Homeಚಳವಳಿಮೇಲ್ಜಾತಿ ದೌರ್ಜನ್ಯವನ್ನು ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ತಂದ ಕಾರಂಚೇಡು ದಲಿತರ ಹತ್ಯಾಕಾಂಡಕ್ಕೆ 35 ವರ್ಷ.

ಮೇಲ್ಜಾತಿ ದೌರ್ಜನ್ಯವನ್ನು ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ತಂದ ಕಾರಂಚೇಡು ದಲಿತರ ಹತ್ಯಾಕಾಂಡಕ್ಕೆ 35 ವರ್ಷ.

ಕೆರೆಯನ್ನು ಗಲೀಜು ಮಾಡಿದ್ದ ಮೇಲ್ಜಾತಿಯವನನ್ನು ದಲಿತನೊಬ್ಬ ಪ್ರಶ್ನನಿಸಿದ್ದೆ ದಲಿತರ ಭೀಕರ ಹತ್ಯಾಕಾಂಡಕ್ಕೆ ಕಾರಣವಾಯಿತು.

- Advertisement -
- Advertisement -

ದಲಿತ ದಮನಿತರ ಮೇಲಿನ ದೌರ್ಜನ್ಯದ ಕೇಸುಗಳನ್ನು ದುಡ್ಡಿರುವ ಮೇಲ್ಜಾತಿಯ ಜನ ಎಲ್ಲಿಬೇಕಾದರೂ ಗೆದ್ದು ಬರುತ್ತಾರೆ. ಈಗಲೂ ನಿರಂತರವಾಗಿ ದಲಿತರ ಮೇಲೆ ದೌರ್ಜನ್ಯಗಳು ನಡೆಯುತ್ತಲೇ ಬಂದಿವೆ. ಬಾಬಾ ಸಾಹೇಬ್ ಅಂಬೇಡ್ಕರರ ಕರೆಯಾದ ಶಿಕ್ಷಣ, ಸಂಘಟನೆ, ಸಂಘರ್ಷದ ಮೂಲಕ ತರುವ ಬದಲಾವಣೆಯೇ ದಲಿತರನ್ನು ಶೋಷಣೆಯ ಸಮುದ್ರದಿಂದ ಆಚೆ ತೆಗೆದು ದಡ ಸೇರಿಸಬಲ್ಲದು.

ಬರಹ: ಅನಿಲ್‌ ಕುಮಾರ್ ಚಿಕ್ಕದಾಳವಟ್ಟ

ದಲಿತರ ಮೇಲೆ ನಡೆದ ಅಮಾನುಷ ದೌರ್ಜನ್ಯಗಳಲ್ಲಿ ಒಂದಾದ ಕಾರಂಚೇಡು ಘಟನೆಗೆ ಇಂದಿಗೆ 35 ವರ್ಷ. ಮನುವಾದದ ವಿಷ ಬೀಜಗಳನ್ನು ನಿಧಾನಗತಿಯಲ್ಲಿ ಮೈ ಮನಸಲ್ಲಿ ಹರಡುವಂತೆ ಮಾಡುವಲ್ಲಿ ಬ್ರಾಹ್ಮಣ್ಯ ಕೆಲಸ ಮಾಡಿದೆ ಎನ್ನಲು ಈ ಭೀಕರ ಘಟನೆಗಳೇ ಸಾಕ್ಷ್ಯಗಳಾಗಿವೆ. ಅಶ್ಪಶ್ಯರನ್ನು ತಮ್ಮ ಭೂಮಿಗಳಲ್ಲಿ ದುಡಿಸಿಕೊಂಡು ಮೆರೆದ ಭೂಮಾಲಿಕರು ಎಂದೆದಿಂದಿಗೂ ದಲಿತರು ತಮ್ಮ ಕಾಲ ಕೆಳಗೆ ಇರಬೇಕೆಂದು ಶತ ಶತಮಾನಗಳಿಂದ ಬಯಸಿದ್ದರು.

ಆಂಧ್ರ-ತೆಲಂಗಾಣಗಳಲ್ಲಿ ಸಾವಿರಗಟ್ಟಲೆ ಎಕರೆಗಳ ಮಾಲೀಕರಾದ ಮೇಲ್ಜಾತಿಯ ಜನ ಕೆಳವರ್ಗದವರನ್ನು ಜೀತದಾಳುಗಳಾಗಿರಿಸಿಕೊಂಡು, ಅವರಿಗೆ ಒಂದಿಂಚೂ ಭೂಮಿಯ ಒಡೆತನ ನೀಡದೆ ಶೋಷಣೆ ಮಾಡಿದ್ದರು (ಈಗ ಭೂಮಿಯಿದೆ ಆದರೆ, ಶೋಷಣೆ ನಿಂತಿಲ್ಲ). ಅಂತಹ ಭಯಾನಕವಾದ ಸಮಯದಲ್ಲೂ ಶೋಷಣೆಯ ವಿರುದ್ಧ ಸಿಡಿದೆದ್ದ ಸಾಕಷ್ಟು ಜನ ಹೋರಾಟಗರರು ಹುತಾತ್ಮರಾಗಿದ್ದಾರೆ. ದಲಿತರ ಮೇಲಿನ ಶೋಷಣೆಯನ್ನು ಪ್ರಶ್ನಿಸಿದ್ದಕ್ಕಾಗಿ ನಡೆದ ಕಾರಂಚೇಡು ದಲಿತರ ಮೇಲಿನ ಹತ್ಯಾಕಾಂಡಕ್ಕೆ ಇಂದಿಗೆ 35 ವರ್ಷ.

1985, ಆಗಿನ ವಿಶಾಲ ಆಂಧ್ರಪ್ರದೇಶದಲ್ಲಿನ ಪ್ರಕಾಶಂ ಜಿಲ್ಲೆಯ ಕಾರಂಚೇಡು ಎಂಬ ಗ್ರಾಮದಲ್ಲಿ ದಲಿತರು ಮತ್ತು ಮೇಲ್ಜಾತಿಯ ಜನಕ್ಕೆ ಪ್ರತ್ಯೇಕವಾಗಿ ಎರಡು ಕೆರೆಗಳನ್ನು ಮಾಡಿಕೊಂಡಿದ್ದರು. ದಲಿತ ಸಮುದಾಯದ ಮಾದಿಗ ಜನಾಂಗದ ಜನರು ತಮ್ಮ ಕೆರೆಯ ನೀರನ್ನು ಕುಡಿಯಲೂ ಸಹ ಬಳಸುತ್ತಿದ್ದರಿಂದ  ಅದನ್ನು ಶುಚಿಯಾಗಿ ಇಟ್ಟುಕೊಂಡಿದ್ದರು.


ಓದಿ: ಭಾರತದಲ್ಲಿ ನಿತ್ಯ ಐದು ಕಸ್ಟಡಿ ಸಾವು; ಬಹುತೇಕರು ಮುಸ್ಲಿಮರು, ದಲಿತರು ಮತ್ತು ಅಂಚಿಗೆ ತಳ್ಳಲ್ಪಟ್ಟವರು!


1985 ಜುಲೈ 16 ರಂದು ಕಮ್ಮ ಜಾತಿಗೆ ಸೇರಿದ ಕೊಳಕು ಮನಸ್ಸಿನ ಸವರ್ಣೀಯನೊಬ್ಬ ದಲಿತರ ಕುಡಿಯುವ ನೀರಿನ ಕೆರೆಗೆ ದನಗಳನ್ನು ಇಳಿಸಿ, ಅವುಗಳ ಮೈ ತೊಳೆದು, ಅವು ಕುಡಿದು ಉಳಿದ ಮುಸುರೆ ನೀರನ್ನು ಸುರಿದ. ಇದನ್ನು ಕಂಡ ಮಾದಿಗ ಜನಾಂಗದ ಯುವಕರು ಈ ರೀತಿ ಮಾಡಿದರೆ ನಾವು ನೀರು ಕುಡಿಯುವುದು ಹೇಗೆ ಎಂದು ಪ್ರಶ್ನಿಸಿದ್ದರು. ಕೆಳಜಾತಿಯವನಾಗಿ ನನಗೆ ಪ್ರಶ್ನೆ ಮಾಡುತ್ತಿರ ಎಂದು ಜಗಳ ತೆಗೆದ ಆತ, ತನ್ನ ಜಾತಿಯವರನ್ನು ಸೇರಿಸಿ ನಡೆದ ಘಟನೆಯ ಬಗ್ಗೆ ಚರ್ಚೆ ಮಾಡಿದ. ಅಲ್ಲಿ ಕಮ್ಮ ಮೇಲ್ಜಾತಿಯ ಭೂಮಾಲಿಕರು ದಲಿತರನ್ನು ಹೀಗೆ ಬಿಟ್ಟರೆ ಬೆಳೆದು ಬಿಡುತ್ತಾರೆ. ಅವರನ್ನು ಸುಮ್ಮನೆ  ಬಿಡಬಾರದು ಎಂದು ರಾತ್ರಿಯೇ ಸಂಚು ರೂಪಿಸಿದ್ದರು.

1985 ಜುಲೈ 17 ರ ಬೆಳಗಿನ ಜಾವ ಕೈಗೆ ಸಿಕ್ಕ ಕತ್ತಿ, ಕೊಡಲಿ, ಮಾರಕಾಯುಧಗಳೊಂದಿಗೆ ಟ್ರಾಕ್ಟರ್‌ಗಳಲ್ಲಿ ಬಂದ ಸವರ್ಣೀಯರು, ಮಾದಿಗ ಸಮುದಾಯದ ದಲಿತರನ್ನು ಅಟ್ಟಾಡಿಸಿ ಭಯಾನಕವಾಗಿ ದಾಳಿ ಮಾಡಿದ್ದರು. ಸಿಕ್ಕಸಿಕ್ಕವರನ್ನು ಕತ್ತರಿಸಿ ಹಾಕಿದರು. ಸಾಕಷ್ಟು ಜನ ಹೆಣ್ಣು ಮಕ್ಕಳನ್ನು ಅಮಾನುಷವಾಗಿ ಅತ್ಯಾಚಾರವೆಸಗಿದರು.

ಈ ದುರ್ಘಟನೆಯಲ್ಲಿ ತೆಳ್ಳ ಯೋಹೌಷುವ, ದುಡ್ಡು ವಂದನಂ, ತೆಳ್ಳ ಮುತ್ತಯ್ಯ, ದುಡ್ಡು ರಮೇಶ್, ತೆಳ್ಳ ಮಾಷೆ, ದುಡ್ಡು ಅಬ್ರಹಾಂ ಎಂಬ ಆರು ಜನರು ಅಲ್ಲಿಯೇ ಕೊಲೆಯಾಗಿ ಹೋದರು. 20 ಕ್ಕೂ ಹೆಚ್ಚು ಜನರು ಗಂಬೀರ ಗಾಯಗಳಿಗೆ ತುತ್ತಾದರು. ಕಣ್ಣೆದುರೇ ಮಗನನ್ನು ಕಳೆದುಕೊಂಡ ಪ್ರತ್ಯಕ್ಷ ಸಾಕ್ಷಿ ದುಡ್ಡು ಆಲಿಸಮ್ಮನನ್ನು ಎರಡು ವರ್ಷಗಳ ನಂತರ ಕೊಲೆ ಮಾಡಿದರು.

ಈ ಘಟನೆ ದೇಶದ ಪ್ರಜ್ಞಾವಂತರ, ಮಾನವತವಾದಿಗಳ, ದಲಿತ ಸಂಘಟನೆಗಳ ಆಕ್ರೋಷಕ್ಕೆ ಕಾರಣವಾಗಿ ಬೃಹತ್ ಪ್ರತಿಭಟನೆಗಳು ನಡೆದವು. ಸತತವಾಗಿ ಆರು ತಿಂಗಳ ಕಾಲ ನಡೆದ ಕಾರಂಚೇಡು ಹೋರಾಟ ಬಹಳಷ್ಟು ಕಾನೂನುಗಳನ್ನು ರೂಪಿಸಲು ಕೂಡ ಕಾರಣವಾಯಿತು ಎಂದು ಕೂಡ ಹೇಳಲಾಗುತ್ತದೆ. 1989 ಎಸ್ಸಿ, ಎಸ್ಟಿ ದೌರ್ಜನ್ಯ ವಿರೋಧಿ ಕಾಯ್ದೆ ಬರಲು ಕೂಡ ಈ ಹೋರಾಟದ ಹಿನ್ನೆಲೆ ಇದೆ ಎನ್ನಲಾಗಿದೆ.

ಈ ಹಲ್ಲೆಯಲ್ಲಿ ಭಾಗಿದಾರರಾದ ಆರೋಪಿಗಳ ಮೇಲೆ ಪೋಲೀಸರು ಕೇಸು ದಾಖಲಿಸಿರಲಿಲ್ಲ. ಆದರೆ ಹೋರಾಟಗಾರು ಕೋರ್ಟಿಗೆ ಹೋದ ನಂತರ 9 ಸೆಕ್ಷನ್ಗಳ ಅಡಿಯಲ್ಲಿ 90 ಜನರನ್ನು ಆರೋಪಿಗಳನ್ನಾಗಿ ಮಾಡಿ ಚಾರ್ಜ್ ಶೀಟ್ ಹಾಕಿದರು.


ಓದಿ: ತಮ್ಮ ಭೂಮಿ ಆಕ್ರಮಿಸಿದ್ದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಕ್ಕೆ ದಲಿತ ಯುವಕನ ಹತ್ಯೆ


1994 ರ ಅಕ್ಟೋಬರ್ 30 ರಂದು ಐದು ಜನರಿಗೆ ಜೀವಾವಧಿ ಶಿಕ್ಷೆ ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟ ನಾಲ್ಕು ಜನ ವೃದ್ದರಿಗೆ 1000 ರೂ. ದಂಡ ಹಾಗೂ 46 ಜನರಿಗೆ ತಲಾ 3 ವರ್ಷ ಜೈಲು ಶಿಕ್ಷೆ ವಿಧಿಸಿತು. ಶಿಕ್ಷಗೆ ಒಳಗಾದಂತಹ ಎಲ್ಲರೂ ಹೈಕೋರ್ಟಿಗೆ ಮೇಲ್ಮನವಿ ಹಾಕಿದರು. 1998 ಜುಲೈ 24 ರ ತೀರ್ಪಿನಲ್ಲಿ ಬೆನಿಫಿಟ್ ಆಫ್ ಡೌಟ್ ಅಡಿಯಲ್ಲಿ ಶಿಕ್ಷೆ ರದ್ದುಗೊಳಿಸಲಾಯಿತು.

ಹೋರಾಟಗಾರರ ಸತತ ಪ್ರಯತ್ನದಿಂದ ಅಂತಿಮವಾಗಿ 1998 ರಲ್ಲಿ ಸುಪ್ರೀಂ ಕೋರ್ಟಿನಲ್ಲಿ ಸ್ಪಷಲ್ ಲೀವ್ ಪಿಟಿಷನ್ ದಾಖಲು ಮಾಡಲಾಯಿತು. ಅದಾಗಿ ಹತ್ತು ವರ್ಷಗಳ ನಂತರ 2008 ಡಿಸೆಂಬರ್ 19 ರಂದು ಸುಪ್ರೀಂಕೋರ್ಟ್ ಅಂಜಯ್ಯ ಎಂಬುವವರಿಗೆ ಜೀವಾವದಿ ಶಿಕ್ಷೆ ಮತ್ತು 29 ಮಂದಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿತು.

ದಲಿತ ದಮನಿತರ ಮೇಲಿನ ದೌರ್ಜನ್ಯದ ಕೇಸುಗಳನ್ನು ದುಡ್ಡಿರುವ ಮೇಲ್ಜಾತಿಯ ಜನ ಎಲ್ಲಿಬೇಕಾದರೂ ಗೆದ್ದು ಬರುತ್ತಾರೆ. ಈಗಲೂ ನಿರಂತರವಾಗಿ ದಲಿತರ ಮೇಲೆ ದೌರ್ಜನ್ಯಗಳು ನಡೆಯುತ್ತಲೇ ಬಂದಿವೆ. ಬಾಬಾ ಸಾಹೇಬ್ ಅಂಬೇಡ್ಕರರ ಕರೆಯಾದ ಶಿಕ್ಷಣ, ಸಂಘಟನೆ, ಸಂಘರ್ಷದ ಮೂಲಕ ತರುವ ಬದಲಾವಣೆಯೇ ದಲಿತರನ್ನು ಶೋಷಣೆಯ ಸಮುದ್ರದಿಂದ ಆಚೆ ತೆಗೆದು ದಡ ಸೇರಿಸಬಲ್ಲದು.


ಓದಿ: ನವ ಉದಾರವಾದಿ ಭಾರತದಲ್ಲಿ ದಲಿತರು: ಮೇಲ್ಚಲನೆಯೋ ಅಥವಾ ಮೂಲೆಗುಂಪೋ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...