Homeಕರ್ನಾಟಕಬೈಕ್ ಮುಟ್ಟಿದ್ದಕ್ಕೆ ದಲಿತ ಯುವಕನನ್ನು ಅರೆಬೆತ್ತಲುಗೊಳಿಸಿ ಹಲ್ಲೆ: 13ಕ್ಕು ಹೆಚ್ಚು ಜನರ ವಿರುದ್ಧ FIR, ಬಂಧನಕ್ಕೆ...

ಬೈಕ್ ಮುಟ್ಟಿದ್ದಕ್ಕೆ ದಲಿತ ಯುವಕನನ್ನು ಅರೆಬೆತ್ತಲುಗೊಳಿಸಿ ಹಲ್ಲೆ: 13ಕ್ಕು ಹೆಚ್ಚು ಜನರ ವಿರುದ್ಧ FIR, ಬಂಧನಕ್ಕೆ ಒತ್ತಾಯ

13ಕ್ಕೂ ಹೆಚ್ಚು ಸವರ್ಣಿಯ ಮಂದಿಯ ಮೇಲೆ ತಾಳಿಕೋಟಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಒಬ್ಬನ್ನನ್ನು ಮಾತ್ರ ವಿಚಾರಣೆ ನಡೆಸಿರುವುದರಿಂದ ಆರೋಪಿಗಳನ್ನು ಬಂಧಿಸುವಂತೆ ಪ್ರಜ್ಞಾವಂತರು ಒತ್ತಾಯಿಸಿದ್ದಾರೆ.

- Advertisement -
- Advertisement -

ಬೈಕ್ ಮುಟ್ಟಿದ್ದನ್ನೆ ನೆಪವಾಗಿಟ್ಟುಕೊಂಡು ದಲಿತ ಯುವಕನನ್ನು ಸವರ್ಣಿಯ ಗುಂಪೊಂದು ಅರೆಬೆತ್ತಲುಗೊಳಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಅಮಾನವೀಯ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲ್ಲೂಕಿನ ಮಿಣಜಗಿ ಗ್ರಾಮದಲ್ಲಿ ಜರುಗಿದೆ.

ಜುಲೈ 18ರ ಶನಿವಾರ ಘಟನೆ ನಡೆದಿದ್ದು, ಸಂತ್ರಸ್ತನ ತಂದೆ ಯಂಕಪ್ಪ ಹುಸೇನಪ್ಪ ತಳವಾರರವರ ನೀಡಿದ ದೂರಿನ ಮೇರೆಗೆ 13ಕ್ಕೂ ಹೆಚ್ಚು ಸವರ್ಣಿಯ ಮಂದಿಯ ಮೇಲೆ ತಾಳಿಕೋಟಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಒಬ್ಬನ್ನನ್ನು ಮಾತ್ರ ವಿಚಾರಣೆ ನಡೆಸಿರುವುದರಿಂದ ಆರೋಪಿಗಳನ್ನು ಬಂಧಿಸುವಂತೆ ಪ್ರಜ್ಞಾವಂತರು ಒತ್ತಾಯಿಸಿದ್ದಾರೆ.

ಘಟನೆಯ ವಿವರ: 28 ವರ್ಷದ ದಲಿತ ಯುವಕ ಕಾಶಿನಾಥ ತಳವಾರ ತನ್ನ ತಂದೆ ಯಂಕಪ್ಪ ಹುಸೇನಪ್ಪ ತಳವಾರರವರ ಜೊತೆ ಜುಲೈ 18ರಂದು ಬೆಳಿಗ್ಗೆ ಕೂಲಿ ಕೆಲಸಕ್ಕೆ ಹೋಗುತ್ತಿದ್ದಾಗ 25ಕ್ಕೂ ಹೆಚ್ಚು ಜನರಿದ್ದ ಸವರ್ಣಿಯರ ಗುಂಪು ಆತನ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದೆ.

ಬೈಕ್ ಮುಟ್ಟಿದ್ದಕ್ಕೆ ದಲಿತ ಯುವಕನನ್ನು ಅರೆಬೆತ್ತಲುಗೊಳಿಸಿ ಹಲ್ಲೆ: ಬಂಧನಕ್ಕೆ ಒತ್ತಾಯ

ಬೈಕ್ ಮುಟ್ಟಿದ್ದಕ್ಕೆ ದಲಿತ ಯುವಕನನ್ನು ಅರೆಬೆತ್ತಲುಗೊಳಿಸಿ ಹಲ್ಲೆ: 13ಕ್ಕು ಹೆಚ್ಚು ಜನರ ವಿರುದ್ಧ FIR, ಬಂಧನಕ್ಕೆ ಒತ್ತಾಯ

Posted by Naanu Gauri on Monday, July 20, 2020

ವೈರಲ್ ಆಗಿರುವ ಮನಕಲಕುವ ವಿಡಿಯೋದಲ್ಲಿರುವಂತೆ, ಕಾಶಿನಾಥನನ್ನು ಪ್ಯಾಂಟ್ ಕಿತ್ತು ಆತನ ಮೇಲೆ ಕೋಲು ಮತ್ತು ಚಪ್ಪಲಿಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ. ಆತ ಸಹಾಯಕ್ಕಾಗಿ ಅಂಗಲಾಚುತ್ತಿದ್ದರೂ ಸಹ 30ಕ್ಕೂ ಹೆಚ್ಚು ಜನ ಹಲ್ಲೆಯನ್ನು ನಿಂತು ನೋಡುತ್ತಿದ್ದಾರೆಯೇ ಹೊರತು ಯಾರೋಬ್ಬರೂ ಸಹ ಸಹಾಯಕ್ಕೆ ಬಂದಿಲ್ಲ. ಮುಂದೆ ಹೋಗುತ್ತಿದ್ದ ಯುವಕನ ತಂದೆ ಓಡಿಬಂದು ತನ್ನ ಮಗನ್ನನ್ನು ಬಿಡಿಸಿಕೊಳ್ಳಲು ಪ್ರಯತ್ನಿಸಿದ್ದಾರೆ ಎಂದು ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಸವರ್ಣಿಯ ಜಾತಿಗೆ ಸೇರಿದ ಮಹಾಂತೇಶ, ಮುತ್ತಣ್ಣ ಮಹಾದೇವಪ್ಪ, ಶರಣಗೌಡ, ಸಂಗನಗೌಡ ಮುಂತಾದವರು ತನ್ನ ಗಾಡಿ ಮುಟ್ಟಿ ಮೈಲಿಗೆ ಮಾಡಿದ್ದಾನೆ ಎಂಬ ನೆಪವಿಟ್ಟುಕೊಂಡು ಸಣ್ಣ ಜಾತಿಯವರು ನೀವು, ಕೆಟ್ಟದಾಗಿ ನಿಂದಿಸಿ ಜಾತಿನಿಂದನೆ ಮಾಡಿದ್ದಾರೆ, ನಿಮ್ಮನ್ನು ಜೀವ ಸಹಿತ ಇರಲು ಬಿಡುವುದಿಲ್ಲ ಎಂದು ಪ್ರಾಣ ಬೆದರಿಕೆ ಹಾಕಿದ್ದಾರೆ, ನನ್ನ ಮಗನನ್ನು ಬಿಡಿಸಿಕೊಳ್ಳಲು ಹೋದಾಗ ನನ್ನ ಮತ್ತು ನನ್ನ ಕುಟುಂಬದವರ ಮೇಲೆಯೂ ಹಲ್ಲೆ ನಡೆಸಿದ್ದಾರೆ ಎಂದು ಯಂಕಪ್ಪ ಹುಸೇನಪ್ಪ ತಳವಾರ ಆರೋಪಿಸಿದ್ದಾರೆ.

ಆ ಸಮಯದಲ್ಲಿ ಅದೇ ದಾರಿಯಲ್ಲಿ ಮುದ್ದೇಬಿಹಾಳ ಸಿಪಿಐರವರು ಬಂದ ಕಾರಣ ಆರೋಪಿಗಳು ಓಡಿ ಹೋದರು. ನಂತರ ಆಂಬುಲೆನ್ಸ್‌ನಲ್ಲಿ ನನ್ನ ಮಗನನ್ನು ಮುದ್ದೇಬಿಹಾಳ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ದೂರಿನ ಆಧಾರದಲ್ಲಿ ಸೆಕ್ಷನ್ 143,147, 324, 354, 504, 506, 149 ಮತ್ತು  ದಲಿತ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ಹಲವು ಸೆಕ್ಷನ್‌ಗಳಡಿಯಲ್ಲಿ ತಾಳಿಕೋಟೆ ಪೊಲೀಸರು 13ಕ್ಕೂ ಹೆಚ್ಚು ಜನರ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ. ಆದರೆ ಇದುವರೆಗೂ ಅಧಿಕೃತವಾಗಿ ಯಾರನ್ನು ಬಂಧಿಸದಿರುವುದು ದಲಿತ ಮುಖಂಡರಲ್ಲಿ ಆಕ್ರೋಶ ಹುಟ್ಟುಹಾಕಿದೆ.

 

 

 

 

 

 

ವಕೀಲರು ಮತ್ತು ದಲಿತ ವಿದ್ಯಾರ್ಥಿ ಪರಿಷತ್‌ನ ಅಧ್ಯಕ್ಷರಾದ ಶ್ರೀನಾಥ್ ಪೂಜಾರಿಯವರು ನಾನುಗೌರಿ.ಕಾಂ ಜೊತೆ ಮಾತನಾಡಿ “ದಲಿತ ಯುವಕನ ಮೇಲೆ ಹಲ್ಲೆ ಮಾಡಿದ ಆರೋಪಿಗಳೆಲ್ಲರೂ ಮುದ್ದೇಬಿಹಾಳ ಬಿಜೆಪಿ ಶಾಸಕ ಎ.ಎಸ್ ಪಾಟೀಲ್ ನಡಹಳ್ಳಿಯವರ ಹಿಂಬಾಲಕರಾಗಿದ್ದಾರೆ. ಶಾಸಕರ ಬೆಂಬಲದಿಂದಲೇ ರಾಜರೋಷವಾಗಿ ಇಂತಹ ಕುಕೃತ್ಯಗಳಲ್ಲಿ ತೊಡಗಿದ್ದಾರೆ. ಈ ಹಿಂದೆಯೂ ಜಾತಿ ವಿಚಾರಕ್ಕೆ ಜಗಳ ನಡೆದಿತ್ತು. ಈಗ ಬೈಕ್ ನೆಪದಲ್ಲಿ ಅಮಾನವೀಯವಾಗಿ ಥಳಿಸಿ, ಓಡಾಡಿಕೊಂಡಿದ್ದಾರೆ. ಕೂಡಲೇ ಅವರನ್ನು ಬಂಧಿಸಿ ಕಾನೂನುರೀತ್ಯಾ ಕ್ರಮ ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ವಿಜಯಪುರ ಸಮಾನತೆಯನ್ನು ಸಾರಿದ ಬಸವಣ್ಣನವರ ನಾಡು. ಇಲ್ಲಿ ದಿನನಿತ್ಯ ದಲಿತರ ಮೇಲೆ ದೌರ್ಜನ್ಯ, ಕೊಲೆಗಳು ನಡೆಯುತ್ತಲೇ ಇವೆ. ಕೆಲವು ಮಾತ್ರ ಮಾಧ್ಯಮಗಳ ಕಣ್ಣಿವೆ ಬೀಳುತ್ತಿವೆ. ಇದರ ಕುರಿತು ಪ್ರಜ್ಞಾವಂತರು ದೊಡ್ಡ ಮಟ್ಟದ ಹೋರಾಟ ಮಾಡಬೇಕಾದ ಅನಿವಾರ್ಯತೆ ಇದೆ ಎಂದಿದ್ದಾರೆ.


ಇದನ್ನೂ ಓದಿ: ಮಧ್ಯಪ್ರದೇಶ: ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ- ಆತನ ಮೇಲೆಯೇ ದೂರು ದಾಖಲಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅದೇ ರೀತಿ ಅವರಿಗೂ ರೊಡಲ್ಲಿ ಹಾಕಿ ಬಾರಿಸಬೇಕು.
    ಅವಾಗ ಅವರಿಗೆ ಬುದ್ದಿಬರಬಹುದು.

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...