Homeನೂರರ ನೋಟಮತದಾರರ ಆಲೋಚನಾ ಶಕ್ತಿಯನ್ನು ಕಸಿದುಕೊಂಡ ಮೋದಿ: ಎಚ್ ಎಸ್ ದೊರೆಸ್ವಾಮಿ

ಮತದಾರರ ಆಲೋಚನಾ ಶಕ್ತಿಯನ್ನು ಕಸಿದುಕೊಂಡ ಮೋದಿ: ಎಚ್ ಎಸ್ ದೊರೆಸ್ವಾಮಿ

ಯುವಕರಿಗೆ ವರ್ಷಕ್ಕೆ 2ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿ ಓಟು ಕಿತ್ತುಕೊಂಡರು. ಈಗಲಾದರೂ ಯುವ ಮತದಾರರು ಎಚ್ಚೆತ್ತುಕೊಳ್ಳಬೇಡವೆ?

- Advertisement -
- Advertisement -

ಭಾರತೀಯ ಮತದಾರರಲ್ಲಿ ಕೆಲವರು ಜಾತಿಗೆ, ದುಡ್ಡಿಗೆ, ಹೆಂಡಕ್ಕೆ ತಮ್ಮನ್ನು ಮಾರಾಟ ಮಾಡಿಕೊಂಡರೂ, ಒಟ್ಟಿನಲ್ಲಿ ಅವರು ಜಾಣರಾಗಿದ್ದರು. ಒಮ್ಮೆ ಕಾಂಗ್ರೆಸ್ಸಿಗೆ ಅತ್ಯಧಿಕ ಮತ ನೀಡಿ ಗೆಲ್ಲಿಸುತ್ತಿದ್ದರು. ಅವರು ಸರಿಯಾಗಿ ಸರ್ಕಾರ ನಿರ್ವಹಿಸಿಲ್ಲ ಎಂದಾದರೆ ಮುಂದಿನ ಚುನಾವಣೆಯಲ್ಲಿ ಎಲ್ಲ ಮತದಾರರೂ ಕುಳಿತು ಮಾತಾಡಿಕೊಂಡು, ತೀರ್ಮಾನ ಕೈಗೊಂಡಹಾಗೆ ಮುಂದಿನ ಚುನಾವಣೆಯಲ್ಲಿ ಮತ್ತೊಂದು ಪಕ್ಷಕ್ಕೆ ಬಹುಮತ ನೀಡಿ ಹಿಂದಿನ ಸರ್ಕಾರವನ್ನು ಉರುಳಿಸುತ್ತಿದ್ದರು. ಇದು ಸ್ವಾತಂತ್ರ್ಯ ಪ್ರಾಪ್ತವಾದ 30 ವರ್ಷಗಳ ಮೇಲೆ ಮತದಾರರಲ್ಲಿ ಆದ ಬದಲಾವಣೆ. ಮತದಾರರು ಹೆಚ್ಚು ಓದಿಲ್ಲದಿರಬಹುದು. ಆದರೆ ಅವರಿಗೆ ವ್ಯವಹಾರ ಜ್ಞಾನ ಬಹಳಷ್ಟಿತ್ತು. ಯಾವುದು ಒಳ್ಳೆಯ ಆಡಳಿತ, ಕೆಟ್ಟ ಆಡಳಿತ ಯಾವುದು ಎನ್ನುವುದನ್ನು ಗ್ರಹಿಸುವಷ್ಟು ತಿಳಿವಳಿಕೆ ಇತ್ತು. ಆದರೆ ಅವರಿಗಿದ್ದ ಅವಕಾಶ ಸೀಮಿತ. ಸ್ಪರ್ಧಿಸಿರುವ ರಾಜಕೀಯ ಪಕ್ಷಗಳಲ್ಲಿ ಒಂದನ್ನು ಆಯ್ಕೆ ಮಾಡುವ ಹಕ್ಕು ಮಾತ್ರ ಇದ್ದು ಆದ್ದರಿಂದ ಅವರು ಈ ಜವಾಬ್ದಾರಿ ನಿರ್ವಹಿಸುತ್ತಿದ್ದರು.

ಮೋದಿಯವರು ಅಧಿಕಾರಕ್ಕೆ ಬಂದಮೇಲೆ ಎಲ್ಲಾ ತಲೆಕೆಳಗಾಯಿತು. ಮತದಾರ ತನ್ನ ಆಲೋಚನಾ ಶಕ್ತಿಯನ್ನು ಕಳೆದುಕೊಂಡ. ದೇಶ ಮತ್ತು ತನ್ನ ಭವಿಷ್ಯದ ಬಗ್ಗೆ ಕಾಳಜಿ ವಹಿಸುತ್ತಿದ್ದ ಮತದಾರ ಈಗ ಮೋದಿ, ಅವರ ಪೊಳ್ಳು ಘೋಷಣೆಗೆ ಬಲಿಯಾಗುತ್ತಿದ್ದಾನೆ. ಸ್ವಂತಿಕೆಯ ಗುಣ ಏಕೆ ಕಳೆದುಕೊಂಡ ಎಲ್ಲದರ ಕುರಿತು ಗಂಭೀರವಾಗಿ ವಿಚಾರ ಮಾಡಬೇಕೆಂದು ಮತದಾರರಲ್ಲಿ ವಿನಂತಿಮಾಡಿಕೊಳ್ಳುತ್ತೇನೆ. ಆವೇಶಕ್ಕೆ ಎಡೆಮಾಡದೆ ಮತದಾರ ದೇಶದ ಪರಿಸ್ಥಿತಿಯ ಬಗೆಗೆ ಗಮನ ಕೊಡಬೇಕು. ಅಬ್ಬರದ ಪ್ರಚಾರ ಭಾಷಣಗಳು, ಪೊಳ್ಳು ಘೋಷಣೆಗಳು, ಯುದ್ಧದ ಮಾತನಾಡಿ ತನ್ನಿಂದಲೇ ಈ ದೇಶದ ರಕ್ಷಣೆ ಸಾಧ್ಯ, ಹಿಂದಿನವರು ಏನೂ ಮಾಡದೆ ನಿಷ್ಕ್ರೀಯರಾಗಿದ್ದರು ನಾನು ದೇವದೂತ ಅವತರಿಸಿ ಬಂದಿದ್ದೇನೆ ಎಂಬ ರೀತಿಯಲ್ಲಿ ಮೋದಿಯವರು ಮಾತನಾಡುತ್ತಾರೆ. ಹಿಂದೆ ಸರ್ಕಾರ ನಡೆಸಿದವರು ಪಾಕಿಸ್ತಾನದ ಮೇಲೆ 2 ಸಾರಿ ಯುದ್ಧದಲ್ಲಿ ಗೆದ್ದಿದ್ದಾರೆ ಎಂಬುದನ್ನು ಮೋದಿ ತಿಳಿಯಬೇಕು. ನೆಹರು ಕಾಲದಲ್ಲಿ ಚೀನೀಯರು ಭಾರತ ಭಾಯಿ ಭಾಯಿ ಎಂದು ಸ್ಲೋಗನ್ ಹಾಕುತ್ತ ಏಮಾರಿಸಿ ಭಾರತದ ಮೇಲೆ ಏಕಾಏಕಿ ಯುದ್ಧ ಹೂಡಿದರು. ಚೀನೀಯರು ನಂಬಿಕೆದ್ರೋಹಿಗಳು ಎಂಬುದನ್ನು ಸಾಬೀತುಮಾಡಿಕೊಟ್ಟರು. ಯುದ್ಧದ ಸುಳಿವು ಕೂಡ ಕೊಡದೆ ಹಠಾತ್ತಾಗಿ ಮೇಲೆ ಏರಗಿದರು. ಭಾರತೀಯ ಸೈನ್ಯ ಯುದ್ಧದ ಮೂಡಿನಲ್ಲೇ ಇರಲಿಲ್ಲ. ಆದರೆ ಮೋದಿಯವರು, ಜವಾಹರ್‌ಲಾಲ್‌ರನ್ನು ಹಂಗಿಸಲು ಚೈನಾದ ವಿಚಾರ ಪ್ರಸ್ತಾಪ ಮಾಡುತ್ತಾರೆ. ಯಾವ ಸರ್ಕಾರ ಬರಲಿ ದೇಶ ರಕ್ಷಣೆ ಮಾಡಬೇಕಾದದ್ದು ಅವರ ಕರ್ತವ್ಯ. ಅದನ್ನು ಅವರು ಮಾಡೇ ಮಾಡುತ್ತಾರೆ. ಭಾರತ ಸೈನ್ಯವನ್ನು ಮೊದಲ ಬಾರಿಗೆ ಮೋದಿ ಬಂದು ಸಂಘಟಿಸಲಿಲ್ಲ ಭಾರತೀಯ ಸೈನ್ಯ ಮೊದಲಿನಿಂದಲೂ ಬಲಿಷ್ಠವಾಗಿದೆ. ಸುಸಂಘಟಿತವಾಗಿದೆ. ಇದನ್ನು ನಮ್ಮ ಮತದಾರರು ತಿಳಿಯಬೇಕು. ಆವೇಶ ತೋರುವವರಿಗೆ ನಮಗೂ ಭಾರತೀಯ ಸೈನ್ಯದ ಬಲದ ಬಗೆಗೆ ಅರಿವಿದೆ, ನೀವು ಉತ್ಪ್ರೇಕ್ಷೆ ಮಾಡಿ ಸುಳ್ಳು ಪ್ರಚಾರ ಮಾಡಬೇಡಿ ಎಂದು ಖಡಕ್ಕಾಗಿ ಹೇಳಬೇಕು.

ಮೋದಿಯವರು ಅಧಿಕಾರಕ್ಕೆ ಬಂದು 6 ವರ್ಷ ಆಯಿತು. ಈ 6 ವರ್ಷದಲ್ಲಿ ಏನೇನು ನಡೆಯಿತು ಎಂಬುದನ್ನು ಮತದಾರರು ಗಮನಿಸಬೇಕು. 1000, 500ರೂಗಳ ಹಳೇ ನೋಟುನ್ನು ರದ್ದು ಮಾಡಿದ್ದರಿಂದ ಕಪ್ಪು ಹಣ ಹೊರಬರಲಿಲ್ಲ, ಭ್ರಷ್ಟಾಚಾರ ಕಡಿಮೆಯಾಗಲಿಲ್ಲ. ಅದರ ಬದಲು ಬ್ಯಾಂಕ್ ಅಧಿಕಾರಿಗಳು, ರಾಜಕಾರಣಿಗಳು ಕೂಡಿಕೊಂಡು ಲಕ್ಷಾಂತರ ಕಪ್ಪುಹಣವನ್ನೆಲ್ಲ ಬಿಳೀದು ಮಾಡಿಕೊಂಡರು. ಪಟ್ಟಭದ್ರರ ಹಿತಕಾಯ್ದರು.

ಮೋದಿಯ ನೋಟು ಅಮಾನ್ಯೀಕರಣದ ಅಮಾನವೀಯತೆ

ಯುವಕರಿಗೆ ವರ್ಷಕ್ಕೆ 2ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿ ಓಟು
ಕಿತ್ತುಕೊಂಡರು. ಈಗಲಾದರೂ ಯುವ ಮತದಾರರು ಎಚ್ಚೆತ್ತುಕೊಳ್ಳಬೇಡವೆ?

109 ರೈಲು ಮಾರ್ಗಗಳನ್ನು ಖಾಸಗಿಯವರಿಗೆ ವಹಿಸುವ, ಕಲ್ಲಿದ್ದಲು ಗಣಿಗಳನ್ನು ಖಾಸಗಿಯವರಿಗೆ ಹರಾಜು ಮಾಡುವ ಸರ್ಕಾರದ ಷೇರುಗಳನ್ನು ಮಾರಿಹಾಕುತ್ತ ಇಂತಹ ಎಷ್ಟೋ ಅವಿವೇಕದ ಕೆಲಸಗಳನ್ನು ಮೋದಿ ಕೈಗೆತ್ತಿಕೊಂಡಿದ್ದಾರೆ. ದೊಡ್ಡ ಬಹುಮತ ಇದೆಯೆಂದು ಜನದ್ರೋಹಿ ಕೆಲಸಗಳನ್ನು ಎಗ್ಗಿಲ್ಲದೆ ಮಾಡುತ್ತಿದ್ದಾರೆ. ಕೊರೊನಾದಿಂದ ಜನ ಒಂದೇಸಮನೆ ಸಾಯುತ್ತಿದ್ದರೆ, ಜನಪರ ಕಾಯ್ದೆಗಳಿಗೆ ತಮಗೆ ಬೇಕಾದಂತೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಹೊರಡಿಸುವುದರಲ್ಲಿ ಮೋದಿ ಮಗ್ನರಾಗಿದ್ದಾರೆ. ಇದನ್ನು ಪ್ರಶ್ನಿಸಿದರೆ ಅಂಥವರ ಧ್ವನಿಯನ್ನು ಅಡಗಿಸಲಾಗುತ್ತದೆ.

ಕಾಶ್ಮೀರಕ್ಕೆ ಸಂಬಂಧಪಟ್ಟ 371ನೇ ವಿಧಿಯನ್ನು ಸಂವಿಧಾನ ಬದಲಾಯಿಸಿದೆ ರದ್ದುಗೊಳಿಸಲಾಗಿದೆ. ಕಾಶ್ಮೀರದ ಜನತೆಯಲ್ಲಿ ಈ ವಿಚಾರ ಪ್ರಸ್ತಾಪಿಸದೆ ಸರ್ವಾಧಿಕಾರಿ ಮನೋಭಾವದಿಂದ ಈ ವಿಧಿಯನ್ನು ರದ್ದು ಮಾಡಲಾಗಿದೆ. ವಿಶ್ವವಿದ್ಯಾಲಯಗಳ ಕುಲಪತಿಗಳನ್ನಾಗಿ ಹಿಂದುತ್ವ ಪ್ರತಿಪಾದಕರನ್ನೇ ನೇಮಿಸಲಾಗುತ್ತಿದೆ. ನಾಯಕರನ್ನು ಪ್ರಶ್ನಿಸಬಾರದು ಅವರು ಹೇಳಿದಂತೆ ಕೇಳಿಕೊಂಡಿರಬೇಕು ಎಂದು ಆರ್‌ಎಸ್‌ಎಸ್ ಸಿದ್ಧಾಂತ ಹೇಳುತ್ತದೆ. ಅದನ್ನೇ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳಿಗೂ ಅನ್ವಯಿಸುವ ಕೆಲಸ ಆರಂಭವಾಗಿದೆ. ಸಾರ್ವಜನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಸಂವಿಧಾನದ ಮೇಲೆ ದಾಳಿ ನಡೆಸಿ ಪೌರತ್ವ(ತಿದ್ದುಪಡಿ) ಶಾಸನವನ್ನು ಜಾರಿಗೊಳಿಸಲು ಪ್ರಯತ್ನಿಸುತ್ತಿದೆ. ಇದಕ್ಕೆ ಸಾಕಷ್ಟು ಪ್ರತಿಭಟನೆ ನಡೆದಿದೆ. ವೈಚಾರಿಕ ಚಿಂತನೆ ಮಾಡುವವರ ಮೇಲೆ ದಾಳಿ ನಡೆಸಲಾಗಿದೆ. ಈ 6 ವರ್ಷಗಳಲ್ಲಿ 200 ಪತ್ರಕರ್ತರ ಮೇಲೆ ದಾಳಿ ನಡೆದಿದೆ. ಒಂದೆರಡು ಪ್ರಕರಣಗಳನ್ನು ಬಿಟ್ಟರೆ ಯಾವುದರ ವಿಚಾರಣೆಯೂ ಆಗಿಲ್ಲ. ಇದೆಲ್ಲವನ್ನೂ ಮತದಾರರು ಪ್ರಶ್ನಿಸದಿದ್ದಲ್ಲಿ ಮುಂದೆ ಭಾರೀ ಅನಾಹುತ ಎದುರಿಸಬೇಕಾಗುತ್ತದೆ.

  • ಎಚ್.ಎಸ್ ದೊರೆಸ್ವಾಮಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರರು, ಜನಪರ ಚಿಂತಕರು.

ಇದನ್ನೂ ಓದಿ: ಊಟ, ಉದ್ಯೋಗ, ಸ್ವಾವಲಂಬನೆ ಎಲ್ಲರ ಹಕ್ಕಾಗಲಿ: 103ನೇ ಜನ್ಮದಿನದಂದು HS ದೊರೆಸ್ವಾಮಿಯವರ ಆಶಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...