HomeಮುಖಪುಟRPWD Act : ವಿಕಲಚೇತನರ ಹಕ್ಕುಗಳ ಕಾಯಿದೆ ತಿದ್ದುಪಡಿ ವಿರುದ್ಧ ಸಂಘಟಿತ ಜಯ

RPWD Act : ವಿಕಲಚೇತನರ ಹಕ್ಕುಗಳ ಕಾಯಿದೆ ತಿದ್ದುಪಡಿ ವಿರುದ್ಧ ಸಂಘಟಿತ ಜಯ

- Advertisement -
- Advertisement -

ವಿಕಲಚೇತನ ವ್ಯಕ್ತಿಗಳ ಹಕ್ಕುಗಳ ಕಾಯಿದೆ 2016 (ಆರ್‌ಪಿಡಬ್ಲುಡಿ)ರಲ್ಲಿ ಸಣ್ಣಪುಟ್ಟ ಅಪರಾಧಗಳಿಗೆ ಶಿಕ್ಷೆ/ದಂಡ ವಿಧಿಸುವ ವಿಧಿ 89, 92 ಮತ್ತು 93ಕ್ಕೆ ತಿದ್ದುಪಡಿ ತಂದು ಅಂತಹ ಅಪರಾಧಗಳನ್ನು ಶಿಕ್ಷೆಯಿಂದ ಮುಕ್ತಗೊಳಿಸುವ ಕುರಿತು ತಮ್ಮ ಚಿಂತನೆ/ ಸಲಹೆ ಸೂಚನೆ/ ಅಭಿಪ್ರಾಯಗಳನ್ನು ನೀಡುವಂತೆ ಕೋರಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ನಿರ್ದೇಶಕ ಕೆ.ವಿ.ಎಸ್. ರಾವ್ ಅವರು ಆಯ್ದ ಏಳು ಸರಕಾರೇತರ ಸಂಸ್ಥೆಗಳಿಗೆ (ಎನ್‍ಜಿಒ/ಡಿಪಿಒ) ಈ ವರ್ಷದ ಜೂನ್ ತಿಂಗಳಲ್ಲಿ ಪತ್ರ ಬರೆದಿದ್ದರು. ಚಿಕ್ಕಪುಟ್ಟ ಅಪರಾಧಗಳನ್ನು ಕ್ರಿಮಿನಲ್ ಅಪರಾಧೀಕರಣದಿಂದ ಮುಕ್ತಗೊಳಿಸಿ ವ್ಯಾಪಾರೀ ಭಾವನೆಗಳನ್ನು ಸುಧಾರಿಸಿ, ಕೋರ್ಟು ಕಚೇರಿ ವ್ಯವಹಾರಗಳನ್ನು ಸರಾಗಗೊಳಿಸುವುದು ಈ ತಿದ್ದುಪಡಿಗಳ ಉದ್ದೇಶ ಎಂದು ಹೇಳಲಾಗಿತ್ತು.

ಇದರ ಹಿನ್ನೆಲೆಯನ್ನು 2020ರ ಜೂನ್ 10ರಂದು ಹಣಕಾಸು ಸಚಿವಾಲಯವು ಚೆಕ್ ಅಮಾನ್ಯ ಮತ್ತು ಸಾಲ ಮರುಪಾವತಿಗೆ ಸಂಬಂಧಿಸಿದಂತೆ ಚಿಕ್ಕಪುಟ್ಟ ಅಪರಾಧಗಳನ್ನು ಕ್ರಿಮಿನಲ್ ಅಪರಾಧೀಕರಣದಿಂದ ಹೊರತುಪಡಿಸುವಂತೆ ಮಾಡಿದ ಪ್ರಸ್ತಾಪದೊಂದಿಗೆ ಗುರುತಿಸಬಹುದು.

ಹಣಕಾಸು ಸಚಿವಾಲಯದ ಪ್ರಕಾರ 19 ಆರ್ಥಿಕ ಕಾನೂನುಗಳಲ್ಲಿರುವ ಚಿಕ್ಕಪುಟ್ಟ ಅಪರಾಧಗಳನ್ನು ಕ್ರಿಮಿನಲ್ ಅಪರಾಧೀಕರಣದಿಂದ ಹೊರತುಪಡಿಸಿದರೆ, ಅದು ಕೋವಿಡ್-19 ಪಿಡುಗಿನ ಪರಿಣಾಮವಾಗಿ ತತ್ತರಿಸುತ್ತಿರುವ ಉದ್ಯಮಗಳಿಗೆ ಉಪಶಮನ ನೀಡಬಹುದು ಮತ್ತು ವ್ಯಾಪಾರವನ್ನು ಇನ್ನಷ್ಟು ಸುಲಭಗೊಳಿಸಿ, ವ್ಯಾಪಾರಿಗಳ ಮೇಲಿನ ಹೊರೆಯನ್ನು ಕಡಿಮೆ ಮಾಡಬಹುದು ಎಂಬುದಾಗಿತ್ತು.

ಈ ಪ್ರಸ್ತಾವನೆಯ ಪ್ರಕಾರ “ಚಿಕ್ಕಪುಟ್ಟ ಅಪರಾಧ”ಗಳನ್ನು ಕ್ರಿಮಿನಲ್ ಅಪರಾಧೀಕರಣದಿಂದ ಮುಕ್ತಗೊಳಿಸುವ ಮೂಲಕ ಸರಕಾರವು ವಿಕಲಚೇತನ ವ್ಯಕ್ತಿಗಳ ಹಕ್ಕುಗಳ ಕಾಯಿದೆಯ ಮೂಲಸ್ವರೂಪವನ್ನೇ ಬದಲಿಸಲು ಹೊರಟಿತ್ತು. “ಇಂತಹ ಕ್ರಿಮಿನಲ್ ಅಪರಾಧೀಕರಣ ಹಿಂಜರಿಕೆಗೆ ಕಾರಣವಾಗುತ್ತದೆ ಮತ್ತು ವಿದೇಶಿ ಮತ್ತು ದೇಶೀಯ ಹೂಡಿಕೆಗಳ ಮೇಲೆ ಅಡ್ಡಪರಿಣಾಮ ಬೀರುವ ಪ್ರಮುಖ ಅಂಶಗಳು” ಎಂದು ಸರಕಾರ ಹೇಳಿತ್ತು. ವಿದೇಶಿಯರಾಗಲೀ, ಭಾರತೀಯರೇ ಆಗಿರಲಿ, ಯಾವುದೇ ಹೂಡಿಕೆದಾರರು ತಾವು ಉದ್ಯಮ ನಡೆಸಬಯಸುವ ಈ ನೆಲದ ಕಾನೂನುಗಳನ್ನು ಪಾಲಿಸುವುದು ಅಗತ್ಯವಾಗಿರುತ್ತದೆ. ಅವುಗಳನ್ನು ಅವರ ಹಿತಾಸಕ್ತಿಗಳಿಗೆ ಸರಿಹೊಂದುವಂತೆ ಬದಲಿಸಲಾಗುವುದಿಲ್ಲ. ಪ್ರಸ್ತಾಪಿತ ತಿದ್ದುಪಡಿಗಳು ಈ ಕಾಯಿದೆಯಲ್ಲಿರುವ ಕಾನೂನು ಪರಿಪಾಲನೆ ಕುರಿತ ಅಧಿಕಾರವನ್ನೇ ಇಲ್ಲವಾಗಿಸುವ ಉದ್ದೇಶಗಳನ್ನು ಹೊಂದಿವೆ.

ಆರ್‍ಪಿಡಬ್ಲ್ಯೂಡಿ ಕಾಯಿದೆಗೆ ಪ್ರಸ್ತಾಪಿತ ತಿದ್ದುಪಡಿಗಳು ವಿಕಲಚೇತನ ವ್ಯಕ್ತಿಗಳ ಕಮೀಷನರ್ ಅಥವ ಸರಕಾರಿ ಕಮೀಷನರ್‍ಗೆ ಕಸ್ಟಡಿಯಲ್ಲಿ ಇದ್ದಿರಬಹುದಾದ ಅಪರಾಧಿಯನ್ನು ಬಿಡುಗಡೆಗೊಳಿಸುವ ಅಧಿಕಾರ ನೀಡುವ ಉದ್ದೇಶ ಹೊಂದಿವೆ.

ಇವು ವಿಧಿ 89 (ಇಲ್ಲಿರುವ ನಿಯಮ ಮತ್ತು ನಿಯಂತ್ರಣಗಳ ಉಲ್ಲಂಘನೆಗೆ ಶಿಕ್ಷೆ ವಿಧಿಸುವುದು); ವಿಧಿ 92 (ಎ) (ಯಾರೊಬ್ಬರೇ ಆಗಿರಲಿ ಯಾವುದೇ ವಿಕಲಚೇತನ ವ್ಯಕ್ತಿಯನ್ನು ಯಾವುದೇ ಸ್ಥಳದಲ್ಲಿ ಸಾರ್ವಜನಿಕವಾಗಿ ಬೇಕಂತಲೇ ಅವಮಾನ ಮಾಡುವುದು, ನಿಂದಿಸುವುದು ಅಥವಾ ಬೆದರಿಕೆ ಹಾಕುವುದು) ಮತ್ತು ವಿಧಿ 93 (ಮಾಹಿತಿ ನೀಡಲು ತಪ್ಪಿದಲ್ಲಿ ಶಿಕ್ಷೆ ವಿಧಿಸುವುದು) ಇತ್ಯಾದಿಗಳಿಗೆ ಸಂಬಂಧಿಸಿದೆ.

ಆದರೆ, ಕಡೆಗಣಿಸಲ್ಪಟ್ಟ ಸಮುದಾಯದ ಹಕ್ಕುಗಳನ್ನು ಪಡೆದುಕೊಳ್ಳಲು ಇಷ್ಟು ವರ್ಷಗಳ ಕಾಲ ಹೋರಾಟ ಮಾಡಿ ಗೆಲುವು ಸಾಧಿಸಿರುವಾಗ, ವ್ಯಾಪಾರ ಮಾಡುವುದಕ್ಕೆ ಹೂಡಿಕೆದಾರರಿಗೆ ಹೆಚ್ಚಿನ ಸೌಲಭ್ಯ ಒದಗಿಸುವ, ಉತ್ತಮ ವಾತಾವರಣ ನಿರ್ಮಾಣ ಮಾಡುವ ಸಲುವಾಗಿ ಆ ಹಕ್ಕುಗಳನ್ನು ಕಡೆಗಣಿಸಿ ಮೂಲೆಗೆ ತಳ್ಳಬೇಕು ಎಂದಾಗಬೇಕಿಲ್ಲ ಅಲ್ಲವೇ? ಆದರೆ, ದುರದೃಷ್ಟವಶಾತ್ ಸರಕಾರಕ್ಕೆ ಸಾಮಾನ್ಯ ಜನರ ಹಿತಾಸಕ್ತಿಗಳಿಗಿಂತ ವ್ಯಾಪಾರಿ, ಉದ್ಯಮಿಗಳ ಹಿತಾಸಕ್ತಿಗಳು ಹೆಚ್ಚು ಮುಖ್ಯವಾಗಿವೆ.

ಈ ಕಾನೂನುಗಳಲ್ಲಿರುವ ಶಿಕ್ಷೆಯ ಅವಕಾಶಗಳು ಕೇವಲ ಹಿಂಜರಿಕೆ ಉಂಟುಮಾಡುವಂತವುಗಳು ಅಲ್ಲ. ಸರಿಯಾಗಿ ಅನುಷ್ಟಾನ ಮಾಡಿದಲ್ಲಿ, ದೂರದೃಷ್ಟಿಯಿಂದ ನೋಡಿದಲ್ಲಿ ಕಾನೂನನ್ನು ಪಾಲಿಸುವ ಮತ್ತು ಎಲ್ಲರನ್ನೂ ಒಳಗೊಳ್ಳುವ ವಾತಾವರಣವನ್ನು ಸೃಷ್ಟಿ ಮಾಡಬಲ್ಲವು. ಅದಕ್ಕಿಂತ ಮಹತ್ವದ ವಿಷಯ ಎಂದರೆ, ಈ ಆರ್‍ಪಿಡಬ್ಲ್ಯೂಡಿ ಕಾಯಿದೆಯ ಅಡಿಯಲ್ಲಿ ದಾಖಲಾದ ಪ್ರಕರಣಗಳು ಅಥವಾ ಅವುಗಳಿಗೆ ಸಂಬಂಧಿಸಿ ಆದ ಶಿಕ್ಷೆ/ದಂಡಗಳ ಕುರಿತು ಅಂಕಿಅಂಶಗಳು ಇಲ್ಲವೇ ಇಲ್ಲ ಅನ್ನುವಷ್ಟು ಕಡಿಮೆ.

ತನ್ನ ನಿರ್ಧಾರವನ್ನು ಸಮರ್ಥಿಸಿಕೊಳ್ಳುವ ಯಾವುದೇ ದತ್ತಾಂಶ ಇಲ್ಲದ ಸರಕಾರದ ವಿರುದ್ಧ ವಿಕಲಚೇತನ ವ್ಯಕ್ತಿಗಳು ತೀವ್ರವಾಗಿ ಪ್ರತಿಭಟನೆ ನಡೆಸಿದರು. ಈ ಪ್ರಸ್ತಾಪಿತ ತಿದ್ದುಪಡಿಗಳ ಸಮರ್ಥನೆಗಾಗಿ ಸರಕಾರ ನೀಡಿದ ನಾಟಕೀಯ ನೆಪಗಳು ನಗೆಪಾಟಲಿಗೆ ಗುರಿಯಾದವು. ಕೊರೊನಾ ಪಿಡುಗು ಎಲ್ಲಾ ಕಡೆ ಹರಡಿರುವಾಗ ವಿಕಲಚೇತನ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುವುದು ಸಾಧ್ಯವಿಲ್ಲ. ಸುಮಾರು 125ರಷ್ಟು ವಿಕಲಚೇತನ ಹಕ್ಕುಗಳ, ನಾಗರಿಕ ಸಮಾಜ ಸಂಘಟನೆಗಳು ಮತ್ತು ಕಾರ್ಯಕರ್ತರು ಜಂಟಿಯಾಗಿ ಪತ್ರ ಬರೆದು ವಿಕಲಚೇತನ ವ್ಯಕ್ತಿಗಳ ಹಕ್ಕುಗಳ ಕಾಯಿದೆ, 2016 ರನ್ನು ತೆಳುಗೊಳಿಸುವ ಅಥವಾ ಇಲ್ಲದಂತೆ ಮಾಡುವ ಉದ್ದೇಶ ಹೊಂದಿರುವ ಈ ತಿದ್ದುಪಡಿಗಳಿಗೆ ಬಲವಾದ ವಿರೋಧ ವ್ಯಕ್ತಪಡಿಸಿವೆ. ಸ್ಥಳೀಯವಾಗಿಯೂ ಈ ಕ್ರಮದ ವಿರುದ್ಧ ಪ್ರತಿಭಟನೆಗಳು ನಡೆದಿವೆ.

ಈ ಕಾಯಿದೆಯ ಅಂಶಗಳು ವಿಕಲಚೇತನ ವ್ಯಕ್ತಿಗಳ ಹಕ್ಕುಗಳ ರಕ್ಷಣೆಗೆ ಪೂರಕವಾಗಿದೆ ಎಂದು ಈ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೆಲಸ ಮಾಡುವ ಬೇರೆಬೇರೆ ಮೂಲಗಳು ಪ್ರತಿಸ್ಪಂದಿಸಿರುವಂತೆ ಈ ಕಾಯಿದೆಯ ಪರಿಣಾಮಕಾರಿ ಅನುಷ್ಟಾನ ಅಗತ್ಯ ಇದೆ ಎಂದು ವಿಕಲ ಚೇತನ ವ್ಯಕ್ತಿಗಳ ಸಬಲೀಕರಣ ಸಚಿವಾಲಯವೇ ಈಗ ಒಪ್ಪಿಕೊಂಡಿದೆ. “ಈ ಸಂಬಂಧವಾಗಿ ಹಲವು ವಲಯಗಳಿಂದ ಮೂಡಿರುವ ಭಾವನೆಗಳನ್ನು ಪರಿಗಣಿಸಿ, ಅಪರಾಧೀಕರಣವನ್ನು ದುರ್ಬಲಗೊಳಿಸುವ ಪ್ರಸ್ತಾಪಿತ ತಿದ್ದುಪಡಿಗಳು ವಿಕಲಚೇತನ ವ್ಯಕ್ತಿಗಳ ಹಿತಾಸಕ್ತಿಗೆ ವಿರುದ್ಧವಾಗಿವೆ ಎಂಬ ಅಭಿಪ್ರಾಯವನ್ನು ಇಲಾಖೆ ತಳೆದಿದೆ” ಎಂದು ಹೇಳಿಕೆ ಕೊಟ್ಟಿದ್ದು, ಆದುದರಿಂದ, ಈ ತಿದ್ದುಪಡಿಯನ್ನು ಮುಂದುವರಿಸದಿರುವ ನಿರ್ಧಾರವನ್ನು ಕೈಕೊಂಡಿದೆ. ವಿಕಲ ಚೇತನ ವ್ಯಕ್ತಿಗಳ ಹಕ್ಕುಗಳ ಕಾಯಿದೆಗೆ ತಿದ್ದುಪಡಿ ತರುವ ಸರ್ಕಾರದ ಪ್ರತಿಗಾಮಿ ನಿರ್ಧಾರವನ್ನು ಸರ್ಕಾರ ಕೈಬಿಟ್ಟಿರುವುದು ವಿಕಲಚೇತನ ವ್ಯಕ್ತಿಗಳ ಹಕ್ಕುಗಳನ್ನು ಕಾಪಾಡುವ ಹೋರಾಟಕ್ಕೆ ಸಂದ ಜಯವಾಗಿದೆ.

ಜಿ. ರವಿ, ವಿಕಲಚೇತನ ಹಕ್ಕುಗಳ ಚಳವಳಿಯಲ್ಲಿ ಸಕ್ರಿಯವಾಗಿರುವ ಕಾರ್ಯಕರ್ತರು


ಇದನ್ನು ಓದಿ: ಸ್ತ್ರೀಮತಿ- 2: ಲಾಕ್ – ಅನ್ ಲಾಕ್ ಗಳ ನಡುವೆ ಕಳೆದುಹೋದ ಕೀಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...