Homeಆರೋಗ್ಯಬಿಜೆಪಿ ಸರ್ಕಾರಕ್ಕೆ ಒಂದು ವರ್ಷ; ಖಾಸಗಿ ಆಸ್ಪತ್ರೆಗಳನ್ನು ಸ್ವಾಧೀನಪಡಿಸಿಕೊಳ್ಳವುದು ಇನ್ಯಾವಾಗ?

ಬಿಜೆಪಿ ಸರ್ಕಾರಕ್ಕೆ ಒಂದು ವರ್ಷ; ಖಾಸಗಿ ಆಸ್ಪತ್ರೆಗಳನ್ನು ಸ್ವಾಧೀನಪಡಿಸಿಕೊಳ್ಳವುದು ಇನ್ಯಾವಾಗ?

ಇಂತಹ ಒಂದು ಗಂಭೀರ ಸಾಂಕ್ರಾಮಿಕದ ಮಧ್ಯೆಯೂ ಸಾರ್ವಜನಿಕರ ಹಿತಾಸಕ್ತಿಯನ್ನು ಕಾಪಾಡಲು ನಿರಾಕರಿಸುತ್ತಿರುವ ರಾಜಕೀಯ ವರ್ಗ ನಮ್ಮನ್ನು ಆಳುತ್ತಿರುವುದು ನಮ್ಮ ದುರಾದೃಷ್ಟ.

- Advertisement -
- Advertisement -

ಅನೇಕ ವರ್ಷಗಳಿಂದ ಆರೋಗ್ಯ ಸೇವೆಗೆ ಅತಿ ಕಡಿಮೆ ಹಣ ಮೀಸಲಿಟ್ಟು ವ್ಯಯಿಸಿದ್ದರ ಕೆಟ್ಟ ಪರಿಣಾಮವನ್ನು ಕರ್ನಾಟಕ ಇಂದು ಕಾಣುತ್ತಿದೆ. ಯಡಿಯೂರಪ್ಪನವರು ಅಧಿಕಾರಕ್ಕೆ ಬಂದ ಮೇಲೂ ಇದರಲ್ಲಿ ಯಾವುದೇ ಬದಲಾವಣೆ ಕಾಣಲಿಲ್ಲ. 2020-21 ರ ಬಜೆಟ್ಟಿನಲ್ಲಿ, ಆರೋಗ್ಯಕ್ಕೆ ಮೀಸಲಿಟ್ಟ ಹಣ 4.3% ಆಗಿತ್ತು. ಅಂದರೆ ಹಿಂದಿನ ಸರಕಾರಗಳು ಮೀಸಲಿಟ್ಟಷ್ಟೇ ಹಣವನ್ನು ಈ ಹೊಸ ಸರಕಾರವೂ ಮೀಸಲಿಟ್ಟಿತು. ಇದು ಇತರ ಎಲ್ಲಾ ರಾಜ್ಯಗಳ ಸರಾಸರಿಯಾದ 5.3% ಕ್ಕೆ ಹೋಲಿಸಿದರೆ ಬಹಳ ಕಡಿಮೆ. ಕಳೆದ ವರ್ಷ ಯಡಿಯೂರಪ್ಪನವರು ಅಧಿಕಾರ ಸ್ವೀಕರಿಸಿದಾಗ ನೀತಿ ಆಯೋಗವು ರಾಜ್ಯವಾರು ಆರೋಗ್ಯ ಅಂಕಿಅಂಶಗಳ ಎರಡನೇ ಸುತ್ತಿನ ವರದಿಯನ್ನು ಬಿಡುಗಡೆ ಮಾಡಿತು. ಈ ವರದಿಯು, ಕರ್ನಾಟಕದ ಪ್ರಾಥಮಿಕ ಆರೋಗ್ಯ ಸೇವೆಯು ದುರ್ಬಲವಾಗಿರುವುದನ್ನು ಬಹಿರಂಗಗೊಳಿಸಿತು.

ಪ್ರಾಥಮಿಕ ಆರೋಗ್ಯ ಸೇವೆಯೇ ರೋಗಗಳನ್ನು ತಡೆಯುವುದರಲ್ಲಿ ಮತ್ತು ಆರೋಗ್ಯ ಸುಧಾರಿಸುವುದರಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆರೋಗ್ಯ ಉಪಕೇಂದ್ರಗಳಲ್ಲಿ ಎಎನ್‍ಎಮ್‍ಗಳ (Auxiliary Nursing Midwifery) ಹುದ್ದೆಗಳ ಖಾಲಿ ಪ್ರಮಾಣ 33.4% ಕ್ಕೆ ಏರಿದೆ. ಇದರಿಂದ ಬಾಣಂತಿಯರ ಮತ್ತು ಮಕ್ಕಳ ಆರೋಗ್ಯ ಸೇವೆಯಯಲ್ಲಿ ವ್ಯತ್ಯಯ ಉಂಟಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮತ್ತು ಸಿಎಚ್‍ಸಿಗಳ (ಸಮುದಾಯ ಆರೋಗ್ಯ ಕೇಂದ್ರಗಳು) ಬೆನ್ನೆಲುಬಾಗಿ ದುಡಿಯುವ ಸ್ಟಾಫ್ ನರ್ಸ್‍ಗಳ ಹುದ್ದೆಗಳಲ್ಲಿ ಸುಮಾರು 22% ಹುದ್ದೆಗಳು ಖಾಲಿಯಾಗಿ ಉಳಿದುಕೊಡಿವೆ. ಸಿಎಚ್‍ಸಿಗಳಲ್ಲಿ ಕೇವಲ 45% (ಆರೋಗ್ಯ ತುರ್ತಿನಲ್ಲಿ ಜೀವ ಉಳಿಸಲು ಪ್ರಮುಖ ಪಾತ್ರ ವಹಿಸುವ ಆರೋಗ್ಯ ಕೇಂದ್ರಗಳು) ಮಾತ್ರ ಕಾರ್ಯನಿರ್ವಹಿಸುತ್ತಿದ್ದವು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ 37.7% ವಿಶೇಷಜ್ಞರ ಹುದ್ದೆಗಳು ಖಾಲಿಯಿದ್ದವು. ಹಾಗಾಗಿ, ನವಜಾತ ಶಿಶು ಮರಣದ ಪ್ರಮಾಣ 18% ಹಾಗೂ ಹೆಣ್ಣು-ಗಂಡು ಶಿಶುಗಳ ಲೈಂಗಿಕ ಅನುಪಾತದ ಪ್ರಮಾಣ 935 ಕ್ಕೆ ನಿಂತನೀರಾಗಿರುವುದು ಆಶ್ಚರ್ಯವಲ್ಲ. ಸಾಂಸ್ಥಿಕ ಹೆರಿಗೆಗಳ ಪ್ರಮಾಣ ಕೇವಲ 79.6% ಆಗಿತ್ತು, ಅದು ಸದ್ಯದ ಗುರಿಯಾದ 90%ಕ್ಕಿಂತ ಕಡಿಮೆ ಹಾಗೂ ಟಿಬಿ ರೋಗದ ಚಿಕಿತ್ಸೆಯ ಯಶಸ್ಸಿನ ಪ್ರಮಾಣ ಕೇವಲ 79.7% ಆಗಿ ಉಳಿದಿದೆ.

ಪ್ರಾಥಮಿಕ ಆರೋಗ್ಯ ಸೇವೆಯು ಯಾವುದೇ ಸಾರ್ವಜನಿಕ ಆರೋಗ್ಯ ವ್ಯವಸ್ಥೆಗೆ ಅಡಿಪಾಯ. ಹಾಗಾಗಿ ಒಂದು ದುರ್ಬಲ ಪ್ರಾಥಮಿಕ ಆರೋಗ್ಯ ವ್ಯವಸ್ಥೆಯು ರಾಜ್ಯದಲ್ಲಿ ಕೋವಿಡ್-19 ನಂತಹ ಸಾಂಕ್ರಾಮಿಕವನ್ನು ತಡೆಗಟ್ಟುವಲ್ಲಿ ಯಾವ ರೀತಿ ಭಾಧಿಸುತ್ತೆ ಎಂಬುದು ಈಗ ಜಗಜ್ಜಾಹಿರವಾಗಿದೆ. ಇಷ್ಟಾದರೂ, ಯಡಿಯೂರಪ್ಪನವರ ಸರಕಾರವು, ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಿಗೊಟ್ಟು, ಖಾಸಗಿ ಆರೋಗ್ಯ ವಲಯವನ್ನು ಉತ್ತೇಜನ ನೀಡುವ ಅಪಾಯಕಾರಿ ನೀತಿಗಳನ್ನು ಅನುಸರಿಸುವುದನ್ನು ನಿಲ್ಲಿಸಿಲ್ಲ. ಇನ್ನೊಂದು ಹೆಜ್ಜೆ ಮುಂದೆ ಹೋಗಿ, ನೀತಿ ಆಯೋಗವು ಸೂಚಿಸಿರುವಂತೆ, ಜಿಲ್ಲಾ ಸರಕಾರಿ ಆಸ್ಪತ್ರೆಯ ನಿರ್ವಹಣೆಯಲ್ಲಿ ಖಾಸಗಿ ವಲಯವನ್ನು ತಂದು, ಸರಕಾರಿ ಆಸ್ಪತ್ರೆಗಳ ಖಾಸಗಿಕರಣಗೊಳಿಸುವ ಪ್ರಯತ್ನ ನಡೆಯುತ್ತಿದೆ. ಪ್ರಸಕ್ತ ಸರಕಾರದ ಹೆಚ್ಚಿನ ಆರೋಗ್ಯದ ಯೋಜನೆಗಳು ಪ್ರಾಥಮಿಕ ಮತ್ತು ಎರಡನೇ ಹಂತದ ಅರೋಗ್ಯ ಸೇವೆಗಳ ಮೇಲ್ಪಟ್ಟ ಮೂರನೇ ಹಂತದ ಆರೋಗ್ಯ ಸೇವೆಯ ಮೇಲೆಯೇ ಕೇಂದ್ರೀಕೃತವಾಗಿವೆ ಹಾಗೂ ಪಿಪಿಪಿ (ಖಾಸಗಿ, ಸರಕಾರಿ ಸಹಯೋಗ)ದ ಮಾದರಿಯಲ್ಲಿ ಯೋಜಿಸಲಾಗಿದೆ. ಅದರಲ್ಲಿ ಆರೋಗ್ಯ ತುರ್ತುಗಳನ್ನು ನಿರ್ವಹಿಸಲು 5 ತಾಲೂಕು ಆಸ್ಪತ್ರೆಗಳು, ಮಂಗಳೂರಿನಲ್ಲಿ ಮಕ್ಕಳ ಆರೋಗ್ಯ ಸೇವೆಯ ಪ್ರಾದೇಶಿಕ ಉನ್ನತ ಕೇಂದ್ರ ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ತೀವ್ರ ನಿಘಾ ಘಟಕಗಳನ್ನು ಸ್ಥಾಪಿಸುವುದಾಗಿದೆ. ಇದರಲ್ಲಿ ಗಮನಿಸಬೇಕಾದ ಅಂಶವೆಂದರೆ, ಈ ಎಲ್ಲಾ ಯೋಜನೆಗಳಲ್ಲಿ ಉಪಕರಣದ ಖರೀದಿಯಲ್ಲಿ ಮತ್ತು ನಿರ್ಮಾಣದಲ್ಲಿ ದೊಡ್ಡ ಮಟ್ಟದ ಹೂಡಿಕೆ ಮಾಡಬೇಕಾಗುತ್ತದೆ ಹಾಗೂ ಅದರಿಂದ ಭ್ರಷ್ಟಾಚಾರ ಮಾಡುವ ಅವಕಾಶ ಇರುತ್ತದೆ. ಅಂದರೆ, ವಿಶೇಷತಜ್ಞರ ಹುದ್ದೆಯನ್ನು ಭರ್ತಿ ಮಾಡದೇ ಐಸಿಯುಗಳನ್ನು ರಚಿಸುವುದು, ಎಎನ್‍ಎಮ್ ಮತ್ತು ಸ್ಟಾಫ್ ನರ್ಸಗಳ ಹುದ್ದೆಗಳನ್ನು ಭರ್ತಿ ಮಾಡದೇ ಪಿಎಚ್‍ಸಿಗಳಲ್ಲಿ ದೂರವಾಣಿ ಮೂಲಕ ಆರೋಗ್ಯ ಸೇವೆ ನೀಡುವುದು ಇತ್ಯಾದಿಗಳ ಅರ್ಥ ಸಾಯುತ್ತಿರುವ ಸಾರ್ವಜನಿಕ ಆರೋಗ್ಯ ವ್ಯವಸ್ಥೆಗೆ ತೇಪೆ ಹೆಚ್ಚಿದಂತೆ ಆಗುತ್ತೆ ಹೊರತು ಮತ್ತೇನಿಲ್ಲ.

ಇನ್ನು ಗಾಯಕ್ಕೆ ಬರೆ ಹಾಕಿದಂತೆ, ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಉದ್ಯೋಗಿಗಳ ಸಂಬಳದಲ್ಲಿ ಕಡಿತ ಮಾಡಲಾಗಿದೆ. 3-5 ವರ್ಷಗಳ ಕಾಲ ಸೇವೆ ಸಲ್ಲಿಸಿದ ಆರೋಗ್ಯ ಸೇವೆಯ ಕಾರ್ಮಿಕರನ್ನು ಕಾಯಂ ಮಾಡಿಕೊಳ್ಳಲು ಸರಕಾರ ನಿರಾಕರಿಸಿದೆ ಮತ್ತು ‘ಸಮಾನ ಕೆಲಸಕ್ಕೆ ಸಮಾನ ವೇತನ’ದ ಬೇಡಿಕೆಗೂ ಕಿವಿಗೊಟ್ಟಿಲ್ಲ. ಈ ಸಾಂಕ್ರಾಮಿಕದ ನಡುವೆಯೇ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ವೈದ್ಯರು, ಸ್ಟಾಫ್ ನರ್ಸ್‍ಗಳು ಹಾಗೂ ಲ್ಯಾಬ್ ಟೆಕ್ನಿಷಿಯನ್ನರ ವೇತನಗಳನ್ನು ತಡೆಹಿಡಿಯಲಾಗಿದೆ. ಇದನ್ನು ನೋಡಿದರೆ, ಈ ಸರಕಾರವು ಇಂತಹ ಬಿಕ್ಕಟ್ಟಿನ ನಡುವೆಯೇ ತನ್ನದೇ ಆರೋಗ್ಯ ಸೇವೆಯ ವ್ಯವಸ್ಥೆಯನ್ನು ಉದ್ದೇಶಪೂರ್ವಕವಾಗಿ ನಾಶ ಮಾಡುತ್ತಿದೆ ಎಂದು ಕಾಣುತ್ತದೆ.

ಇಂತಹ ಕೆಟ್ಟ ಹೆಜ್ಜೆಗಳು ಈಗ ತಮ್ಮ ಪರಿಣಾಮಗಳನ್ನು ತೋರಿಸುತ್ತಿವೆ. ಸಾಂಕ್ರಾಮಿಕ ರೋಗಗಳು ಹೆಡೆಬಿಚ್ಚಿದಾಗ ಕೇವಲ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೇಲೆ ನಂಬಿಕೊಳ್ಳಬಹುದು ಎಂಬುದು ಈಗ ಸ್ಪಷ್ಟವಾಗುತ್ತಿದೆ ಹಾಗೂ ಖಾಸಗಿ ವಲಯಕ್ಕೆ ಎಷ್ಟೇ ‘ಪ್ರೋತ್ಸಾಹ’ಗಳನ್ನು ನೀಡಿದರೂ ಅದು ತನ್ನ ಹಿತಾಸಕ್ತಿಯನ್ನು ಮಾತ್ರ ನೋಡಿ, ಸಾರ್ವಜನಿಕರ ರಕ್ಷಣೆಗೆ ಬರಲಾರದು ಎಂಬುದೂ ಖಚಿತವಾಗಿದೆ. ಪರಿಸ್ಥಿತಿ ಎಷ್ಟೇ ಗಂಭೀರವಾಗಿರಲಿ, ಖಾಸಗಿ ಆರೋಗ್ಯ ಕ್ಷೇತ್ರವು ತನ್ನ ಲಾಭದ ಚಿಂತೆಯನ್ನಷ್ಟೇ ಮಾಡುತ್ತದೆ ಮತ್ತು ತನ್ನ ಸ್ವಾರ್ಥ ಹಿತಾಸಕ್ತಿಗಳನ್ನು ಕಾಪಾಡಲು ದುಡಿಯುತ್ತ, ಸರಕಾರವು ಖಾಸಗಿ ವಲಯಕ್ಕೆ ಮಾಡಿದ ‘ಅನ್ಯಾಯ’ಗಳ ಬಗ್ಗೆ ದೂರುವುದು, ಗಲಾಟೆ ಜಗಳ ಮಾಡುವುದನ್ನು ಮುಂದುವರೆಸುತ್ತದೆ ಎಂಬುದು ಸಾಬೀತಾಗಿದೆ.

ಇಂತಹ ಒಂದು ಗಂಭೀರ ಸಾಂಕ್ರಾಮಿಕದ ಮಧ್ಯೆಯೂ ಸಾರ್ವಜನಿಕರ ಹಿತಾಸಕ್ತಿಯನ್ನು ಕಾಪಾಡಲು ನಿರಾಕರಿಸುತ್ತಿರುವ ರಾಜಕೀಯ ವರ್ಗ ನಮ್ಮನ್ನು ಆಳುತ್ತಿರುವುದು ನಮ್ಮ ದುರಾದೃಷ್ಟ. ಉದಾಹರಣೆಗೆ, ಈ ಸಾಂಕ್ರಾಮಿಕದ ಬಿಕ್ಕಟ್ಟಿನಲ್ಲಿ, ತುರ್ತು ಪರಿಸ್ಥಿತಿಯ ಕಾನೂನುಗಳು ನೀಡುವ ನ್ಯಾಯಸಮ್ಮತ ಅಧಿಕಾರವನ್ನು ಬಳಸಿಕೊಂಡು ಖಾಸಗಿ ಆರೋಗ್ಯ ಸೇವೆಯ ಸೌಲಭ್ಯಗಳನ್ನು ತಾತ್ಕಾಲಿಕವಾಗಿ ಸ್ವಾಧೀನಪಡಿಸುವಲ್ಲಿ ಯಾವುದು ಅಡ್ಡಿ ಬರುತ್ತಿದೆ? ಸರಕಾರ ಉಚಿತ ಸೌಲಭ್ಯಗಳನ್ನು ನೀಡುತ್ತಿರುವಾಗ ಸಾರ್ವಜನಿಕರು ಕೋವಿಡ್ ಸೇವೆಗಳಿಗಾಗಿ ಖಾಸಗಿ ಸಂಸ್ಥೆಗಳಿಗೆ ಏಕೆ ಹಣ ತೆತ್ತಬೇಕು? ಸಾರ್ವಜನಿಕರ ಹಿತಾಸಕ್ತಿಯನ್ನು ಸರಕಾರ ಕಾಪಾಡದಿದ್ದರೆ ಮತ್ಯಾರು ಕಾಪಾಡಬೇಕು? ಈ ಸರಕಾರವನ್ನು, ಪ್ರತಿನಿಧಿಗಳನ್ನು ನಾವೇ ಆಯ್ಕೆ ಮಾಡಿ ಕಳುಹಿಸಿದ್ದೇವೆ ಎಂಬುದನ್ನು ನೆನಪಿಡಬೇಕಿದೆ ಹಾಗೂ ಸರಕಾರದ ತಪ್ಪುಗಳಿಗೆ ಅವರು ಹೊಣೆ ಹೊರುವಂತೆ ಮಾಡುವ ಸಮಯ ಬಂದಿದೆ. ಅದನ್ನು ಈಗ ಮಾಡದಿದ್ದರೆ ಯಾವಾಗ?

ಡಾ. ಅಖಿಲಾ ವಾಸನ್, ಜನಾರೋಗ್ಯ ಚಳವಳಿಯ ಮುಂಚೂಣಿ ಕಾರ್ಯಕರ್ತೆ ಮತ್ತು ಸಾರ್ವಜನಿಕ ಆರೋಗ್ಯದ ಸಂಶೋಧಕಿ


ಇದನ್ನು ಓದಿ: ಎಲೆಮರೆ -39: ಊರನ್ನೇ ರಂಗಭೂಮಿ ಮಾಡಿದ ಶಿಕ್ಷಕ ಅಶೋಕ ತೋಟ್ನಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....