Homeಅಂಕಣಗಳುಯಡೂರಪ್ಪ ಯಯಾತಿ ಓತ್ತಾಯಿದ್ದನಂತೆ!- ಕಟ್ಟೆಪುರಾಣ

ಯಡೂರಪ್ಪ ಯಯಾತಿ ಓತ್ತಾಯಿದ್ದನಂತೆ!- ಕಟ್ಟೆಪುರಾಣ

- Advertisement -
- Advertisement -

ಉಗ್ರಿ ಚಾಡಿ ಹೇಳುವ ದನಿಯಲ್ಲಿ

‘ನೋಡೆ ಜುಮ್ಮಿ, ಈ ಬಿಜೆಪಿ ಸರಕಾರದೋರು ಕೊರೋನಾ ತಡಿಯಕ್ಕೆ ಅಂತ ಇರೊ ಅವುಸ್ದಿ, ಮಾತ್ರೆ, ಸ್ಯಾನಿಟೈಸರು, ಕಿಟ್ಟು, ಬೆಡ್ಡು ಇದನ್ಯಲ್ಲ ತಗಳವಾಗ ಒಂದುಕ್ಯರಡು ಅಂತ ದುಡ್ಡು ಕೊಟ್ಟು ಕೋಟ್ಯಾಂತರ್ರುಪಾಯಿ ಹ್ವಡದವುರಂತೆ’ ಎಂದ.

‘ಅಯ್ಯೋ ಇನ್ಯಂಥ ಗತಿಗ್ಯಟ್ಟ ಮುಂಡೆ ಮಕ್ಕಳಿವುರೂ, ಇದರಲ್ಲು ದುಡ್ಡು ವಡದರೇ’ ಎಂದಳು.

‘ಇದರಲ್ಲೆ ಕಣೆ ಹ್ವಡಿಯದು. ಯಾಕಂದ್ರೆ ಜನ ನಂಬದಿಲ್ಲ ಅಂತ ಅವುರಿಗೂ ಗೊತ್ತು.’

‘ಮನಸ್ಯಂಗೆ ಬತ್ಲ ಅವುರಿಗೆ ಹ್ಯಣ ತಿನ್ನೊ ನನ್ನ ಮಕ್ಕಳಿವುರು.’

‘ಆ ಟೈಮಲ್ಲಿ ಮನಸು ಕ್ಯಲಸ ಮಾಡದಿಲ್ಲ ಕಣಕ್ಕ. ಜನಗಳೂ ಇಗಿರೊ ಕಷ್ಟದಲ್ಲಿ ಅದ್ನ್ಯಲ್ಲ ನೋಡದಿಲ್ಲ. ಕೇಳದಿಲ್ಲ ಅಂತ ಅವುರಿಗೂ ಗೊತ್ತು’ ಎಂದ ವಾಟಿಸ್ಸೆ.

‘ಅಂಗರಿವುರು ಜನಗಳ ಉಳಸದಿಲ್ಲ ಬುಡು.’

‘ಜನಗಳ ಉಳಸರಾಗಿದ್ರೆ ಇಂತ ತೀರಮಾನ ತಗತಿದ್ರೇನಕ್ಕ.’

‘ಯಾವ ತೀರಮಾನ.’

‘ಕೆಲವು ಜಿಲ್ಲೆಯ ಮಧ್ಯಾಹ್ನದ ಮ್ಯಾಲೆ ಲಾಕ್‍ಡವುನ್ ಮಾಡ್ತಾ ಅವುರೆ. ಅಲ್ಲ ಕಣಕ್ಕ ವತ್ತರಿಂದ ಜನ ನಾಯಿ ತಿರಿಗಿದಂಗೆ ತಿರಗಿ ಮೂರುಗಂಟಿಗೆ ಮನಿಗೆ ಸೇರಿಕತ್ತರೆ. ಅಮ್ಯಾಲೆ ಲಾಕ್‍ಡವುನ್ ಆದ್ರೆಷ್ಟು ಬುಟ್ಟರೆಸ್ಟೂ ಇಂತದೂ ತಿಳಿಯದಿಲವಲ್ಲ ಏನೇಳನ.’

‘ಎಡೂರಪ್ಪನಿಗಾಗ್ಲೆ ವಯಿಸಾಯ್ತು ಕಣೊ, ಇಂತ ಸೂಕುಸ್ಮೆ ಹ್ವಳಿಯದಿಲ್ಲ ಅವುನಿಗೆ.’

‘ನಿಜಕಣೊ ಉಗ್ರಿ, ಅದ್ಕೆ ನೊಡು ಯಯಾತಿ ಓತ್ತಾಕುಂತವುನೆ.’

‘ಯಯ್ಯಾತಿ ಅಂದ್ರೇನ್ಲ.’

‘ಅದು ಪುಸ್ತಗ ಕಣಕ್ಕ ಮುದುಕರ್ಯಲ್ಲ ಓದೊ ಪುಸ್ತಕ.’

‘ಅದ್ಯಂತೆದ್ಲ ಮುದುಕುರೋದೊ ಪುಸಗ.’

‘ಅದರ ಕತೆ ಗೊತ್ತೇನಕ್ಕ.’

‘ನನಿಗೇನು ಗೊತ್ತು ಹೇಳ್ಳ.’

‘ಯಯಾತಿ ಒಬ್ಬ ರಾಜ ಕಣಕ್ಕ. ರಾಜ ಅಂದ ಮ್ಯಾಲೆ ಹೆಂಗಸರ ಚಟ ಇದ್ದೇ ಇರತದೆ. ಅಂಗೆ ಇವುನು ರುಶಿಮುನಿ ಮಗಳ ಹಿಡಕಳಕ್ಕೋದ ಅವುಳೋಗಿ ಅವುರಪ್ಪನಿಗೇಳಿದ್ಲು.’

‘ರಾಜನಿಗೆ ಹೆಡತಿ ಇರಲಿಲ್ವೆ?’

‘ಇರತರೆ ಕಣಕ್ಕ. ಅವುರ್ಯಲ್ಲ ನ್ಯಪಕಿರತರೆ ಇವುರು ಮಾತ್ರ ಚನ್ನಾಗಿರೊರನ್ಯಲ್ಲ ಹಿಡಕಳಕ್ಕೋಯ್ತರೆ, ಅಂಗೆ ಯಯಾತಿನೂ ಹೋಗಿ ಬ್ರಾಂಬ್ರುಡುಗಿ ಕೆಣಕಿದ. ಸಾಮಾನ್ಯವಾಗಿ ಬ್ರಾಂಬ್ರುಡುಗಿರಿಗೆ ಸೆಕ್ಸ್ ಕಡಮೆ. ಅದ್ಕೆ ಹೋಗಿ ಅವುರಪ್ಪನಿಗೇಳಿದ್ಲು.’

‘ಸರಿಯಾಗೆ ಮ್ಯಾಡವುಳೆ ಬುಡು.’

‘ಅವುರಪ್ಪ ಮಹಾಕೋಪಿಸ್ಟ. ಅವುನೋಗಿ ಯಯಾತಿ ಬೈದು ನಿನ್ನ ಪ್ರಾಯದಿಂದ್ಲೆ ಹಿಂಗೆ ಮಾಡಿದ್ದಿ ಅದ್ಕೆ ನೀನು ಮುದುಕಾಗೋಗತ್ತಗೆ ಅಂತ ಶಾಪ ಕೊಟ್ಟ. ಆ ಕೂಡ್ಳೆ ಯಯಾತಿ ನಮ್ಮ ಸೀರ ಮಾವನಂಗಾದ.’

‘ಅಯ್ಯೋ ಪಾಪ ಅಂತ ಸಾಪನೇನ್ಲ ಕೊಡದು.’

‘ಅದವುನಿಗೂ ಗೊತ್ತಾಯ್ತು ಕಣಕ್ಕ. ಅದ್ಕೆ ಯಯಾತಿಗೆ ನಿನ್ನ ಮುಪ್ಪ ಯಾರಿಗಾರ ಕೊಟ್ರೆ ಅವುರ ಹರೇಯ ನಿನಿಗೆ ಬತ್ತದೆ ಹೋಗು ಅಂದ. ಸರಿ ಯಯಾತಿ ಬಂದು ಯಾರಾರ ನನ್ನ ಮುಪ್ಪ ತಗಳಿ ಅರ್ದ ರಾಜ್ಯ ಕೊಡ್ತಿನಿ ಅಂದ ಯಾರೂ ಬರಲಿಲ್ಲ.’

‘ಅದ್ಯಂಗೆ ಬಂದರ್ಲ ಮುಪ್ಪು ಯಾರಿಗೆ ಬೇಕೇಳು.’

‘ಅಂಗೆ ಆಯ್ತು ಕಣಕ್ಕ. ಕಡಿಗೆ ಅಪ್ಪನ ಗೋಳಾಟ ನೋಡಕ್ಕಾಗದೆ ಮಗನೆ ಬಂದು ಈಸ್ಕಂಡ. ಅಪ್ಪ ಹರೇವುದೋನಾದ. ಮಗ ಮುದುಕಾದ ಅದ ನೊಡಿ ಸ್ವಸೆ ನ್ಯಾಣಾಯ್ಕಂಡು ಸತ್ತೋದ್ಲು. ಅದು ಗೊತ್ತಿಲ್ಲದೆ ಯಯಾತಿ ಹೆಡತಿ ಹಿಡಕಳಕ್ಕೊದ. ಅವುಳು ನಿನ್ನ ಪ್ರಾಯ ನನ್ನ ಮಗಂದು ಮುಟ್ಟುಬ್ಯಾಡ ಅಂದ್ಲು. ಯಾಯತಿ ಅಳತ ತಿರಗ ಮಗನಿಗೆ ಪ್ರಾಯಕೊಟ್ಟು ಮುದುಕಾದ.’

‘ಚನಾಗ್ಯದೆ ಕಂಡ್ಳ ಕತೆ. ಇದ್ಯಾಕ್ಕೋತ್ತ ಅವುನೆ ಎಡೂರಪ್ಪಾ.’

‘ಯಾಕೆ ಅಂದ್ರೆ ಆಗ್ಲೆ ಯಪ್ಪಂತೆಟ್ಟು ವರ್ಸಾಯ್ತ ಅದೆ. ಶೋಬಕ್ಕನೂ ದೂರಾಗ್ಯವುಳೆ. ಪ್ರಾಯ ಹೋಯ್ತಾ ಅದೆ. ಹೈಕಮಾಂಡು ಎಡೂರಪ್ಪನೆ ಇಳಿಲಿ ಅಂತ ಕಿರುಕುಳ ಕೊಡ್ತಾ ಅವುರೆ. ಕೊರೋನಾ ಸಮಸ್ಯೆ ಹಠಗಾಯಿಸಿಗಂಡದೆ. ಜ್ವತೆಲಿರೊ ಮಂತ್ರಿಗಳು ಕೊರೋನಾದಲ್ಲೂ ಕಾಸು ತಿಂತಾ ಅವುರೆ. ಅಂತೂ ಸೂಕುಸ್ಮುವಾಗಿ ನೋಡಿದ್ರೆ ಯಯಾತಿ ಗೋಳಾಟ ಹೆಡೂರಪ್ಪನಿಗೂ ಹಠಗಾಯಿಸಿಗಂಡದೆ. ಮುಪ್ಪು ಅನಿವಾರ್ಯ ಅಧಿಕಾರದಿಂದ ಇಳಿಯೋದು ಅನಿವಾರ್ಯ, ವಿಜಯೇಂದ್ರನ್ನ ಮುಂದೆ ತರೋದು ಅನಿವಾರ್ಯ, ಇಂತ ಅನಿವಾರ್ಯಗಳೆ ಎಡೂರಪ್ಪನ್ನ ಬಗ್ಗಸಬಹುದು ಕಣಕ್ಕ.’

‘ಅದೇನಾರ ಆಗ್ಲಿ ಬಡುವುರು ತಿನ್ನ ಅಕ್ಕಿನೆ ಕಡಮೆ ಮಾಡ್ಯವುನಂತೆ ಇವುನಿಗೆ ವಳ್ಳೆದಾದತೆ?’

‘!?


ಇದನ್ನು ಓದಿ: ಡಿ.ಕೆ.ಶಿ ಬಿಜೆಪಿಗಳ ಹೆದರಸ್ತನೆ ಬುಡೊ. ನೋ ಡವುಟು – ಚಂದ್ರೇಗೌಡರ ಕಟ್ಟೆಪುರಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...