ಯೋ ಇನ್ಯಂಥ ಗತಿಗ್ಯಟ್ಟ ಮುಂಡೆ ಮಕ್ಕಳಿವುರೂ, ಇದರಲ್ಲು ದುಡ್ಡು ವಡದರೇ’ ಎಂದಳು.

‘ಇದರಲ್ಲೆ ಕಣೆ ಹ್ವಡಿಯದು. ಯಾಕಂದ್ರೆ ಜನ ನಂಬದಿಲ್ಲ ಅಂತ ಅವುರಿಗೂ ಗೊತ್ತು.’

‘ಮನಸ್ಯಂಗೆ ಬತ್ಲ ಅವುರಿಗೆ ಹ್ಯಣ ತಿನ್ನೊ ನನ್ನ ಮಕ್ಕಳಿವುರು.’

‘ಆ ಟೈಮಲ್ಲಿ ಮನಸು ಕ್ಯಲಸ ಮಾಡದಿಲ್ಲ ಕಣಕ್ಕ. ಜನಗಳೂ ಇಗಿರೊ ಕಷ್ಟದಲ್ಲಿ ಅದ್ನ್ಯಲ್ಲ ನೋಡದಿಲ್ಲ. ಕೇಳದಿಲ್ಲ ಅಂತ ಅವುರಿಗೂ ಗೊತ್ತು’ ಎಂದ ವಾಟಿಸ್ಸೆ.

‘ಅಂಗರಿವುರು ಜನಗಳ ಉಳಸದಿಲ್ಲ ಬುಡು.’

‘ಜನಗಳ ಉಳಸರಾಗಿದ್ರೆ ಇಂತ ತೀರಮಾನ ತಗತಿದ್ರೇನಕ್ಕ.’

‘ಯಾವ ತೀರಮಾನ.’

‘ಕೆಲವು ಜಿಲ್ಲೆಯ ಮಧ್ಯಾಹ್ನದ ಮ್ಯಾಲೆ ಲಾಕ್‍ಡವುನ್ ಮಾಡ್ತಾ ಅವುರೆ. ಅಲ್ಲ ಕಣಕ್ಕ ವತ್ತರಿಂದ ಜನ ನಾಯಿ ತಿರಿಗಿದಂಗೆ ತಿರಗಿ ಮೂರುಗಂಟಿಗೆ ಮನಿಗೆ ಸೇರಿಕತ್ತರೆ. ಅಮ್ಯಾಲೆ ಲಾಕ್‍ಡವುನ್ ಆದ್ರೆಷ್ಟು ಬುಟ್ಟರೆಸ್ಟೂ ಇಂತದೂ ತಿಳಿಯದಿಲವಲ್ಲ ಏನೇಳನ.’

‘ಎಡೂರಪ್ಪನಿಗಾಗ್ಲೆ ವಯಿಸಾಯ್ತು ಕಣೊ, ಇಂತ ಸೂಕುಸ್ಮೆ ಹ್ವಳಿಯದಿಲ್ಲ ಅವುನಿಗೆ.’

‘ನಿಜಕಣೊ ಉಗ್ರಿ, ಅದ್ಕೆ ನೊಡು ಯಯಾತಿ ಓತ್ತಾಕುಂತವುನೆ.’

‘ಯಯ್ಯಾತಿ ಅಂದ್ರೇನ್ಲ.’

‘ಅದು ಪುಸ್ತಗ ಕಣಕ್ಕ ಮುದುಕರ್ಯಲ್ಲ ಓದೊ ಪುಸ್ತಕ.’

‘ಅದ್ಯಂತೆದ್ಲ ಮುದುಕುರೋದೊ ಪುಸಗ.’

‘ಅದರ ಕತೆ ಗೊತ್ತೇನಕ್ಕ.’

‘ನನಿಗೇನು ಗೊತ್ತು ಹೇಳ್ಳ.’

‘ಯಯಾತಿ ಒಬ್ಬ ರಾಜ ಕಣಕ್ಕ. ರಾಜ ಅಂದ ಮ್ಯಾಲೆ ಹೆಂಗಸರ ಚಟ ಇದ್ದೇ ಇರತದೆ. ಅಂಗೆ ಇವುನು ರುಶಿಮುನಿ ಮಗಳ ಹಿಡಕಳಕ್ಕೋದ ಅವುಳೋಗಿ ಅವುರಪ್ಪನಿಗೇಳಿದ್ಲು.’

‘ರಾಜನಿಗೆ ಹೆಡತಿ ಇರಲಿಲ್ವೆ?’

‘ಇರತರೆ ಕಣಕ್ಕ. ಅವುರ್ಯಲ್ಲ ನ್ಯಪಕಿರತರೆ ಇವುರು ಮಾತ್ರ ಚನ್ನಾಗಿರೊರನ್ಯಲ್ಲ ಹಿಡಕಳಕ್ಕೋಯ್ತರೆ, ಅಂಗೆ ಯಯಾತಿನೂ ಹೋಗಿ ಬ್ರಾಂಬ್ರುಡುಗಿ ಕೆಣಕಿದ. ಸಾಮಾನ್ಯವಾಗಿ ಬ್ರಾಂಬ್ರುಡುಗಿರಿಗೆ ಸೆಕ್ಸ್ ಕಡಮೆ. ಅದ್ಕೆ ಹೋಗಿ ಅವುರಪ್ಪನಿಗೇಳಿದ್ಲು.’

‘ಸರಿಯಾಗೆ ಮ್ಯಾಡವುಳೆ ಬುಡು.’

‘ಅವುರಪ್ಪ ಮಹಾಕೋಪಿಸ್ಟ. ಅವುನೋಗಿ ಯಯಾತಿ ಬೈದು ನಿನ್ನ ಪ್ರಾಯದಿಂದ್ಲೆ ಹಿಂಗೆ ಮಾಡಿದ್ದಿ ಅದ್ಕೆ ನೀನು ಮುದುಕಾಗೋಗತ್ತಗೆ ಅಂತ ಶಾಪ ಕೊಟ್ಟ. ಆ ಕೂಡ್ಳೆ ಯಯಾತಿ ನಮ್ಮ ಸೀರ ಮಾವನಂಗಾದ.’

‘ಅಯ್ಯೋ ಪಾಪ ಅಂತ ಸಾಪನೇನ್ಲ ಕೊಡದು.’

‘ಅದವುನಿಗೂ ಗೊತ್ತಾಯ್ತು ಕಣಕ್ಕ. ಅದ್ಕೆ ಯಯಾತಿಗೆ ನಿನ್ನ ಮುಪ್ಪ ಯಾರಿಗಾರ ಕೊಟ್ರೆ ಅವುರ ಹರೇಯ ನಿನಿಗೆ ಬತ್ತದೆ ಹೋಗು ಅಂದ. ಸರಿ ಯಯಾತಿ ಬಂದು ಯಾರಾರ ನನ್ನ ಮುಪ್ಪ ತಗಳಿ ಅರ್ದ ರಾಜ್ಯ ಕೊಡ್ತಿನಿ ಅಂದ ಯಾರೂ ಬರಲಿಲ್ಲ.’

‘ಅದ್ಯಂಗೆ ಬಂದರ್ಲ ಮುಪ್ಪು ಯಾರಿಗೆ ಬೇಕೇಳು.’

‘ಅಂಗೆ ಆಯ್ತು ಕಣಕ್ಕ. ಕಡಿಗೆ ಅಪ್ಪನ ಗೋಳಾಟ ನೋಡಕ್ಕಾಗದೆ ಮಗನೆ ಬಂದು ಈಸ್ಕಂಡ. ಅಪ್ಪ ಹರೇವುದೋನಾದ. ಮಗ ಮುದುಕಾದ ಅದ ನೊಡಿ ಸ್ವಸೆ ನ್ಯಾಣಾಯ್ಕಂಡು ಸತ್ತೋದ್ಲು. ಅದು ಗೊತ್ತಿಲ್ಲದೆ ಯಯಾತಿ ಹೆಡತಿ ಹಿಡಕಳಕ್ಕೊದ. ಅವುಳು ನಿನ್ನ ಪ್ರಾಯ ನನ್ನ ಮಗಂದು ಮುಟ್ಟುಬ್ಯಾಡ ಅಂದ್ಲು. ಯಾಯತಿ ಅಳತ ತಿರಗ ಮಗನಿಗೆ ಪ್ರಾಯಕೊಟ್ಟು ಮುದುಕಾದ.’

‘ಚನಾಗ್ಯದೆ ಕಂಡ್ಳ ಕತೆ. ಇದ್ಯಾಕ್ಕೋತ್ತ ಅವುನೆ ಎಡೂರಪ್ಪಾ.’

‘ಯಾಕೆ ಅಂದ್ರೆ ಆಗ್ಲೆ ಯಪ್ಪಂತೆಟ್ಟು ವರ್ಸಾಯ್ತ ಅದೆ. ಶೋಬಕ್ಕನೂ ದೂರಾಗ್ಯವುಳೆ. ಪ್ರಾಯ ಹೋಯ್ತಾ ಅದೆ. ಹೈಕಮಾಂಡು ಎಡೂರಪ್ಪನೆ ಇಳಿಲಿ ಅಂತ ಕಿರುಕುಳ ಕೊಡ್ತಾ ಅವುರೆ. ಕೊರೋನಾ ಸಮಸ್ಯೆ ಹಠಗಾಯಿಸಿಗಂಡದೆ. ಜ್ವತೆಲಿರೊ ಮಂತ್ರಿಗಳು ಕೊರೋನಾದಲ್ಲೂ ಕಾಸು ತಿಂತಾ ಅವುರೆ. ಅಂತೂ ಸೂಕುಸ್ಮುವಾಗಿ ನೋಡಿದ್ರೆ ಯಯಾತಿ ಗೋಳಾಟ ಹೆಡೂರಪ್ಪನಿಗೂ ಹಠಗಾಯಿಸಿಗಂಡದೆ. ಮುಪ್ಪು ಅನಿವಾರ್ಯ ಅಧಿಕಾರದಿಂದ ಇಳಿಯೋದು ಅನಿವಾರ್ಯ, ವಿಜಯೇಂದ್ರನ್ನ ಮುಂದೆ ತರೋದು ಅನಿವಾರ್ಯ, ಇಂತ ಅನಿವಾರ್ಯಗಳೆ ಎಡೂರಪ್ಪನ್ನ ಬಗ್ಗಸಬಹುದು ಕಣಕ್ಕ.’

‘ಅದೇನಾರ ಆಗ್ಲಿ ಬಡುವುರು ತಿನ್ನ ಅಕ್ಕಿನೆ ಕಡಮೆ ಮಾಡ್ಯವುನಂತೆ ಇವುನಿಗೆ ವಳ್ಳೆದಾದತೆ?’

‘!?


ಇದನ್ನು ಓದಿ: ಡಿ.ಕೆ.ಶಿ ಬಿಜೆಪಿಗಳ ಹೆದರಸ್ತನೆ ಬುಡೊ. ನೋ ಡವುಟು – ಚಂದ್ರೇಗೌಡರ ಕಟ್ಟೆಪುರಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...