Homeಕರ್ನಾಟಕಕೊರೊನಾ ಸೋಂಕಿತ 100 ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ: ವಾಣಿವಿಲಾಸ ಆಸ್ಪತ್ರೆ ವೈದ್ಯ/ದಾದಿಯರಿಗೆ ಮೆಚ್ಚುಗೆಯ ಮಹಾಪೂರ

ಕೊರೊನಾ ಸೋಂಕಿತ 100 ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ: ವಾಣಿವಿಲಾಸ ಆಸ್ಪತ್ರೆ ವೈದ್ಯ/ದಾದಿಯರಿಗೆ ಮೆಚ್ಚುಗೆಯ ಮಹಾಪೂರ

ಇದುವರೆಗೂ ಜನಿಸಿರುವ 100 ಮಕ್ಕಳಲ್ಲಿ 76 ಪ್ರಕರಣಗಳಲ್ಲಿ ಸಿಸೇರಿಯನ್ ಅಗತ್ಯವಾಗಿದೆ. ನಾಲ್ಕು ಜೊತೆಗೆ ಅವಳಿ ಮಕ್ಕಳು ಸಹ ಜನಿಸಿವೆ. ಎಲ್ಲಾ ಮಕ್ಕಳು ಸಹ ಆರೋಗ್ಯವಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ.

- Advertisement -
- Advertisement -

ಕೊರೊನಾ ಸೋಂಕು ದೊಡ್ಡ ಮಟ್ಟದ ಭೀತಿ ಉಂಟುಮಾಡಿದೆ. ಆಸ್ಪತ್ರೆಯಲ್ಲಿ ದಾಖಲು ಮಾಡಿಕೊಳ್ಳದೇ, ಬೆಡ್ ಸಿಗದೇ, ಸೂಕ್ತ ಚಿಕಿತ್ಸೆ ಸಿಗದೇ ರೋಗಿಗಳು ಸಾವನಪ್ಪುತ್ತಿರುವ ಹಲವಾರು ವರದಿಗಳು ಕಂಡುಬರುತ್ತಿವೆ. ಈ ಮಧ್ಯೆಯೆ ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆ ವೈದ್ಯರು ಮತ್ತು ದಾದಿಗಳು ಕೊರೊನಾ ಸೋಂಕಿತ 100 ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ ಮಾಡಿಸುವ ಮೂಲಕ ಭರವಸೆ ತುಂಬಿದ್ದಾರೆ.

ಗರ್ಭಿಣಿಯರಿಗೆ ಕೊರೊನಾ ಸೋಂಕು ತಗುಲಿದರೆ ಅಪಾಯ ಹೆಚ್ಚು. ಸದಾ ಕಾಲ ಅವರ ಸಹಾಯಕ್ಕೊಬ್ಬರೂ ಇರಲೇಬೇಕು. ಅವರಿಗೂ ಸೋಂಕು ಹರಡುವ ಆತಂಕವಿರುತ್ತದೆ. ಮಗುಗೂ ಹರಡಬಹುದೆಂಬ ಭೀತಿ. ಇನ್ನು ವೈದ್ಯರು ಮತ್ತು ಸ್ಟಾಪ್‌ ನರ್ಸ್ ಹೆಚ್ಚು ಕಾಲ ರೋಗಿಯ ಸಮಯ ಕಳೆಯಬೇಕಾದ ಪರಿಸ್ಥಿತಿ ಇರುತ್ತದೆ. ಈ ಎಲ್ಲಾ ಅಡೆತಡೆಗಳನ್ನು ನಮ್ಮ ವೈದ್ಯರು ಮೆಟ್ಟಿನಿಂತಿದ್ದಾರೆ. ಗುರುವಾರ ರಾತ್ರಿ 100ನೇ ಗರ್ಭಿಣಿಗೆ ಯಶಸ್ವಿ ಹೆರಿಗೆ ಮಾಡಿಸಿದ್ದಾರೆ.

ಗುರುವಾರ ರಾತ್ರಿಯೇ ನಾಲ್ಕು ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಯಶಸ್ವಿ ಹೆರಿಗೆಯಾಗಿದೆ. ಆ ಸಂಭ್ರಮಕ್ಕೆ ವೈದ್ಯರು “ವಾಣಿವಿಲಾಸ ಟಿಸಿಸಿ ಟೀಮ್ 100” ಎಂಬ ಪೋಸ್ಟರ್ ಹಿಡಿದು ಮಗುವಿನೊಂದಿಗೆ ಚಿತ್ರ ತೆಗೆಸಿಕೊಂಡಿದ್ದಾರೆ. ಅದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಶೇಷವೆಂದರೆ ಎಲ್ಲಾ ನವಜಾತ ಶಿಶುಗಳು ಸಹ ಕೋವಿಡ್ ನೆಗಟಿವ್ ಬಂದಿವೆ.

ಗರ್ಭಿಣಿ ಕೊರೊನಾ ಸೋಂಕಿತರನ್ನು ಹಾರೈಕೆ ಮಾಡುವುದು ಸವಾಲಿನ ಕೆಲಸ. ದಿನವಿಡಿ ಪಿಪಿಇ ಕಿಟ್‌ಗಳನ್ನು ಧರಿಸಿರುವ ವೈದ್ಯರು ಶೌಚಾಲಯ ಬಳಸುವುದು ಕಷ್ಟಕರವಾಗುತ್ತದೆ. ಕೆಲವೊಮ್ಮೆ ವಯಸ್ಕ ಡೈಪರ್ ಧರಿಸಿ ಕೆಲಸ ಮಾಡಬೇಕಾದ ಪರಿಸ್ಥಿತಿಗಳು ಬಂದಿವೆ. ಒಂದು ವಾರ ಸತತ ಕೆಲಸ ಮಾಡುವ ಅವರು 5 ದಿನಗಳ ಕಾಲ ಕ್ವಾರಂಟೈನ್‌ನಲ್ಲಿರುತ್ತಾರೆ. ಕೊನೆ ದಿನ ಕೋವಿಡ್ ಟೆಸ್ಟ್ ಮಾಡಿಸಿ ನೆಗಟಿವ್ ಬಂದರೆ ಮಾತ್ರ ಮತ್ತೆ ಕೆಲಸಕ್ಕೆ ಹಾಜರಾಗುತ್ತಾರೆ. ಇಷ್ಟೆಲ್ಲಾ ವಿಷಮ ಪರಿಸ್ಥಿತಿಯಲ್ಲಿಯೂ ಯಶಸ್ವಿ ಹೆರಿಗೆ ಮಾಡಿಸುವಲ್ಲಿ ಸಫಲವಾಗಿರುವ ವೈದ್ಯರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ.

ವಿಕ್ಟೋರಿಯಾ ವಾಣಿವಿಲಾಸ ಆಸ್ಪತ್ರೆಯಲ್ಲಿ ಪ್ರತಿ ತಿಂಗಳು ಸರಾಸರಿ 3000 ಹೆರಿಗೆ ಮಾಡಿಸಲಾಗುತ್ತದೆ. ಈಗ ವೈದ್ಯರಿಗೆ ಕೋವಿಡ್ ಮತ್ತು ಕೋವಿಡ್ ಅಲ್ಲದ ಗರ್ಭಿಣಿಯನ್ನು ನೋಡಿಕೊಳ್ಳಬೇಕಾದ ಜವಾಬ್ದಾರಿಯಿದೆ. ಒಂದೇ ವಾರದಲ್ಲಿ 66 ಹೆರಿಗೆಗಳಾಗಿದ್ದು 140 ಕೊರೊನಾ ಸೋಂಕಿತ ಗರ್ಭಿಣಿಯರು ದಾಖಲಾಗಿದ್ದಾರೆ. ಕೊರೊನಾ ಸೋಂಕಿತ ಗರ್ಭಿಣಿಯರಿಗೆಂದೇ ಪ್ರತ್ಯೇಕ ಐಸೋಲೇಷನ್ ವಾರ್ಡ್ ತೆರೆಯಲಾಗಿದೆ. ಸದ್ಯ ಅಲ್ಲಿ 350 ಕೊರೊನಾ ಸೋಂಕಿತ ಗರ್ಭಿಣಿಯರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅದರಲ್ಲಿ 150 ಜನರು ತುರ್ತು ಆರೈಕೆ ಕೇಂದ್ರದಲ್ಲಿದ್ದಾರೆ.

ಪಾದರಾಯನಪುರದಲ್ಲಿ ಕೊರೊನಾ ಸೋಂಕಿತ ಗರ್ಭಿಣಿಗೆ ಮೇ 09ರಂದು ಯಶಸ್ವಿ ಹೆರಿಗೆ ಮಾಡಿಸಿದ್ದವು. ಅಲ್ಲಿಂದ ಹಿಂತಿರುಗಿ ನೋಡಿದ್ದೇ ಇಲ್ಲ, ನಮ್ಮ ಕಾರ್ಯ ಮುಂದುವರೆಯುತ್ತಲೇ ಇದೆ. ಈ ಹಿಂದೆ ಗರ್ಭಿಣಿಯರ ವಾರ್ಡ್ ಅಂದರೆ ಅವರ ಎಲ್ಲಾ ಸಂಬಂಧಿಗಳು ಸೇರಿ ತುಂಬಿ ತುಳುಕುತ್ತಿತ್ತು. ಎಲ್ಲರ ಮುಖದಲ್ಲಿ ತಮ್ಮ ಮನಗೆ ಹೊಸ ಪ್ರತಿನಿಧಿ ಬಂದ ಖುಷಿ ಕಾಣುತ್ತಿತ್ತು. ಆದರೆ ಈಗ ಅದಕ್ಕೆ ಸಂಪೂರ್ಣ ವಿರುದ್ಧವಾಗಿದೆ. ಸೋಂಕಿನ ಭಯಕ್ಕೆ ರೋಗಿಯೊಂದಿಗೆ ಹೆಚ್ಚು ಮಾತನಾಡಲು ಸಹ ಆಗುತ್ತಿಲ್ಲ. ನೆಮ್ಮದಿಯೆಂದರೆ ಗರ್ಭಿಣಿಯರಿಗೆ ಹೆರಿಗೆ ಮಾಡಿಸಿದ ಯಾವೊಬ್ಬ ವೈದ್ಯರು ಸಹ ಸೋಂಕಿಗೆ ತುತ್ತಾಗಿಲ್ಲ ಎಂದು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ಸಹಾಯಕ ಪ್ರಾಧ್ಯಾಪಕಿ ಡಾ.ಅನಿತಾ ಜಿ.ಎಸ್ ತಿಳಿಸಿದ್ದಾರೆ.

ಇದುವರೆಗೂ ಜನಿಸಿರುವ 100 ಮಕ್ಕಳಲ್ಲಿ 76 ಪ್ರಕರಣಗಳಲ್ಲಿ ಸಿಸೇರಿಯನ್ ಅಗತ್ಯವಾಗಿದೆ. ನಾಲ್ಕು ಜೊತೆಗೆ ಅವಳಿ ಮಕ್ಕಳು ಸಹ ಜನಿಸಿವೆ. ಎಲ್ಲಾ ಮಕ್ಕಳು ಸಹ ಆರೋಗ್ಯವಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ.

ಸಾಂಕ್ರಾಮಿಕ ಕಾಲದಲ್ಲಿ ತಮ್ಮ ಕರ್ತವ್ಯನಿಷ್ಠೆ ಮೆರೆಯುತ್ತಿರುವ ಈ ವೈದ್ಯರಿಗೆ ಮತ್ತು ಸ್ಟಾಪ್‌ ನರ್ಸ್‌ಗಳಿಗೆ ಜನರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ತಾವು ಕೊರೊನಾ ಸೋಂಕಿಗೆ ಒಳಗಾಗಿದ್ದರೂ ತಮ್ಮ ಕಂದಮ್ಮನನ್ನು ಯಶಸ್ವಿಯಾಗಿ ರಕ್ಷಿಸಿದ ಆರೋಗ್ಯ ಸಿಬ್ಬಂದಿಗಳ ಕುರಿತು ಬಾಣಂತಿಯರು ಅಕ್ಕರೆಯ ಭಾವ ವ್ಯಕ್ತಪಡಿಸಿದ್ದಾರೆ.

ವೈದ್ಯಕೀಯ ಸಚಿವ ಡಾ.ಕೆ ಸುಧಾಕರ್ ಟ್ವೀಟ್ ಮಾಡಿ “ಕೋವಿಡ್ ಸೋಂಕಿತರ ಚಿಕಿತ್ಸೆಯಲ್ಲಿ ತೊಡಗಿರುವ ವಿಕ್ಟೊರಿಯಾ ಆಸ್ಪತ್ರೆ ಈ ಸಂದರ್ಭದಲ್ಲಿ 100ನೇ ಕೋವಿಡ್ ಸೋಂಕಿತ ಗರ್ಭಿಣಿ ಮಹಿಳೆಗೆ ಯಶಸ್ವಿಯಾಗಿ ಹೆರಿಗೆ ಪೂರೈಸುವ ಮೂಲಕ ಇನ್ನೊಂದು ವಿಶೇಷ ಮೈಲಿಗಲ್ಲು ಸಾಧಿಸಿದೆ. ಇದಕ್ಕೆ ಶ್ರಮಿಸಿದ ವಿಕ್ಟೊರಿಯಾ ಮತ್ತು ವಾಣಿ ವಿಲಾಸ ಆಸ್ಪತ್ರೆಯ ಎಲ್ಲಾ ವೈದ್ಯರು ಮತ್ತು ಸಿಬ್ಬಂದಿಗೆ ನನ್ನ ಅಭಿನಂದನೆಗಳು” ಎಂದಿದ್ದಾರೆ.


ಇದನ್ನೂ ಓದಿ: ಮರಣ ಹೊಂದಿದ ವ್ಯಕ್ತಿಗಳಿಂದ ಕೊರೊನಾ ಸೋಂಕು ಹರಡುವುದಿಲ್ಲ: ಅಂತ್ಯಸಂಸ್ಕಾರಕ್ಕೆ ಅವಕಾಶಮಾಡಿಕೊಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...