Homeಚಳವಳಿಮೇಲ್ಜಾತಿ ದೌರ್ಜನ್ಯವನ್ನು ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ತಂದ ಕಾರಂಚೇಡು ದಲಿತರ ಹತ್ಯಾಕಾಂಡಕ್ಕೆ 35 ವರ್ಷ.

ಮೇಲ್ಜಾತಿ ದೌರ್ಜನ್ಯವನ್ನು ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ತಂದ ಕಾರಂಚೇಡು ದಲಿತರ ಹತ್ಯಾಕಾಂಡಕ್ಕೆ 35 ವರ್ಷ.

ಕೆರೆಯನ್ನು ಗಲೀಜು ಮಾಡಿದ್ದ ಮೇಲ್ಜಾತಿಯವನನ್ನು ದಲಿತನೊಬ್ಬ ಪ್ರಶ್ನನಿಸಿದ್ದೆ ದಲಿತರ ಭೀಕರ ಹತ್ಯಾಕಾಂಡಕ್ಕೆ ಕಾರಣವಾಯಿತು.

- Advertisement -
- Advertisement -

ದಲಿತ ದಮನಿತರ ಮೇಲಿನ ದೌರ್ಜನ್ಯದ ಕೇಸುಗಳನ್ನು ದುಡ್ಡಿರುವ ಮೇಲ್ಜಾತಿಯ ಜನ ಎಲ್ಲಿಬೇಕಾದರೂ ಗೆದ್ದು ಬರುತ್ತಾರೆ. ಈಗಲೂ ನಿರಂತರವಾಗಿ ದಲಿತರ ಮೇಲೆ ದೌರ್ಜನ್ಯಗಳು ನಡೆಯುತ್ತಲೇ ಬಂದಿವೆ. ಬಾಬಾ ಸಾಹೇಬ್ ಅಂಬೇಡ್ಕರರ ಕರೆಯಾದ ಶಿಕ್ಷಣ, ಸಂಘಟನೆ, ಸಂಘರ್ಷದ ಮೂಲಕ ತರುವ ಬದಲಾವಣೆಯೇ ದಲಿತರನ್ನು ಶೋಷಣೆಯ ಸಮುದ್ರದಿಂದ ಆಚೆ ತೆಗೆದು ದಡ ಸೇರಿಸಬಲ್ಲದು.

ಬರಹ: ಅನಿಲ್‌ ಕುಮಾರ್ ಚಿಕ್ಕದಾಳವಟ್ಟ

ದಲಿತರ ಮೇಲೆ ನಡೆದ ಅಮಾನುಷ ದೌರ್ಜನ್ಯಗಳಲ್ಲಿ ಒಂದಾದ ಕಾರಂಚೇಡು ಘಟನೆಗೆ ಇಂದಿಗೆ 35 ವರ್ಷ. ಮನುವಾದದ ವಿಷ ಬೀಜಗಳನ್ನು ನಿಧಾನಗತಿಯಲ್ಲಿ ಮೈ ಮನಸಲ್ಲಿ ಹರಡುವಂತೆ ಮಾಡುವಲ್ಲಿ ಬ್ರಾಹ್ಮಣ್ಯ ಕೆಲಸ ಮಾಡಿದೆ ಎನ್ನಲು ಈ ಭೀಕರ ಘಟನೆಗಳೇ ಸಾಕ್ಷ್ಯಗಳಾಗಿವೆ. ಅಶ್ಪಶ್ಯರನ್ನು ತಮ್ಮ ಭೂಮಿಗಳಲ್ಲಿ ದುಡಿಸಿಕೊಂಡು ಮೆರೆದ ಭೂಮಾಲಿಕರು ಎಂದೆದಿಂದಿಗೂ ದಲಿತರು ತಮ್ಮ ಕಾಲ ಕೆಳಗೆ ಇರಬೇಕೆಂದು ಶತ ಶತಮಾನಗಳಿಂದ ಬಯಸಿದ್ದರು.

ಆಂಧ್ರ-ತೆಲಂಗಾಣಗಳಲ್ಲಿ ಸಾವಿರಗಟ್ಟಲೆ ಎಕರೆಗಳ ಮಾಲೀಕರಾದ ಮೇಲ್ಜಾತಿಯ ಜನ ಕೆಳವರ್ಗದವರನ್ನು ಜೀತದಾಳುಗಳಾಗಿರಿಸಿಕೊಂಡು, ಅವರಿಗೆ ಒಂದಿಂಚೂ ಭೂಮಿಯ ಒಡೆತನ ನೀಡದೆ ಶೋಷಣೆ ಮಾಡಿದ್ದರು (ಈಗ ಭೂಮಿಯಿದೆ ಆದರೆ, ಶೋಷಣೆ ನಿಂತಿಲ್ಲ). ಅಂತಹ ಭಯಾನಕವಾದ ಸಮಯದಲ್ಲೂ ಶೋಷಣೆಯ ವಿರುದ್ಧ ಸಿಡಿದೆದ್ದ ಸಾಕಷ್ಟು ಜನ ಹೋರಾಟಗರರು ಹುತಾತ್ಮರಾಗಿದ್ದಾರೆ. ದಲಿತರ ಮೇಲಿನ ಶೋಷಣೆಯನ್ನು ಪ್ರಶ್ನಿಸಿದ್ದಕ್ಕಾಗಿ ನಡೆದ ಕಾರಂಚೇಡು ದಲಿತರ ಮೇಲಿನ ಹತ್ಯಾಕಾಂಡಕ್ಕೆ ಇಂದಿಗೆ 35 ವರ್ಷ.

1985, ಆಗಿನ ವಿಶಾಲ ಆಂಧ್ರಪ್ರದೇಶದಲ್ಲಿನ ಪ್ರಕಾಶಂ ಜಿಲ್ಲೆಯ ಕಾರಂಚೇಡು ಎಂಬ ಗ್ರಾಮದಲ್ಲಿ ದಲಿತರು ಮತ್ತು ಮೇಲ್ಜಾತಿಯ ಜನಕ್ಕೆ ಪ್ರತ್ಯೇಕವಾಗಿ ಎರಡು ಕೆರೆಗಳನ್ನು ಮಾಡಿಕೊಂಡಿದ್ದರು. ದಲಿತ ಸಮುದಾಯದ ಮಾದಿಗ ಜನಾಂಗದ ಜನರು ತಮ್ಮ ಕೆರೆಯ ನೀರನ್ನು ಕುಡಿಯಲೂ ಸಹ ಬಳಸುತ್ತಿದ್ದರಿಂದ  ಅದನ್ನು ಶುಚಿಯಾಗಿ ಇಟ್ಟುಕೊಂಡಿದ್ದರು.


ಓದಿ: ಭಾರತದಲ್ಲಿ ನಿತ್ಯ ಐದು ಕಸ್ಟಡಿ ಸಾವು; ಬಹುತೇಕರು ಮುಸ್ಲಿಮರು, ದಲಿತರು ಮತ್ತು ಅಂಚಿಗೆ ತಳ್ಳಲ್ಪಟ್ಟವರು!


1985 ಜುಲೈ 16 ರಂದು ಕಮ್ಮ ಜಾತಿಗೆ ಸೇರಿದ ಕೊಳಕು ಮನಸ್ಸಿನ ಸವರ್ಣೀಯನೊಬ್ಬ ದಲಿತರ ಕುಡಿಯುವ ನೀರಿನ ಕೆರೆಗೆ ದನಗಳನ್ನು ಇಳಿಸಿ, ಅವುಗಳ ಮೈ ತೊಳೆದು, ಅವು ಕುಡಿದು ಉಳಿದ ಮುಸುರೆ ನೀರನ್ನು ಸುರಿದ. ಇದನ್ನು ಕಂಡ ಮಾದಿಗ ಜನಾಂಗದ ಯುವಕರು ಈ ರೀತಿ ಮಾಡಿದರೆ ನಾವು ನೀರು ಕುಡಿಯುವುದು ಹೇಗೆ ಎಂದು ಪ್ರಶ್ನಿಸಿದ್ದರು. ಕೆಳಜಾತಿಯವನಾಗಿ ನನಗೆ ಪ್ರಶ್ನೆ ಮಾಡುತ್ತಿರ ಎಂದು ಜಗಳ ತೆಗೆದ ಆತ, ತನ್ನ ಜಾತಿಯವರನ್ನು ಸೇರಿಸಿ ನಡೆದ ಘಟನೆಯ ಬಗ್ಗೆ ಚರ್ಚೆ ಮಾಡಿದ. ಅಲ್ಲಿ ಕಮ್ಮ ಮೇಲ್ಜಾತಿಯ ಭೂಮಾಲಿಕರು ದಲಿತರನ್ನು ಹೀಗೆ ಬಿಟ್ಟರೆ ಬೆಳೆದು ಬಿಡುತ್ತಾರೆ. ಅವರನ್ನು ಸುಮ್ಮನೆ  ಬಿಡಬಾರದು ಎಂದು ರಾತ್ರಿಯೇ ಸಂಚು ರೂಪಿಸಿದ್ದರು.

1985 ಜುಲೈ 17 ರ ಬೆಳಗಿನ ಜಾವ ಕೈಗೆ ಸಿಕ್ಕ ಕತ್ತಿ, ಕೊಡಲಿ, ಮಾರಕಾಯುಧಗಳೊಂದಿಗೆ ಟ್ರಾಕ್ಟರ್‌ಗಳಲ್ಲಿ ಬಂದ ಸವರ್ಣೀಯರು, ಮಾದಿಗ ಸಮುದಾಯದ ದಲಿತರನ್ನು ಅಟ್ಟಾಡಿಸಿ ಭಯಾನಕವಾಗಿ ದಾಳಿ ಮಾಡಿದ್ದರು. ಸಿಕ್ಕಸಿಕ್ಕವರನ್ನು ಕತ್ತರಿಸಿ ಹಾಕಿದರು. ಸಾಕಷ್ಟು ಜನ ಹೆಣ್ಣು ಮಕ್ಕಳನ್ನು ಅಮಾನುಷವಾಗಿ ಅತ್ಯಾಚಾರವೆಸಗಿದರು.

ಈ ದುರ್ಘಟನೆಯಲ್ಲಿ ತೆಳ್ಳ ಯೋಹೌಷುವ, ದುಡ್ಡು ವಂದನಂ, ತೆಳ್ಳ ಮುತ್ತಯ್ಯ, ದುಡ್ಡು ರಮೇಶ್, ತೆಳ್ಳ ಮಾಷೆ, ದುಡ್ಡು ಅಬ್ರಹಾಂ ಎಂಬ ಆರು ಜನರು ಅಲ್ಲಿಯೇ ಕೊಲೆಯಾಗಿ ಹೋದರು. 20 ಕ್ಕೂ ಹೆಚ್ಚು ಜನರು ಗಂಬೀರ ಗಾಯಗಳಿಗೆ ತುತ್ತಾದರು. ಕಣ್ಣೆದುರೇ ಮಗನನ್ನು ಕಳೆದುಕೊಂಡ ಪ್ರತ್ಯಕ್ಷ ಸಾಕ್ಷಿ ದುಡ್ಡು ಆಲಿಸಮ್ಮನನ್ನು ಎರಡು ವರ್ಷಗಳ ನಂತರ ಕೊಲೆ ಮಾಡಿದರು.

ಈ ಘಟನೆ ದೇಶದ ಪ್ರಜ್ಞಾವಂತರ, ಮಾನವತವಾದಿಗಳ, ದಲಿತ ಸಂಘಟನೆಗಳ ಆಕ್ರೋಷಕ್ಕೆ ಕಾರಣವಾಗಿ ಬೃಹತ್ ಪ್ರತಿಭಟನೆಗಳು ನಡೆದವು. ಸತತವಾಗಿ ಆರು ತಿಂಗಳ ಕಾಲ ನಡೆದ ಕಾರಂಚೇಡು ಹೋರಾಟ ಬಹಳಷ್ಟು ಕಾನೂನುಗಳನ್ನು ರೂಪಿಸಲು ಕೂಡ ಕಾರಣವಾಯಿತು ಎಂದು ಕೂಡ ಹೇಳಲಾಗುತ್ತದೆ. 1989 ಎಸ್ಸಿ, ಎಸ್ಟಿ ದೌರ್ಜನ್ಯ ವಿರೋಧಿ ಕಾಯ್ದೆ ಬರಲು ಕೂಡ ಈ ಹೋರಾಟದ ಹಿನ್ನೆಲೆ ಇದೆ ಎನ್ನಲಾಗಿದೆ.

ಈ ಹಲ್ಲೆಯಲ್ಲಿ ಭಾಗಿದಾರರಾದ ಆರೋಪಿಗಳ ಮೇಲೆ ಪೋಲೀಸರು ಕೇಸು ದಾಖಲಿಸಿರಲಿಲ್ಲ. ಆದರೆ ಹೋರಾಟಗಾರು ಕೋರ್ಟಿಗೆ ಹೋದ ನಂತರ 9 ಸೆಕ್ಷನ್ಗಳ ಅಡಿಯಲ್ಲಿ 90 ಜನರನ್ನು ಆರೋಪಿಗಳನ್ನಾಗಿ ಮಾಡಿ ಚಾರ್ಜ್ ಶೀಟ್ ಹಾಕಿದರು.


ಓದಿ: ತಮ್ಮ ಭೂಮಿ ಆಕ್ರಮಿಸಿದ್ದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಕ್ಕೆ ದಲಿತ ಯುವಕನ ಹತ್ಯೆ


1994 ರ ಅಕ್ಟೋಬರ್ 30 ರಂದು ಐದು ಜನರಿಗೆ ಜೀವಾವಧಿ ಶಿಕ್ಷೆ ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟ ನಾಲ್ಕು ಜನ ವೃದ್ದರಿಗೆ 1000 ರೂ. ದಂಡ ಹಾಗೂ 46 ಜನರಿಗೆ ತಲಾ 3 ವರ್ಷ ಜೈಲು ಶಿಕ್ಷೆ ವಿಧಿಸಿತು. ಶಿಕ್ಷಗೆ ಒಳಗಾದಂತಹ ಎಲ್ಲರೂ ಹೈಕೋರ್ಟಿಗೆ ಮೇಲ್ಮನವಿ ಹಾಕಿದರು. 1998 ಜುಲೈ 24 ರ ತೀರ್ಪಿನಲ್ಲಿ ಬೆನಿಫಿಟ್ ಆಫ್ ಡೌಟ್ ಅಡಿಯಲ್ಲಿ ಶಿಕ್ಷೆ ರದ್ದುಗೊಳಿಸಲಾಯಿತು.

ಹೋರಾಟಗಾರರ ಸತತ ಪ್ರಯತ್ನದಿಂದ ಅಂತಿಮವಾಗಿ 1998 ರಲ್ಲಿ ಸುಪ್ರೀಂ ಕೋರ್ಟಿನಲ್ಲಿ ಸ್ಪಷಲ್ ಲೀವ್ ಪಿಟಿಷನ್ ದಾಖಲು ಮಾಡಲಾಯಿತು. ಅದಾಗಿ ಹತ್ತು ವರ್ಷಗಳ ನಂತರ 2008 ಡಿಸೆಂಬರ್ 19 ರಂದು ಸುಪ್ರೀಂಕೋರ್ಟ್ ಅಂಜಯ್ಯ ಎಂಬುವವರಿಗೆ ಜೀವಾವದಿ ಶಿಕ್ಷೆ ಮತ್ತು 29 ಮಂದಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿತು.

ದಲಿತ ದಮನಿತರ ಮೇಲಿನ ದೌರ್ಜನ್ಯದ ಕೇಸುಗಳನ್ನು ದುಡ್ಡಿರುವ ಮೇಲ್ಜಾತಿಯ ಜನ ಎಲ್ಲಿಬೇಕಾದರೂ ಗೆದ್ದು ಬರುತ್ತಾರೆ. ಈಗಲೂ ನಿರಂತರವಾಗಿ ದಲಿತರ ಮೇಲೆ ದೌರ್ಜನ್ಯಗಳು ನಡೆಯುತ್ತಲೇ ಬಂದಿವೆ. ಬಾಬಾ ಸಾಹೇಬ್ ಅಂಬೇಡ್ಕರರ ಕರೆಯಾದ ಶಿಕ್ಷಣ, ಸಂಘಟನೆ, ಸಂಘರ್ಷದ ಮೂಲಕ ತರುವ ಬದಲಾವಣೆಯೇ ದಲಿತರನ್ನು ಶೋಷಣೆಯ ಸಮುದ್ರದಿಂದ ಆಚೆ ತೆಗೆದು ದಡ ಸೇರಿಸಬಲ್ಲದು.


ಓದಿ: ನವ ಉದಾರವಾದಿ ಭಾರತದಲ್ಲಿ ದಲಿತರು: ಮೇಲ್ಚಲನೆಯೋ ಅಥವಾ ಮೂಲೆಗುಂಪೋ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...