Homeರಾಜಕೀಯಸೋಲುವ ಭೀತಿಯಲ್ಲಿ ಇವಿಎಂ ಯಂತ್ರಗಳಿಗೇ ಕನ್ನ ಹಾಕಿತೇ ಬಿಜೆಪಿ?

ಸೋಲುವ ಭೀತಿಯಲ್ಲಿ ಇವಿಎಂ ಯಂತ್ರಗಳಿಗೇ ಕನ್ನ ಹಾಕಿತೇ ಬಿಜೆಪಿ?

- Advertisement -
- Advertisement -

ಇ.ವಿ.ಎಮ್ ಬಂದ ಹೊಸತರಲ್ಲಿ ಅದನ್ನು ಹ್ಯಾಕ್ ಮಾಡಲು ಸಾಧ್ಯವಿಲ್ಲ, ಮೊದಲು ನಡೆಯುತ್ತಿದ್ದ ಚುನಾವಣೆ ಪ್ರಕ್ರಿಯೆಗಿಂತ ಎಲೆಕ್ಟ್ರಾನಿಕ್ ಓಟಿಂಗ್ ಮಷೀನ್ (ಇವಿಎಮ್) ನಿಂದ ಡಿಜಟಲೀಕರಣಗೊಂಡು ಹೆಚ್ಚು ನಂಬಿಕಾರ್ಹವಾಗಿರುತ್ತದೆ ಎಂದು ಹೇಳಲಾಗುತ್ತಿತ್ತು. ಅದನ್ನು ಹ್ಯಾಕ್ ಮಾಡಲು ಸಾಧ್ಯವಿಲ್ಲ ಎನ್ನುವ ಮಾತುಗಳನ್ನು ಚುನಾವಣೆ ಆಯೋಗವು ಹೇಳುತ್ತಿತ್ತು. ಆದರೆ ಈಗ ಇವಿಎಮ್ ಮಷೀನುಗಳೆ ಮಾಯವಾಗಿ ಖಾಸಗಿ ಹೋಟೆಲ್ ಗಳಲ್ಲಿ, ಎಂ.ಎಲ್.ಎ ಗಳ ಮನೆಗಳಲ್ಲಿ ಪ್ರತ್ಯಕ್ಷವಾಗುತ್ತಿದೆ. ಈ ಹಿಂದೆ ಯಾವುದೇ ಪಕ್ಷಕ್ಕೆ ಮತ ಹಾಕಿದರೂ ಬಿಜೆಪಿಗೇ ಮತಗಳು ಹೋಗುತ್ತಿದ್ದವು ಎನ್ನುವ ಆರೋಪಗಳು ಕೇಳಿಬರುತ್ತಿದ್ದವು. ಚಲಾಯಿಸಿದ ಮತಗಳು ಅಧಿಕೃತವಾಗಿದೆ ಎಂದು ಖಾತ್ರಿ ಮಾಡಿಕೊಳ್ಳಲು ವಿವಿ ಪ್ಯಾಟ್ ವ್ಯವಸ್ಥೆಯನ್ನು ತರಲಾಯಿತು. ಮತದಾರರನ್ನು ಹ್ಯಾಕ್ ಮಾಡಲು ಸಾಧ್ಯವೇ ಇಲ್ಲ ಎಂದು ನಂಬಿಸಲಾಯಿತು. ಆದರೆ ಈಗ ಮಷೀನುಗಳೇ ಕಳ್ಳತನವಾಗುತ್ತಿವೆ. ಇಂತಹ ವಿಡಿಯೋಗಳು ಇದೀಗ ಸಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗುತ್ತಿದೆ. ಇಂತಹ ಕಳ್ಳತನಗಳಲ್ಲಿ ಈವರೆಗೂ ಬಿಜೆಪಿಗರ ಕೈವಾಡವಿರುವುದು ಮತ್ತೊಂದು ವಿಶೇಷವಾಗಿದೆ.

ಇದೇ ತಿಂಗಳ ಶುಕ್ರವಾರದಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಡಿಯೋದಲ್ಲಿ ರಾಜಸ್ಥಾನದ ಪಾಲಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ಆಗಿರುವ ಗ್ಯಾನ್ ಚಂದ್ ಪಾರಾಖ್ ಅವರ ಮನೆಯಲ್ಲಿ ಇವಿಎಮ್ ಮಷೀನ್ ಗಳು ಸಿಕ್ಕಿದ್ದವು. ಸ್ಥಳೀಯ ವ್ಯಕ್ತಿಯೊಬ್ಬರು ಇದನ್ನು ವಿಡಿಯೋ ಮಾಡಿದ್ದರ ಪರಿಣಾಮವಾಗಿ ಈ ವಿಷಯ ಬೆಳಕಿದೆ ಬಂದಿದೆ. ಚುನಾವಣೆ ಆಯೋಗದ ಉಪ ಆಯುಕ್ತರಾದ ಸಂದೀಪ್ ಸಕ್ಸೇನ ಅವರು ಈ ಪ್ರಕರಣವನ್ನು ಒಪ್ಪಿಕೊಂಡಿದ್ದು ಇದರ ಮೇಲೆ ವಿಚಾರಣೆ ಮಾಡುವುದಾಗಿ ತಿಳಿಸಿದ್ದಾರೆ ಹಾಗೂ ಶಾಸಕರ ಮನೆಗೆ ಇವಿಎಮ್ ತಲುಪಿಸಿದ ಚುನಾವಣೆ ಅಧಿಕಾರಿಯನ್ನು ಅಮಾನತ್ತಿನಲ್ಲಿ ಇಟ್ಟಿರುವುದಾಗಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇದೇ ರೀತಿಯಾದ 4 ಪ್ರಕರಣಗಳು ಮಧ್ಯಪ್ರದೇಶದಲ್ಲಿ ನಡೆದಿರುವುದು ವರದಿಯಾಗಿದೆ. ನವೆಂಬರ್ 27 ರಂದು ವೈರಲ್ ಆಗಿದ್ದ ಮತ್ತೊಂದು ವಿಡಿಯೋದಲ್ಲಿ ಸೋಹನ್ ಲಾಲ್ ಬಜಾಜ್ ಮತ್ತು ಮೂರು ಜನ ಚುನಾವಣಾಧಿಕಾರಿಗಳು ಇವಿಎಮ್ ಮಷೀನುಗಳನ್ನು ಮಧ್ಯಪ್ರದೇಶದ ಶಹಜಾಪುರ್ ಜಿಲ್ಲೆಯ ರಾಜ್ ಮಹಲ್ ಹೋಟೆಲ್ ನಲ್ಲಿ ಇರಿಸಿಕೊಂಡಿದ್ದರು. ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರದಲ್ಲಿ, ಈ ಮಷೀನುಗಳು ಕಾರ್ಯ ಮಾಡುತ್ತಿಲ್ಲ, ನಮಗೆ ಒಳ್ಳೆಯ ಭಧ್ರತಾ ಕೊಠಡಿಗಳು ಇಲ್ಲ ಎಂಬ ಕಾರಣಗಳನ್ನು ನೀಡಿ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ.

ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಖುರಾಯ್ ನಗರದಲ್ಲಿಯೂ ಚುನಾವಣೆ ನಡೆದ 48 ಗಂಟೆಗಳ ನಂತರದಲ್ಲಿ ಒಂದು ಅನಧಿಕೃತ ಖಾಸಗಿ ವಾಹನದಲ್ಲಿ (ಖಾಸಗಿ ಶಾಲಾ ಬಸ್ ಎಂದು ಹೇಳಲಾಗುತ್ತಿದೆ) 34 ಇವಿಎಮ್ ಮಷೀನ್ ಗಳು ಬಂದವು ಎಂದು ವರದಿಯಾಗಿದೆ.

ಅಲ್ಲದೆ ಛತ್ತೀಸ್ಗಢದಲ್ಲಿ 3 ಇವಿಎಮ್ ಪ್ರಕರಣಗಳು ಜರುಗಿವೆ.

ಅದರಲ್ಲಿ ಈಗಷ್ಟೇ ಬಿಸಿ ಸುದ್ದಿಯಲ್ಲಿರುವುದು ಬಸ್ತಾರ್ ವಲಯದ ಜಗ್ದಲ್ಪುರ್ ನಲ್ಲಿ ಇವಿಎಂ ಮಷೀನುಗಳನ್ನು ಇರಿಸಿದ್ದ ಭಧ್ರತಾ ಕೊಠಡಿಯಲ್ಲಿ ಇಬ್ಬರು ಅನಧಿಕೃತ ವ್ಯಕ್ತಿಗಳು ಸಿಕ್ಕಿಬಿದ್ದಿರೋದು. ಪೊಲೀಸರ ಕೈಗೆ ಸಿಕ್ಕು ಬಂಧನದಲ್ಲಿರುವ ಇವರು ಎ.ಎನ್.ಐ ಟೀಟ್ ನ ಪ್ರಕಾರ ಪೊಲೀಸರು ಇವರು ಜಿಯೋ (ರಿಲಯಾನ್ಸ್) ಕಂಪನಿಯ ನೌಕರರು (ಇದೇ ಜಿಯೋ ಕಂಪನಿಯ ಜಾಹೀರಾತಿಗೆ ಫೋಜು ಕೊಡುವಷ್ಟರ ಮಟ್ಟಿಗೆ ನಮ್ಮ ಪ್ರಧಾನಿ ಮೋದಿಯವರು ಆ ಕಂಪನಿಯ ಮಾಲೀಕ ಅಂಬಾನಿಗೆ ಆಪ್ತ ಗೆಳೆಯರು ಅನ್ನೋದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು) ಎಂದು ತಿಳಿಸಿದ್ದಾರೆ ಎನ್ನಲಾಗಿದೆ. ಅಧಿಕೃತ ಗುರುತಿನ ಚೀಟಿ ಇಲ್ಲದೆ ಯಾರೂ ಒಳಗೆ ಪ್ರವೇಶ ಮಾಡಲು ಸಾಧ್ಯವಿಲ್ಲ. ಆದರೆ ಇವರು ಹೇಗೆ ಒಳಗೆ ಬಂದರು ಎಂದು ನಮಗೆ ತಿಳಿಯುತ್ತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಭಧ್ರತಾ ಕೊಠಡಿಯಲ್ಲಿ ಭದ್ರತೆ ಒದಗಿಸುತ್ತಿದ್ದ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದೆ.

ಈ ಘಟನೆ ನಡೆಯುವ ಒಂದು ದಿನದ ಹಿಂದೆಯಷ್ಟೇ ಛತ್ತಿಸ್ಗಢದ ಬೆಮೆತಾರ ಕ್ಷೇತ್ರದಲ್ಲಿ ಬಿ.ಎಸ್.ಎಫ್. ಭದ್ರತಾ ಆಧಿಕಾರಿ ವಿಕ್ರಮ್ ಕುಮಾರ್ ಮೆಹ್ರ ಎಂಬ ವ್ಯಕ್ತಿ ಅನಧಿಕೃತವಾಗಿ ಇವಿಎಂ ಮಷೀನುಗಳನ್ನು ಇರಿಸಿದ್ದ ಭದ್ರತಾ ಕೊಠಡಿಯ ಬಳಿ ಲ್ಯಾಪ್ ಟಾಪ್ ಅನ್ನು ಬಳಸಿದ್ದರು. ವಿರೋಧಪಕ್ಷ ಇದನ್ನು ವಿರೋಧಿಸಿ ಪ್ರತಿಭಟಿಸಿದ ನಂತರವೆ ಅಧಿಕಾರಿಯನ್ನು ಅಮಾನತ್ತು ಮಾಡಿದ್ದಾರೆ.

ಅಲ್ಲದೆ ಧಾಮತಾರಿ ಕ್ಷೇತ್ರದಲ್ಲಿ ಇವಿಎಮ್ ಮಷೀನುಗಳ್ಳಿದ್ದ ಭಧ್ರತಾ ಕೊಠಡಿಯಲ್ಲಿ ಇಬ್ಬರು ಅನಧಿಕೃತ ವ್ಯಕ್ತಿಗಳು ಇದ್ದದ್ದು ವರದಿಯಾಗಿದೆ.

ಇದಲ್ಲದೆ ಭೂಪಾಲ್ ನಲ್ಲಿ ಭದ್ರತಾ ಕೊಠಡಿಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಸಿಸಿ ಟಿವಿ ಕ್ಯಾಮರಾಗಳು ಆಫ್ ಆದ ಘಟನೆ ವರದಿಯಾಗಿದೆ.

ಒಟ್ಟಾರೆ ಮೊದಲಿಂದಲೂ ಇವಿಎಮ್ ವಿರೋಧಿಸಿ ಏಳುತ್ತಿರುವ ಪ್ರಶ್ನೆಗಳಿಗೆ ಪುಷ್ಠಿ ನೀಡುವಂತೆ ಈ ಮೇಲಿನ ಇತ್ತೀಚೆಗಿನ ಘಟನೆಗಳು ನಡೆಯುತ್ತಿವೆ. ಲೋಕ ಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಸಂಧರ್ಭದಲ್ಲಿ ಇನ್ನಾದರು ಚುನಾವಣಾ ಆಯೋಗ ಇದರ ಬಗ್ಗೆ ಗಂಭೀರವಾಗಿ ಯೋಚಿಸಬೇಕಿದೆ. ಇದರ ಹಿಂದಿರುವ ದೊಡ್ಡ ಕೈಗಳನ್ನು ಬಯಲಿಗೆಳೆದು ಬಂಧಿಸಬೇಕಾಗಿದೆ. ಚುನಾವಣೆ ಆಯೋಗ-ಪೊಲೀಸ್ ಇಲಾಖೆ ಚಿಕ್ಕ ಕಳ್ಳರನ್ನು ಅಲ್ಲದೆ ದೊಡ್ಡ ಕಳ್ಳರನ್ನು ಬಂಧಿಸಿತ್ತಾರ ಎಂದು ಕಾದು ನೋಡಬೇಕಿದೆ. ಬಿಜೆಪಿಗಾಗಲಿ, ಮೋದಿಯವರಿಗಾಗಲಿ 2014ರಲ್ಲಿ ಇದ್ದ ಆತ್ಮವಿಶ್ವಾಸ 2019ರ ಚುನಾವಣೆಯ ಮೇಲೆ ಬಾರದಿರುವಂಥಾ ವಾತಾವರಣ ದೇಶದಲ್ಲಿ ಸೃಷ್ಟಿಯಾಗುತ್ತಿರುವ ಹೊತ್ತಿನಲ್ಲೇ ಇಂಥಾ ಇವಿಎಂ ಗೋಲ್ ಮಾಲ್ ಗಳು ಬಿಜೆಪಿ ಸುತ್ತಲೇ ದಟ್ಟೈಸುತ್ತಿಕೊಳ್ಳುತ್ತಿರೋದು ಜಸ್ಟ್ ಕಾಕತಾಳೀಯ ಅಂತ ಹೇಳೋದು ಕಷ್ಟ…..ಎಲ್ಲಾ ಕ್ಷೇತ್ರಗಳ ಎಲ್ಲಾ ಬೂತ್.ಗಳಲ್ಲೂ ಇಸು ನಡೆಯದೇ ಇರಬಹುದು. ಆದರೆ ಒಮ್ಮೆಗೇ ಇಷ್ಟು ಬೂತ್.ಗಳಲ್ಲಿ ಸಿಕ್ಕಿಹಾಕಿಕೊಂಡಿರುವುದು ಸಮಸ್ಯೆಯ ಗಂಭೀರತೆಯನ್ನು ತೋರಿಸುತ್ತದೆ. ಸೋಲಿನ ಭೀತಿಯ ಕಾರಣಕ್ಕೆ ಬಿಜೆಪಿ ಈ ಕೃತ್ಯಕ್ಕಿಳಿಯಿತಾ ಎಂಬ ಪ್ರಶ್ನೆಯೂ ಉದ್ಭವಿಸುತ್ತದೆ.

https://youtu.be/Rjr9VARzlWI

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....