Homeಆರೋಗ್ಯಬಿಜೆಪಿ ಸರ್ಕಾರಕ್ಕೆ ಒಂದು ವರ್ಷ; ಖಾಸಗಿ ಆಸ್ಪತ್ರೆಗಳನ್ನು ಸ್ವಾಧೀನಪಡಿಸಿಕೊಳ್ಳವುದು ಇನ್ಯಾವಾಗ?

ಬಿಜೆಪಿ ಸರ್ಕಾರಕ್ಕೆ ಒಂದು ವರ್ಷ; ಖಾಸಗಿ ಆಸ್ಪತ್ರೆಗಳನ್ನು ಸ್ವಾಧೀನಪಡಿಸಿಕೊಳ್ಳವುದು ಇನ್ಯಾವಾಗ?

ಇಂತಹ ಒಂದು ಗಂಭೀರ ಸಾಂಕ್ರಾಮಿಕದ ಮಧ್ಯೆಯೂ ಸಾರ್ವಜನಿಕರ ಹಿತಾಸಕ್ತಿಯನ್ನು ಕಾಪಾಡಲು ನಿರಾಕರಿಸುತ್ತಿರುವ ರಾಜಕೀಯ ವರ್ಗ ನಮ್ಮನ್ನು ಆಳುತ್ತಿರುವುದು ನಮ್ಮ ದುರಾದೃಷ್ಟ.

- Advertisement -
- Advertisement -

ಅನೇಕ ವರ್ಷಗಳಿಂದ ಆರೋಗ್ಯ ಸೇವೆಗೆ ಅತಿ ಕಡಿಮೆ ಹಣ ಮೀಸಲಿಟ್ಟು ವ್ಯಯಿಸಿದ್ದರ ಕೆಟ್ಟ ಪರಿಣಾಮವನ್ನು ಕರ್ನಾಟಕ ಇಂದು ಕಾಣುತ್ತಿದೆ. ಯಡಿಯೂರಪ್ಪನವರು ಅಧಿಕಾರಕ್ಕೆ ಬಂದ ಮೇಲೂ ಇದರಲ್ಲಿ ಯಾವುದೇ ಬದಲಾವಣೆ ಕಾಣಲಿಲ್ಲ. 2020-21 ರ ಬಜೆಟ್ಟಿನಲ್ಲಿ, ಆರೋಗ್ಯಕ್ಕೆ ಮೀಸಲಿಟ್ಟ ಹಣ 4.3% ಆಗಿತ್ತು. ಅಂದರೆ ಹಿಂದಿನ ಸರಕಾರಗಳು ಮೀಸಲಿಟ್ಟಷ್ಟೇ ಹಣವನ್ನು ಈ ಹೊಸ ಸರಕಾರವೂ ಮೀಸಲಿಟ್ಟಿತು. ಇದು ಇತರ ಎಲ್ಲಾ ರಾಜ್ಯಗಳ ಸರಾಸರಿಯಾದ 5.3% ಕ್ಕೆ ಹೋಲಿಸಿದರೆ ಬಹಳ ಕಡಿಮೆ. ಕಳೆದ ವರ್ಷ ಯಡಿಯೂರಪ್ಪನವರು ಅಧಿಕಾರ ಸ್ವೀಕರಿಸಿದಾಗ ನೀತಿ ಆಯೋಗವು ರಾಜ್ಯವಾರು ಆರೋಗ್ಯ ಅಂಕಿಅಂಶಗಳ ಎರಡನೇ ಸುತ್ತಿನ ವರದಿಯನ್ನು ಬಿಡುಗಡೆ ಮಾಡಿತು. ಈ ವರದಿಯು, ಕರ್ನಾಟಕದ ಪ್ರಾಥಮಿಕ ಆರೋಗ್ಯ ಸೇವೆಯು ದುರ್ಬಲವಾಗಿರುವುದನ್ನು ಬಹಿರಂಗಗೊಳಿಸಿತು.

ಪ್ರಾಥಮಿಕ ಆರೋಗ್ಯ ಸೇವೆಯೇ ರೋಗಗಳನ್ನು ತಡೆಯುವುದರಲ್ಲಿ ಮತ್ತು ಆರೋಗ್ಯ ಸುಧಾರಿಸುವುದರಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆರೋಗ್ಯ ಉಪಕೇಂದ್ರಗಳಲ್ಲಿ ಎಎನ್‍ಎಮ್‍ಗಳ (Auxiliary Nursing Midwifery) ಹುದ್ದೆಗಳ ಖಾಲಿ ಪ್ರಮಾಣ 33.4% ಕ್ಕೆ ಏರಿದೆ. ಇದರಿಂದ ಬಾಣಂತಿಯರ ಮತ್ತು ಮಕ್ಕಳ ಆರೋಗ್ಯ ಸೇವೆಯಯಲ್ಲಿ ವ್ಯತ್ಯಯ ಉಂಟಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮತ್ತು ಸಿಎಚ್‍ಸಿಗಳ (ಸಮುದಾಯ ಆರೋಗ್ಯ ಕೇಂದ್ರಗಳು) ಬೆನ್ನೆಲುಬಾಗಿ ದುಡಿಯುವ ಸ್ಟಾಫ್ ನರ್ಸ್‍ಗಳ ಹುದ್ದೆಗಳಲ್ಲಿ ಸುಮಾರು 22% ಹುದ್ದೆಗಳು ಖಾಲಿಯಾಗಿ ಉಳಿದುಕೊಡಿವೆ. ಸಿಎಚ್‍ಸಿಗಳಲ್ಲಿ ಕೇವಲ 45% (ಆರೋಗ್ಯ ತುರ್ತಿನಲ್ಲಿ ಜೀವ ಉಳಿಸಲು ಪ್ರಮುಖ ಪಾತ್ರ ವಹಿಸುವ ಆರೋಗ್ಯ ಕೇಂದ್ರಗಳು) ಮಾತ್ರ ಕಾರ್ಯನಿರ್ವಹಿಸುತ್ತಿದ್ದವು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ 37.7% ವಿಶೇಷಜ್ಞರ ಹುದ್ದೆಗಳು ಖಾಲಿಯಿದ್ದವು. ಹಾಗಾಗಿ, ನವಜಾತ ಶಿಶು ಮರಣದ ಪ್ರಮಾಣ 18% ಹಾಗೂ ಹೆಣ್ಣು-ಗಂಡು ಶಿಶುಗಳ ಲೈಂಗಿಕ ಅನುಪಾತದ ಪ್ರಮಾಣ 935 ಕ್ಕೆ ನಿಂತನೀರಾಗಿರುವುದು ಆಶ್ಚರ್ಯವಲ್ಲ. ಸಾಂಸ್ಥಿಕ ಹೆರಿಗೆಗಳ ಪ್ರಮಾಣ ಕೇವಲ 79.6% ಆಗಿತ್ತು, ಅದು ಸದ್ಯದ ಗುರಿಯಾದ 90%ಕ್ಕಿಂತ ಕಡಿಮೆ ಹಾಗೂ ಟಿಬಿ ರೋಗದ ಚಿಕಿತ್ಸೆಯ ಯಶಸ್ಸಿನ ಪ್ರಮಾಣ ಕೇವಲ 79.7% ಆಗಿ ಉಳಿದಿದೆ.

ಪ್ರಾಥಮಿಕ ಆರೋಗ್ಯ ಸೇವೆಯು ಯಾವುದೇ ಸಾರ್ವಜನಿಕ ಆರೋಗ್ಯ ವ್ಯವಸ್ಥೆಗೆ ಅಡಿಪಾಯ. ಹಾಗಾಗಿ ಒಂದು ದುರ್ಬಲ ಪ್ರಾಥಮಿಕ ಆರೋಗ್ಯ ವ್ಯವಸ್ಥೆಯು ರಾಜ್ಯದಲ್ಲಿ ಕೋವಿಡ್-19 ನಂತಹ ಸಾಂಕ್ರಾಮಿಕವನ್ನು ತಡೆಗಟ್ಟುವಲ್ಲಿ ಯಾವ ರೀತಿ ಭಾಧಿಸುತ್ತೆ ಎಂಬುದು ಈಗ ಜಗಜ್ಜಾಹಿರವಾಗಿದೆ. ಇಷ್ಟಾದರೂ, ಯಡಿಯೂರಪ್ಪನವರ ಸರಕಾರವು, ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಿಗೊಟ್ಟು, ಖಾಸಗಿ ಆರೋಗ್ಯ ವಲಯವನ್ನು ಉತ್ತೇಜನ ನೀಡುವ ಅಪಾಯಕಾರಿ ನೀತಿಗಳನ್ನು ಅನುಸರಿಸುವುದನ್ನು ನಿಲ್ಲಿಸಿಲ್ಲ. ಇನ್ನೊಂದು ಹೆಜ್ಜೆ ಮುಂದೆ ಹೋಗಿ, ನೀತಿ ಆಯೋಗವು ಸೂಚಿಸಿರುವಂತೆ, ಜಿಲ್ಲಾ ಸರಕಾರಿ ಆಸ್ಪತ್ರೆಯ ನಿರ್ವಹಣೆಯಲ್ಲಿ ಖಾಸಗಿ ವಲಯವನ್ನು ತಂದು, ಸರಕಾರಿ ಆಸ್ಪತ್ರೆಗಳ ಖಾಸಗಿಕರಣಗೊಳಿಸುವ ಪ್ರಯತ್ನ ನಡೆಯುತ್ತಿದೆ. ಪ್ರಸಕ್ತ ಸರಕಾರದ ಹೆಚ್ಚಿನ ಆರೋಗ್ಯದ ಯೋಜನೆಗಳು ಪ್ರಾಥಮಿಕ ಮತ್ತು ಎರಡನೇ ಹಂತದ ಅರೋಗ್ಯ ಸೇವೆಗಳ ಮೇಲ್ಪಟ್ಟ ಮೂರನೇ ಹಂತದ ಆರೋಗ್ಯ ಸೇವೆಯ ಮೇಲೆಯೇ ಕೇಂದ್ರೀಕೃತವಾಗಿವೆ ಹಾಗೂ ಪಿಪಿಪಿ (ಖಾಸಗಿ, ಸರಕಾರಿ ಸಹಯೋಗ)ದ ಮಾದರಿಯಲ್ಲಿ ಯೋಜಿಸಲಾಗಿದೆ. ಅದರಲ್ಲಿ ಆರೋಗ್ಯ ತುರ್ತುಗಳನ್ನು ನಿರ್ವಹಿಸಲು 5 ತಾಲೂಕು ಆಸ್ಪತ್ರೆಗಳು, ಮಂಗಳೂರಿನಲ್ಲಿ ಮಕ್ಕಳ ಆರೋಗ್ಯ ಸೇವೆಯ ಪ್ರಾದೇಶಿಕ ಉನ್ನತ ಕೇಂದ್ರ ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ತೀವ್ರ ನಿಘಾ ಘಟಕಗಳನ್ನು ಸ್ಥಾಪಿಸುವುದಾಗಿದೆ. ಇದರಲ್ಲಿ ಗಮನಿಸಬೇಕಾದ ಅಂಶವೆಂದರೆ, ಈ ಎಲ್ಲಾ ಯೋಜನೆಗಳಲ್ಲಿ ಉಪಕರಣದ ಖರೀದಿಯಲ್ಲಿ ಮತ್ತು ನಿರ್ಮಾಣದಲ್ಲಿ ದೊಡ್ಡ ಮಟ್ಟದ ಹೂಡಿಕೆ ಮಾಡಬೇಕಾಗುತ್ತದೆ ಹಾಗೂ ಅದರಿಂದ ಭ್ರಷ್ಟಾಚಾರ ಮಾಡುವ ಅವಕಾಶ ಇರುತ್ತದೆ. ಅಂದರೆ, ವಿಶೇಷತಜ್ಞರ ಹುದ್ದೆಯನ್ನು ಭರ್ತಿ ಮಾಡದೇ ಐಸಿಯುಗಳನ್ನು ರಚಿಸುವುದು, ಎಎನ್‍ಎಮ್ ಮತ್ತು ಸ್ಟಾಫ್ ನರ್ಸಗಳ ಹುದ್ದೆಗಳನ್ನು ಭರ್ತಿ ಮಾಡದೇ ಪಿಎಚ್‍ಸಿಗಳಲ್ಲಿ ದೂರವಾಣಿ ಮೂಲಕ ಆರೋಗ್ಯ ಸೇವೆ ನೀಡುವುದು ಇತ್ಯಾದಿಗಳ ಅರ್ಥ ಸಾಯುತ್ತಿರುವ ಸಾರ್ವಜನಿಕ ಆರೋಗ್ಯ ವ್ಯವಸ್ಥೆಗೆ ತೇಪೆ ಹೆಚ್ಚಿದಂತೆ ಆಗುತ್ತೆ ಹೊರತು ಮತ್ತೇನಿಲ್ಲ.

ಇನ್ನು ಗಾಯಕ್ಕೆ ಬರೆ ಹಾಕಿದಂತೆ, ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಉದ್ಯೋಗಿಗಳ ಸಂಬಳದಲ್ಲಿ ಕಡಿತ ಮಾಡಲಾಗಿದೆ. 3-5 ವರ್ಷಗಳ ಕಾಲ ಸೇವೆ ಸಲ್ಲಿಸಿದ ಆರೋಗ್ಯ ಸೇವೆಯ ಕಾರ್ಮಿಕರನ್ನು ಕಾಯಂ ಮಾಡಿಕೊಳ್ಳಲು ಸರಕಾರ ನಿರಾಕರಿಸಿದೆ ಮತ್ತು ‘ಸಮಾನ ಕೆಲಸಕ್ಕೆ ಸಮಾನ ವೇತನ’ದ ಬೇಡಿಕೆಗೂ ಕಿವಿಗೊಟ್ಟಿಲ್ಲ. ಈ ಸಾಂಕ್ರಾಮಿಕದ ನಡುವೆಯೇ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ವೈದ್ಯರು, ಸ್ಟಾಫ್ ನರ್ಸ್‍ಗಳು ಹಾಗೂ ಲ್ಯಾಬ್ ಟೆಕ್ನಿಷಿಯನ್ನರ ವೇತನಗಳನ್ನು ತಡೆಹಿಡಿಯಲಾಗಿದೆ. ಇದನ್ನು ನೋಡಿದರೆ, ಈ ಸರಕಾರವು ಇಂತಹ ಬಿಕ್ಕಟ್ಟಿನ ನಡುವೆಯೇ ತನ್ನದೇ ಆರೋಗ್ಯ ಸೇವೆಯ ವ್ಯವಸ್ಥೆಯನ್ನು ಉದ್ದೇಶಪೂರ್ವಕವಾಗಿ ನಾಶ ಮಾಡುತ್ತಿದೆ ಎಂದು ಕಾಣುತ್ತದೆ.

ಇಂತಹ ಕೆಟ್ಟ ಹೆಜ್ಜೆಗಳು ಈಗ ತಮ್ಮ ಪರಿಣಾಮಗಳನ್ನು ತೋರಿಸುತ್ತಿವೆ. ಸಾಂಕ್ರಾಮಿಕ ರೋಗಗಳು ಹೆಡೆಬಿಚ್ಚಿದಾಗ ಕೇವಲ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೇಲೆ ನಂಬಿಕೊಳ್ಳಬಹುದು ಎಂಬುದು ಈಗ ಸ್ಪಷ್ಟವಾಗುತ್ತಿದೆ ಹಾಗೂ ಖಾಸಗಿ ವಲಯಕ್ಕೆ ಎಷ್ಟೇ ‘ಪ್ರೋತ್ಸಾಹ’ಗಳನ್ನು ನೀಡಿದರೂ ಅದು ತನ್ನ ಹಿತಾಸಕ್ತಿಯನ್ನು ಮಾತ್ರ ನೋಡಿ, ಸಾರ್ವಜನಿಕರ ರಕ್ಷಣೆಗೆ ಬರಲಾರದು ಎಂಬುದೂ ಖಚಿತವಾಗಿದೆ. ಪರಿಸ್ಥಿತಿ ಎಷ್ಟೇ ಗಂಭೀರವಾಗಿರಲಿ, ಖಾಸಗಿ ಆರೋಗ್ಯ ಕ್ಷೇತ್ರವು ತನ್ನ ಲಾಭದ ಚಿಂತೆಯನ್ನಷ್ಟೇ ಮಾಡುತ್ತದೆ ಮತ್ತು ತನ್ನ ಸ್ವಾರ್ಥ ಹಿತಾಸಕ್ತಿಗಳನ್ನು ಕಾಪಾಡಲು ದುಡಿಯುತ್ತ, ಸರಕಾರವು ಖಾಸಗಿ ವಲಯಕ್ಕೆ ಮಾಡಿದ ‘ಅನ್ಯಾಯ’ಗಳ ಬಗ್ಗೆ ದೂರುವುದು, ಗಲಾಟೆ ಜಗಳ ಮಾಡುವುದನ್ನು ಮುಂದುವರೆಸುತ್ತದೆ ಎಂಬುದು ಸಾಬೀತಾಗಿದೆ.

ಇಂತಹ ಒಂದು ಗಂಭೀರ ಸಾಂಕ್ರಾಮಿಕದ ಮಧ್ಯೆಯೂ ಸಾರ್ವಜನಿಕರ ಹಿತಾಸಕ್ತಿಯನ್ನು ಕಾಪಾಡಲು ನಿರಾಕರಿಸುತ್ತಿರುವ ರಾಜಕೀಯ ವರ್ಗ ನಮ್ಮನ್ನು ಆಳುತ್ತಿರುವುದು ನಮ್ಮ ದುರಾದೃಷ್ಟ. ಉದಾಹರಣೆಗೆ, ಈ ಸಾಂಕ್ರಾಮಿಕದ ಬಿಕ್ಕಟ್ಟಿನಲ್ಲಿ, ತುರ್ತು ಪರಿಸ್ಥಿತಿಯ ಕಾನೂನುಗಳು ನೀಡುವ ನ್ಯಾಯಸಮ್ಮತ ಅಧಿಕಾರವನ್ನು ಬಳಸಿಕೊಂಡು ಖಾಸಗಿ ಆರೋಗ್ಯ ಸೇವೆಯ ಸೌಲಭ್ಯಗಳನ್ನು ತಾತ್ಕಾಲಿಕವಾಗಿ ಸ್ವಾಧೀನಪಡಿಸುವಲ್ಲಿ ಯಾವುದು ಅಡ್ಡಿ ಬರುತ್ತಿದೆ? ಸರಕಾರ ಉಚಿತ ಸೌಲಭ್ಯಗಳನ್ನು ನೀಡುತ್ತಿರುವಾಗ ಸಾರ್ವಜನಿಕರು ಕೋವಿಡ್ ಸೇವೆಗಳಿಗಾಗಿ ಖಾಸಗಿ ಸಂಸ್ಥೆಗಳಿಗೆ ಏಕೆ ಹಣ ತೆತ್ತಬೇಕು? ಸಾರ್ವಜನಿಕರ ಹಿತಾಸಕ್ತಿಯನ್ನು ಸರಕಾರ ಕಾಪಾಡದಿದ್ದರೆ ಮತ್ಯಾರು ಕಾಪಾಡಬೇಕು? ಈ ಸರಕಾರವನ್ನು, ಪ್ರತಿನಿಧಿಗಳನ್ನು ನಾವೇ ಆಯ್ಕೆ ಮಾಡಿ ಕಳುಹಿಸಿದ್ದೇವೆ ಎಂಬುದನ್ನು ನೆನಪಿಡಬೇಕಿದೆ ಹಾಗೂ ಸರಕಾರದ ತಪ್ಪುಗಳಿಗೆ ಅವರು ಹೊಣೆ ಹೊರುವಂತೆ ಮಾಡುವ ಸಮಯ ಬಂದಿದೆ. ಅದನ್ನು ಈಗ ಮಾಡದಿದ್ದರೆ ಯಾವಾಗ?

ಡಾ. ಅಖಿಲಾ ವಾಸನ್, ಜನಾರೋಗ್ಯ ಚಳವಳಿಯ ಮುಂಚೂಣಿ ಕಾರ್ಯಕರ್ತೆ ಮತ್ತು ಸಾರ್ವಜನಿಕ ಆರೋಗ್ಯದ ಸಂಶೋಧಕಿ


ಇದನ್ನು ಓದಿ: ಎಲೆಮರೆ -39: ಊರನ್ನೇ ರಂಗಭೂಮಿ ಮಾಡಿದ ಶಿಕ್ಷಕ ಅಶೋಕ ತೋಟ್ನಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...