Homeಕರ್ನಾಟಕಕೊರೊನಾ ಸೋಂಕಿತ 100 ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ: ವಾಣಿವಿಲಾಸ ಆಸ್ಪತ್ರೆ ವೈದ್ಯ/ದಾದಿಯರಿಗೆ ಮೆಚ್ಚುಗೆಯ ಮಹಾಪೂರ

ಕೊರೊನಾ ಸೋಂಕಿತ 100 ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ: ವಾಣಿವಿಲಾಸ ಆಸ್ಪತ್ರೆ ವೈದ್ಯ/ದಾದಿಯರಿಗೆ ಮೆಚ್ಚುಗೆಯ ಮಹಾಪೂರ

ಇದುವರೆಗೂ ಜನಿಸಿರುವ 100 ಮಕ್ಕಳಲ್ಲಿ 76 ಪ್ರಕರಣಗಳಲ್ಲಿ ಸಿಸೇರಿಯನ್ ಅಗತ್ಯವಾಗಿದೆ. ನಾಲ್ಕು ಜೊತೆಗೆ ಅವಳಿ ಮಕ್ಕಳು ಸಹ ಜನಿಸಿವೆ. ಎಲ್ಲಾ ಮಕ್ಕಳು ಸಹ ಆರೋಗ್ಯವಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ.

- Advertisement -
- Advertisement -

ಕೊರೊನಾ ಸೋಂಕು ದೊಡ್ಡ ಮಟ್ಟದ ಭೀತಿ ಉಂಟುಮಾಡಿದೆ. ಆಸ್ಪತ್ರೆಯಲ್ಲಿ ದಾಖಲು ಮಾಡಿಕೊಳ್ಳದೇ, ಬೆಡ್ ಸಿಗದೇ, ಸೂಕ್ತ ಚಿಕಿತ್ಸೆ ಸಿಗದೇ ರೋಗಿಗಳು ಸಾವನಪ್ಪುತ್ತಿರುವ ಹಲವಾರು ವರದಿಗಳು ಕಂಡುಬರುತ್ತಿವೆ. ಈ ಮಧ್ಯೆಯೆ ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆ ವೈದ್ಯರು ಮತ್ತು ದಾದಿಗಳು ಕೊರೊನಾ ಸೋಂಕಿತ 100 ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ ಮಾಡಿಸುವ ಮೂಲಕ ಭರವಸೆ ತುಂಬಿದ್ದಾರೆ.

ಗರ್ಭಿಣಿಯರಿಗೆ ಕೊರೊನಾ ಸೋಂಕು ತಗುಲಿದರೆ ಅಪಾಯ ಹೆಚ್ಚು. ಸದಾ ಕಾಲ ಅವರ ಸಹಾಯಕ್ಕೊಬ್ಬರೂ ಇರಲೇಬೇಕು. ಅವರಿಗೂ ಸೋಂಕು ಹರಡುವ ಆತಂಕವಿರುತ್ತದೆ. ಮಗುಗೂ ಹರಡಬಹುದೆಂಬ ಭೀತಿ. ಇನ್ನು ವೈದ್ಯರು ಮತ್ತು ಸ್ಟಾಪ್‌ ನರ್ಸ್ ಹೆಚ್ಚು ಕಾಲ ರೋಗಿಯ ಸಮಯ ಕಳೆಯಬೇಕಾದ ಪರಿಸ್ಥಿತಿ ಇರುತ್ತದೆ. ಈ ಎಲ್ಲಾ ಅಡೆತಡೆಗಳನ್ನು ನಮ್ಮ ವೈದ್ಯರು ಮೆಟ್ಟಿನಿಂತಿದ್ದಾರೆ. ಗುರುವಾರ ರಾತ್ರಿ 100ನೇ ಗರ್ಭಿಣಿಗೆ ಯಶಸ್ವಿ ಹೆರಿಗೆ ಮಾಡಿಸಿದ್ದಾರೆ.

ಗುರುವಾರ ರಾತ್ರಿಯೇ ನಾಲ್ಕು ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಯಶಸ್ವಿ ಹೆರಿಗೆಯಾಗಿದೆ. ಆ ಸಂಭ್ರಮಕ್ಕೆ ವೈದ್ಯರು “ವಾಣಿವಿಲಾಸ ಟಿಸಿಸಿ ಟೀಮ್ 100” ಎಂಬ ಪೋಸ್ಟರ್ ಹಿಡಿದು ಮಗುವಿನೊಂದಿಗೆ ಚಿತ್ರ ತೆಗೆಸಿಕೊಂಡಿದ್ದಾರೆ. ಅದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಶೇಷವೆಂದರೆ ಎಲ್ಲಾ ನವಜಾತ ಶಿಶುಗಳು ಸಹ ಕೋವಿಡ್ ನೆಗಟಿವ್ ಬಂದಿವೆ.

ಗರ್ಭಿಣಿ ಕೊರೊನಾ ಸೋಂಕಿತರನ್ನು ಹಾರೈಕೆ ಮಾಡುವುದು ಸವಾಲಿನ ಕೆಲಸ. ದಿನವಿಡಿ ಪಿಪಿಇ ಕಿಟ್‌ಗಳನ್ನು ಧರಿಸಿರುವ ವೈದ್ಯರು ಶೌಚಾಲಯ ಬಳಸುವುದು ಕಷ್ಟಕರವಾಗುತ್ತದೆ. ಕೆಲವೊಮ್ಮೆ ವಯಸ್ಕ ಡೈಪರ್ ಧರಿಸಿ ಕೆಲಸ ಮಾಡಬೇಕಾದ ಪರಿಸ್ಥಿತಿಗಳು ಬಂದಿವೆ. ಒಂದು ವಾರ ಸತತ ಕೆಲಸ ಮಾಡುವ ಅವರು 5 ದಿನಗಳ ಕಾಲ ಕ್ವಾರಂಟೈನ್‌ನಲ್ಲಿರುತ್ತಾರೆ. ಕೊನೆ ದಿನ ಕೋವಿಡ್ ಟೆಸ್ಟ್ ಮಾಡಿಸಿ ನೆಗಟಿವ್ ಬಂದರೆ ಮಾತ್ರ ಮತ್ತೆ ಕೆಲಸಕ್ಕೆ ಹಾಜರಾಗುತ್ತಾರೆ. ಇಷ್ಟೆಲ್ಲಾ ವಿಷಮ ಪರಿಸ್ಥಿತಿಯಲ್ಲಿಯೂ ಯಶಸ್ವಿ ಹೆರಿಗೆ ಮಾಡಿಸುವಲ್ಲಿ ಸಫಲವಾಗಿರುವ ವೈದ್ಯರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ.

ವಿಕ್ಟೋರಿಯಾ ವಾಣಿವಿಲಾಸ ಆಸ್ಪತ್ರೆಯಲ್ಲಿ ಪ್ರತಿ ತಿಂಗಳು ಸರಾಸರಿ 3000 ಹೆರಿಗೆ ಮಾಡಿಸಲಾಗುತ್ತದೆ. ಈಗ ವೈದ್ಯರಿಗೆ ಕೋವಿಡ್ ಮತ್ತು ಕೋವಿಡ್ ಅಲ್ಲದ ಗರ್ಭಿಣಿಯನ್ನು ನೋಡಿಕೊಳ್ಳಬೇಕಾದ ಜವಾಬ್ದಾರಿಯಿದೆ. ಒಂದೇ ವಾರದಲ್ಲಿ 66 ಹೆರಿಗೆಗಳಾಗಿದ್ದು 140 ಕೊರೊನಾ ಸೋಂಕಿತ ಗರ್ಭಿಣಿಯರು ದಾಖಲಾಗಿದ್ದಾರೆ. ಕೊರೊನಾ ಸೋಂಕಿತ ಗರ್ಭಿಣಿಯರಿಗೆಂದೇ ಪ್ರತ್ಯೇಕ ಐಸೋಲೇಷನ್ ವಾರ್ಡ್ ತೆರೆಯಲಾಗಿದೆ. ಸದ್ಯ ಅಲ್ಲಿ 350 ಕೊರೊನಾ ಸೋಂಕಿತ ಗರ್ಭಿಣಿಯರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅದರಲ್ಲಿ 150 ಜನರು ತುರ್ತು ಆರೈಕೆ ಕೇಂದ್ರದಲ್ಲಿದ್ದಾರೆ.

ಪಾದರಾಯನಪುರದಲ್ಲಿ ಕೊರೊನಾ ಸೋಂಕಿತ ಗರ್ಭಿಣಿಗೆ ಮೇ 09ರಂದು ಯಶಸ್ವಿ ಹೆರಿಗೆ ಮಾಡಿಸಿದ್ದವು. ಅಲ್ಲಿಂದ ಹಿಂತಿರುಗಿ ನೋಡಿದ್ದೇ ಇಲ್ಲ, ನಮ್ಮ ಕಾರ್ಯ ಮುಂದುವರೆಯುತ್ತಲೇ ಇದೆ. ಈ ಹಿಂದೆ ಗರ್ಭಿಣಿಯರ ವಾರ್ಡ್ ಅಂದರೆ ಅವರ ಎಲ್ಲಾ ಸಂಬಂಧಿಗಳು ಸೇರಿ ತುಂಬಿ ತುಳುಕುತ್ತಿತ್ತು. ಎಲ್ಲರ ಮುಖದಲ್ಲಿ ತಮ್ಮ ಮನಗೆ ಹೊಸ ಪ್ರತಿನಿಧಿ ಬಂದ ಖುಷಿ ಕಾಣುತ್ತಿತ್ತು. ಆದರೆ ಈಗ ಅದಕ್ಕೆ ಸಂಪೂರ್ಣ ವಿರುದ್ಧವಾಗಿದೆ. ಸೋಂಕಿನ ಭಯಕ್ಕೆ ರೋಗಿಯೊಂದಿಗೆ ಹೆಚ್ಚು ಮಾತನಾಡಲು ಸಹ ಆಗುತ್ತಿಲ್ಲ. ನೆಮ್ಮದಿಯೆಂದರೆ ಗರ್ಭಿಣಿಯರಿಗೆ ಹೆರಿಗೆ ಮಾಡಿಸಿದ ಯಾವೊಬ್ಬ ವೈದ್ಯರು ಸಹ ಸೋಂಕಿಗೆ ತುತ್ತಾಗಿಲ್ಲ ಎಂದು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ಸಹಾಯಕ ಪ್ರಾಧ್ಯಾಪಕಿ ಡಾ.ಅನಿತಾ ಜಿ.ಎಸ್ ತಿಳಿಸಿದ್ದಾರೆ.

ಇದುವರೆಗೂ ಜನಿಸಿರುವ 100 ಮಕ್ಕಳಲ್ಲಿ 76 ಪ್ರಕರಣಗಳಲ್ಲಿ ಸಿಸೇರಿಯನ್ ಅಗತ್ಯವಾಗಿದೆ. ನಾಲ್ಕು ಜೊತೆಗೆ ಅವಳಿ ಮಕ್ಕಳು ಸಹ ಜನಿಸಿವೆ. ಎಲ್ಲಾ ಮಕ್ಕಳು ಸಹ ಆರೋಗ್ಯವಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ.

ಸಾಂಕ್ರಾಮಿಕ ಕಾಲದಲ್ಲಿ ತಮ್ಮ ಕರ್ತವ್ಯನಿಷ್ಠೆ ಮೆರೆಯುತ್ತಿರುವ ಈ ವೈದ್ಯರಿಗೆ ಮತ್ತು ಸ್ಟಾಪ್‌ ನರ್ಸ್‌ಗಳಿಗೆ ಜನರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ತಾವು ಕೊರೊನಾ ಸೋಂಕಿಗೆ ಒಳಗಾಗಿದ್ದರೂ ತಮ್ಮ ಕಂದಮ್ಮನನ್ನು ಯಶಸ್ವಿಯಾಗಿ ರಕ್ಷಿಸಿದ ಆರೋಗ್ಯ ಸಿಬ್ಬಂದಿಗಳ ಕುರಿತು ಬಾಣಂತಿಯರು ಅಕ್ಕರೆಯ ಭಾವ ವ್ಯಕ್ತಪಡಿಸಿದ್ದಾರೆ.

ವೈದ್ಯಕೀಯ ಸಚಿವ ಡಾ.ಕೆ ಸುಧಾಕರ್ ಟ್ವೀಟ್ ಮಾಡಿ “ಕೋವಿಡ್ ಸೋಂಕಿತರ ಚಿಕಿತ್ಸೆಯಲ್ಲಿ ತೊಡಗಿರುವ ವಿಕ್ಟೊರಿಯಾ ಆಸ್ಪತ್ರೆ ಈ ಸಂದರ್ಭದಲ್ಲಿ 100ನೇ ಕೋವಿಡ್ ಸೋಂಕಿತ ಗರ್ಭಿಣಿ ಮಹಿಳೆಗೆ ಯಶಸ್ವಿಯಾಗಿ ಹೆರಿಗೆ ಪೂರೈಸುವ ಮೂಲಕ ಇನ್ನೊಂದು ವಿಶೇಷ ಮೈಲಿಗಲ್ಲು ಸಾಧಿಸಿದೆ. ಇದಕ್ಕೆ ಶ್ರಮಿಸಿದ ವಿಕ್ಟೊರಿಯಾ ಮತ್ತು ವಾಣಿ ವಿಲಾಸ ಆಸ್ಪತ್ರೆಯ ಎಲ್ಲಾ ವೈದ್ಯರು ಮತ್ತು ಸಿಬ್ಬಂದಿಗೆ ನನ್ನ ಅಭಿನಂದನೆಗಳು” ಎಂದಿದ್ದಾರೆ.


ಇದನ್ನೂ ಓದಿ: ಮರಣ ಹೊಂದಿದ ವ್ಯಕ್ತಿಗಳಿಂದ ಕೊರೊನಾ ಸೋಂಕು ಹರಡುವುದಿಲ್ಲ: ಅಂತ್ಯಸಂಸ್ಕಾರಕ್ಕೆ ಅವಕಾಶಮಾಡಿಕೊಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...