Homeಮುಖಪುಟರಾಜಸ್ಥಾನ ಆಡಿಯೋ ಪ್ರಕರಣ: ಕಾಂಗ್ರೆಸ್ ವಕ್ತಾರ ಸುರ್ಜೇವಾಲ ವಿರುದ್ಧ ದೂರು ದಾಖಲು

ರಾಜಸ್ಥಾನ ಆಡಿಯೋ ಪ್ರಕರಣ: ಕಾಂಗ್ರೆಸ್ ವಕ್ತಾರ ಸುರ್ಜೇವಾಲ ವಿರುದ್ಧ ದೂರು ದಾಖಲು

- Advertisement -
- Advertisement -

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ‌ ಸರ್ಕಾರವನ್ನು ಉರುಳಿಸಲೆಂದು ಕಾಂಗ್ರೆಸ್ ಬಂಡಾಯ ಶಾಸಕರು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಕಾವತ್ ರೊಡನೆ ನಡೆಸಿರುವ ಸಂಭಾಷಣೆಯ ಆಡಿಯೋ ಫೇಕ್ ಎಂದು ಬಿಜೆಪಿ ಹೇಳಿದೆ. ಈ ಕುರಿತು ಬಿಜೆಪಿ ವಕ್ತಾರರಾದ ಲಕ್ಷ್ಮೀಕಾಂತ್ ಭಾರದ್ವಾಜ್ ಎಂಬುವವರು ನೀಡಿದ ದೂರಿನ ಮೇರೆಗೆ ಕಾಂಗ್ರೆಸ್ ವಕ್ತಾರ ರಣ್‌ದೀಪ್ ಸುರ್ಜೆವಾಲ ಮತ್ತು ಗೋವಿಂದ್ ಸಿಂಗ್ ದೋಟಾಸ್ರಾರವರ ಮೇಲೆ ಪ್ರಕರಣ ದಾಖಲಾಗಿದೆ.

ಬಿಜೆಪಿಯ ಪ್ರತಿಷ್ಠೆಗೆ ಧಕ್ಕೆ ತರುವ ಉದ್ದೇಶದಿಂದ ಮುಖ್ಯಮಂತ್ರಿಗಳ ಮನೆಯಲ್ಲಿಯೇ ಪಿತೂರಿ ನಡೆಸಲಾಗಿದೆ. ಮಹೇಶ್ ಜೋಶಿ, ರಂದೀಪ್ ಸುರ್ಜೆವಾಲಾ ಮತ್ತು ಇತರರು ಸದಾ ಸುಳ್ಳು ಮತ್ತು ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇತ್ತೀಚಿನ ಬಿಕ್ಕಟ್ಟನ್ನು ಬಿಜೆಪಿ ಮೇಲೆ ಹೊರಿಸಿರುವುದು ಸರ್ವಾಥ ಸರಿಯಲ್ಲ ಎಂದು ರಾಜಸ್ಥಾನದ ಬಿಜೆಪಿ ವಕ್ತಾರ ಭರದ್ವಾಜ್ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಸಿಎಂರವರ ಆದೇಶದ ಮೇರೆಗೆ ಕೇಂದ್ರ ಸಚಿವರ ಹೆಸರನ್ನು ಎಳೆದು ತರಲಾಗಿದೆ. ಕಾಂಗ್ರೆಸ್ ಶಾಸಕರನ್ನು ಖರೀದಿಸಲು ಕೋಟ್ಯಂತರ ರೂಪಾಯಿಗಳನ್ನು ಬಿಜೆಪಿ ನೀಡುತ್ತಿದೆ ಎಂಬ ನಕಲಿ ಫೋನ್ ಸಂಭಾಷಣೆಯನ್ನು ಸೃಷ್ಟಿಸಲಾಗಿದೆ. ತನ್ನನ್ನು ಮುಖ್ಯಮಂತ್ರಿಯ ಓಎಸ್ಡಿ ಎಂದು ಕರೆದುಕೊಳ್ಳುವ ಲೋಕೇಶ್ ಶರ್ಮಾ ಇದರ ನೇತೃತ್ವ ವಹಿಸಿದ್ದಾರೆ. ಈ ಪಿತೂರಿಯಲ್ಲಿ ಭಾಗಿಯಾಗಿರುವ ಆರೋಪಿಗಳು ತಮ್ಮ ಸ್ಥಾನ ಮತ್ತು ಅಧಿಕಾರವನ್ನು ತೀವ್ರವಾಗಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಲೋಕೇಶ್ ಶರ್ಮಾ ಅವರು “ಜುಲೈ 16, 2020 ರಂದು ರಾತ್ರಿ 8:25 ರ ಸುಮಾರಿಗೆ ವಾಟ್ಸಾಪ್ ಮೂಲಕ ಮೂರು ಆಡಿಯೊ ಟೇಪ್‌ಗಳನ್ನು ಮಾಧ್ಯಮ ಕಾರ್ಯಕರ್ತರಿಗೆ ಬಿಡುಗಡೆ ಮಾಡಿದ್ದಾರೆ. ಇದು ಕೇಂದ್ರ ಸಚಿವರ ವಿರುದ್ಧ ದೊಡ್ಡ ಮಟ್ಟದ ಮಾನಹಾನಿ ಮಾಡಿದೆ ಎಂದು ದೂರಲಾಗಿದೆ.

ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ರಣದೀಪ್ ಸುರ್ಜೆವಾಲಾ, ಗೋವಿಂದ್ ಸಿಂಗ್ ದೋಟಾಸ್ರಾ ಅವರು ಆಡಿಯೋ ಟೇಪ್‌ಗಳಲ್ಲಿನ ಸಂಭಾಷಣೆಯನ್ನು ಸಾರ್ವಜನಿಕವಾಗಿ ಓದಿದ್ದಾರೆ ಮತ್ತು “ಅವುಗಳನ್ನು ಆಧಾರವಾಗಿ ಬಳಸಿ ಬಿಜೆಪಿ ಪ್ರಜಾಪ್ರಭುತ್ವವನ್ನು ಪ್ರಚೋದಿಸುತ್ತದೆ, ಜನಾದೇಶವನ್ನು ಹಾಳುಮಾಡುತ್ತದೆ ಮತ್ತು ಸರ್ಕಾರವನ್ನು ಉರುಳಿಸುತ್ತಿದೆ ಎಂದು ಆರೋಪಿಸುವ ಮೂಲಕ ಬಿಜೆಪಿ ಖ್ಯಾತಿಗೆ ಧಕ್ಕೆ ತಂದಿದೆ ಎಂದು ಉಲ್ಲೇಖಿಲಸಲಾಗಿದೆ.


ಇದನ್ನೂ ಓದಿ; ಬಿಜೆಪಿಯೊಂದಿಗಿನ ಸಚಿನ್ ಪೈಲಟ್ ಬೆಂಬಲಿಗ ಶಾಸಕನ ಸಂಭಾಷಣೆಯ ಆಡಿಯೋ ಬಿಡುಗಡೆ ಮಾಡಿದ ಗೆಹ್ಲೋಟ್ ಬಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...