Homeಆರೋಗ್ಯಬಿಜೆಪಿ ಸರ್ಕಾರಕ್ಕೆ ಒಂದು ವರ್ಷ; ಖಾಸಗಿ ಆಸ್ಪತ್ರೆಗಳನ್ನು ಸ್ವಾಧೀನಪಡಿಸಿಕೊಳ್ಳವುದು ಇನ್ಯಾವಾಗ?

ಬಿಜೆಪಿ ಸರ್ಕಾರಕ್ಕೆ ಒಂದು ವರ್ಷ; ಖಾಸಗಿ ಆಸ್ಪತ್ರೆಗಳನ್ನು ಸ್ವಾಧೀನಪಡಿಸಿಕೊಳ್ಳವುದು ಇನ್ಯಾವಾಗ?

ಇಂತಹ ಒಂದು ಗಂಭೀರ ಸಾಂಕ್ರಾಮಿಕದ ಮಧ್ಯೆಯೂ ಸಾರ್ವಜನಿಕರ ಹಿತಾಸಕ್ತಿಯನ್ನು ಕಾಪಾಡಲು ನಿರಾಕರಿಸುತ್ತಿರುವ ರಾಜಕೀಯ ವರ್ಗ ನಮ್ಮನ್ನು ಆಳುತ್ತಿರುವುದು ನಮ್ಮ ದುರಾದೃಷ್ಟ.

- Advertisement -
- Advertisement -

ಅನೇಕ ವರ್ಷಗಳಿಂದ ಆರೋಗ್ಯ ಸೇವೆಗೆ ಅತಿ ಕಡಿಮೆ ಹಣ ಮೀಸಲಿಟ್ಟು ವ್ಯಯಿಸಿದ್ದರ ಕೆಟ್ಟ ಪರಿಣಾಮವನ್ನು ಕರ್ನಾಟಕ ಇಂದು ಕಾಣುತ್ತಿದೆ. ಯಡಿಯೂರಪ್ಪನವರು ಅಧಿಕಾರಕ್ಕೆ ಬಂದ ಮೇಲೂ ಇದರಲ್ಲಿ ಯಾವುದೇ ಬದಲಾವಣೆ ಕಾಣಲಿಲ್ಲ. 2020-21 ರ ಬಜೆಟ್ಟಿನಲ್ಲಿ, ಆರೋಗ್ಯಕ್ಕೆ ಮೀಸಲಿಟ್ಟ ಹಣ 4.3% ಆಗಿತ್ತು. ಅಂದರೆ ಹಿಂದಿನ ಸರಕಾರಗಳು ಮೀಸಲಿಟ್ಟಷ್ಟೇ ಹಣವನ್ನು ಈ ಹೊಸ ಸರಕಾರವೂ ಮೀಸಲಿಟ್ಟಿತು. ಇದು ಇತರ ಎಲ್ಲಾ ರಾಜ್ಯಗಳ ಸರಾಸರಿಯಾದ 5.3% ಕ್ಕೆ ಹೋಲಿಸಿದರೆ ಬಹಳ ಕಡಿಮೆ. ಕಳೆದ ವರ್ಷ ಯಡಿಯೂರಪ್ಪನವರು ಅಧಿಕಾರ ಸ್ವೀಕರಿಸಿದಾಗ ನೀತಿ ಆಯೋಗವು ರಾಜ್ಯವಾರು ಆರೋಗ್ಯ ಅಂಕಿಅಂಶಗಳ ಎರಡನೇ ಸುತ್ತಿನ ವರದಿಯನ್ನು ಬಿಡುಗಡೆ ಮಾಡಿತು. ಈ ವರದಿಯು, ಕರ್ನಾಟಕದ ಪ್ರಾಥಮಿಕ ಆರೋಗ್ಯ ಸೇವೆಯು ದುರ್ಬಲವಾಗಿರುವುದನ್ನು ಬಹಿರಂಗಗೊಳಿಸಿತು.

ಪ್ರಾಥಮಿಕ ಆರೋಗ್ಯ ಸೇವೆಯೇ ರೋಗಗಳನ್ನು ತಡೆಯುವುದರಲ್ಲಿ ಮತ್ತು ಆರೋಗ್ಯ ಸುಧಾರಿಸುವುದರಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆರೋಗ್ಯ ಉಪಕೇಂದ್ರಗಳಲ್ಲಿ ಎಎನ್‍ಎಮ್‍ಗಳ (Auxiliary Nursing Midwifery) ಹುದ್ದೆಗಳ ಖಾಲಿ ಪ್ರಮಾಣ 33.4% ಕ್ಕೆ ಏರಿದೆ. ಇದರಿಂದ ಬಾಣಂತಿಯರ ಮತ್ತು ಮಕ್ಕಳ ಆರೋಗ್ಯ ಸೇವೆಯಯಲ್ಲಿ ವ್ಯತ್ಯಯ ಉಂಟಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮತ್ತು ಸಿಎಚ್‍ಸಿಗಳ (ಸಮುದಾಯ ಆರೋಗ್ಯ ಕೇಂದ್ರಗಳು) ಬೆನ್ನೆಲುಬಾಗಿ ದುಡಿಯುವ ಸ್ಟಾಫ್ ನರ್ಸ್‍ಗಳ ಹುದ್ದೆಗಳಲ್ಲಿ ಸುಮಾರು 22% ಹುದ್ದೆಗಳು ಖಾಲಿಯಾಗಿ ಉಳಿದುಕೊಡಿವೆ. ಸಿಎಚ್‍ಸಿಗಳಲ್ಲಿ ಕೇವಲ 45% (ಆರೋಗ್ಯ ತುರ್ತಿನಲ್ಲಿ ಜೀವ ಉಳಿಸಲು ಪ್ರಮುಖ ಪಾತ್ರ ವಹಿಸುವ ಆರೋಗ್ಯ ಕೇಂದ್ರಗಳು) ಮಾತ್ರ ಕಾರ್ಯನಿರ್ವಹಿಸುತ್ತಿದ್ದವು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ 37.7% ವಿಶೇಷಜ್ಞರ ಹುದ್ದೆಗಳು ಖಾಲಿಯಿದ್ದವು. ಹಾಗಾಗಿ, ನವಜಾತ ಶಿಶು ಮರಣದ ಪ್ರಮಾಣ 18% ಹಾಗೂ ಹೆಣ್ಣು-ಗಂಡು ಶಿಶುಗಳ ಲೈಂಗಿಕ ಅನುಪಾತದ ಪ್ರಮಾಣ 935 ಕ್ಕೆ ನಿಂತನೀರಾಗಿರುವುದು ಆಶ್ಚರ್ಯವಲ್ಲ. ಸಾಂಸ್ಥಿಕ ಹೆರಿಗೆಗಳ ಪ್ರಮಾಣ ಕೇವಲ 79.6% ಆಗಿತ್ತು, ಅದು ಸದ್ಯದ ಗುರಿಯಾದ 90%ಕ್ಕಿಂತ ಕಡಿಮೆ ಹಾಗೂ ಟಿಬಿ ರೋಗದ ಚಿಕಿತ್ಸೆಯ ಯಶಸ್ಸಿನ ಪ್ರಮಾಣ ಕೇವಲ 79.7% ಆಗಿ ಉಳಿದಿದೆ.

ಪ್ರಾಥಮಿಕ ಆರೋಗ್ಯ ಸೇವೆಯು ಯಾವುದೇ ಸಾರ್ವಜನಿಕ ಆರೋಗ್ಯ ವ್ಯವಸ್ಥೆಗೆ ಅಡಿಪಾಯ. ಹಾಗಾಗಿ ಒಂದು ದುರ್ಬಲ ಪ್ರಾಥಮಿಕ ಆರೋಗ್ಯ ವ್ಯವಸ್ಥೆಯು ರಾಜ್ಯದಲ್ಲಿ ಕೋವಿಡ್-19 ನಂತಹ ಸಾಂಕ್ರಾಮಿಕವನ್ನು ತಡೆಗಟ್ಟುವಲ್ಲಿ ಯಾವ ರೀತಿ ಭಾಧಿಸುತ್ತೆ ಎಂಬುದು ಈಗ ಜಗಜ್ಜಾಹಿರವಾಗಿದೆ. ಇಷ್ಟಾದರೂ, ಯಡಿಯೂರಪ್ಪನವರ ಸರಕಾರವು, ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಿಗೊಟ್ಟು, ಖಾಸಗಿ ಆರೋಗ್ಯ ವಲಯವನ್ನು ಉತ್ತೇಜನ ನೀಡುವ ಅಪಾಯಕಾರಿ ನೀತಿಗಳನ್ನು ಅನುಸರಿಸುವುದನ್ನು ನಿಲ್ಲಿಸಿಲ್ಲ. ಇನ್ನೊಂದು ಹೆಜ್ಜೆ ಮುಂದೆ ಹೋಗಿ, ನೀತಿ ಆಯೋಗವು ಸೂಚಿಸಿರುವಂತೆ, ಜಿಲ್ಲಾ ಸರಕಾರಿ ಆಸ್ಪತ್ರೆಯ ನಿರ್ವಹಣೆಯಲ್ಲಿ ಖಾಸಗಿ ವಲಯವನ್ನು ತಂದು, ಸರಕಾರಿ ಆಸ್ಪತ್ರೆಗಳ ಖಾಸಗಿಕರಣಗೊಳಿಸುವ ಪ್ರಯತ್ನ ನಡೆಯುತ್ತಿದೆ. ಪ್ರಸಕ್ತ ಸರಕಾರದ ಹೆಚ್ಚಿನ ಆರೋಗ್ಯದ ಯೋಜನೆಗಳು ಪ್ರಾಥಮಿಕ ಮತ್ತು ಎರಡನೇ ಹಂತದ ಅರೋಗ್ಯ ಸೇವೆಗಳ ಮೇಲ್ಪಟ್ಟ ಮೂರನೇ ಹಂತದ ಆರೋಗ್ಯ ಸೇವೆಯ ಮೇಲೆಯೇ ಕೇಂದ್ರೀಕೃತವಾಗಿವೆ ಹಾಗೂ ಪಿಪಿಪಿ (ಖಾಸಗಿ, ಸರಕಾರಿ ಸಹಯೋಗ)ದ ಮಾದರಿಯಲ್ಲಿ ಯೋಜಿಸಲಾಗಿದೆ. ಅದರಲ್ಲಿ ಆರೋಗ್ಯ ತುರ್ತುಗಳನ್ನು ನಿರ್ವಹಿಸಲು 5 ತಾಲೂಕು ಆಸ್ಪತ್ರೆಗಳು, ಮಂಗಳೂರಿನಲ್ಲಿ ಮಕ್ಕಳ ಆರೋಗ್ಯ ಸೇವೆಯ ಪ್ರಾದೇಶಿಕ ಉನ್ನತ ಕೇಂದ್ರ ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ತೀವ್ರ ನಿಘಾ ಘಟಕಗಳನ್ನು ಸ್ಥಾಪಿಸುವುದಾಗಿದೆ. ಇದರಲ್ಲಿ ಗಮನಿಸಬೇಕಾದ ಅಂಶವೆಂದರೆ, ಈ ಎಲ್ಲಾ ಯೋಜನೆಗಳಲ್ಲಿ ಉಪಕರಣದ ಖರೀದಿಯಲ್ಲಿ ಮತ್ತು ನಿರ್ಮಾಣದಲ್ಲಿ ದೊಡ್ಡ ಮಟ್ಟದ ಹೂಡಿಕೆ ಮಾಡಬೇಕಾಗುತ್ತದೆ ಹಾಗೂ ಅದರಿಂದ ಭ್ರಷ್ಟಾಚಾರ ಮಾಡುವ ಅವಕಾಶ ಇರುತ್ತದೆ. ಅಂದರೆ, ವಿಶೇಷತಜ್ಞರ ಹುದ್ದೆಯನ್ನು ಭರ್ತಿ ಮಾಡದೇ ಐಸಿಯುಗಳನ್ನು ರಚಿಸುವುದು, ಎಎನ್‍ಎಮ್ ಮತ್ತು ಸ್ಟಾಫ್ ನರ್ಸಗಳ ಹುದ್ದೆಗಳನ್ನು ಭರ್ತಿ ಮಾಡದೇ ಪಿಎಚ್‍ಸಿಗಳಲ್ಲಿ ದೂರವಾಣಿ ಮೂಲಕ ಆರೋಗ್ಯ ಸೇವೆ ನೀಡುವುದು ಇತ್ಯಾದಿಗಳ ಅರ್ಥ ಸಾಯುತ್ತಿರುವ ಸಾರ್ವಜನಿಕ ಆರೋಗ್ಯ ವ್ಯವಸ್ಥೆಗೆ ತೇಪೆ ಹೆಚ್ಚಿದಂತೆ ಆಗುತ್ತೆ ಹೊರತು ಮತ್ತೇನಿಲ್ಲ.

ಇನ್ನು ಗಾಯಕ್ಕೆ ಬರೆ ಹಾಕಿದಂತೆ, ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಉದ್ಯೋಗಿಗಳ ಸಂಬಳದಲ್ಲಿ ಕಡಿತ ಮಾಡಲಾಗಿದೆ. 3-5 ವರ್ಷಗಳ ಕಾಲ ಸೇವೆ ಸಲ್ಲಿಸಿದ ಆರೋಗ್ಯ ಸೇವೆಯ ಕಾರ್ಮಿಕರನ್ನು ಕಾಯಂ ಮಾಡಿಕೊಳ್ಳಲು ಸರಕಾರ ನಿರಾಕರಿಸಿದೆ ಮತ್ತು ‘ಸಮಾನ ಕೆಲಸಕ್ಕೆ ಸಮಾನ ವೇತನ’ದ ಬೇಡಿಕೆಗೂ ಕಿವಿಗೊಟ್ಟಿಲ್ಲ. ಈ ಸಾಂಕ್ರಾಮಿಕದ ನಡುವೆಯೇ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ವೈದ್ಯರು, ಸ್ಟಾಫ್ ನರ್ಸ್‍ಗಳು ಹಾಗೂ ಲ್ಯಾಬ್ ಟೆಕ್ನಿಷಿಯನ್ನರ ವೇತನಗಳನ್ನು ತಡೆಹಿಡಿಯಲಾಗಿದೆ. ಇದನ್ನು ನೋಡಿದರೆ, ಈ ಸರಕಾರವು ಇಂತಹ ಬಿಕ್ಕಟ್ಟಿನ ನಡುವೆಯೇ ತನ್ನದೇ ಆರೋಗ್ಯ ಸೇವೆಯ ವ್ಯವಸ್ಥೆಯನ್ನು ಉದ್ದೇಶಪೂರ್ವಕವಾಗಿ ನಾಶ ಮಾಡುತ್ತಿದೆ ಎಂದು ಕಾಣುತ್ತದೆ.

ಇಂತಹ ಕೆಟ್ಟ ಹೆಜ್ಜೆಗಳು ಈಗ ತಮ್ಮ ಪರಿಣಾಮಗಳನ್ನು ತೋರಿಸುತ್ತಿವೆ. ಸಾಂಕ್ರಾಮಿಕ ರೋಗಗಳು ಹೆಡೆಬಿಚ್ಚಿದಾಗ ಕೇವಲ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೇಲೆ ನಂಬಿಕೊಳ್ಳಬಹುದು ಎಂಬುದು ಈಗ ಸ್ಪಷ್ಟವಾಗುತ್ತಿದೆ ಹಾಗೂ ಖಾಸಗಿ ವಲಯಕ್ಕೆ ಎಷ್ಟೇ ‘ಪ್ರೋತ್ಸಾಹ’ಗಳನ್ನು ನೀಡಿದರೂ ಅದು ತನ್ನ ಹಿತಾಸಕ್ತಿಯನ್ನು ಮಾತ್ರ ನೋಡಿ, ಸಾರ್ವಜನಿಕರ ರಕ್ಷಣೆಗೆ ಬರಲಾರದು ಎಂಬುದೂ ಖಚಿತವಾಗಿದೆ. ಪರಿಸ್ಥಿತಿ ಎಷ್ಟೇ ಗಂಭೀರವಾಗಿರಲಿ, ಖಾಸಗಿ ಆರೋಗ್ಯ ಕ್ಷೇತ್ರವು ತನ್ನ ಲಾಭದ ಚಿಂತೆಯನ್ನಷ್ಟೇ ಮಾಡುತ್ತದೆ ಮತ್ತು ತನ್ನ ಸ್ವಾರ್ಥ ಹಿತಾಸಕ್ತಿಗಳನ್ನು ಕಾಪಾಡಲು ದುಡಿಯುತ್ತ, ಸರಕಾರವು ಖಾಸಗಿ ವಲಯಕ್ಕೆ ಮಾಡಿದ ‘ಅನ್ಯಾಯ’ಗಳ ಬಗ್ಗೆ ದೂರುವುದು, ಗಲಾಟೆ ಜಗಳ ಮಾಡುವುದನ್ನು ಮುಂದುವರೆಸುತ್ತದೆ ಎಂಬುದು ಸಾಬೀತಾಗಿದೆ.

ಇಂತಹ ಒಂದು ಗಂಭೀರ ಸಾಂಕ್ರಾಮಿಕದ ಮಧ್ಯೆಯೂ ಸಾರ್ವಜನಿಕರ ಹಿತಾಸಕ್ತಿಯನ್ನು ಕಾಪಾಡಲು ನಿರಾಕರಿಸುತ್ತಿರುವ ರಾಜಕೀಯ ವರ್ಗ ನಮ್ಮನ್ನು ಆಳುತ್ತಿರುವುದು ನಮ್ಮ ದುರಾದೃಷ್ಟ. ಉದಾಹರಣೆಗೆ, ಈ ಸಾಂಕ್ರಾಮಿಕದ ಬಿಕ್ಕಟ್ಟಿನಲ್ಲಿ, ತುರ್ತು ಪರಿಸ್ಥಿತಿಯ ಕಾನೂನುಗಳು ನೀಡುವ ನ್ಯಾಯಸಮ್ಮತ ಅಧಿಕಾರವನ್ನು ಬಳಸಿಕೊಂಡು ಖಾಸಗಿ ಆರೋಗ್ಯ ಸೇವೆಯ ಸೌಲಭ್ಯಗಳನ್ನು ತಾತ್ಕಾಲಿಕವಾಗಿ ಸ್ವಾಧೀನಪಡಿಸುವಲ್ಲಿ ಯಾವುದು ಅಡ್ಡಿ ಬರುತ್ತಿದೆ? ಸರಕಾರ ಉಚಿತ ಸೌಲಭ್ಯಗಳನ್ನು ನೀಡುತ್ತಿರುವಾಗ ಸಾರ್ವಜನಿಕರು ಕೋವಿಡ್ ಸೇವೆಗಳಿಗಾಗಿ ಖಾಸಗಿ ಸಂಸ್ಥೆಗಳಿಗೆ ಏಕೆ ಹಣ ತೆತ್ತಬೇಕು? ಸಾರ್ವಜನಿಕರ ಹಿತಾಸಕ್ತಿಯನ್ನು ಸರಕಾರ ಕಾಪಾಡದಿದ್ದರೆ ಮತ್ಯಾರು ಕಾಪಾಡಬೇಕು? ಈ ಸರಕಾರವನ್ನು, ಪ್ರತಿನಿಧಿಗಳನ್ನು ನಾವೇ ಆಯ್ಕೆ ಮಾಡಿ ಕಳುಹಿಸಿದ್ದೇವೆ ಎಂಬುದನ್ನು ನೆನಪಿಡಬೇಕಿದೆ ಹಾಗೂ ಸರಕಾರದ ತಪ್ಪುಗಳಿಗೆ ಅವರು ಹೊಣೆ ಹೊರುವಂತೆ ಮಾಡುವ ಸಮಯ ಬಂದಿದೆ. ಅದನ್ನು ಈಗ ಮಾಡದಿದ್ದರೆ ಯಾವಾಗ?

ಡಾ. ಅಖಿಲಾ ವಾಸನ್, ಜನಾರೋಗ್ಯ ಚಳವಳಿಯ ಮುಂಚೂಣಿ ಕಾರ್ಯಕರ್ತೆ ಮತ್ತು ಸಾರ್ವಜನಿಕ ಆರೋಗ್ಯದ ಸಂಶೋಧಕಿ


ಇದನ್ನು ಓದಿ: ಎಲೆಮರೆ -39: ಊರನ್ನೇ ರಂಗಭೂಮಿ ಮಾಡಿದ ಶಿಕ್ಷಕ ಅಶೋಕ ತೋಟ್ನಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...