Homeಮುಖಪುಟಪೊಲೀಸ್ ಕೊಂದ ಆರೋಪಿಗೆ ವೇದಿಕೆಯಲ್ಲಿ ಪ್ರಮಾಣ ಪತ್ರ ನೀಡಿದ ಬಿಜೆಪಿ ಮುಖಂಡ: ವ್ಯಾಪಕ ಟೀಕೆ

ಪೊಲೀಸ್ ಕೊಂದ ಆರೋಪಿಗೆ ವೇದಿಕೆಯಲ್ಲಿ ಪ್ರಮಾಣ ಪತ್ರ ನೀಡಿದ ಬಿಜೆಪಿ ಮುಖಂಡ: ವ್ಯಾಪಕ ಟೀಕೆ

2018 ರಲ್ಲಿ ಬುಲಂದ್‌ಶಹರ್ ಜಿಲ್ಲೆಯಲ್ಲಿ ನಡೆದ ಗುಂಪುಥಳಿತ ಹಿಂಸಾಚಾರದಲ್ಲಿ ಪೊಲೀಸ್ ಅಧಿಕಾರಿ ಸುಬೋಧ್ ಕುಮಾರ್ ಸಿಂಗ್ ಹತ್ಯೆಯಾಗಿದ್ದರು. ಈ ಪ್ರಕರಣದಲ್ಲಿ ಆಗಿನ ಬಿಜೆಪಿ ಯುವ ಘಟಕದ ಅಧ್ಯಕ್ಷನಾಗಿದ್ದ ಶಿಖರ್ ಅಗರ್‌ವಾಲ್ ಪ್ರಮುಖ ಆರೋಪಿಯಾಗಿದ್ದಾರೆ.

- Advertisement -
- Advertisement -

2018 ರಲ್ಲಿ ಇನ್ಸ್‌ಪೆಕ್ಟರ್ ಸುಬೋಧ್ ಕುಮಾರ್ ಸಿಂಗ್ ಹತ್ಯೆಯಲ್ಲಿ ಸಂಚು ರೂಪಿಸದ ಆರೋಪಿಯಾಗಿರುವ ಶಿಖರ್ ಅಗರ್‌ವಾಲ್ ಅವರಿಗೆ ಬುಲಂದ್‌ಶಹರ್ ಬಿಜೆಪಿ ಮುಖಂಡ ಅನಿಲ್ ಸಿಸೋಡಿಯಾ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಮಾಣಪತ್ರ ವಿತರಿಸಿ ವಿವಾದ ಸೃಷ್ಠಿಸಿದ್ದಾರೆ.

2018 ರಲ್ಲಿ ಬುಲಂದ್‌ಶಹರ್ ಜಿಲ್ಲೆಯಲ್ಲಿ ನಡೆದ ಗುಂಪುಥಳಿತ ಹಿಂಸಾಚಾರದಲ್ಲಿ ಪೊಲೀಸ್ ಅಧಿಕಾರಿ ಸುಬೋಧ್ ಕುಮಾರ್ ಸಿಂಗ್ ಹತ್ಯೆಯಾಗಿದ್ದರು. ಈ ಪ್ರಕರಣದಲ್ಲಿ ಆಗಿನ ಬಿಜೆಪಿ ಯುವ ಘಟಕದ ಅಧ್ಯಕ್ಷನಾಗಿದ್ದ ಶಿಖರ್ ಅಗರ್‌ವಾಲ್ ಪ್ರಮುಖ ಆರೋಪಿಯಾಗಿದ್ದಾರೆ.

ಜುಲೈ 14 ರಂದು “ಪ್ರಧಾನ್ ಮಂತ್ರಿ ಜನ್ ಕಲ್ಯಾಣ್‌ಕಾರಿ ಯೋಗಿ ಜಾಗೃತ ಅಭಿಯಾನ” ಸಂಘಟನೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬುಲಂದ್‌ಶಹರ್‌ನ ಬಿಜೆಪಿ ಅಧ್ಯಕ್ಷ ಅನಿಲ್ ಸಿಸೋಡಿಯಾ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈ ಸಂಘಟನೆಯು ದೇಶಾದ್ಯಂತ ಕೇಂದ್ರ ಸರ್ಕಾರದ ಯೋಜನೆಗಳನ್ನು ಪ್ರಚಾರ ಮಾಡುವ ಉದ್ದೇಶ ಹೊಂದಿದ್ದು ಬಿಜೆಪಿಯ ಉನ್ನತ ನಾಯಕರನ್ನು ಅದರ ಮಾರ್ಗದರ್ಶಕರಾಗಿ ಹೊಂದಿದೆ ಎಂದು ತಿಳಿಸಿದೆ. ಈ ಕಾರ್ಯಕ್ರಮದಲ್ಲಿ ಪೊಲೀಸ್ ಕೊಂದ ಆರೋಪಿ ಶಿಖರ್ ಅಗರ್‌ವಾಲ್‌ಗೆ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಎಂಬ ಪ್ರಮಾಣ ಪತ್ರವನ್ನು ಬಿಜೆಪಿ ಮುಖಂಡ ಹಸ್ತಾಂತರಿಸಿದ್ದಾರೆ. ಈ ಚಿತ್ರವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕೊಲೆಗಾರರನ್ನು ಬಿಜೆಪಿ ಅಭಿನಂದಿಸುತ್ತದೆ ಎಂದು ಟೀಕಿಸಲಾಗಿದೆ.

2018 ರಲ್ಲಿ, ಅಕ್ರಮ ಗೋಹತ್ಯೆಯ ವದಂತಿಗಳ ಮೇಲೆ ಹಿಂಸಾಚಾರ ಭುಗಿಲೆದ್ದ ನಂತರ ಈ ಪ್ರದೇಶದಲ್ಲಿ ಶಾಂತತೆಯನ್ನು ಪುನಃಸ್ಥಾಪಿಸಲು ಹೋದಾಗ ಸುಮಾರು 400 ಜನರ ಗುಂಪಿನಿಂದ ಇನ್ಸ್ಪೆಕ್ಟರ್ ಸುಬೋಧ್ ಕುಮಾರ್ ಸಿಂಗ್ ಅವರ ಮೇಲೆ ಹಲ್ಲೆ ನಡೆಸಲಾಯಿತು. ಕೊಡಲಿಯಿಂದ ಶಸ್ತ್ರಸಜ್ಜಿತ ವ್ಯಕ್ತಿಯೊಬ್ಬ ಅವರ ಎರಡು ಬೆರಳುಗಳನ್ನು ಕತ್ತರಿಸಿ ಪೊಲೀಸರ ತಲೆಗೆ ಹೊಡೆದು ಸಾಯಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಶಿಖರ್ ಅಗರ್‌ವಾಲ್ ಕಳೆದ ವರ್ಷದ ಆಗಸ್ಟ್‌ನಲ್ಲಿ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಆತ ಜೈಲಿನಿಂದ ಹೊರಬಂದ ಸಂಧರ್ಭದಲ್ಲಿಯೂ ಸಹ ಯುವ ಬಿಜೆಪಿ ಘಟಕ ಸೇರಿದಂತೆ ಹಲವಾರು ಹಿಂದುತ್ವಪರ ಕಾರ್ಯಕರ್ತರು ಹೂವಿನ ಹಾರ ಹಾಕಿ, ಜೈ ಶ್ರೀರಾಮ್ ಘೋಷಣೆ ಕೂಗಿ ಸಂಭ್ರಮಿಸಿದ್ದರು.


ಇದನ್ನೂ ಓದಿ: ಪೊಲೀಸ್ ಅಧಿಕಾರಿ ಕೊಂದ ಆರೋಪಿಗೆ ಹೂಮಾಲೆ ಹಾಕಿ ಭವ್ಯ ಸ್ವಾಗತ, ಜೈ ಶ್ರೀರಾಂ ಘೋಷಣೆಗಳ ಅಬ್ಬರ


ಈಗ ಎದ್ದಿರುವ ವಿವಾದದ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಸಿಸೋಡಿಯಾ “ಆ ಸಂಘಟನೆಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ನನ್ನನ್ನು ಮುಖ್ಯ ಅತಿಥಿಯಾಗಿ ಮಾತ್ರ ಆಹ್ವಾನಿಸಲಾಗಿತ್ತು. ಇನ್ನು ಶಿಖರ್ ಅಗರ್ವಾಲ್‌ಗೂ ಬಿಜೆಪಿಗೂ ಕೂಡ ಸಂಬಂಧವಿಲ್ಲ. ನಾವು ಶುದ್ಧತೆಯ ರಾಜಕೀಯವನ್ನು ಮಾತ್ರ ಉತ್ತೇಜಿಸುತ್ತೇವೆ. ನಮ್ಮ ಮಾನದಂಡಗಳನ್ನು ಒಪ್ಪಿದವರೊಂದಿಗೆ ಮಾತ್ರ ಸಹಭಾಗಿತ್ವ ಮಾಡಿಕೊಳ್ಳುತ್ತೇವೆ” ಎಂದಿದ್ದಾರೆ.

ಶಿಖರ್ ಅಗರ್ವಾಲ್ ಮಾತನಾಡಿ “ಆರೋಪ ಮಾಡುವುದಕ್ಕೂ, ಪ್ರಕರಣವನ್ನು ಸಾಬೀತುಪಡಿಸುವುದಕ್ಕೂ ವ್ಯತ್ಯಾಸವಿದೆ. ನನ್ನ ಜೀವನದಲ್ಲಿ ನಾನು ಯಾವತ್ತೂ ತಪ್ಪು ಮಾಡಿಲ್ಲ” ಎಂದು ತಿಳಿಸಿದ್ದಾನೆ.


ವಾರಣಾಸಿ: ನೇಪಾಳಿ ಯುವಕನ ತಲೆ ಬೋಳಿಸಿ ಜೈಶ್ರೀರಾಮ್ ಹೇಳುವಂತೆ ಒತ್ತಾಯಿಸಿದ ಹಿಂದುತ್ವವಾದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...