Homeರಾಜಕೀಯಸೋಲುವ ಭೀತಿಯಲ್ಲಿ ಇವಿಎಂ ಯಂತ್ರಗಳಿಗೇ ಕನ್ನ ಹಾಕಿತೇ ಬಿಜೆಪಿ?

ಸೋಲುವ ಭೀತಿಯಲ್ಲಿ ಇವಿಎಂ ಯಂತ್ರಗಳಿಗೇ ಕನ್ನ ಹಾಕಿತೇ ಬಿಜೆಪಿ?

- Advertisement -
- Advertisement -

ಇ.ವಿ.ಎಮ್ ಬಂದ ಹೊಸತರಲ್ಲಿ ಅದನ್ನು ಹ್ಯಾಕ್ ಮಾಡಲು ಸಾಧ್ಯವಿಲ್ಲ, ಮೊದಲು ನಡೆಯುತ್ತಿದ್ದ ಚುನಾವಣೆ ಪ್ರಕ್ರಿಯೆಗಿಂತ ಎಲೆಕ್ಟ್ರಾನಿಕ್ ಓಟಿಂಗ್ ಮಷೀನ್ (ಇವಿಎಮ್) ನಿಂದ ಡಿಜಟಲೀಕರಣಗೊಂಡು ಹೆಚ್ಚು ನಂಬಿಕಾರ್ಹವಾಗಿರುತ್ತದೆ ಎಂದು ಹೇಳಲಾಗುತ್ತಿತ್ತು. ಅದನ್ನು ಹ್ಯಾಕ್ ಮಾಡಲು ಸಾಧ್ಯವಿಲ್ಲ ಎನ್ನುವ ಮಾತುಗಳನ್ನು ಚುನಾವಣೆ ಆಯೋಗವು ಹೇಳುತ್ತಿತ್ತು. ಆದರೆ ಈಗ ಇವಿಎಮ್ ಮಷೀನುಗಳೆ ಮಾಯವಾಗಿ ಖಾಸಗಿ ಹೋಟೆಲ್ ಗಳಲ್ಲಿ, ಎಂ.ಎಲ್.ಎ ಗಳ ಮನೆಗಳಲ್ಲಿ ಪ್ರತ್ಯಕ್ಷವಾಗುತ್ತಿದೆ. ಈ ಹಿಂದೆ ಯಾವುದೇ ಪಕ್ಷಕ್ಕೆ ಮತ ಹಾಕಿದರೂ ಬಿಜೆಪಿಗೇ ಮತಗಳು ಹೋಗುತ್ತಿದ್ದವು ಎನ್ನುವ ಆರೋಪಗಳು ಕೇಳಿಬರುತ್ತಿದ್ದವು. ಚಲಾಯಿಸಿದ ಮತಗಳು ಅಧಿಕೃತವಾಗಿದೆ ಎಂದು ಖಾತ್ರಿ ಮಾಡಿಕೊಳ್ಳಲು ವಿವಿ ಪ್ಯಾಟ್ ವ್ಯವಸ್ಥೆಯನ್ನು ತರಲಾಯಿತು. ಮತದಾರರನ್ನು ಹ್ಯಾಕ್ ಮಾಡಲು ಸಾಧ್ಯವೇ ಇಲ್ಲ ಎಂದು ನಂಬಿಸಲಾಯಿತು. ಆದರೆ ಈಗ ಮಷೀನುಗಳೇ ಕಳ್ಳತನವಾಗುತ್ತಿವೆ. ಇಂತಹ ವಿಡಿಯೋಗಳು ಇದೀಗ ಸಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗುತ್ತಿದೆ. ಇಂತಹ ಕಳ್ಳತನಗಳಲ್ಲಿ ಈವರೆಗೂ ಬಿಜೆಪಿಗರ ಕೈವಾಡವಿರುವುದು ಮತ್ತೊಂದು ವಿಶೇಷವಾಗಿದೆ.

ಇದೇ ತಿಂಗಳ ಶುಕ್ರವಾರದಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಡಿಯೋದಲ್ಲಿ ರಾಜಸ್ಥಾನದ ಪಾಲಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ಆಗಿರುವ ಗ್ಯಾನ್ ಚಂದ್ ಪಾರಾಖ್ ಅವರ ಮನೆಯಲ್ಲಿ ಇವಿಎಮ್ ಮಷೀನ್ ಗಳು ಸಿಕ್ಕಿದ್ದವು. ಸ್ಥಳೀಯ ವ್ಯಕ್ತಿಯೊಬ್ಬರು ಇದನ್ನು ವಿಡಿಯೋ ಮಾಡಿದ್ದರ ಪರಿಣಾಮವಾಗಿ ಈ ವಿಷಯ ಬೆಳಕಿದೆ ಬಂದಿದೆ. ಚುನಾವಣೆ ಆಯೋಗದ ಉಪ ಆಯುಕ್ತರಾದ ಸಂದೀಪ್ ಸಕ್ಸೇನ ಅವರು ಈ ಪ್ರಕರಣವನ್ನು ಒಪ್ಪಿಕೊಂಡಿದ್ದು ಇದರ ಮೇಲೆ ವಿಚಾರಣೆ ಮಾಡುವುದಾಗಿ ತಿಳಿಸಿದ್ದಾರೆ ಹಾಗೂ ಶಾಸಕರ ಮನೆಗೆ ಇವಿಎಮ್ ತಲುಪಿಸಿದ ಚುನಾವಣೆ ಅಧಿಕಾರಿಯನ್ನು ಅಮಾನತ್ತಿನಲ್ಲಿ ಇಟ್ಟಿರುವುದಾಗಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇದೇ ರೀತಿಯಾದ 4 ಪ್ರಕರಣಗಳು ಮಧ್ಯಪ್ರದೇಶದಲ್ಲಿ ನಡೆದಿರುವುದು ವರದಿಯಾಗಿದೆ. ನವೆಂಬರ್ 27 ರಂದು ವೈರಲ್ ಆಗಿದ್ದ ಮತ್ತೊಂದು ವಿಡಿಯೋದಲ್ಲಿ ಸೋಹನ್ ಲಾಲ್ ಬಜಾಜ್ ಮತ್ತು ಮೂರು ಜನ ಚುನಾವಣಾಧಿಕಾರಿಗಳು ಇವಿಎಮ್ ಮಷೀನುಗಳನ್ನು ಮಧ್ಯಪ್ರದೇಶದ ಶಹಜಾಪುರ್ ಜಿಲ್ಲೆಯ ರಾಜ್ ಮಹಲ್ ಹೋಟೆಲ್ ನಲ್ಲಿ ಇರಿಸಿಕೊಂಡಿದ್ದರು. ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರದಲ್ಲಿ, ಈ ಮಷೀನುಗಳು ಕಾರ್ಯ ಮಾಡುತ್ತಿಲ್ಲ, ನಮಗೆ ಒಳ್ಳೆಯ ಭಧ್ರತಾ ಕೊಠಡಿಗಳು ಇಲ್ಲ ಎಂಬ ಕಾರಣಗಳನ್ನು ನೀಡಿ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ.

ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಖುರಾಯ್ ನಗರದಲ್ಲಿಯೂ ಚುನಾವಣೆ ನಡೆದ 48 ಗಂಟೆಗಳ ನಂತರದಲ್ಲಿ ಒಂದು ಅನಧಿಕೃತ ಖಾಸಗಿ ವಾಹನದಲ್ಲಿ (ಖಾಸಗಿ ಶಾಲಾ ಬಸ್ ಎಂದು ಹೇಳಲಾಗುತ್ತಿದೆ) 34 ಇವಿಎಮ್ ಮಷೀನ್ ಗಳು ಬಂದವು ಎಂದು ವರದಿಯಾಗಿದೆ.

ಅಲ್ಲದೆ ಛತ್ತೀಸ್ಗಢದಲ್ಲಿ 3 ಇವಿಎಮ್ ಪ್ರಕರಣಗಳು ಜರುಗಿವೆ.

ಅದರಲ್ಲಿ ಈಗಷ್ಟೇ ಬಿಸಿ ಸುದ್ದಿಯಲ್ಲಿರುವುದು ಬಸ್ತಾರ್ ವಲಯದ ಜಗ್ದಲ್ಪುರ್ ನಲ್ಲಿ ಇವಿಎಂ ಮಷೀನುಗಳನ್ನು ಇರಿಸಿದ್ದ ಭಧ್ರತಾ ಕೊಠಡಿಯಲ್ಲಿ ಇಬ್ಬರು ಅನಧಿಕೃತ ವ್ಯಕ್ತಿಗಳು ಸಿಕ್ಕಿಬಿದ್ದಿರೋದು. ಪೊಲೀಸರ ಕೈಗೆ ಸಿಕ್ಕು ಬಂಧನದಲ್ಲಿರುವ ಇವರು ಎ.ಎನ್.ಐ ಟೀಟ್ ನ ಪ್ರಕಾರ ಪೊಲೀಸರು ಇವರು ಜಿಯೋ (ರಿಲಯಾನ್ಸ್) ಕಂಪನಿಯ ನೌಕರರು (ಇದೇ ಜಿಯೋ ಕಂಪನಿಯ ಜಾಹೀರಾತಿಗೆ ಫೋಜು ಕೊಡುವಷ್ಟರ ಮಟ್ಟಿಗೆ ನಮ್ಮ ಪ್ರಧಾನಿ ಮೋದಿಯವರು ಆ ಕಂಪನಿಯ ಮಾಲೀಕ ಅಂಬಾನಿಗೆ ಆಪ್ತ ಗೆಳೆಯರು ಅನ್ನೋದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು) ಎಂದು ತಿಳಿಸಿದ್ದಾರೆ ಎನ್ನಲಾಗಿದೆ. ಅಧಿಕೃತ ಗುರುತಿನ ಚೀಟಿ ಇಲ್ಲದೆ ಯಾರೂ ಒಳಗೆ ಪ್ರವೇಶ ಮಾಡಲು ಸಾಧ್ಯವಿಲ್ಲ. ಆದರೆ ಇವರು ಹೇಗೆ ಒಳಗೆ ಬಂದರು ಎಂದು ನಮಗೆ ತಿಳಿಯುತ್ತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಭಧ್ರತಾ ಕೊಠಡಿಯಲ್ಲಿ ಭದ್ರತೆ ಒದಗಿಸುತ್ತಿದ್ದ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದೆ.

ಈ ಘಟನೆ ನಡೆಯುವ ಒಂದು ದಿನದ ಹಿಂದೆಯಷ್ಟೇ ಛತ್ತಿಸ್ಗಢದ ಬೆಮೆತಾರ ಕ್ಷೇತ್ರದಲ್ಲಿ ಬಿ.ಎಸ್.ಎಫ್. ಭದ್ರತಾ ಆಧಿಕಾರಿ ವಿಕ್ರಮ್ ಕುಮಾರ್ ಮೆಹ್ರ ಎಂಬ ವ್ಯಕ್ತಿ ಅನಧಿಕೃತವಾಗಿ ಇವಿಎಂ ಮಷೀನುಗಳನ್ನು ಇರಿಸಿದ್ದ ಭದ್ರತಾ ಕೊಠಡಿಯ ಬಳಿ ಲ್ಯಾಪ್ ಟಾಪ್ ಅನ್ನು ಬಳಸಿದ್ದರು. ವಿರೋಧಪಕ್ಷ ಇದನ್ನು ವಿರೋಧಿಸಿ ಪ್ರತಿಭಟಿಸಿದ ನಂತರವೆ ಅಧಿಕಾರಿಯನ್ನು ಅಮಾನತ್ತು ಮಾಡಿದ್ದಾರೆ.

ಅಲ್ಲದೆ ಧಾಮತಾರಿ ಕ್ಷೇತ್ರದಲ್ಲಿ ಇವಿಎಮ್ ಮಷೀನುಗಳ್ಳಿದ್ದ ಭಧ್ರತಾ ಕೊಠಡಿಯಲ್ಲಿ ಇಬ್ಬರು ಅನಧಿಕೃತ ವ್ಯಕ್ತಿಗಳು ಇದ್ದದ್ದು ವರದಿಯಾಗಿದೆ.

ಇದಲ್ಲದೆ ಭೂಪಾಲ್ ನಲ್ಲಿ ಭದ್ರತಾ ಕೊಠಡಿಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಸಿಸಿ ಟಿವಿ ಕ್ಯಾಮರಾಗಳು ಆಫ್ ಆದ ಘಟನೆ ವರದಿಯಾಗಿದೆ.

ಒಟ್ಟಾರೆ ಮೊದಲಿಂದಲೂ ಇವಿಎಮ್ ವಿರೋಧಿಸಿ ಏಳುತ್ತಿರುವ ಪ್ರಶ್ನೆಗಳಿಗೆ ಪುಷ್ಠಿ ನೀಡುವಂತೆ ಈ ಮೇಲಿನ ಇತ್ತೀಚೆಗಿನ ಘಟನೆಗಳು ನಡೆಯುತ್ತಿವೆ. ಲೋಕ ಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಸಂಧರ್ಭದಲ್ಲಿ ಇನ್ನಾದರು ಚುನಾವಣಾ ಆಯೋಗ ಇದರ ಬಗ್ಗೆ ಗಂಭೀರವಾಗಿ ಯೋಚಿಸಬೇಕಿದೆ. ಇದರ ಹಿಂದಿರುವ ದೊಡ್ಡ ಕೈಗಳನ್ನು ಬಯಲಿಗೆಳೆದು ಬಂಧಿಸಬೇಕಾಗಿದೆ. ಚುನಾವಣೆ ಆಯೋಗ-ಪೊಲೀಸ್ ಇಲಾಖೆ ಚಿಕ್ಕ ಕಳ್ಳರನ್ನು ಅಲ್ಲದೆ ದೊಡ್ಡ ಕಳ್ಳರನ್ನು ಬಂಧಿಸಿತ್ತಾರ ಎಂದು ಕಾದು ನೋಡಬೇಕಿದೆ. ಬಿಜೆಪಿಗಾಗಲಿ, ಮೋದಿಯವರಿಗಾಗಲಿ 2014ರಲ್ಲಿ ಇದ್ದ ಆತ್ಮವಿಶ್ವಾಸ 2019ರ ಚುನಾವಣೆಯ ಮೇಲೆ ಬಾರದಿರುವಂಥಾ ವಾತಾವರಣ ದೇಶದಲ್ಲಿ ಸೃಷ್ಟಿಯಾಗುತ್ತಿರುವ ಹೊತ್ತಿನಲ್ಲೇ ಇಂಥಾ ಇವಿಎಂ ಗೋಲ್ ಮಾಲ್ ಗಳು ಬಿಜೆಪಿ ಸುತ್ತಲೇ ದಟ್ಟೈಸುತ್ತಿಕೊಳ್ಳುತ್ತಿರೋದು ಜಸ್ಟ್ ಕಾಕತಾಳೀಯ ಅಂತ ಹೇಳೋದು ಕಷ್ಟ…..ಎಲ್ಲಾ ಕ್ಷೇತ್ರಗಳ ಎಲ್ಲಾ ಬೂತ್.ಗಳಲ್ಲೂ ಇಸು ನಡೆಯದೇ ಇರಬಹುದು. ಆದರೆ ಒಮ್ಮೆಗೇ ಇಷ್ಟು ಬೂತ್.ಗಳಲ್ಲಿ ಸಿಕ್ಕಿಹಾಕಿಕೊಂಡಿರುವುದು ಸಮಸ್ಯೆಯ ಗಂಭೀರತೆಯನ್ನು ತೋರಿಸುತ್ತದೆ. ಸೋಲಿನ ಭೀತಿಯ ಕಾರಣಕ್ಕೆ ಬಿಜೆಪಿ ಈ ಕೃತ್ಯಕ್ಕಿಳಿಯಿತಾ ಎಂಬ ಪ್ರಶ್ನೆಯೂ ಉದ್ಭವಿಸುತ್ತದೆ.

https://youtu.be/Rjr9VARzlWI

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...