Homeಮುಖಪುಟ2 ಕೋಟಿ ಜನಕ್ಕೆ ಆಹಾರ ಹಂಚಿದ ವಿಕಾಸ್ ಖನ್ನಾ: ಸೆಲ್ಯೂಟ್ ಎಂದ ನೆಟ್ಟಿಗರು

2 ಕೋಟಿ ಜನಕ್ಕೆ ಆಹಾರ ಹಂಚಿದ ವಿಕಾಸ್ ಖನ್ನಾ: ಸೆಲ್ಯೂಟ್ ಎಂದ ನೆಟ್ಟಿಗರು

ಕೊರೊನಾ ಸಾಂಕ್ರಾಮಿಕವು ಜನರಲ್ಲಿ ಭೀತಿ ಹುಟ್ಟಿಸಿ ದಿನೇ ದಿನೇ ಉಲ್ಭಣಿಸುತ್ತಿರುವಾಗ ಸೋನು ಸೂದ್, ವಿಕಾಸ್ ಖನ್ನಾ ಥರಹದ ಜನರ ದಿಟ್ಟ ಪ್ರಯತ್ನಗಳು ಭರವಸೆ ಮೂಡಿಸುತ್ತಿವೆ. ಅವರಿಗೆ ನಮ್ಮದೊಂದು ಸಲಾಂ ಇರಲಿ.

- Advertisement -
- Advertisement -

‘ನನ್ನ ಮೊಮ್ಮಗನಿಗೆ ಹೇಗೆ ಅಡುಗೆ ಮಾಡಬೇಕು ಅನ್ನೋದನ್ನು ಕಲಿಸಿದ್ದೇನೆ; ನೀನು ಅವನಿಗೆ ಯಾಕೆ ಅಡುಗೆ ಮಾಡಬೇಕು ಅನ್ನೋದನ್ನು ಕಲಿಸಿಕೊಡು’. ಇದು ಮಲೆಯಾಳಂನ ಖ್ಯಾತ ಸಿನೆಮಾ ಉಸ್ತಾದ್ ಹೋಟೆಲ್ ನಲ್ಲಿ ಬರುವ ಸಂಭಾಷಣೆ… ಜಗತ್ತಿನಲ್ಲಿ ಇಂದಿಗೂ ಲಕ್ಷಾಂತರ ಜನ ಹಸಿವಿನಿಂದ ಸಾಯುತ್ತಿರುವಾಗ ಈ ಸಂಭಾಷಣೆಗೆ ತನ್ನದೇ ಆದ ಮಹತ್ವವಿದೆ.

ನಿಜ ಜೀವನದಲ್ಲಿ ಹೇಗೆ ಅಡುಗೆ ಮಾಡಬೇಕು ಎಂಬುದರ ಜೊತೆಗೆ ಏಕೆ ಅಡುಗೆ ಮಾಡಬೇಕು ಎಂಬುದನ್ನು ತೋರಿಸಿಕೊಟ್ಟವರು ಭಾರತದ ಪ್ರಖ್ಯಾತ ಬಾಣಸಿಗರಾದ ವಿಕಾಸ್‌ ಖನ್ನಾರವರು.

ಅನಿರೀಕ್ಷಿತವಾಗಿ ಎರಗಿದ ಲಾಕ್‌ಡೌನ್‌ ವೇಳೆ ತುತ್ತು ಊಟಕ್ಕಾಗಿ ಪರದಾಡುತ್ತಿದ್ದ ಲಕ್ಷಾಂತರ ಜನರ ಪಾಲಿಗೆ ವಿಕಾಸ್ ಖನ್ನಾ ಆಪತ್ಬಾಂಧವರಾಗಿದ್ದಾರೆ. ಭಾರತದ ಪ್ರಖ್ಯಾತ ಬಾಣಸಿಗರಾದ ಅವರು ತಮ್ಮ ಎಲ್ಲಾ ಖ್ಯಾತಿ ಪ್ರತಿಷ್ಠೆಗಳನ್ನು ಬದಿಗೊತ್ತಿ ತಮ್ಮ ‘ಫೀಡ್ ಇಂಡಿಯಾ ಇನಿಷಿಯೇಟಿವ್’ ಮೂಲಕ 2 ಕೋಟಿ ಜನರಿಗೆ ಆಹಾರವನ್ನು ಇದುವರೆಗೂ ಹಂಚಿದ್ದಾರೆ.

ಬಾಲಿವುಡ್ ನಟ ಸೋನು ಸೂದ್ ಲಾಕ್‌ಡೌನ್ ಸಮಯದಲ್ಲಿ ಸಿಕ್ಕಿಕೊಂಡ ಹತ್ತಾರು ಸಾವಿರ ಜನರನ್ನು ತಮ್ಮ ಊರುಗಳಿಗೆ ಕಳಿಸಿಕೊಡುವಲ್ಲಿ ಯಶಸ್ವಿಯಾದಂತೆಯೇ ವಿಕಾಸ್ ಖನ್ನಾ ಬಹಲಷ್ಟು ಜನರಿಗೆ ಆಹಾರ ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅವರ ಈ ಮಾನವೀಯ ಕೃತ್ಯಗಳಿಗಾಗಿ ಹಾರ್ಮನಿ ಫೌಂಡೇಶನ್ ಅವರನ್ನು ಗೌರವಿಸಿದೆ.

ವಿಕಾಸ್ ಖನ್ನಾ ಪಂಜಾಬ್ ಮೂಲದವರು. ನವೆಂಬರ್ 14, 1971ರಲ್ಲಿ ಅಮೃತ್‌ಸರದಲ್ಲಿ ಜನಿಸಿದ ಅವರು, 17ನೇ ವಯಸ್ಸಿನಿಂದಲೇ ಸ್ವಂತ ಕಂಪನಿ ಆರಂಭಿಸಿದರು. ಸದ್ಯಕ್ಕೆ ಅಮೇರಿಕಾ ಹಾಟೆಸ್ಟ್ ಶೆಫ್ ಎಂದು ಕರೆಸಿಕೊಳ್ಳುವ ಅವರು ಹಲವು ಹೋಟೆಲ್‌ಗಳ ಮಾಲೀಕರಾಗಿದ್ದಾರೆ. ಪ್ರಪಂಚದ ಅತ್ಯುತ್ತಮ ಶೆಫ್‌ಗಳಲ್ಲಿ ಒಬ್ಬರಾಗಿದ್ದಾರೆ. ಪಂಜಾಬ್‌ನಲ್ಲಿ ಲಂಗರ್‌ಗಳನ್ನು (ಉಚಿತ ಸಾಮುದಾಯಿಕ ಅಡುಗೆ ಕೇಂದ್ರ) ನಡೆಸಲಾಗುತ್ತದೆ. ಆ ಮೂಲಕ ಹಸಿದವರಿಗೆ ಉಚಿತ ಊಟ ಒದಗಿಸುವುದು ಅವರ ಕಾಯಕ. ಆ ಹಿನ್ನೆಲೆಯಲ್ಲಿ ಬೆಳೆದುಬಂದ ವಿಕಾಸ್ ಇಂದು ಭಾರತದ ಬಹುಜನರಿಗೆ ಊಟ ಹಾಕುತ್ತಿದ್ದಾರೆ.

ಅಮೃತಸರದ ಲಂಗಾರ್‌ಗಳ ಪ್ರಭಾವದಿಂದ ಮತ್ತು ಅವರ ತಾಯಿಯಿಂದ ಪ್ರಭಾವಿತವಾಗಿದ್ದ ವಿಕಾಸ್ ಸಮಾಜಕ್ಕೆ ಮರಳಿ ನೀಡುವ ನೀತಿಯನ್ನು ಅನುಸರಿಸಿ ಫೀಡ್ ಇಂಡಿಯಾ ಇನಿಷಿಯೇಟಿವ್ ಆರಂಭಿಸಿದ್ದಾರೆ.

ಅನಾಥಾಶ್ರಮಗಳು, ವೃದ್ಧಾಶ್ರಮಗಳು ಮತ್ತು ಕುಷ್ಠರೋಗ ಕೇಂದ್ರಗಳಿಗೆ ಪಡಿತರವನ್ನು ಒದಗಿಸುವ ಮೂಲಕ ಫೀಡ್‌ಇಂಡಿಯಾ ಇನಿಶಿಯೇಟಿವ್ ಸಣ್ಣ ಪ್ರಮಾಣದಲ್ಲಿ ಪ್ರಾರಂಭವಾಯಿತು. ಅಂತಿಮವಾಗಿ, ಹೆದ್ದಾರಿಗಳು, ರೈಲು ನಿಲ್ದಾಣಗಳು ಮತ್ತು ಇತರ ಸ್ಥಳಗಳಲ್ಲಿ ಬೇಯಿಸಿದ ಊಟವನ್ನು ಒದಗಿಸುವ ಮೂಲಕ ದೊಡ್ಡದಾಗಿ ಬೆಳೆಯಿತು. ಇಂದು ಅವರು ದೇಶಾದ್ಯಂತ ಲಕ್ಷಾಂತರ ಕುಟುಂಬಗಳಿಗೆ ಆಹಾರ ಒದಗಿಸಲು ವಿವಿಧ ಕಂಪನಿಗಳೊಂದಿಗೆ ಪಾಲುದಾರಿಕೆ ಹೊಂದಿದ್ದಾರೆ. ರಾಷ್ಟ್ರೀಯ ವಿಪತ್ತು ಪರಿಹಾರ ಪಡೆಯ ವಾಲಂಟೀಯರ್ ಆಗಿರುವ ಅವರು ಇದುವರೆಗೂ ಭಾರತದ 100 ಕ್ಕೂ ಹೆಚ್ಚು ನಗರಗಳಲ್ಲಿ 70 ಲಕ್ಷ ಪ್ಯಾಕೆಟ್ ಪಡಿತರ ವಿತರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೇ ಸುಮಾರು ಒಂದೂವರೆ ಕೋಟಿ ಜನರಿಗೆ ಬೇಯಿಸಿದ ಆಹಾರ ವಿತರಿಸಿದ್ದಾರೆ.

ನಾನು ಹುಟ್ಟಿ ಬೆಳೆದಿದ್ದು ಭಾರತದಲ್ಲಿಯೇ ಆದರೂ ನನಗೆ ಹಸಿವಿನ ಪರಿಚಯವಾದುದ್ದು ನ್ಯೂಯಾರ್ಕ್‌ನಲ್ಲಿ ಎಂದು ಇತ್ತೀಚೆಗೆ ವಿಕಾಸ್ ಖನ್ನಾ ಹೇಳಿದ್ದ ಮಾತುಗಳು ವೈರಲ್ ಆಗಿದ್ದವು. ಅಷ್ಟೇ ಅಲ್ಲದೇ ಆಂಧ್ರಪ್ರದೇಶದ ಜನಪ್ರಿಯ ತಿನಿಸಾದ ದಿಬ್ಬಾ ರೊಟ್ಟಿ ಮಾಡುವುದನ್ನು ಯೂಟ್ಯೂಬ್ ನಿಂದ ನೋಡಿ ಕಲಿತ ಅವರು, ಅದಕ್ಕಾಗಿ ಅದನ್ನು ಕಲಿಸಿದ ಗುರುಗಳಿಗೆ ಗುರುದಕ್ಷಿಣೆ ಸಲ್ಲಿಸುವ ಮೂಲಕವೂ ಸುದ್ದಿಯಾಗಿದ್ದರು.

2020 ರಲ್ಲಿ ಏಷ್ಯಾದ  ಅತ್ಯಂತ ಪ್ರಭಾವಶಾಲಿ 100 ಜನರಲ್ಲಿ ಒಬ್ಬರಾಗಿ ವಿಕಾಸ್ ಖನ್ನಾ ಆಯ್ಕೆಯಾಗಿದ್ದಾರೆ. ಅವರ ಕುರಿತು ಖ್ಯಾತ ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ಯರವರು ಬರೆದ ಚಿತ್ರ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬಹಳಷ್ಟು ಜನ ವಿಕಾಸ್ ಖನ್ನಾರವರ ನಿಸ್ವಾರ್ಥ ಕಾಳಜಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಕೊರೊನಾ ಸಾಂಕ್ರಾಮಿಕವು ಜನರಲ್ಲಿ ಭೀತಿ ಹುಟ್ಟಿಸಿ ದಿನೇ ದಿನೇ ಉಲ್ಭಣಿಸುತ್ತಿರುವಾಗ ಸೋನು ಸೂದ್, ವಿಕಾಸ್ ಖನ್ನಾ ಥರಹದ ಜನರ ದಿಟ್ಟ ಪ್ರಯತ್ನಗಳು ಭರವಸೆ ಮೂಡಿಸುತ್ತಿವೆ. ಅವರಿಗೆ ನಮ್ಮದೊಂದು ಸಲಾಂ ಇರಲಿ.


ಇದನ್ನೂ ಓದಿ: ಸೋನು ಸೂದ್‌ ನಂತರ ಕಾರ್ಮಿಕರಿಗೆ ಸಹಾಯ ಮಾಡಲು ಪಣತೊಟ್ಟ ಸ್ವರ ಭಾಸ್ಕರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...