Homeಮುಖಪುಟವಾರಣಾಸಿ: ನೇಪಾಳಿ ಯುವಕನ ತಲೆ ಬೋಳಿಸಿ ಜೈಶ್ರೀರಾಮ್ ಹೇಳುವಂತೆ ಒತ್ತಾಯಿಸಿದ ಹಿಂದುತ್ವವಾದಿಗಳು

ವಾರಣಾಸಿ: ನೇಪಾಳಿ ಯುವಕನ ತಲೆ ಬೋಳಿಸಿ ಜೈಶ್ರೀರಾಮ್ ಹೇಳುವಂತೆ ಒತ್ತಾಯಿಸಿದ ಹಿಂದುತ್ವವಾದಿಗಳು

ವಿಡಿಯೋವನ್ನು ತಮ್ಮ ಫೇಸ್‌ಬುಕ್ ಪ್ರೊಫೈಲ್‌ನಲ್ಲಿ ಹಂಚಿಕೊಂಡಿದ್ದು, ದೇಶದಲ್ಲಿ ವಾಸಿಸುತ್ತಿರುವ ನೇಪಾಳಿಗಳು ಒಲಿ ವಿರುದ್ಧ ಧ್ವನಿ ಎತ್ತಬೇಕು, ಇಲ್ಲದಿದ್ದರೆ ಅವರು ಕೂಡ ಇದನ್ನೇ ಎದುರಿಸಬೇಕು ಸಂಘಟನೆ ಎಚ್ಚರಿಸಿದ್ದಾರೆ.

- Advertisement -
- Advertisement -

ಈಗಾಗಲೇ ಬಿಗಡಾಯಿಸಿರುವ ಭಾರತ-ನೇಪಾಳ ಸಂಬಂಧದ ಮೇಲೆ ಪರಿಣಾಮ ಬೀರಬಹುದಾದ ಘಟನೆಯೊಂದರಲ್ಲಿ ವಾರಣಾಸಿಯಲ್ಲಿ ನಡೆದಿದ್ದು, ಕೇಸರಿ ಸಂಘಟನೆಯ ಕಾರ್ಯಕರ್ತರು ನೇಪಾಳಿ ಯುವಕನನ್ನು ತಲೆಬೋಳಿಸಿ ಜೈಶ್ರೀರಾಮ್ ಹೇಳುವಂತೆ ಒತ್ತಾಯಿಸಿದ್ದಾರೆ.

ಹಿಂದುತ್ವ ಸಂಘಟನೆಯಾದ ವಿಶ್ವ ಹಿಂದೂ ಸೇನೆಯ (ವಿಎಚ್‌ಎಸ್) ಕಾರ್ಯಕರ್ತರು ಯುವಕನ ತಲೆಯಲ್ಲಿ ‘ಜೈ ಶ್ರೀ ರಾಮ್’ ಎಂದು ಬರೆದು ನೇಪಾಳಿ ಪ್ರಧಾನಿ ಓಲಿ ವಿರುದ್ಧ ಘೋಷಣೆಗಳನ್ನು ಕೂಗುವಂತೆ ಮಾಡಿದ್ದಾರೆ.

ಗುರುವಾರ ನಡೆದ ಈ ಘಟನೆಯನ್ನು ವಿಶ್ವ ಹಿಂದೂ ಸೇನಾ ಚಿತ್ರೀಕರಿಸಿದ್ದು, ನಂತರ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಿದೆ.

ನೇಪಾಳಿ ಯುವಕನ ತಲೆ ಬೋಳಿಸಿ ಜೈ ಶ್ರೀರಾಮ್ ಎಂದು ಬರೆದು, ಜೈ ಶ್ರೀರಾಮ್ ಎಂದು ಕೂಗುವಂತೆ ಒತ್ತಾಯಿಸಿದ ವಾರಣಾಸಿಯ ಹಿಂದುತ್ವ ಸಂಘಟನೆಯ ಯುವಕರು..

Posted by Naanu Gauri on Friday, July 17, 2020

ಅಲ್ಲದೆ ಗಂಗಾ ದಡದಲ್ಲಿ ಮತ್ತು ನಗರದ ದೇವಾಲಯಗಳಲ್ಲಿ ಓಲಿಯನ್ನು ಟೀಕಿಸುವ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ.

ವಿಡಿಯೋ ವೈರಲ್ ಆಗುತ್ತಿದ್ದಂತೆ ವಿಎಚ್‌ಎಸ್ ಕನ್ವೀನರ್ ಅರುಣ್ ಪಾಠಕ್ ವಿರುದ್ಧ ಎಫ್‌ಐಆರ್ ದಾಖಲಿಸಿ ಸ್ಥಳೀಯ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇತರ ಆರೋಪಿಗಳನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ.

ಪಾಠಕ್ ಕೂಡ ಈ ವಿಡಿಯೋವನ್ನು ತಮ್ಮ ಫೇಸ್‌ಬುಕ್ ಪ್ರೊಫೈಲ್‌ನಲ್ಲಿ ಹಂಚಿಕೊಂಡಿದ್ದು, ದೇಶದಲ್ಲಿ ವಾಸಿಸುತ್ತಿರುವ ನೇಪಾಳಿಗಳು ಒಲಿ ವಿರುದ್ಧ ಧ್ವನಿ ಎತ್ತಬೇಕು, ಇಲ್ಲದಿದ್ದರೆ ಅವರು ಕೂಡ ಇದನ್ನೇ ಎದುರಿಸಬೇಕು ಎಂದು ಎಚ್ಚರಿಸಿದ್ದಾರೆ.

‘ಜೈ ಶ್ರೀ ರಾಮ್’ ಎಂದು ಹೇಳಿಸುವುದರ ಜೊತೆಗೆ ನೇಪಾಳಿ ಯುವಕನಿಗೆ ಒಲಿ ವಿರುದ್ಧ ಘೋಷಣೆಗಳನ್ನು ಕೂಗಲು ಹಾಗೂ ಭಾರತಕ್ಕೆ ಜಯಕಾರ ಹಾಕಲು ಒತ್ತಾಯಿಸಲಾಗುತ್ತದೆ. ದೇಶದ ಯುವಕರಿಗೆ ಉದ್ಯೋಗ ಒದಗಿಸುವಲ್ಲಿ ಒಲಿ ವಿಫಲರಾಗಿದ್ದಾರೆ ಮತ್ತು ಭಾರತ ಅವರಿಗೆ ಉದ್ಯೋಗ ನೀಡಿದೆ ಎಂದು ಯುವಕ ಹೇಳಿದ್ದಾರೆ.

“ಅಯೋಧ್ಯೆ ತಮ್ಮ ದೇಶದಲ್ಲಿದೆ ಮತ್ತು ರಾಮ ಸಹ ಅಲ್ಲಿಯೇ ಹುಟ್ಟಿದ್ದಾನೆ ಎಂದು ಹೇಳುವ ಮೂಲಕ ನೇಪಾಳ ಪ್ರಧಾನಿ ಕ್ಷಮಿಸಲಾಗದ ಕೃತ್ಯವನ್ನು ಮಾಡಿದ್ದಾರೆ … ಇದನ್ನು ನಾವು ಸಹಿಸುವುದಿಲ್ಲ” ಎಂದು ಪಾಠಕ್ ಹೇಳಿದ್ದಾರೆಂದು ಮಾಧ್ಯಮಗಳು ವರದಿ ಮಾಡಿದೆ.


ಓದಿ:ಶ್ರೀರಾಮನ ಜನ್ಮಸ್ಥಳ ನೇಪಾಳದಲ್ಲಿದೆ ಎನ್ನುವುದು ಹಾಸ್ಯಾಸ್ಪದ: ಶಿವಸೇನೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....