Homeಅಂಕಣಗಳುಯಡೂರಪ್ಪ ಯಯಾತಿ ಓತ್ತಾಯಿದ್ದನಂತೆ!- ಕಟ್ಟೆಪುರಾಣ

ಯಡೂರಪ್ಪ ಯಯಾತಿ ಓತ್ತಾಯಿದ್ದನಂತೆ!- ಕಟ್ಟೆಪುರಾಣ

- Advertisement -
- Advertisement -

ಉಗ್ರಿ ಚಾಡಿ ಹೇಳುವ ದನಿಯಲ್ಲಿ

‘ನೋಡೆ ಜುಮ್ಮಿ, ಈ ಬಿಜೆಪಿ ಸರಕಾರದೋರು ಕೊರೋನಾ ತಡಿಯಕ್ಕೆ ಅಂತ ಇರೊ ಅವುಸ್ದಿ, ಮಾತ್ರೆ, ಸ್ಯಾನಿಟೈಸರು, ಕಿಟ್ಟು, ಬೆಡ್ಡು ಇದನ್ಯಲ್ಲ ತಗಳವಾಗ ಒಂದುಕ್ಯರಡು ಅಂತ ದುಡ್ಡು ಕೊಟ್ಟು ಕೋಟ್ಯಾಂತರ್ರುಪಾಯಿ ಹ್ವಡದವುರಂತೆ’ ಎಂದ.

‘ಅಯ್ಯೋ ಇನ್ಯಂಥ ಗತಿಗ್ಯಟ್ಟ ಮುಂಡೆ ಮಕ್ಕಳಿವುರೂ, ಇದರಲ್ಲು ದುಡ್ಡು ವಡದರೇ’ ಎಂದಳು.

‘ಇದರಲ್ಲೆ ಕಣೆ ಹ್ವಡಿಯದು. ಯಾಕಂದ್ರೆ ಜನ ನಂಬದಿಲ್ಲ ಅಂತ ಅವುರಿಗೂ ಗೊತ್ತು.’

‘ಮನಸ್ಯಂಗೆ ಬತ್ಲ ಅವುರಿಗೆ ಹ್ಯಣ ತಿನ್ನೊ ನನ್ನ ಮಕ್ಕಳಿವುರು.’

‘ಆ ಟೈಮಲ್ಲಿ ಮನಸು ಕ್ಯಲಸ ಮಾಡದಿಲ್ಲ ಕಣಕ್ಕ. ಜನಗಳೂ ಇಗಿರೊ ಕಷ್ಟದಲ್ಲಿ ಅದ್ನ್ಯಲ್ಲ ನೋಡದಿಲ್ಲ. ಕೇಳದಿಲ್ಲ ಅಂತ ಅವುರಿಗೂ ಗೊತ್ತು’ ಎಂದ ವಾಟಿಸ್ಸೆ.

‘ಅಂಗರಿವುರು ಜನಗಳ ಉಳಸದಿಲ್ಲ ಬುಡು.’

‘ಜನಗಳ ಉಳಸರಾಗಿದ್ರೆ ಇಂತ ತೀರಮಾನ ತಗತಿದ್ರೇನಕ್ಕ.’

‘ಯಾವ ತೀರಮಾನ.’

‘ಕೆಲವು ಜಿಲ್ಲೆಯ ಮಧ್ಯಾಹ್ನದ ಮ್ಯಾಲೆ ಲಾಕ್‍ಡವುನ್ ಮಾಡ್ತಾ ಅವುರೆ. ಅಲ್ಲ ಕಣಕ್ಕ ವತ್ತರಿಂದ ಜನ ನಾಯಿ ತಿರಿಗಿದಂಗೆ ತಿರಗಿ ಮೂರುಗಂಟಿಗೆ ಮನಿಗೆ ಸೇರಿಕತ್ತರೆ. ಅಮ್ಯಾಲೆ ಲಾಕ್‍ಡವುನ್ ಆದ್ರೆಷ್ಟು ಬುಟ್ಟರೆಸ್ಟೂ ಇಂತದೂ ತಿಳಿಯದಿಲವಲ್ಲ ಏನೇಳನ.’

‘ಎಡೂರಪ್ಪನಿಗಾಗ್ಲೆ ವಯಿಸಾಯ್ತು ಕಣೊ, ಇಂತ ಸೂಕುಸ್ಮೆ ಹ್ವಳಿಯದಿಲ್ಲ ಅವುನಿಗೆ.’

‘ನಿಜಕಣೊ ಉಗ್ರಿ, ಅದ್ಕೆ ನೊಡು ಯಯಾತಿ ಓತ್ತಾಕುಂತವುನೆ.’

‘ಯಯ್ಯಾತಿ ಅಂದ್ರೇನ್ಲ.’

‘ಅದು ಪುಸ್ತಗ ಕಣಕ್ಕ ಮುದುಕರ್ಯಲ್ಲ ಓದೊ ಪುಸ್ತಕ.’

‘ಅದ್ಯಂತೆದ್ಲ ಮುದುಕುರೋದೊ ಪುಸಗ.’

‘ಅದರ ಕತೆ ಗೊತ್ತೇನಕ್ಕ.’

‘ನನಿಗೇನು ಗೊತ್ತು ಹೇಳ್ಳ.’

‘ಯಯಾತಿ ಒಬ್ಬ ರಾಜ ಕಣಕ್ಕ. ರಾಜ ಅಂದ ಮ್ಯಾಲೆ ಹೆಂಗಸರ ಚಟ ಇದ್ದೇ ಇರತದೆ. ಅಂಗೆ ಇವುನು ರುಶಿಮುನಿ ಮಗಳ ಹಿಡಕಳಕ್ಕೋದ ಅವುಳೋಗಿ ಅವುರಪ್ಪನಿಗೇಳಿದ್ಲು.’

‘ರಾಜನಿಗೆ ಹೆಡತಿ ಇರಲಿಲ್ವೆ?’

‘ಇರತರೆ ಕಣಕ್ಕ. ಅವುರ್ಯಲ್ಲ ನ್ಯಪಕಿರತರೆ ಇವುರು ಮಾತ್ರ ಚನ್ನಾಗಿರೊರನ್ಯಲ್ಲ ಹಿಡಕಳಕ್ಕೋಯ್ತರೆ, ಅಂಗೆ ಯಯಾತಿನೂ ಹೋಗಿ ಬ್ರಾಂಬ್ರುಡುಗಿ ಕೆಣಕಿದ. ಸಾಮಾನ್ಯವಾಗಿ ಬ್ರಾಂಬ್ರುಡುಗಿರಿಗೆ ಸೆಕ್ಸ್ ಕಡಮೆ. ಅದ್ಕೆ ಹೋಗಿ ಅವುರಪ್ಪನಿಗೇಳಿದ್ಲು.’

‘ಸರಿಯಾಗೆ ಮ್ಯಾಡವುಳೆ ಬುಡು.’

‘ಅವುರಪ್ಪ ಮಹಾಕೋಪಿಸ್ಟ. ಅವುನೋಗಿ ಯಯಾತಿ ಬೈದು ನಿನ್ನ ಪ್ರಾಯದಿಂದ್ಲೆ ಹಿಂಗೆ ಮಾಡಿದ್ದಿ ಅದ್ಕೆ ನೀನು ಮುದುಕಾಗೋಗತ್ತಗೆ ಅಂತ ಶಾಪ ಕೊಟ್ಟ. ಆ ಕೂಡ್ಳೆ ಯಯಾತಿ ನಮ್ಮ ಸೀರ ಮಾವನಂಗಾದ.’

‘ಅಯ್ಯೋ ಪಾಪ ಅಂತ ಸಾಪನೇನ್ಲ ಕೊಡದು.’

‘ಅದವುನಿಗೂ ಗೊತ್ತಾಯ್ತು ಕಣಕ್ಕ. ಅದ್ಕೆ ಯಯಾತಿಗೆ ನಿನ್ನ ಮುಪ್ಪ ಯಾರಿಗಾರ ಕೊಟ್ರೆ ಅವುರ ಹರೇಯ ನಿನಿಗೆ ಬತ್ತದೆ ಹೋಗು ಅಂದ. ಸರಿ ಯಯಾತಿ ಬಂದು ಯಾರಾರ ನನ್ನ ಮುಪ್ಪ ತಗಳಿ ಅರ್ದ ರಾಜ್ಯ ಕೊಡ್ತಿನಿ ಅಂದ ಯಾರೂ ಬರಲಿಲ್ಲ.’

‘ಅದ್ಯಂಗೆ ಬಂದರ್ಲ ಮುಪ್ಪು ಯಾರಿಗೆ ಬೇಕೇಳು.’

‘ಅಂಗೆ ಆಯ್ತು ಕಣಕ್ಕ. ಕಡಿಗೆ ಅಪ್ಪನ ಗೋಳಾಟ ನೋಡಕ್ಕಾಗದೆ ಮಗನೆ ಬಂದು ಈಸ್ಕಂಡ. ಅಪ್ಪ ಹರೇವುದೋನಾದ. ಮಗ ಮುದುಕಾದ ಅದ ನೊಡಿ ಸ್ವಸೆ ನ್ಯಾಣಾಯ್ಕಂಡು ಸತ್ತೋದ್ಲು. ಅದು ಗೊತ್ತಿಲ್ಲದೆ ಯಯಾತಿ ಹೆಡತಿ ಹಿಡಕಳಕ್ಕೊದ. ಅವುಳು ನಿನ್ನ ಪ್ರಾಯ ನನ್ನ ಮಗಂದು ಮುಟ್ಟುಬ್ಯಾಡ ಅಂದ್ಲು. ಯಾಯತಿ ಅಳತ ತಿರಗ ಮಗನಿಗೆ ಪ್ರಾಯಕೊಟ್ಟು ಮುದುಕಾದ.’

‘ಚನಾಗ್ಯದೆ ಕಂಡ್ಳ ಕತೆ. ಇದ್ಯಾಕ್ಕೋತ್ತ ಅವುನೆ ಎಡೂರಪ್ಪಾ.’

‘ಯಾಕೆ ಅಂದ್ರೆ ಆಗ್ಲೆ ಯಪ್ಪಂತೆಟ್ಟು ವರ್ಸಾಯ್ತ ಅದೆ. ಶೋಬಕ್ಕನೂ ದೂರಾಗ್ಯವುಳೆ. ಪ್ರಾಯ ಹೋಯ್ತಾ ಅದೆ. ಹೈಕಮಾಂಡು ಎಡೂರಪ್ಪನೆ ಇಳಿಲಿ ಅಂತ ಕಿರುಕುಳ ಕೊಡ್ತಾ ಅವುರೆ. ಕೊರೋನಾ ಸಮಸ್ಯೆ ಹಠಗಾಯಿಸಿಗಂಡದೆ. ಜ್ವತೆಲಿರೊ ಮಂತ್ರಿಗಳು ಕೊರೋನಾದಲ್ಲೂ ಕಾಸು ತಿಂತಾ ಅವುರೆ. ಅಂತೂ ಸೂಕುಸ್ಮುವಾಗಿ ನೋಡಿದ್ರೆ ಯಯಾತಿ ಗೋಳಾಟ ಹೆಡೂರಪ್ಪನಿಗೂ ಹಠಗಾಯಿಸಿಗಂಡದೆ. ಮುಪ್ಪು ಅನಿವಾರ್ಯ ಅಧಿಕಾರದಿಂದ ಇಳಿಯೋದು ಅನಿವಾರ್ಯ, ವಿಜಯೇಂದ್ರನ್ನ ಮುಂದೆ ತರೋದು ಅನಿವಾರ್ಯ, ಇಂತ ಅನಿವಾರ್ಯಗಳೆ ಎಡೂರಪ್ಪನ್ನ ಬಗ್ಗಸಬಹುದು ಕಣಕ್ಕ.’

‘ಅದೇನಾರ ಆಗ್ಲಿ ಬಡುವುರು ತಿನ್ನ ಅಕ್ಕಿನೆ ಕಡಮೆ ಮಾಡ್ಯವುನಂತೆ ಇವುನಿಗೆ ವಳ್ಳೆದಾದತೆ?’

‘!?


ಇದನ್ನು ಓದಿ: ಡಿ.ಕೆ.ಶಿ ಬಿಜೆಪಿಗಳ ಹೆದರಸ್ತನೆ ಬುಡೊ. ನೋ ಡವುಟು – ಚಂದ್ರೇಗೌಡರ ಕಟ್ಟೆಪುರಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...