Homeಕರೋನಾ ತಲ್ಲಣಕೊರೊನಾಗೆ ಲಸಿಕೆ ಸಿದ್ಧ: ಕ್ಲಿನಿಕಲ್ ಪ್ರಯೋಗಕ್ಕೆ ಬನ್ನಿ ಎಂದ ದೆಹಲಿಯ ಏಮ್ಸ್!

ಕೊರೊನಾಗೆ ಲಸಿಕೆ ಸಿದ್ಧ: ಕ್ಲಿನಿಕಲ್ ಪ್ರಯೋಗಕ್ಕೆ ಬನ್ನಿ ಎಂದ ದೆಹಲಿಯ ಏಮ್ಸ್!

ಭಾರತದ ಮೊದಲ ಸಂಭಾವ್ಯ ಸ್ಥಳೀಯ ಕೋವಿಡ್ -19 ಲಸಿಕೆಯನ್ನು ಕೋವಾಕ್ಸಿನ್ ಅನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮತ್ತು ಭಾರತ್ ಬಯೋಟೆಕ್ ಇಂಟರ್ನ್ಯಾಷನಲ್ ಲಿಮಿಟೆಡ್ (ಬಿಬಿಐಎಲ್) ಜಂಟಿಯಾಗಿ ಅಭಿವೃದ್ಧಿಪಡಿಸಿದೆ.

- Advertisement -
- Advertisement -

ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಸ್ಥಳೀಯವಾಗಿ ಅಭಿವೃದ್ಧಿ ಹೊಂದಿದ ಕೋವಿಡ್ -19 ಲಸಿಕೆ ಕೊವಾಕ್ಸಿನ್‌ನ ಮಾನವ ಕ್ಲಿನಿಕಲ್ ಪ್ರಯೋಗವನ್ನು ನಡೆಸಲು ಸನ್ನದ್ದವಾಗಿದೆ. ಇದಕ್ಕಾಗಿ ಆರೋಗ್ಯವಂತ ವ್ಯಕ್ತಿಗಳು ಸ್ವಯಂಪ್ರೇರಿತರಾಗಿ ಸೋಮವಾರದಿಂದ ದಾಖಲಿಸಿಕೊಳ್ಳಬೇಕೆಂದು ಮನವಿ ಮಾಡಿದೆ.

ಏಮ್ಸ್ ಎಥಿಕ್ಸ್ ಕಮಿಟಿ ಶನಿವಾರ ಕೊವಾಕ್ಸಿನ್‌ನ ಮಾನವ ಕ್ಲಿನಿಕಲ್ ಪ್ರಯೋಗಕ್ಕೆ ಅನುಮತಿ ನೀಡಿದ ನಂತರ ಈ ಸೂಚನೆ ಹೊರಬಿದ್ದಿದೆ.

ಕೋವಾಕ್ಸಿನ್‌ನ ಹಂತ I ಮತ್ತು II ಮಾನವ ಪ್ರಯೋಗಗಳನ್ನು ನಡೆಸಲು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಆಯ್ಕೆ ಮಾಡಿದ 12 ಸಂಸ್ಥೆಗಳಲ್ಲಿ ಏಮ್ಸ್ ದೆಹಲಿ ಕೂಡ ಸೇರಿದೆ. ಮೊದಲ ಹಂತದಲ್ಲಿ 375 ಸ್ವಯಂಸೇವಕರ ಮೇಲೆ ಲಸಿಕೆ ಪರೀಕ್ಷಿಸಲಾಗುವುದು ಮತ್ತು ಅವರಲ್ಲಿ ಗರಿಷ್ಠ 100 ಮಂದಿ ಏಮ್ಸ್ ನಿಂದ ಬರಲಿದ್ದಾರೆ.

“ನಾವು ಸೋಮವಾರದಿಂದ ದಾಖಲಾತಿ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತಿದ್ದೇವೆ. ಯಾವುದೇ ತೊಂದರೆಗಳಿಲ್ಲದ ಮತ್ತು ಕೋವಿಡ್ -19 ಇತಿಹಾಸವಿಲ್ಲದ ಆರೋಗ್ಯಕರ ವ್ಯಕ್ತಿಗಳನ್ನು ನಾವು ಆಯ್ಕೆ ಮಾಡಲಿದ್ದೇವೆ” ಎಂದು ಏಮ್ಸ್ ಸೆಂಟರ್ ಫಾರ್ ಕಮ್ಯುನಿಟಿ ಮೆಡಿಸಿನ್‌ನ ಪ್ರಾಧ್ಯಾಪಕ ಡಾ.ಸಂಜಯ್ ರಾಯ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಪ್ರಯೋಗದಲ್ಲಿ ಭಾಗವಹಿಸಲು ಇಚ್ಛಿಸುವ ಯಾವುದೇ ಆರೋಗ್ಯವಂತ ವ್ಯಕ್ತಿ, [email protected] ಗೆ ಇಮೇಲ್ ಕಳುಹಿಸಬಹುದು ಅಥವಾ 7428847499 ನಂಬರ್‌ಗೆ ಕರೆ ಮಾಡಬಹುದು/ ಎಸ್‌ಎಂಎಸ್‌ ಕಳುಹಿಸಬಹುದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಅಧ್ಯಯನಕ್ಕೆ 18 ರಿಂದ 55 ವರ್ಷಗಳ ಒಳಗಿನ ವಯಸ್ಸಿನವರನ್ನು ಆಯ್ಕೆ ಮಾಡುತ್ತೇವೆ. ಇದು ಯಾದೃಚ್ಛಿಕ, ಡಬಲ್-ಬ್ಲೈಂಡ್, ಪ್ಲಸೀಬೊ-ನಿಯಂತ್ರಿತ ಕ್ಲಿನಿಕಲ್ ಪ್ರಯೋಗವಾಗಿದೆ ಎಂದು ಅವರು ಹೇಳಿದ್ದಾರೆ.

ಮೊದಲ ಮತ್ತು ಎರಡನೇ ಹಂತದಲ್ಲಿ ಏಮ್ಸ್ ದೆಹಲಿಯು 375 ಸ್ವಯಂಸೇವಕರಲ್ಲಿ 100 ಭಾಗವಹಿಸುವವರನ್ನು ಮಾತ್ರ ಆಯ್ಕೆ ಮಾಡುತ್ತದೆ ಮತ್ತು ಉಳಿದವರು ಇತರ ತಾಣಗಳಲ್ಲಿ ಭಾಗವಹಿಸುತ್ತಾರೆ ಎಂದು ಅವರು ಹೇಳಿದರು.

“ನಾವು ಈಗಾಗಲೇ ಕೆಲವು ಸ್ವಯಂಸೇವಕರನ್ನು ನೋಂದಾಯಿಸಿದ್ದೇವೆ. ಸೋಮವಾರದಿಂದ ನಮ್ಮ ತಂಡವು ಲಸಿಕೆ ನೀಡುವ ಮೊದಲು ಅವರ ಆರೋಗ್ಯ ತಪಾಸಣೆಯನ್ನು ಪ್ರಾರಂಭಿಸುತ್ತದೆ” ಎಂದು ಅವರು ಹೇಳಿದರು.

ಭಾರತದ ಮೊದಲ ಸಂಭಾವ್ಯ ಸ್ಥಳೀಯ ಕೋವಿಡ್ -19 ಲಸಿಕೆಯನ್ನು ಕೋವಾಕ್ಸಿನ್ ಅನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮತ್ತು ಭಾರತ್ ಬಯೋಟೆಕ್ ಇಂಟರ್ನ್ಯಾಷನಲ್ ಲಿಮಿಟೆಡ್ (ಬಿಬಿಐಎಲ್) ಜಂಟಿಯಾಗಿ ಅಭಿವೃದ್ಧಿಪಡಿಸಿದೆ.

ಕೋವಿಡ್ -19 ಲಸಿಕೆಗಳನ್ನು ತಯಾರಿಸುವ ಏಳು ಭಾರತೀಯ ಸಂಸ್ಥೆಗಳಲ್ಲಿ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಕೂಡ ಸೇರಿದೆ. ಪರಿಣಾಮಕಾರಿತ್ವ ಮತ್ತು ಸುರಕ್ಷತೆಗಾಗಿ ಲಸಿಕೆಯನ್ನು ಪರೀಕ್ಷಿಸಲು ಹಂತ 1 ಮತ್ತು ಹಂತ 2 ಮಾನವ ಪ್ರಯೋಗಗಳನ್ನು ಪ್ರಾರಂಭಿಸಲು ನಿಯಂತ್ರಕ ಅನುಮೋದನೆಯನ್ನು ಪಡೆದ ಮೊದಲ ಸಂಸ್ಥೆ ಇದಾಗಿದೆ.


ಇದನ್ನೂ ಓದಿ: ಕೋವಾಕ್ಸಿನ್ ಲಸಿಕೆ ಪ್ರಯೋಗಕ್ಕೆ ICMR ನಿಂದ ಒತ್ತಡ: AIIMS ಆಕ್ಚೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾದೃಚ್ಛಿಕ (random)>ಗೊತ್ತುಗುರಿಇಲ್ಲದ,ಎಕ್ಕಾಸಕ್ಕ
    ಸೆಲೆ: ಸಂಸ್ಕೃತ ಕನ್ನಡ ಪದನೆರಕೆ
    (ಡಾ.ಡಿ.ಎನ್ ಶಂಕರಬಟ್
    ಯೋ.ಬರತ ಕುಮಾರ
    ಸಂದೀಪ್ ಕಂಬಿ)

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...