Homeಕರ್ನಾಟಕಉಸ್ತುವಾರಿ ಸಚಿವರುಗಳೇ ಎಲ್ಲಿದ್ದೀರಿ? ಇತ್ತ ಸ್ವಲ್ಪ ಗಮನಿಸಿ ಪ್ಲೀಸ್!

ಉಸ್ತುವಾರಿ ಸಚಿವರುಗಳೇ ಎಲ್ಲಿದ್ದೀರಿ? ಇತ್ತ ಸ್ವಲ್ಪ ಗಮನಿಸಿ ಪ್ಲೀಸ್!

ಆದರೆ, ಈ ಪೈಕಿ ವಿಜಯಪುರದ ಉಸ್ತುವಾರಿ ಶಶಿಕಲಾ ಜೊಲ್ಲೆ ಮಾತ್ರ ತಮ್ಮ ಜಿಲ್ಲೆಯಲ್ಲಿ ಓಡಾಡಿ ಕೆಲಸ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ.

- Advertisement -
- Advertisement -

ಕಳೆದ ಮೂರು ತಿಂಗಳಿನಿಂದ ರಾಜ್ಯದಲ್ಲಿ ಕೊರೊನಾ ಸೋಂಕು ಸುದ್ದಿ ಮಾಡಿದ್ದಕ್ಕಿಂತ ಹೆಚ್ಚು ಸುದ್ದಿ ಮಾಡಿದ ವಿಚಾರ ಏನೆಂದರೆ ಬೆಂಗಳೂರಿನ ಕೊರೊನಾ ಉಸ್ತುವಾರಿ ಸಚಿವರು ಯಾರು ಎಂಬುದು? ಆರಂಭದಿಂದಲೂ ಶ್ರೀರಾಮುಲು ಹಾಗೂ ಕೆ. ಸುಧಾಕರ್ ಈ ವಿಚಾರದಲ್ಲಿ ಪೈಪೋಟಿಗೆ ಬಿದ್ದಿದ್ದರು. ಕೊನೆಗೆ ಇಬ್ಬರನ್ನೂ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿತ್ತು. ಈ ನಡುವೆ ಇದೀಗ ಆರ್. ಅಶೋಕ್ ಅವರನ್ನೂ ಬೆಂಗಳೂರಿನಲ್ಲಿ ಕೊರೊನಾ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.

ಈ ನಡುವೆ ಬೆಂಗಳೂರನ್ನು 7 ವಿಭಾಗಗಳಾಗಿ ವಿಂಗಡಿಸಿ ಕೊರೊನಾ ನಿಯಂತ್ರಣಕ್ಕಾಗಿ 8 ಸಚಿವರನ್ನು ನೇಮಕ ಮಾಡಲಾಗಿದೆ. ಅಲ್ಲದೆ, ಪ್ರತಿ ವಿಭಾಗದ ಉಸ್ತುವಾರಿ ನೋಡಿಕೊಳ್ಳುವ ಸಲುವಾಗಿ ಓರ್ವ ಐಎಎಸ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಿಸುವ ಸಲುವಾಗಿ ರಾಜ್ಯ ಸರ್ಕಾರ ಈ ಮಟ್ಟದ ಮುತುವರ್ಜಿ ವಹಿಸುತ್ತಿರುವುದು ನಿಜಕ್ಕೂ ಸ್ವಾಗತಾರ್ಹ ಬೆಳವಣಿಗೆ.

ಆದರೆ, ಇದೇ ಮುತುವರ್ಜಿ ಇತರೆ ಜಿಲ್ಲೆಗಳ ಮೇಲೆ ಏಕಿಲ್ಲ? ಬೆಂಗಳೂರಿನ ಕೊರೊನಾ ಉಸ್ತುವಾರಿಗೆ ಇರುವ ಪೈಪೋಟಿ ಇತರೆ ಜಿಲ್ಲೆಗಳಿಗೆ ಏಕಿಲ್ಲ? ಅಸಲಿಗೆ ಉಸ್ತುವಾರಿ ಸಚಿವರು ತಮ್ಮ ಜಿಲ್ಲೆಗಳಲ್ಲಿ ಮಾಡುತ್ತಿರುವ ಕೆಲಸವಾದರೂ ಏನು? ಉಸ್ತುವಾರಿ ಸಚಿವರುಗಳಿಗೆ ಅನ್ಯ ಜಿಲ್ಲೆಗಳ ಮೇಲೆ ಏಕಿಷ್ಟು ಅಸಡ್ಡೆ? ಯಾವ ಯಾವ ಜಿಲ್ಲೆಗಳಲ್ಲಿ ಪರಿಸ್ಥಿತಿ ಕೈಮೀರುತ್ತಿದೆ ಗೊತ್ತೇ?

ಜಿಲ್ಲಾ ಉಸ್ತುವಾರಿಗಳೇ ಎಲ್ಲಿದ್ದೀರಿ?

ಕರ್ನಾಟಕದಲ್ಲಿ ಈವರೆಗೆ 51,422 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಮಾರಕ ಸೋಂಕಿಗೆ 1032 ಜನ ಮೃತಪಟ್ಟಿದ್ದಾರೆ. ಕಳೆದ ಎರಡು ವಾರದಿಂದ ಪ್ರತಿದಿನ ಸರಾಸರಿಯಾಗಿ 2,500 ಜನ ರಾಜ್ಯದಲ್ಲಿ ಈ ಮಾರಣಾಂತಿಕ ಸೋಂಕಿಗೆ ತುತ್ತಾಗುತ್ತಿದ್ದಾರೆ. ಬೆಂಗಳೂರಿನಲ್ಲಿ ಅತಿಹೆಚ್ಚಿನ ಪ್ರಕರಣಗಳು ದಾಖಲಾಗುತ್ತಿವೆ ನಿಜ. ಆದರೆ, ಬೆಂಗಳೂರನ್ನು ಹೊರತುಪಡಿಸಿಯೂ ಧಾರವಾಡ, ದಕ್ಷಿಣ ಕನ್ನಡ, ಗದಗ, ರಾಯಚೂರು, ಬೀದರ್, ಕಲ್ಬುರ್ಗಿ, ಮೈಸೂರು, ಚಿತ್ರದುರ್ಗ, ಮೈಸೂರು, ರಾಮನಗರ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಪರಿಸ್ಥಿತಿ ಕೈಮೀರುತ್ತಿದೆ. ಈ ಜಿಲ್ಲೆಗಳಲ್ಲಿ ಒಂದು ದಿನಕ್ಕೆ ಸರಾಸರಿಯಾಗಿ ಕನಿಷ್ಟ 100 ಕೊರೋನಾ ಪ್ರಕರಣಗಳು ದಾಖಲಾಗುತ್ತಿವೆ. ಆಗಸ್ಟ್-ಸೆಪ್ಟೆಂಬರ್ ವೇಳೆಗೆ ಈ ಸಂಖ್ಯೆ ಎರಡು ಪಟ್ಟು ಹೆಚ್ಚಾಗಲಿದೆ ಎನ್ನಲಾಗುತ್ತಿದೆ.

ಆದರೆ, ಈ ಯಾವ ಜಿಲ್ಲೆಗಳಲ್ಲೂ ಕೊರೊನಾ ರೋಗಿಗಳನ್ನು ಆರೈಕೆ ಮಾಡಲು ಸೂಕ್ತ ಆಸ್ಪತ್ರೆಗಳಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಐಸಿಯು, ವೆಂಟಿಲೇಟರ್, ಆಕ್ಸಿಜನ್ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳ ಕೊರತೆ ಇದೆ. ಆಂಬ್ಯುಲೆನ್ಸ್ ಹಾಗೂ ನುರಿತ ವೈದ್ಯರ ಸಂಖ್ಯೆ ಕೂಡ ಜನರ ಅನುಪಾತಕ್ಕೆ ಪೂರಕವಾಗಿಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ರೋಗಿಗಳಿಗೆ ಶೇ.50ರಷ್ಟು ಹಾಸಿಗೆಯನ್ನು ಮೀಸಲಿಡಬೇಕು ಎಂದು ಸರ್ಕಾರ ಆದೇಶಿಸಿದೆಯಾದರೂ ಈ ಕುರಿತು ಸ್ಪಷ್ಟ ಮಾರ್ಗಸೂಚಿ ಇಲ್ಲ. ಇನ್ನೂ ಖಾಸಗಿ ಆಸ್ಪತ್ರೆಗಳಲ್ಲಂತೂ ಮಾನವೀಯತೆಯೇ ಇಲ್ಲವೇನೋ ಎಂಬಂತಾಗಿದೆ ಪರಿಸ್ಥಿತಿ.

ರಾಜ್ಯದಲ್ಲಿ ಬಹುತೇಕ ಎಲ್ಲಾ ಜಿಲ್ಲಾಡಳಿತವೂ ಪ್ರತಿದಿನ ಹೀಗೆ ಇಲ್ಲಗಳ ನಡುವೆಯೇ ದಿನ ಕಳೆಯುತ್ತಿವೆ. ಒಂದೆಡೆ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ, ಮತ್ತೊಂದೆಡೆ ಅವರ ಚಿಕಿತ್ಸೆಗೆ ಸೂಕ್ತ ಸೌಲಭ್ಯ ಒದಗಿಸುವಲ್ಲಿ ಜಿಲ್ಲಾಡಳಿತ ವಿಫಲವಾಗುತ್ತಿದೆ. ಆಸ್ಪತ್ರೆ ಕಡೆ ಬರಲು ಜನ ಹಿಂದೇಟು ಹಾಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಕಾರಣಕ್ಕೆ ಈಗ ಸೋಂಕು ಸಾಮುದಾಯಿಕವಾಗಿ ಹರಡುತ್ತಿದೆ ಎಂದು ಕೂಡ ಹೇಳಲಾಗುತ್ತಿದೆ.

ಹಾಗಾದರೆ, ಜಿಲ್ಲಾ ಭಾಗಗಳಲ್ಲಿ ಜನರಲ್ಲಿ ಆವರಿಸಿರುವ ಈ ಭಯವನ್ನು ಹೋಗಲಾಡಿಸಿ ಎಲ್ಲರಿಗೂ ಸೂಕ್ತ ಚಿಕಿತ್ಸೆ ಮತ್ತು ಸೌಲಭ್ಯಗಳನ್ನು ಒದಗಿಸುವ ಕರ್ತವ್ಯ ಯಾರದ್ದು? ಎಂಬ ಪ್ರಶ್ನೆ ಸಾಮಾನ್ಯವಾಗಿ ಮೂಡುತ್ತದೆ. ಜಿಲ್ಲಾ ಉಸ್ತುವಾರಿ ಸಚಿವರುಗಳುಗಳಿಗೆ ಈ ಕೂಗು ಕೇಳುತ್ತಿದೆಯೇ?

ಅಸಲಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕಳೆದ ಏಪ್ರಿಲ್ 09 ರಂದು ಎಲ್ಲಾ ಜಿಲ್ಲೆಗಳಿಗೂ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದ್ದರು. ಯಾವುದೇ ಜಿಲ್ಲೆಯ ಮೂಲಭೂತ ಸಮಸ್ಯೆಯನ್ನು ಆಲಿಸುವುದು ಮತ್ತು ಆ ಸಮಸ್ಯೆಯ ಪರಿಹಾರಕ್ಕಾಗಿ ಶ್ರಮಿಸುವುದು ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿ. ಆದರೆ, ಕೊರೊನಾ ರಾಜ್ಯಾದ್ಯಂತ ವ್ಯಾಪಿಸುತ್ತಿರುವ ಸಮಯದಲ್ಲಿ ಜಿಲ್ಲಾ ಉಸ್ತುವಾರಿಗಳು ಸಚಿವರ ಕೆಲಸ ಹೆಚ್ಚಾಗಿತ್ತು. ಇವರ ತಮ್ಮ ಕರ್ತವ್ಯ ನಿಭಾಯಿಸಿದರೇ?

ಶೂನ್ಯ ದಾಖಲೆ ಬರೆದ ಉಸ್ತುವಾರಿ ಸಚಿವರುಗಳು

ಕೊರೊನಾ ಸೋಂಕು ವ್ಯಾಪಿಸುತ್ತಿರುವ ಭೀಕರ ದಿನಗಳಲ್ಲಿ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ಕೈಜೋಡಿಸಿ ಸೋಂಕು ನಿವಾರಣೆಗಾಗಿ ಉಸ್ತುವಾರಿ ಸಚಿವರು ಹೋರಾಡಬೇಕಿತ್ತು. ತಮ್ಮ ಜಿಲ್ಲೆಗಳಿಗೆ ಅಗತ್ಯವಾದ ವೆಂಟಿಲೇಟರ್, ವೈದ್ಯರಿಗೆ ಪಿಪಿಇ ಕಿಟ್, ಶೀಘ್ರದಲ್ಲಿ ವರದಿ ನೀಡುವ ಸಲುವಾಗಿ ಕೋವಿಡ್ ಲ್ಯಾಬ್, ರ್ಯಾಪಿಡ್ ಆಂಟಿಜೆನ್ ಟೆಸ್ಟ್ ಕಿಟ್‍ಗಳನ್ನು ಒದಗಿಸುವುದು, ಇದಕ್ಕಾಗಿ ಸರ್ಕಾರದ ಜೊತೆಗೆ ಸಮನ್ವಯ ಸಾಧಿಸುವುದು ಅವರ ಬದ್ಧತೆಯಾಗಬೇಕಿತ್ತು.

ಆದರೆ, ಯಾವ ಜಿಲ್ಲಾ ಉಸ್ತುವಾರಿ ಸಚಿವರೂ ಕನಿಷ್ಟ ತಮ್ಮ ಕ್ಷೇತ್ರಕ್ಕೆ ಹೋಗಿ ಜನರ ಸಮಸ್ಯೆ ಆಲಿಸಿದ, ಕೊರೋನಾ ಪರಿಸ್ಥಿತಿಯ ಮೇಲುಸ್ತುವಾರಿ ಮಾಡಿದ ಉದಾಹರಣೆ ನಮ್ಮ ಮುಂದೆ ಇಲ್ಲ ಎಂಬುದೇ ನಿಜ.

ಅಸಲಿಗೆ ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ. ಆದರೆ, ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ ಅವರು ತಮ್ಮ ಉಸ್ತುವಾರಿ ಜಿಲ್ಲೆಗೆ ತೆರಳಿ ಕೊರೊನಾ ಮೇಲುಸ್ತುವಾರಿ ನೋಡಿದ್ದು ಕೇವಲ ಒಂದು ಬಾರಿ ಮಾತ್ರ. ಈ ವೇಳೆಯೂ ಚನ್ನಪಟ್ಟಣ ಗ್ರಾಮ ಪಂಚಾಯಿತಿ ಸದಸ್ಯರು ಸಚಿವರನ್ನು ತರಾಟೆಗೆ ತೆಗೆದುಕೊಂಡಿದ್ದರು.

ಇನ್ನೂ ಚಿತ್ರದುರ್ಗದ ಉಸ್ತುವಾರಿಯನ್ನಾಗಿ ಶ್ರೀರಾಮುಲು ಹಾಗೂ ಚಿಕ್ಕಬಳ್ಳಾಪುರದ ಉಸ್ತುವಾರಿಯಾಗಿ ಕೆ. ಸುಧಾಕರ್ ಅವರನ್ನು ನೇಮಿಸಲಾಗಿದೆ. ಆದರೆ, ಬೆಂಗಳೂರು ಉಸ್ತುವಾರಿಗಾಗಿ ಪೈಪೋಟಿಗೆ ಬಿದ್ದು ಹೋರಾಡಿದ ಇವರು ತಮ್ಮ ಜಿಲ್ಲೆಯ ಬಗ್ಗೆ ಎಷ್ಟರ ಮಟ್ಟಿಗೆ ಆಸಕ್ತಿ ತೋರಿದರು ಎಂಬುದು ದೇವರಿಗೆ ಪ್ರೀತಿ.

ಅಶ್ವತ್ಥ್ ನಾರಾಯಣ್, ಶ್ರೀರಾಮುಲು, ಸುಧಾಕರ್, ಆರ್. ಅಶೋಕ್ ಹೊರತಾಗಿಯೂ ಸಹ ಯಾವ ಸಚಿವರೂಗಳು ತಮ್ಮ ಜಿಲ್ಲೆಗಳಿಗೆ ತೆರಳಿ ಕೆಲಸ ಮಾಡಿಲ್ಲ. ಇದೇ ಕಾರಣಕ್ಕೆ ಬೆಂಗಳೂರು ಹೊರತು ಬೇರೆ ಯಾವ ಜಿಲ್ಲೆಯೂ ಗಮನ ಸೆಳೆದಿಲ್ಲ ಎಂಬುದೇ ಸತ್ಯ. ಆದರೆ, ಈ ಪೈಕಿ ವಿಜಯಪುರದ ಉಸ್ತುವಾರಿ ಶಶಿಕಲಾ ಜೊಲ್ಲೆ ಮಾತ್ರ ತಮ್ಮ ಜಿಲ್ಲೆಯಲ್ಲಿ ಓಡಾಡಿ ಕೆಲಸ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ.

ಸಚಿವರುಗಳಿಗೆ ಬೆಂಗಳೂರಿನ ಮೇಲೆ ಏಕಿಷ್ಟು ಮೋಹ?

ಬೆಂಗಳೂರಿನ ಮೇಲೆ ಮಾತ್ರ ಸಚಿವರಿಗೆ ಏಕಿಷ್ಟು ಮೋಹ? ನಗರದ ಉಸ್ತುವಾರಿಗೆ ಮಾತ್ರ ಏಕೆ ಇಷ್ಟು ಹೋರಾಟ, ಮೇಲಾಟ? ಎಂಬುದು ಪ್ರಶ್ನೆ.

ಅಸಲಿಗೆ ಕೊರೋನಾ ಹೆಸರಿನಲ್ಲಿ ಬೆಂಗಳೂರಿನಲ್ಲಿ ಸಾವಿರಾರು ಕೋಟಿ ಹಣ ಓಡಾಡುತ್ತಿದೆ. ವೆಂಟಿಲೇಟರ್‍ನಿಂದ ಹಿಡಿದು ಪಿಪಿಇ ಕಿಟ್ ಖರೀದಿವರೆಗೆ ಎಲ್ಲ ವ್ಯವಹಾರಗಳೂ ಬೆಂಗಳೂರಿನಿಂದಲೇ, ಸಚಿವರ ಕಣ್ಣಳತೆಯಲ್ಲೇ ನಡೆಯುತ್ತಿದೆ. 250ರೂ ಬೆಲೆಯ ಸ್ಯಾನಿಟೈಸರ್‍ಗೆ 600ರೂ, 2500 ರೂ ಬೆಲೆಯ ಧರ್ಮಲ್ ಸ್ಕ್ರೀನಿಂಗ್ ಮೆಷಿನ್‍ಗೆ 12,000 ರೂ, 200 ರೂ ಗ್ಲೌಸ್‍ಗೆ 500 ರೂ ಸೇರಿದಂತೆ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದ ಎಲ್ಲಾ ವಸ್ತುಗಳ ಖರೀದಿಯಲ್ಲೂ ದುಪ್ಪಟ್ಟು ಹಣ ಕೊಳ್ಳೆ ಹೊಡೆಯಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಈ ಖರೀದಿಯ ಹೆಸರಿನಲ್ಲಿ ಸುಮಾರು 25,000 ಕೋಟಿ ಭ್ರಷ್ಟಾಚಾರ ಮಾಡಲಾಗಿದೆ ಎಂದು ವಿರೋಧ ಪಕ್ಷಗಳು ಟೀಕಿಸುತ್ತಿವೆ.

ಇದೇ ಕಾರಣಕ್ಕೆ ಬೆಂಗಳೂರಿನ ಉಸ್ತುವಾರಿಗಾಗಿ ಆರ್. ಅಶೋಕ್, ಶ್ರೀರಾಮುಲು ಹಾಗೂ ಕೆ. ಸುಧಾಕರ್ ನಡುವೆ ಸಾಕಷ್ಟು ಪೈಪೋಟಿ ನಡೆಯುತ್ತಿದೆಯೇ ಎಂಬ ಪ್ರಶ್ನೆ ಕೂಡ ಎತ್ತಲಾಗಿದೆ. ಆದರೆ, ವಿಪರ್ಯಾಸ ನೋಡಿ ಬೆಂಗಳೂರಿನ ಮೇಲೆ ನಮ್ಮ ಸಚಿವರುಗಳು ಇಷ್ಟು ಕಾಳಜಿ ವಹಿಸಿಯೂ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ತಮಗೆ ಕಳಪೆ ಚಿಕಿತ್ಸೆ ಸಿಗುತ್ತಿದೆ ಎಂದು ವಿಡಿಯೋ ಮಾಡಿ ಸಾಮಾನ್ಯ ಜನ ಗೋಳಾಡುವಂತಾಗಿದೆ. ತುರ್ತು ಚಿಕಿತ್ಸೆ ಇಲ್ಲದೆ ಬೀದಿಯಲ್ಲೇ ಹೆಣವಾಗುತ್ತಿರುವ ವರದಿಗಳು ಬಂದಿವೆ. ಭಯಭೀತರಾಗಿ ಜನ ತಮ್ಮ ಊರುಗಳಿಗೆ ಹಿಂತಿರುಗುತ್ತಿದ್ದಾರೆ.

ಆದರೆ, ಜಿಲ್ಲಾ ಉಸ್ತುವಾರಿ ಸಚಿವರುಗಳ ಅಸಡ್ಡೆಯಿಂದಾಗಿ ಬೆಂಗಳೂರಿನ ಕೊರೊನಾ ಪರಿಸ್ಥಿತಿ ನಾಳೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಆವರಿಸಬಾರದು. ಅದಕ್ಕೂ ಮುನ್ನ ಸರ್ಕಾರ ಮತ್ತು ಸಚಿವರುಗಳು ಎಚ್ಚೆತ್ತುಕೊಳ್ಳಲಿ ಎಂಬುದೇ ಜನಸಾಮಾನ್ಯರ ಆಶಯ.


ಇದನ್ನು ಓದಿ: ಇಂದಿರಾ ಕ್ಯಾಂಟೀನ್‌ದೊಳಗ ಊಟ ಮಾಡಿದಿವಿ ಅಂದರೆ ಕಮಲ ಪಕ್ಷಕ್ಕೆ ಆಗಿ ಬರೋದಿಲ್ಲ…!
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...