Homeಮುಖಪುಟಪೊಲೀಸ್ ಕೊಂದ ಆರೋಪಿಗೆ ವೇದಿಕೆಯಲ್ಲಿ ಪ್ರಮಾಣ ಪತ್ರ ನೀಡಿದ ಬಿಜೆಪಿ ಮುಖಂಡ: ವ್ಯಾಪಕ ಟೀಕೆ

ಪೊಲೀಸ್ ಕೊಂದ ಆರೋಪಿಗೆ ವೇದಿಕೆಯಲ್ಲಿ ಪ್ರಮಾಣ ಪತ್ರ ನೀಡಿದ ಬಿಜೆಪಿ ಮುಖಂಡ: ವ್ಯಾಪಕ ಟೀಕೆ

2018 ರಲ್ಲಿ ಬುಲಂದ್‌ಶಹರ್ ಜಿಲ್ಲೆಯಲ್ಲಿ ನಡೆದ ಗುಂಪುಥಳಿತ ಹಿಂಸಾಚಾರದಲ್ಲಿ ಪೊಲೀಸ್ ಅಧಿಕಾರಿ ಸುಬೋಧ್ ಕುಮಾರ್ ಸಿಂಗ್ ಹತ್ಯೆಯಾಗಿದ್ದರು. ಈ ಪ್ರಕರಣದಲ್ಲಿ ಆಗಿನ ಬಿಜೆಪಿ ಯುವ ಘಟಕದ ಅಧ್ಯಕ್ಷನಾಗಿದ್ದ ಶಿಖರ್ ಅಗರ್‌ವಾಲ್ ಪ್ರಮುಖ ಆರೋಪಿಯಾಗಿದ್ದಾರೆ.

- Advertisement -
- Advertisement -

2018 ರಲ್ಲಿ ಇನ್ಸ್‌ಪೆಕ್ಟರ್ ಸುಬೋಧ್ ಕುಮಾರ್ ಸಿಂಗ್ ಹತ್ಯೆಯಲ್ಲಿ ಸಂಚು ರೂಪಿಸದ ಆರೋಪಿಯಾಗಿರುವ ಶಿಖರ್ ಅಗರ್‌ವಾಲ್ ಅವರಿಗೆ ಬುಲಂದ್‌ಶಹರ್ ಬಿಜೆಪಿ ಮುಖಂಡ ಅನಿಲ್ ಸಿಸೋಡಿಯಾ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಮಾಣಪತ್ರ ವಿತರಿಸಿ ವಿವಾದ ಸೃಷ್ಠಿಸಿದ್ದಾರೆ.

2018 ರಲ್ಲಿ ಬುಲಂದ್‌ಶಹರ್ ಜಿಲ್ಲೆಯಲ್ಲಿ ನಡೆದ ಗುಂಪುಥಳಿತ ಹಿಂಸಾಚಾರದಲ್ಲಿ ಪೊಲೀಸ್ ಅಧಿಕಾರಿ ಸುಬೋಧ್ ಕುಮಾರ್ ಸಿಂಗ್ ಹತ್ಯೆಯಾಗಿದ್ದರು. ಈ ಪ್ರಕರಣದಲ್ಲಿ ಆಗಿನ ಬಿಜೆಪಿ ಯುವ ಘಟಕದ ಅಧ್ಯಕ್ಷನಾಗಿದ್ದ ಶಿಖರ್ ಅಗರ್‌ವಾಲ್ ಪ್ರಮುಖ ಆರೋಪಿಯಾಗಿದ್ದಾರೆ.

ಜುಲೈ 14 ರಂದು “ಪ್ರಧಾನ್ ಮಂತ್ರಿ ಜನ್ ಕಲ್ಯಾಣ್‌ಕಾರಿ ಯೋಗಿ ಜಾಗೃತ ಅಭಿಯಾನ” ಸಂಘಟನೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬುಲಂದ್‌ಶಹರ್‌ನ ಬಿಜೆಪಿ ಅಧ್ಯಕ್ಷ ಅನಿಲ್ ಸಿಸೋಡಿಯಾ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈ ಸಂಘಟನೆಯು ದೇಶಾದ್ಯಂತ ಕೇಂದ್ರ ಸರ್ಕಾರದ ಯೋಜನೆಗಳನ್ನು ಪ್ರಚಾರ ಮಾಡುವ ಉದ್ದೇಶ ಹೊಂದಿದ್ದು ಬಿಜೆಪಿಯ ಉನ್ನತ ನಾಯಕರನ್ನು ಅದರ ಮಾರ್ಗದರ್ಶಕರಾಗಿ ಹೊಂದಿದೆ ಎಂದು ತಿಳಿಸಿದೆ. ಈ ಕಾರ್ಯಕ್ರಮದಲ್ಲಿ ಪೊಲೀಸ್ ಕೊಂದ ಆರೋಪಿ ಶಿಖರ್ ಅಗರ್‌ವಾಲ್‌ಗೆ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಎಂಬ ಪ್ರಮಾಣ ಪತ್ರವನ್ನು ಬಿಜೆಪಿ ಮುಖಂಡ ಹಸ್ತಾಂತರಿಸಿದ್ದಾರೆ. ಈ ಚಿತ್ರವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕೊಲೆಗಾರರನ್ನು ಬಿಜೆಪಿ ಅಭಿನಂದಿಸುತ್ತದೆ ಎಂದು ಟೀಕಿಸಲಾಗಿದೆ.

2018 ರಲ್ಲಿ, ಅಕ್ರಮ ಗೋಹತ್ಯೆಯ ವದಂತಿಗಳ ಮೇಲೆ ಹಿಂಸಾಚಾರ ಭುಗಿಲೆದ್ದ ನಂತರ ಈ ಪ್ರದೇಶದಲ್ಲಿ ಶಾಂತತೆಯನ್ನು ಪುನಃಸ್ಥಾಪಿಸಲು ಹೋದಾಗ ಸುಮಾರು 400 ಜನರ ಗುಂಪಿನಿಂದ ಇನ್ಸ್ಪೆಕ್ಟರ್ ಸುಬೋಧ್ ಕುಮಾರ್ ಸಿಂಗ್ ಅವರ ಮೇಲೆ ಹಲ್ಲೆ ನಡೆಸಲಾಯಿತು. ಕೊಡಲಿಯಿಂದ ಶಸ್ತ್ರಸಜ್ಜಿತ ವ್ಯಕ್ತಿಯೊಬ್ಬ ಅವರ ಎರಡು ಬೆರಳುಗಳನ್ನು ಕತ್ತರಿಸಿ ಪೊಲೀಸರ ತಲೆಗೆ ಹೊಡೆದು ಸಾಯಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಶಿಖರ್ ಅಗರ್‌ವಾಲ್ ಕಳೆದ ವರ್ಷದ ಆಗಸ್ಟ್‌ನಲ್ಲಿ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಆತ ಜೈಲಿನಿಂದ ಹೊರಬಂದ ಸಂಧರ್ಭದಲ್ಲಿಯೂ ಸಹ ಯುವ ಬಿಜೆಪಿ ಘಟಕ ಸೇರಿದಂತೆ ಹಲವಾರು ಹಿಂದುತ್ವಪರ ಕಾರ್ಯಕರ್ತರು ಹೂವಿನ ಹಾರ ಹಾಕಿ, ಜೈ ಶ್ರೀರಾಮ್ ಘೋಷಣೆ ಕೂಗಿ ಸಂಭ್ರಮಿಸಿದ್ದರು.


ಇದನ್ನೂ ಓದಿ: ಪೊಲೀಸ್ ಅಧಿಕಾರಿ ಕೊಂದ ಆರೋಪಿಗೆ ಹೂಮಾಲೆ ಹಾಕಿ ಭವ್ಯ ಸ್ವಾಗತ, ಜೈ ಶ್ರೀರಾಂ ಘೋಷಣೆಗಳ ಅಬ್ಬರ


ಈಗ ಎದ್ದಿರುವ ವಿವಾದದ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಸಿಸೋಡಿಯಾ “ಆ ಸಂಘಟನೆಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ನನ್ನನ್ನು ಮುಖ್ಯ ಅತಿಥಿಯಾಗಿ ಮಾತ್ರ ಆಹ್ವಾನಿಸಲಾಗಿತ್ತು. ಇನ್ನು ಶಿಖರ್ ಅಗರ್ವಾಲ್‌ಗೂ ಬಿಜೆಪಿಗೂ ಕೂಡ ಸಂಬಂಧವಿಲ್ಲ. ನಾವು ಶುದ್ಧತೆಯ ರಾಜಕೀಯವನ್ನು ಮಾತ್ರ ಉತ್ತೇಜಿಸುತ್ತೇವೆ. ನಮ್ಮ ಮಾನದಂಡಗಳನ್ನು ಒಪ್ಪಿದವರೊಂದಿಗೆ ಮಾತ್ರ ಸಹಭಾಗಿತ್ವ ಮಾಡಿಕೊಳ್ಳುತ್ತೇವೆ” ಎಂದಿದ್ದಾರೆ.

ಶಿಖರ್ ಅಗರ್ವಾಲ್ ಮಾತನಾಡಿ “ಆರೋಪ ಮಾಡುವುದಕ್ಕೂ, ಪ್ರಕರಣವನ್ನು ಸಾಬೀತುಪಡಿಸುವುದಕ್ಕೂ ವ್ಯತ್ಯಾಸವಿದೆ. ನನ್ನ ಜೀವನದಲ್ಲಿ ನಾನು ಯಾವತ್ತೂ ತಪ್ಪು ಮಾಡಿಲ್ಲ” ಎಂದು ತಿಳಿಸಿದ್ದಾನೆ.


ವಾರಣಾಸಿ: ನೇಪಾಳಿ ಯುವಕನ ತಲೆ ಬೋಳಿಸಿ ಜೈಶ್ರೀರಾಮ್ ಹೇಳುವಂತೆ ಒತ್ತಾಯಿಸಿದ ಹಿಂದುತ್ವವಾದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...