Homeಅಂಕಣಗಳುಎಲೆಮರೆಯಿಂದಅಮಲ್ ದೆಪ್ಪಡೇ, ಓ ಅಕಲ್ ತಪ್ಪಡೇ..: ಅಮಲು ಸೇವಿಸದಿರಿ... ಓ ಮತಿ ತಪ್ಪದಿರಿ

ಅಮಲ್ ದೆಪ್ಪಡೇ, ಓ ಅಕಲ್ ತಪ್ಪಡೇ..: ಅಮಲು ಸೇವಿಸದಿರಿ… ಓ ಮತಿ ತಪ್ಪದಿರಿ

- Advertisement -
- Advertisement -

ತುಳು ಭಾಷೆ ಅರಿಯದವರು ಈ ಶೀರ್ಷಿಕೆ ನೋಡಿ ಗಲಿಬಿಲಿಗೊಳ್ಳಬಹುದು.. ಇದು ತುಳು, ಕನ್ನಡ ಮತ್ತು ಹವ್ಯಕ ಭಾಷೆಯ ಕವಿ ನನ್ನೂರಿನ ನರ್ಕಳ ಮಾರಪ್ಪ ಶೆಟ್ಟರ ಪ್ರಸಿದ್ಧ ಕವನವೊಂದರ ಸಾಲು. ಇದು ತುಳುನಾಡಿನಲ್ಲಿ ಮದ್ಯಪಾನ ವಿರೋಧೀ ಜನಜಾಗೃತಿ ಸಭೆಗಳಲ್ಲಿ ಲಾವಣಿಯಂತೆ ಹಾಡಲ್ಪಡುತ್ತಿದ್ದ ಸಾಲುಗಳು..
ಇದರರ್ಥ “ಅಮಲು ಸೇವಿಸದಿರಿ… ಓ ಮತಿ ತಪ್ಪದಿರಿ..”

ಕರ್ನಾಟಕ ರಾಜ್ಯ ಸಾರ್ವಜನಿಕ ಗ್ರಂಥಾಲಯ ಇಲಾಖೆಯು ಹೊರತಂದ `ಶತಮಾನದ ಬೆಳಕು’ ಎಂಬ ಗ್ರಂಥದಲ್ಲಿ ಇಸ್ಮತ್ ಪಜೀರ್ ಬರೆದ `ಕನ್ನಡದ ಸಹೋದರ ಭಾಷೆಗಳಲ್ಲಿ ಸಾಹಿತ್ಯದ ಬೆಳವಣಿಗೆ’ ಎಂಬ ದೀರ್ಘ ಪ್ರಬಂಧವೊಂದನ್ನು ಓದುತ್ತಿದ್ದಂತೆ ನರ್ಕಳ ಮಾರಪ್ಪ ಶೆಟ್ಟರ ಹೆಸರು ಕಣ್ಣಿಗೆ ಬಿತ್ತು. ಅಲ್ಲಿಂದ ಈ ಶೆಟ್ಟರ ಜಾಡು ಹಿಡಿದು ಹೊರಟೆ. ಕಾರಣ ನರ್ಕಳವೆಂಬುವುದು ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ನನ್ನೂರು ಕುಳಾಲು ಎಂಬಲ್ಲಿರುವ ಒಂದು ಪುಟ್ಟ ಹಳ್ಳಿ. ಶೆಟ್ಟರ ಬಗ್ಗೆ ನನ್ನೂರಿನಲ್ಲಿ ವಿಚಾರಿಸಿದಾಗ ಗೊತ್ತಿಲ್ಲ ಎಂದವರೇ ಎಲ್ಲಾ. ಸೋಜಿಗವೇನೆಂದರೆ, ಇಸ್ಮತ್ ನರ್ಕಳ ಮಾರಪ್ಪ ಶೆಟ್ಟರ ಸಾಹಿತ್ಯದ ಕುರಿತಂತೆ “ಶತಮಾನದ ಬೆಳಕು” ಎಂಬ ಗ್ರಂಥದಲ್ಲಿ ಚರ್ಚೆ ನಡೆಸಿದ್ದಾರಾದರೂ ಅವರಿಗೂ ಈ ನರ್ಕಳ ನನ್ನೂರಿನ ಪಕ್ಕದ ಹಳ್ಳಿ ಎಂದು ಗೊತ್ತೇ ಇರಲಿಲ್ಲ.

ನಾನು ಶೆಟ್ಟರ ಕುರಿತ ಹುಡುಕಾಟ ಬಿಡಲಿಲ್ಲ. ವರ್ಷಗಳ ನಂತರ ಹೊಸಕಟ್ಟಡಕ್ಕೆ ಸ್ಥಳಾಂತರಗೊಂಡ ಸಾಲೆತ್ತೂರಿನ ಸಾರ್ವಜನಿಕ ಗ್ರಂಥಾಲಯಕ್ಕೆ ನರ್ಕಳ ಮಾರಪ್ಪ ಶೆಟ್ಟರ ಹೆಸರಿಟ್ಟಿರುವುದನ್ನು ನೋಡಿದ್ದೇ ತಡ ಲೈಬ್ರರಿಯ ಮೆಟ್ಟಿಲು ಹತ್ತಿದೆ. ಗ್ರಂಥಪಾಲಕಿಯ ಬಳಿ ಶೆಟ್ಟರ ಬಗ್ಗೆ ವಿಚಾರಿಸಿದಾಗ ಆಕೆ “ನರ್ಕಳ ಮಾರಪ್ಪ ಶೆಟ್ಟರ ಬದುಕು ಮತ್ತು ಬರಹ” ಎಂಬ ಗ್ರಂಥವೊಂದನ್ನು ಉಡುಗೊರೆಯಾಗಿ ನೀಡಿದರು. ಅಲ್ಲಲ್ಲಿ ಚದುರಿಹೋಗಿದ್ದ ಅವರ ಬದುಕು ಮತ್ತು ಬರಹವನ್ನು ಸಾದ್ಯಂತ ಸಂಗ್ರಹಿಸಿ ಗ್ರಂಥ ರೂಪಕ್ಕಿಳಿಸಿದ್ದು 1989ರ ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ, ಮಾರಪ್ಪ ಶೆಟ್ಟರ ಮಗನಾದ ನರ್ಕಳ ರಘುನಾಥ ಶೆಟ್ಟರು… ಅದೂ ಬಹಳ ತಡವಾಗಿ.

ಇಂತಹ ಘನ ವ್ಯಕ್ತಿತ್ವವನ್ನು ಹೊಸ ಪೀಳಿಗೆಗೆ ಪರಿಚಯಿಸದ ನಮ್ಮೂರಿನ ಜನರ ಬಗ್ಗೆ, ನಾ ಕಲಿತ ಕುಳಾಲು ಶಾಲೆಯಲ್ಲಿ ಅಧ್ಯಾಪಕನಾಗಿ ಸೇವೆ ಸಲ್ಲಿಸಿದ್ದರೂ ಅವರ ಬಗ್ಗೆ ಪರಿಚಯಿಸಿ ಕೊಡದ ನನ್ನ ಶಿಕ್ಷಕರ ಬಗ್ಗೆ, ಸ್ವಾತಂತ್ರ‍್ಯ ಹೋರಾಟಗಾರನಾಗಿದ್ದರೂ ಕನಿಷ್ಟ ಸ್ವಾತಂತ್ರ‍್ಯ ದಿನದಂದಾದರೂ ಸ್ಮರಿಸದಿರುವುದರ ಬಗ್ಗೆ ಖೇದವಿದೆ.

1894ರಲ್ಲಿ ನರ್ಕಳದಲ್ಲಿ ಜನಿಸಿದ ಮಾರಪ್ಪ ಶೆಟ್ರು ನರ್ಕಳ ಮನೆತನದ ಅವಿಭಕ್ತ ಕುಟುಂಬದ ಮೊದಲ ವಿದ್ಯಾವಂತ. ನಮ್ಮೂರಿಗೂ ಅವರೇ ಮೊದಲಿಗರಿರಬೇಕು. ಎಳವೆಯಲ್ಲೇ ಅಧ್ಯಾಪಕನಾಗಬೇಕೆಂಬ ಕನಸ ಹೊತ್ತಿದ್ದ ಶೆಟ್ಟರು ತನ್ನ ಹದಿನಾಲ್ಕನೇ ವಯಸ್ಸಿಗೇ ತಾನು ಕಲಿತ ಸಾಲೆತ್ತೂರು ಶಾಲೆಯಲ್ಲೇ ಅಧ್ಯಾಪಕರಾದರು..!! ಅವರ ಅಧ್ಯಾಪನದ ಕನಸನ್ನು ನನಸಾಗಿಸಿದವರು ತುಳುನಾಡಿನ ಮಹಾಕವಿ ಪಂಜೆ ಮಂಗೇಶರಾಯರು. ಆಗಿನ ಬ್ರಿಟಿಷ್ ಸರಕಾರದ ನಿಯಮದಂತೆ ಶಾಲಾ ಇನ್ಸ್ಪೆಕ್ಟರ್‌ಗಳೇ ಜಾಣ ವಿದ್ಯಾರ್ಥಿಗಳನ್ನು ಗುರುತಿಸಿ ಶಿಕ್ಷಕರಾಗಿ ನೇಮಿಸಬೇಕಿತ್ತು. ಜೊತೆಗೆ ಶಿಕ್ಷಕ ತರಬೇತಿಗೆ ಶಿಫಾರಸು ಮಾಡಬೇಕಿತ್ತು.

ಶೆಟ್ಟರು ಸಾಲೆತ್ತೂರು ಶಾಲೆಯಲ್ಲಿ ೪ನೇ ತರಗತಿಯಲ್ಲಿ (ಫಾರಂ) ವ್ಯಾಸಂಗ ಮಾಡುತ್ತಿದ್ದಾಗ ಶಾಲಾ ಪರೀಕ್ಷಾಧಿಕಾರಿಯಾಗಿ ಬಂದ ಪಂಜೆಯವರು ಶೆಟ್ಟರನ್ನು ಮೂರು ರೂಪಾಯಿ ಮಾಸಿಕ ವೇತನದೊಂದಿಗೆ ಅದೇ ಶಾಲೆಗೆ ಅಧ್ಯಾಪಕರನ್ನಾಗಿ ನೇಮಿಸಿದರು. ಆರು ವರ್ಷಗಳ ನಂತರ ತರಬೇತಿ ಪಡೆದು ಅಧಿಕೃತ ಶಿಕ್ಷಕರಾದರು. ಕೊಡ್ಲಮೊಗರು, ಮೂಡಂಬೈಲು, ಅಡ್ಯನಡ್ಕ ಅಷ್ಟೇ ಅಲ್ಲದೇ ನಾ ಕಲಿತ ಕುಳಾಲು ಶಾಲೆಯಲ್ಲೂ ಅವರು ಶಿಕ್ಷಕರಾಗಿ ಸೇವೆ ಸಲ್ಲಿಸಿದರು. ಇನ್ನೂ ಕೆಲವೆಡೆ ಅಧ್ಯಾಪಕನಾಗಿ ಸೇವೆ ಸಲ್ಲಿಸಿದ್ದರೂ ಅದರ ದಾಖಲೆಗಳು ಲಭ್ಯವಾಗಿಲ್ಲ. ಅಧ್ಯಾಪನದ ಜೊತೆಜೊತೆಗೆ ಅಕ್ಷರ ಬಿತ್ತುವ ಕಾಯಕದಲ್ಲೂ ತೊಡಗಿಸಿಕೊಂಡರು. ಶಾಲೆಯೇ ಇಲ್ಲದ ಮೂಡಂಬೈಲಿನಲ್ಲಿ ಮಕ್ಕಳನ್ನೆಲ್ಲಾ ಕೂಡಿಸಿ ಸಣ್ಣ ಗುಡಿಸಲೊಂದರಲ್ಲಿ ಶಾಲೆಯನ್ನು ಪ್ರಾರಂಭಿಸಿದರು. ಮಂಗಳೂರಿನ ಬಿಜೈಯಲ್ಲಿ ಲೂರ್ಡ್ಸ್ ಪ್ರೌಢಶಾಲೆ ಸ್ಥಾಪನೆಗೆ ತನು, ಮನ, ಧನದೊಂದಿಗೆ ಶ್ರಮಿಸಿದರು. ವಯಸ್ಕರಿಗಾಗಿ ಅಡ್ಯನಡ್ಕದಲ್ಲಿ ರಾತ್ರಿ ಶಾಲೆ ಪ್ರಾರಂಭಿಸಿದರು. ಶೆಟ್ಟರ ಪಾಠ ಮಾಡುವ ಪ್ರಾಯೋಗಿಕ ಶೈಲಿ ವಿದ್ಯಾರ್ಥಿಗಳಲ್ಲಿ ಕಲಿಕೆಯ ಆಸಕ್ತಿ ಮೂಡಿಸುತ್ತಿತ್ತು.ನಾನೀಗ ನನ್ನ ಮಗಳಿಗೆ ಅಕ್ಷರ ಬರೆಯಲು ಸುಲಭವಾಗುವಂತೆ  slanting line, standing line, curves  ಹೀಗೆ ಏನೆಲ್ಲಾ ಕಲಿಸುತ್ತೇನೋ ಇದನ್ನೆಲ್ಲಾ ಶೆಟ್ಟರು ಸ್ವಾತಂತ್ರ‍್ಯ ಪೂರ್ವದಲ್ಲೇ ಕನ್ನಡ ಅಕ್ಷರ ಕಲಿಸಲು ಬಳಸುತ್ತಿದ್ದರು. ವಿದ್ಯಾರ್ಥಿಗಳನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಕೆಲವು ಕೈ ಕಸುಬು, ಗುಡಿ ಕೈಗಾರಿಕೆಗಳನ್ನು ಪ್ರಾಯೋಗಿಕವಾಗಿ ಮಾಡಿ ತೋರಿಸುತ್ತಿದ್ದರು.

ಶೆಟ್ಟರ ಕಲಿಕೆಯ ತುಡಿತ ಅದೆಷ್ಟು ಅದಮ್ಯವಾಗಿತ್ತೆಂದರೆ ಮಧ್ಯವಯಸ್ಸಿನಲ್ಲಿ ಮಗಳೊಂದಿಗೆ SSಐಅ ಪರೀಕ್ಷೆ ಬರೆದು ಅನುತ್ತೀರ್ಣರಾದರು. ಆ ಕಾಲದಲ್ಲೇ ತನ್ನ ಹತ್ತು ಮಂದಿ ಮಕ್ಕಳಲ್ಲಿ ಏಳು ಮಂದಿಯನ್ನು ಪದವೀಧರರನ್ನಾಗಿಸಿದರು. ತನ್ನ 14ರ ಹರೆಯದಿಂದ ೫೮ರ ವರೆಗೆ (1908-1952) ಮಾದರಿ ಶಿಕ್ಷಕರಾಗಿ ಕಾರ್ಯನಿರ್ವಹಿಸುವುದರ ಜೊತೆಜೊತೆಗೆ ಸ್ವಾತಂತ್ರ‍್ಯ ಆಂದೋಲನದಲ್ಲೂ ಭಾಗಿಯಾಗಿದ್ದರು.
ಗಾಂಧೀ ತತ್ವ ಪ್ರಣಾಳಿಕೆಯ ಪ್ರತಿಪಾದಕರಾಗಿ ದ.ಕ ಜಿಲ್ಲೆಯಾದ್ಯಂತ ಸಂಚರಿಸಿ ಹರಿಜನೋದ್ಧಾರ, ಖಾದಿಯ ಮಹತ್ವ, ಮದ್ಯಪಾನ ನಿಷೇಧದ ಕುರಿತಾಗಿ ಜನರಲ್ಲಿ ಜಾಗೃತಿ ಮೂಡಿಸಿದರು.

“ಅಮಲ್ ದೆಪ್ಪಡೇ…!ಓ..!
ಅಕಲ್ ತಪ್ಪಡೇ…!!”
ಪರಡೆ ಕಲಿ ಗಂಗಸರೊ.. (ಕುಡಿಯಬೇಡಿರೋ…ಶೇಂದಿ…ಶರಾಬು) ಇತ್ಯಾದಿ ಸ್ವರಚಿತ ಕವನಗಳ ಮೂಲಕ ದ.ಕ.ಜಿಲ್ಲೆಯ ಜನರನ್ನು ತಲುಪಿದರು. ತನ್ನ ಕೊನೆಯುಸಿರಿರುವವರೆಗೂ ಗಾಂಧಿವಾದಿಯಾಗಿಯೇ ಬದುಕಿದರು. ಅವರು ಕನ್ನಡವಲ್ಲದೇ ತುಳು, ಹವ್ಯಕ ಭಾಷೆಗಳಲ್ಲೂ ಸಾಹಿತ್ಯ ಕೃಷಿ ಮಾಡಿದ್ದರು. ತುಳುನಾಡು, ನುಡಿ, ಸಂಸ್ಕೃತಿ, ಸಾಹಿತ್ಯಕ್ಕೆ ಅವರ ಕೊಡುಗೆ ಅಪಾರ. ಬಾಲಸಾಹಿತ್ಯದಲ್ಲೂ ಪಳಗಿದ ಶೆಟ್ಟರ “ಸುಂದರಿಯ ಚಂದ” ಎಂಬ ಮಕ್ಕಳ ಕತೆಯು ಬಡಗಿಯೊಬ್ಬನು ಕೆತ್ತಿದ ಸುಂದರಿ ಎಂಬ ಬೊಂಬೆಯ ಚಿತ್ರಣವಾಗಿದೆ. ಅಡ್ಯನಡ್ಕ ಶಾಲೆಯ ಅಧ್ಯಾಪಕರಾಗಿದ್ದಾಗ “ಶಿಶು ಜೀವಾಳ” ಎಂಬ ವಿದ್ಯಾರ್ಥಿ ಹಸ್ತಪತ್ರಿಕೆಯನ್ನು ಪ್ರಾರಂಭಿಸಿದರು. ೧೯೨೯ರಲ್ಲಿ ತುಳುವಿನಲ್ಲಿ ರಚಿಸಿದ ‘ಪೊರ್ಲಕಂಟ್’ ಮತ್ತು ‘ಅಮಲ್ ದೆಪ್ಪಡೆ’ ಎಂಬ ಕವನ ಸಂಕಲನಗಳಲ್ಲಿನ ತುಳು ಪದಗಳ ವೈಶಿಷ್ಟ್ಯ ಮತ್ತು ಭಾರ ನೋಡಿದರೆ ಈ ಕಾಲದ ಸಾಹಿತಿಗಳಿಗೆ ಅಚ್ಚರಿಯಾಗಬಹುದು. ತುಳು ಶಬ್ದಗಳ ಹುಟ್ಟು ಮತ್ತು ವಿಕಾಸದ ಬಗ್ಗೆಯೂ ಸಾಕಷ್ಟು ಬರೆದಿರುವ ಇವರು ತುಳು ಭಾಷಾತಜ್ಞನೂ ಹೌದು. ತುಳು ಸ್ಥಳನಾಮಗಳ ಬಗ್ಗೆಯೂ ಸಂಶೋಧನೆಗೈದಿದ್ದಾರೆ.

ಕನ್ನಡದಲ್ಲಿ ‘ಮಂಜಟ್ಟಿ ಕೋಣ’, ಜಾತಿ ಮತ್ತು ವರ್ಣ ಬೇಧ ನೀತಿಯನ್ನು ವಿರೋಧಿಸುವ
`ಕರಿ-ಬಿಳಿ ಕಾಳಗ’, ‘ಕಾಸರಗೋಡು ಕನ್ನಡಿಗರ ಗೋಳಿನ ಕತೆ’ ಇತ್ಯಾದಿ ಕವನಗಳ ಜೊತೆಗೆ ಭಾಮಿನಿ ಹಾಗೂ ವಾರ್ಧಕ ಷಟ್ಪದಿಯಲ್ಲೂ ಬರೆದಿದ್ದಾರೆ. ಚೀನಾ ಆಕ್ರಮಣದ ಸಂದರ್ಭದಲ್ಲಿ ವಾರ್ಧಕ ಷಟ್ಪದಿಯಲ್ಲಿ “ಭಾರತೀಯರೊಂದಾಗಿ” ಎಂಬ ದೇಶಪ್ರೇಮವನ್ನು ಸಾರುವ ಕವನವನ್ನು ಬರೆದು ಆ ಮೂಲಕ ಜಾಗೃತಿ ಮೂಡಿಸಿದ್ದರು. ಯಕ್ಷಗಾನ ಅರ್ಥದಾರಿಯಾಗಿದ್ದ ಶೆಟ್ಟರು “ದಂಡಯಾತ್ರೆ” ಎಂಬ ಯಕ್ಷಗಾನ ಪ್ರಸಂಗವೊಂದನ್ನು ರಚಿಸಿದ್ದರು. ‘ಕೂಸಕ್ಕನ ಮದುವೆ’ ಎಂಬ ನಾಟಕ ಹವ್ಯಕ ಭಾಷಾ ಸಾಹಿತ್ಯಕ್ಕೆ ಶೆಟ್ಟರ ವಿಶೇಷ ಕೊಡುಗೆ. ಸಂಧಿ, ಸಮಾಸ, ಷಟ್ಪದಿಗಳಲ್ಲಿ ಅಪಾರ ಪಾಂಡಿತ್ಯ ಗಳಿಸಿದ್ದ ಶೆಟ್ಟರು “ಗುರುಮಿತ್ರ” ಎಂಬ ಅಧ್ಯಾಪಕರ ಸಂಘದ ಹಸ್ತಪತ್ರಿಕೆಯ ಸಂಪಾದಕರಾಗಿದ್ದರು. ನಿನ್ನೆ ಮೊನ್ನೆಯಷ್ಟೇ ಮೂಲಸ್ವರೂಪವನ್ನು ಉಳಿಸುತ್ತಲೇ ಆಧುನಿಕತೆಯತ್ತ ಮುಖಮಾಡಿರುವ ನನ್ನೂರಿನಲ್ಲಿ ಆ ಕಾಲದಲ್ಲಿ ಓರ್ವ ಅಧ್ಯಾಪಕನಾಗಿ, ಸಾಹಿತಿಯಾಗಿ, ಸ್ವಾತಂತ್ರ‍್ಯ ಹೋರಾಟಗಾರನಾಗಿ ಒಂದು ಅರ್ಥಪೂರ್ಣ ಬದುಕು ಸವೆಸಿದ ನರ್ಕಳ ಮಾರಪ್ಪ ಶೆಟ್ಟರನ್ನು ನನ್ನೂರು ಮರೆತಿರುವುದು ವಿಷಾದನೀಯ…

  • ಮಿಸ್ರಿಯಾ ಐ ಪಜೀರ್, ಯುವ ಬರಹಗಾರ್ತಿ.

ನಾ ಹ್ಯಾಂಗ ಮರೆಯಲಿ ನಿನ್ನ ಗಾಂಧಿ ತಾತ… : ಮಿಸ್ರಿಯಾ ಐ. ಪಜೀರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...