Homeಚಳವಳಿಮೇಲ್ಜಾತಿ ದೌರ್ಜನ್ಯವನ್ನು ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ತಂದ ಕಾರಂಚೇಡು ದಲಿತರ ಹತ್ಯಾಕಾಂಡಕ್ಕೆ 35 ವರ್ಷ.

ಮೇಲ್ಜಾತಿ ದೌರ್ಜನ್ಯವನ್ನು ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ತಂದ ಕಾರಂಚೇಡು ದಲಿತರ ಹತ್ಯಾಕಾಂಡಕ್ಕೆ 35 ವರ್ಷ.

ಕೆರೆಯನ್ನು ಗಲೀಜು ಮಾಡಿದ್ದ ಮೇಲ್ಜಾತಿಯವನನ್ನು ದಲಿತನೊಬ್ಬ ಪ್ರಶ್ನನಿಸಿದ್ದೆ ದಲಿತರ ಭೀಕರ ಹತ್ಯಾಕಾಂಡಕ್ಕೆ ಕಾರಣವಾಯಿತು.

- Advertisement -
- Advertisement -

ದಲಿತ ದಮನಿತರ ಮೇಲಿನ ದೌರ್ಜನ್ಯದ ಕೇಸುಗಳನ್ನು ದುಡ್ಡಿರುವ ಮೇಲ್ಜಾತಿಯ ಜನ ಎಲ್ಲಿಬೇಕಾದರೂ ಗೆದ್ದು ಬರುತ್ತಾರೆ. ಈಗಲೂ ನಿರಂತರವಾಗಿ ದಲಿತರ ಮೇಲೆ ದೌರ್ಜನ್ಯಗಳು ನಡೆಯುತ್ತಲೇ ಬಂದಿವೆ. ಬಾಬಾ ಸಾಹೇಬ್ ಅಂಬೇಡ್ಕರರ ಕರೆಯಾದ ಶಿಕ್ಷಣ, ಸಂಘಟನೆ, ಸಂಘರ್ಷದ ಮೂಲಕ ತರುವ ಬದಲಾವಣೆಯೇ ದಲಿತರನ್ನು ಶೋಷಣೆಯ ಸಮುದ್ರದಿಂದ ಆಚೆ ತೆಗೆದು ದಡ ಸೇರಿಸಬಲ್ಲದು.

ಬರಹ: ಅನಿಲ್‌ ಕುಮಾರ್ ಚಿಕ್ಕದಾಳವಟ್ಟ

ದಲಿತರ ಮೇಲೆ ನಡೆದ ಅಮಾನುಷ ದೌರ್ಜನ್ಯಗಳಲ್ಲಿ ಒಂದಾದ ಕಾರಂಚೇಡು ಘಟನೆಗೆ ಇಂದಿಗೆ 35 ವರ್ಷ. ಮನುವಾದದ ವಿಷ ಬೀಜಗಳನ್ನು ನಿಧಾನಗತಿಯಲ್ಲಿ ಮೈ ಮನಸಲ್ಲಿ ಹರಡುವಂತೆ ಮಾಡುವಲ್ಲಿ ಬ್ರಾಹ್ಮಣ್ಯ ಕೆಲಸ ಮಾಡಿದೆ ಎನ್ನಲು ಈ ಭೀಕರ ಘಟನೆಗಳೇ ಸಾಕ್ಷ್ಯಗಳಾಗಿವೆ. ಅಶ್ಪಶ್ಯರನ್ನು ತಮ್ಮ ಭೂಮಿಗಳಲ್ಲಿ ದುಡಿಸಿಕೊಂಡು ಮೆರೆದ ಭೂಮಾಲಿಕರು ಎಂದೆದಿಂದಿಗೂ ದಲಿತರು ತಮ್ಮ ಕಾಲ ಕೆಳಗೆ ಇರಬೇಕೆಂದು ಶತ ಶತಮಾನಗಳಿಂದ ಬಯಸಿದ್ದರು.

ಆಂಧ್ರ-ತೆಲಂಗಾಣಗಳಲ್ಲಿ ಸಾವಿರಗಟ್ಟಲೆ ಎಕರೆಗಳ ಮಾಲೀಕರಾದ ಮೇಲ್ಜಾತಿಯ ಜನ ಕೆಳವರ್ಗದವರನ್ನು ಜೀತದಾಳುಗಳಾಗಿರಿಸಿಕೊಂಡು, ಅವರಿಗೆ ಒಂದಿಂಚೂ ಭೂಮಿಯ ಒಡೆತನ ನೀಡದೆ ಶೋಷಣೆ ಮಾಡಿದ್ದರು (ಈಗ ಭೂಮಿಯಿದೆ ಆದರೆ, ಶೋಷಣೆ ನಿಂತಿಲ್ಲ). ಅಂತಹ ಭಯಾನಕವಾದ ಸಮಯದಲ್ಲೂ ಶೋಷಣೆಯ ವಿರುದ್ಧ ಸಿಡಿದೆದ್ದ ಸಾಕಷ್ಟು ಜನ ಹೋರಾಟಗರರು ಹುತಾತ್ಮರಾಗಿದ್ದಾರೆ. ದಲಿತರ ಮೇಲಿನ ಶೋಷಣೆಯನ್ನು ಪ್ರಶ್ನಿಸಿದ್ದಕ್ಕಾಗಿ ನಡೆದ ಕಾರಂಚೇಡು ದಲಿತರ ಮೇಲಿನ ಹತ್ಯಾಕಾಂಡಕ್ಕೆ ಇಂದಿಗೆ 35 ವರ್ಷ.

1985, ಆಗಿನ ವಿಶಾಲ ಆಂಧ್ರಪ್ರದೇಶದಲ್ಲಿನ ಪ್ರಕಾಶಂ ಜಿಲ್ಲೆಯ ಕಾರಂಚೇಡು ಎಂಬ ಗ್ರಾಮದಲ್ಲಿ ದಲಿತರು ಮತ್ತು ಮೇಲ್ಜಾತಿಯ ಜನಕ್ಕೆ ಪ್ರತ್ಯೇಕವಾಗಿ ಎರಡು ಕೆರೆಗಳನ್ನು ಮಾಡಿಕೊಂಡಿದ್ದರು. ದಲಿತ ಸಮುದಾಯದ ಮಾದಿಗ ಜನಾಂಗದ ಜನರು ತಮ್ಮ ಕೆರೆಯ ನೀರನ್ನು ಕುಡಿಯಲೂ ಸಹ ಬಳಸುತ್ತಿದ್ದರಿಂದ  ಅದನ್ನು ಶುಚಿಯಾಗಿ ಇಟ್ಟುಕೊಂಡಿದ್ದರು.


ಓದಿ: ಭಾರತದಲ್ಲಿ ನಿತ್ಯ ಐದು ಕಸ್ಟಡಿ ಸಾವು; ಬಹುತೇಕರು ಮುಸ್ಲಿಮರು, ದಲಿತರು ಮತ್ತು ಅಂಚಿಗೆ ತಳ್ಳಲ್ಪಟ್ಟವರು!


1985 ಜುಲೈ 16 ರಂದು ಕಮ್ಮ ಜಾತಿಗೆ ಸೇರಿದ ಕೊಳಕು ಮನಸ್ಸಿನ ಸವರ್ಣೀಯನೊಬ್ಬ ದಲಿತರ ಕುಡಿಯುವ ನೀರಿನ ಕೆರೆಗೆ ದನಗಳನ್ನು ಇಳಿಸಿ, ಅವುಗಳ ಮೈ ತೊಳೆದು, ಅವು ಕುಡಿದು ಉಳಿದ ಮುಸುರೆ ನೀರನ್ನು ಸುರಿದ. ಇದನ್ನು ಕಂಡ ಮಾದಿಗ ಜನಾಂಗದ ಯುವಕರು ಈ ರೀತಿ ಮಾಡಿದರೆ ನಾವು ನೀರು ಕುಡಿಯುವುದು ಹೇಗೆ ಎಂದು ಪ್ರಶ್ನಿಸಿದ್ದರು. ಕೆಳಜಾತಿಯವನಾಗಿ ನನಗೆ ಪ್ರಶ್ನೆ ಮಾಡುತ್ತಿರ ಎಂದು ಜಗಳ ತೆಗೆದ ಆತ, ತನ್ನ ಜಾತಿಯವರನ್ನು ಸೇರಿಸಿ ನಡೆದ ಘಟನೆಯ ಬಗ್ಗೆ ಚರ್ಚೆ ಮಾಡಿದ. ಅಲ್ಲಿ ಕಮ್ಮ ಮೇಲ್ಜಾತಿಯ ಭೂಮಾಲಿಕರು ದಲಿತರನ್ನು ಹೀಗೆ ಬಿಟ್ಟರೆ ಬೆಳೆದು ಬಿಡುತ್ತಾರೆ. ಅವರನ್ನು ಸುಮ್ಮನೆ  ಬಿಡಬಾರದು ಎಂದು ರಾತ್ರಿಯೇ ಸಂಚು ರೂಪಿಸಿದ್ದರು.

1985 ಜುಲೈ 17 ರ ಬೆಳಗಿನ ಜಾವ ಕೈಗೆ ಸಿಕ್ಕ ಕತ್ತಿ, ಕೊಡಲಿ, ಮಾರಕಾಯುಧಗಳೊಂದಿಗೆ ಟ್ರಾಕ್ಟರ್‌ಗಳಲ್ಲಿ ಬಂದ ಸವರ್ಣೀಯರು, ಮಾದಿಗ ಸಮುದಾಯದ ದಲಿತರನ್ನು ಅಟ್ಟಾಡಿಸಿ ಭಯಾನಕವಾಗಿ ದಾಳಿ ಮಾಡಿದ್ದರು. ಸಿಕ್ಕಸಿಕ್ಕವರನ್ನು ಕತ್ತರಿಸಿ ಹಾಕಿದರು. ಸಾಕಷ್ಟು ಜನ ಹೆಣ್ಣು ಮಕ್ಕಳನ್ನು ಅಮಾನುಷವಾಗಿ ಅತ್ಯಾಚಾರವೆಸಗಿದರು.

ಈ ದುರ್ಘಟನೆಯಲ್ಲಿ ತೆಳ್ಳ ಯೋಹೌಷುವ, ದುಡ್ಡು ವಂದನಂ, ತೆಳ್ಳ ಮುತ್ತಯ್ಯ, ದುಡ್ಡು ರಮೇಶ್, ತೆಳ್ಳ ಮಾಷೆ, ದುಡ್ಡು ಅಬ್ರಹಾಂ ಎಂಬ ಆರು ಜನರು ಅಲ್ಲಿಯೇ ಕೊಲೆಯಾಗಿ ಹೋದರು. 20 ಕ್ಕೂ ಹೆಚ್ಚು ಜನರು ಗಂಬೀರ ಗಾಯಗಳಿಗೆ ತುತ್ತಾದರು. ಕಣ್ಣೆದುರೇ ಮಗನನ್ನು ಕಳೆದುಕೊಂಡ ಪ್ರತ್ಯಕ್ಷ ಸಾಕ್ಷಿ ದುಡ್ಡು ಆಲಿಸಮ್ಮನನ್ನು ಎರಡು ವರ್ಷಗಳ ನಂತರ ಕೊಲೆ ಮಾಡಿದರು.

ಈ ಘಟನೆ ದೇಶದ ಪ್ರಜ್ಞಾವಂತರ, ಮಾನವತವಾದಿಗಳ, ದಲಿತ ಸಂಘಟನೆಗಳ ಆಕ್ರೋಷಕ್ಕೆ ಕಾರಣವಾಗಿ ಬೃಹತ್ ಪ್ರತಿಭಟನೆಗಳು ನಡೆದವು. ಸತತವಾಗಿ ಆರು ತಿಂಗಳ ಕಾಲ ನಡೆದ ಕಾರಂಚೇಡು ಹೋರಾಟ ಬಹಳಷ್ಟು ಕಾನೂನುಗಳನ್ನು ರೂಪಿಸಲು ಕೂಡ ಕಾರಣವಾಯಿತು ಎಂದು ಕೂಡ ಹೇಳಲಾಗುತ್ತದೆ. 1989 ಎಸ್ಸಿ, ಎಸ್ಟಿ ದೌರ್ಜನ್ಯ ವಿರೋಧಿ ಕಾಯ್ದೆ ಬರಲು ಕೂಡ ಈ ಹೋರಾಟದ ಹಿನ್ನೆಲೆ ಇದೆ ಎನ್ನಲಾಗಿದೆ.

ಈ ಹಲ್ಲೆಯಲ್ಲಿ ಭಾಗಿದಾರರಾದ ಆರೋಪಿಗಳ ಮೇಲೆ ಪೋಲೀಸರು ಕೇಸು ದಾಖಲಿಸಿರಲಿಲ್ಲ. ಆದರೆ ಹೋರಾಟಗಾರು ಕೋರ್ಟಿಗೆ ಹೋದ ನಂತರ 9 ಸೆಕ್ಷನ್ಗಳ ಅಡಿಯಲ್ಲಿ 90 ಜನರನ್ನು ಆರೋಪಿಗಳನ್ನಾಗಿ ಮಾಡಿ ಚಾರ್ಜ್ ಶೀಟ್ ಹಾಕಿದರು.


ಓದಿ: ತಮ್ಮ ಭೂಮಿ ಆಕ್ರಮಿಸಿದ್ದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಕ್ಕೆ ದಲಿತ ಯುವಕನ ಹತ್ಯೆ


1994 ರ ಅಕ್ಟೋಬರ್ 30 ರಂದು ಐದು ಜನರಿಗೆ ಜೀವಾವಧಿ ಶಿಕ್ಷೆ ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟ ನಾಲ್ಕು ಜನ ವೃದ್ದರಿಗೆ 1000 ರೂ. ದಂಡ ಹಾಗೂ 46 ಜನರಿಗೆ ತಲಾ 3 ವರ್ಷ ಜೈಲು ಶಿಕ್ಷೆ ವಿಧಿಸಿತು. ಶಿಕ್ಷಗೆ ಒಳಗಾದಂತಹ ಎಲ್ಲರೂ ಹೈಕೋರ್ಟಿಗೆ ಮೇಲ್ಮನವಿ ಹಾಕಿದರು. 1998 ಜುಲೈ 24 ರ ತೀರ್ಪಿನಲ್ಲಿ ಬೆನಿಫಿಟ್ ಆಫ್ ಡೌಟ್ ಅಡಿಯಲ್ಲಿ ಶಿಕ್ಷೆ ರದ್ದುಗೊಳಿಸಲಾಯಿತು.

ಹೋರಾಟಗಾರರ ಸತತ ಪ್ರಯತ್ನದಿಂದ ಅಂತಿಮವಾಗಿ 1998 ರಲ್ಲಿ ಸುಪ್ರೀಂ ಕೋರ್ಟಿನಲ್ಲಿ ಸ್ಪಷಲ್ ಲೀವ್ ಪಿಟಿಷನ್ ದಾಖಲು ಮಾಡಲಾಯಿತು. ಅದಾಗಿ ಹತ್ತು ವರ್ಷಗಳ ನಂತರ 2008 ಡಿಸೆಂಬರ್ 19 ರಂದು ಸುಪ್ರೀಂಕೋರ್ಟ್ ಅಂಜಯ್ಯ ಎಂಬುವವರಿಗೆ ಜೀವಾವದಿ ಶಿಕ್ಷೆ ಮತ್ತು 29 ಮಂದಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿತು.

ದಲಿತ ದಮನಿತರ ಮೇಲಿನ ದೌರ್ಜನ್ಯದ ಕೇಸುಗಳನ್ನು ದುಡ್ಡಿರುವ ಮೇಲ್ಜಾತಿಯ ಜನ ಎಲ್ಲಿಬೇಕಾದರೂ ಗೆದ್ದು ಬರುತ್ತಾರೆ. ಈಗಲೂ ನಿರಂತರವಾಗಿ ದಲಿತರ ಮೇಲೆ ದೌರ್ಜನ್ಯಗಳು ನಡೆಯುತ್ತಲೇ ಬಂದಿವೆ. ಬಾಬಾ ಸಾಹೇಬ್ ಅಂಬೇಡ್ಕರರ ಕರೆಯಾದ ಶಿಕ್ಷಣ, ಸಂಘಟನೆ, ಸಂಘರ್ಷದ ಮೂಲಕ ತರುವ ಬದಲಾವಣೆಯೇ ದಲಿತರನ್ನು ಶೋಷಣೆಯ ಸಮುದ್ರದಿಂದ ಆಚೆ ತೆಗೆದು ದಡ ಸೇರಿಸಬಲ್ಲದು.


ಓದಿ: ನವ ಉದಾರವಾದಿ ಭಾರತದಲ್ಲಿ ದಲಿತರು: ಮೇಲ್ಚಲನೆಯೋ ಅಥವಾ ಮೂಲೆಗುಂಪೋ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...