Homeಮುಖಪುಟವಾರಣಾಸಿ: ನೇಪಾಳಿ ಯುವಕನ ತಲೆ ಬೋಳಿಸಿ ಜೈಶ್ರೀರಾಮ್ ಹೇಳುವಂತೆ ಒತ್ತಾಯಿಸಿದ ಹಿಂದುತ್ವವಾದಿಗಳು

ವಾರಣಾಸಿ: ನೇಪಾಳಿ ಯುವಕನ ತಲೆ ಬೋಳಿಸಿ ಜೈಶ್ರೀರಾಮ್ ಹೇಳುವಂತೆ ಒತ್ತಾಯಿಸಿದ ಹಿಂದುತ್ವವಾದಿಗಳು

ವಿಡಿಯೋವನ್ನು ತಮ್ಮ ಫೇಸ್‌ಬುಕ್ ಪ್ರೊಫೈಲ್‌ನಲ್ಲಿ ಹಂಚಿಕೊಂಡಿದ್ದು, ದೇಶದಲ್ಲಿ ವಾಸಿಸುತ್ತಿರುವ ನೇಪಾಳಿಗಳು ಒಲಿ ವಿರುದ್ಧ ಧ್ವನಿ ಎತ್ತಬೇಕು, ಇಲ್ಲದಿದ್ದರೆ ಅವರು ಕೂಡ ಇದನ್ನೇ ಎದುರಿಸಬೇಕು ಸಂಘಟನೆ ಎಚ್ಚರಿಸಿದ್ದಾರೆ.

- Advertisement -
- Advertisement -

ಈಗಾಗಲೇ ಬಿಗಡಾಯಿಸಿರುವ ಭಾರತ-ನೇಪಾಳ ಸಂಬಂಧದ ಮೇಲೆ ಪರಿಣಾಮ ಬೀರಬಹುದಾದ ಘಟನೆಯೊಂದರಲ್ಲಿ ವಾರಣಾಸಿಯಲ್ಲಿ ನಡೆದಿದ್ದು, ಕೇಸರಿ ಸಂಘಟನೆಯ ಕಾರ್ಯಕರ್ತರು ನೇಪಾಳಿ ಯುವಕನನ್ನು ತಲೆಬೋಳಿಸಿ ಜೈಶ್ರೀರಾಮ್ ಹೇಳುವಂತೆ ಒತ್ತಾಯಿಸಿದ್ದಾರೆ.

ಹಿಂದುತ್ವ ಸಂಘಟನೆಯಾದ ವಿಶ್ವ ಹಿಂದೂ ಸೇನೆಯ (ವಿಎಚ್‌ಎಸ್) ಕಾರ್ಯಕರ್ತರು ಯುವಕನ ತಲೆಯಲ್ಲಿ ‘ಜೈ ಶ್ರೀ ರಾಮ್’ ಎಂದು ಬರೆದು ನೇಪಾಳಿ ಪ್ರಧಾನಿ ಓಲಿ ವಿರುದ್ಧ ಘೋಷಣೆಗಳನ್ನು ಕೂಗುವಂತೆ ಮಾಡಿದ್ದಾರೆ.

ಗುರುವಾರ ನಡೆದ ಈ ಘಟನೆಯನ್ನು ವಿಶ್ವ ಹಿಂದೂ ಸೇನಾ ಚಿತ್ರೀಕರಿಸಿದ್ದು, ನಂತರ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಿದೆ.

ನೇಪಾಳಿ ಯುವಕನ ತಲೆ ಬೋಳಿಸಿ ಜೈ ಶ್ರೀರಾಮ್ ಎಂದು ಬರೆದು, ಜೈ ಶ್ರೀರಾಮ್ ಎಂದು ಕೂಗುವಂತೆ ಒತ್ತಾಯಿಸಿದ ವಾರಣಾಸಿಯ ಹಿಂದುತ್ವ ಸಂಘಟನೆಯ ಯುವಕರು..

Posted by Naanu Gauri on Friday, July 17, 2020

ಅಲ್ಲದೆ ಗಂಗಾ ದಡದಲ್ಲಿ ಮತ್ತು ನಗರದ ದೇವಾಲಯಗಳಲ್ಲಿ ಓಲಿಯನ್ನು ಟೀಕಿಸುವ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ.

ವಿಡಿಯೋ ವೈರಲ್ ಆಗುತ್ತಿದ್ದಂತೆ ವಿಎಚ್‌ಎಸ್ ಕನ್ವೀನರ್ ಅರುಣ್ ಪಾಠಕ್ ವಿರುದ್ಧ ಎಫ್‌ಐಆರ್ ದಾಖಲಿಸಿ ಸ್ಥಳೀಯ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇತರ ಆರೋಪಿಗಳನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ.

ಪಾಠಕ್ ಕೂಡ ಈ ವಿಡಿಯೋವನ್ನು ತಮ್ಮ ಫೇಸ್‌ಬುಕ್ ಪ್ರೊಫೈಲ್‌ನಲ್ಲಿ ಹಂಚಿಕೊಂಡಿದ್ದು, ದೇಶದಲ್ಲಿ ವಾಸಿಸುತ್ತಿರುವ ನೇಪಾಳಿಗಳು ಒಲಿ ವಿರುದ್ಧ ಧ್ವನಿ ಎತ್ತಬೇಕು, ಇಲ್ಲದಿದ್ದರೆ ಅವರು ಕೂಡ ಇದನ್ನೇ ಎದುರಿಸಬೇಕು ಎಂದು ಎಚ್ಚರಿಸಿದ್ದಾರೆ.

‘ಜೈ ಶ್ರೀ ರಾಮ್’ ಎಂದು ಹೇಳಿಸುವುದರ ಜೊತೆಗೆ ನೇಪಾಳಿ ಯುವಕನಿಗೆ ಒಲಿ ವಿರುದ್ಧ ಘೋಷಣೆಗಳನ್ನು ಕೂಗಲು ಹಾಗೂ ಭಾರತಕ್ಕೆ ಜಯಕಾರ ಹಾಕಲು ಒತ್ತಾಯಿಸಲಾಗುತ್ತದೆ. ದೇಶದ ಯುವಕರಿಗೆ ಉದ್ಯೋಗ ಒದಗಿಸುವಲ್ಲಿ ಒಲಿ ವಿಫಲರಾಗಿದ್ದಾರೆ ಮತ್ತು ಭಾರತ ಅವರಿಗೆ ಉದ್ಯೋಗ ನೀಡಿದೆ ಎಂದು ಯುವಕ ಹೇಳಿದ್ದಾರೆ.

“ಅಯೋಧ್ಯೆ ತಮ್ಮ ದೇಶದಲ್ಲಿದೆ ಮತ್ತು ರಾಮ ಸಹ ಅಲ್ಲಿಯೇ ಹುಟ್ಟಿದ್ದಾನೆ ಎಂದು ಹೇಳುವ ಮೂಲಕ ನೇಪಾಳ ಪ್ರಧಾನಿ ಕ್ಷಮಿಸಲಾಗದ ಕೃತ್ಯವನ್ನು ಮಾಡಿದ್ದಾರೆ … ಇದನ್ನು ನಾವು ಸಹಿಸುವುದಿಲ್ಲ” ಎಂದು ಪಾಠಕ್ ಹೇಳಿದ್ದಾರೆಂದು ಮಾಧ್ಯಮಗಳು ವರದಿ ಮಾಡಿದೆ.


ಓದಿ:ಶ್ರೀರಾಮನ ಜನ್ಮಸ್ಥಳ ನೇಪಾಳದಲ್ಲಿದೆ ಎನ್ನುವುದು ಹಾಸ್ಯಾಸ್ಪದ: ಶಿವಸೇನೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...